Homeಅಂಕಣಗಳುಬಹುಸಂಖ್ಯಾತ ಪ್ರಬಲ ಜಾತಿಗಳ ಸುತ್ತಲೇ ಚುನಾವಣೆಗಳು ಸುತ್ತಬೇಕೇ?

ಬಹುಸಂಖ್ಯಾತ ಪ್ರಬಲ ಜಾತಿಗಳ ಸುತ್ತಲೇ ಚುನಾವಣೆಗಳು ಸುತ್ತಬೇಕೇ?

- Advertisement -
- Advertisement -

ಏಪ್ರಿಲ್ 24, 2023, ಬಸವ ಜಯಂತಿಯಂದು ಕರ್ನಾಟಕದಾದ್ಯಂತ 12ನೇ ಶತಮಾನದ ಸಮಾಜ ಸುಧಾರಕ ಕ್ರಾಂತಿಕಾರಿ ಬಸವೇಶ್ವರರನ್ನು ಕೆಲವರಾದರೂ ಒಳ್ಳೆಯ ರೀತಿಯಲ್ಲಿ ನೆನಪಿಸಿಕೊಂಡರು. ಆದರೆ ಚುನಾವಣೆ ಕಾವಿನಲ್ಲಿ ಬೆವರು ಸುರಿಸುತ್ತಿರುವ ರಾಜಕಾರಣಿಗಳು ಅದರಲ್ಲಿಯೂ ಬಿಜೆಪಿ ಪಕ್ಷದ ಮುಖಂಡರು ಕೆಲವು ದಿನಗಳಿಂದ ನಡೆಯುತ್ತಿರುವ ’ಲಿಂಗಾಯತ ಕೇಂದ್ರಿತ ರಾಜಕಾರಣ’ವನ್ನು ಚರ್ಚಿಸಿ ಆರೋಪ-ಪ್ರತ್ಯಾರೋಪಗಳನ್ನು ಮಾಡುವುದರಲ್ಲಿ ಮುಳುಗಿದ್ದರು. ತಾನು ಬಿಜ್ಜಳನ ಅಸ್ಥಾನದಲ್ಲಿ ಮಂತ್ರಿಯಾಗಿದ್ದಾಗ 800 ವರ್ಷಗಳ ಹಿಂದೆಯೇ ಅನುಭವ ಮಂಟಪದ ಮೂಲಕ, ಪ್ರಜಾಪ್ರಭುತ್ವದ ಲಕ್ಷಣಗಳಿಗೆ ಬುನಾದಿ ಹಾಕಿದವರು ಬಸವಣ್ಣ. ಜಾತಿಜಡ ಸಂಪ್ರದಾಯದ ಕೂಪದಲ್ಲಿ ಬಿದ್ದು ಒದ್ದಾಡುತ್ತಿದ್ದ ಸಮಾಜವನ್ನು ಸುಧಾರಿಸಿ, ಮೇಲುಕೀಳು ಮತ್ತು ಶ್ರೇಷ್ಠತೆಯನ್ನು ತಿರಸ್ಕರಿಸಿ ಸಮಸಮಾಜಕ್ಕೆ ಅಡಿಪಾಯ ಹಾಕಹೊರಟವರು ಅವರು. ದೇವಸ್ಥಾನಗಳಲ್ಲಿ ಇದ್ದ ತಾರತಮ್ಯವನ್ನು ವಿರೋಧಿಸಿ ತಮ್ಮದೇ ದೇವರನ್ನು ಸೃಷ್ಟಿಸಿಕೊಳ್ಳಲು ಕರೆಕೊಟ್ಟವರು. ಅನುಭವಮಂಟಪದಲ್ಲಿ ಸಮಾಜದ ಎಲ್ಲ ಬಗೆಯ ಜಾತಿಸಮುದಾಯಗಳು ಪಾಲ್ಗೊಂಡು ಸಂವಾದ ಚರ್ಚೆಗಳಲ್ಲಿ ಭಾಗವಹಿಸಲು ಅವಕಾಶವಿತ್ತು. ಅಂತರ್ಜಾತಿ ಮದುವೆಯನ್ನು ಪ್ರೋತ್ಸಾಹಿಸಿ, ಅದಕ್ಕೆ ಬಸವಣ್ಣ ಬೆಲೆ ತೆತ್ತೆಬೇಕಾಗಿ ಬಂತು. ಇಂತಹ ಕ್ರಾಂತಿಕಾರಿ ವ್ಯಕ್ತಿಯಿಂದ ಪ್ರಾರಂಭವಾಯಿತೆನ್ನಲಾಗುವ ಲಿಂಗಾಯತ ಧರ್ಮದ ಬಗೆಗಿನ ಇಂದಿನ ಚರ್ಚೆಯ ವಾದವಿವಾದಗಳು, ಪ್ರಜಾಪ್ರಭುತ್ವಕ್ಕೆ ಮಾರಕವಾದ ಬಹುಸಂಖ್ಯಾತವಾದದ ದನಿಯನ್ನು ಪಡೆದಿರುವುದು ಕುಸಿತದ ದ್ಯೋತಕವಾಗಿದೆ.

ಆಪರೇಷನ್ ಕಮಲ ಭೀತಿ: ಕಾಂಗ್ರೆಸ್ ಮೈತ್ರಿಕೂಟದ 20 ಅಭ್ಯರ್ಥಿಗಳು ಜೈಪುರ ರೆಸಾರ್ಟ್‌ಗೆ | Naanu gauri

ಬಿಜೆಪಿಯ ಟಿಕೆಟ್ ಹಂಚಿಕೆಯಿಂದ ಪ್ರಾರಂಭವಾದ ಈ ಚರ್ಚೆ, ಬಿಜೆಪಿ ಲಿಂಗಾಯತರನ್ನು ಕಡೆಗಣಿಸುತ್ತಿದೆ, ಲಿಂಗಾಯತ ಶಾಸಕನನ್ನು ಬಿಜೆಪಿ ಮುಂದಿನ ಬಾರಿಗೆ ಮುಖ್ಯಮಂತ್ರಿ ಮಾಡುವುದಿಲ್ಲ ಎಂಬ ಚರ್ಚೆಗಳಿಂದ ಪ್ರಾರಂಭವಾಗಿ, ಸಿದ್ದರಾಮಯ್ಯನವರು ಲಿಂಗಾಯತ ವಿರೋಧಿ, ಅವರು ಲಿಂಗಾಯತರನ್ನು ಭ್ರಷ್ಟರೆಂದು ಕರೆದಿದ್ದಾರೆ, ಕ್ಷಮೆ ಕೇಳದಿದ್ದರೆ ಅವರ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲಾಗುವುದು ಎಂಬ ಅರ್ಥವಿಲ್ಲದ ಚರ್ಚೆ ಬೆಳೆದು ಇನ್ನೂ ರಾಡಿಯಾಗುತ್ತಲೇ ಇದೆ. ಒಂದು ಕಡೆ ಬಿಜೆಪಿ ರಾಷ್ಟ್ರಮಟ್ಟದಲ್ಲಿ ’ಹಿಂದೂ’-’ಹಿಂದುತ್ವ’ ಎನ್ನುವ ಮೆಜಾರಿಟೇರಿಯನಿಸಂ ಅಥವಾ ಬಹುಸಂಖ್ಯಾತವಾದದ ರಾಜಕಾರಣ ಮಾಡುತ್ತಿದ್ದರೆ, ಮತ್ತೊಂದೆಡೆ ಕರ್ನಾಟಕದಲ್ಲಿ ಬಹುಸಂಖ್ಯಾತ ’ಲಿಂಗಾಯತ’ ಜಾತಿರಾಜಕಾರಣಕ್ಕೆ ಅಂಟಿಕೊಂಡಿದೆ. ಎರಡೂ ಕಡೆಗಳಲ್ಲಿ ಮುಸ್ಲಿಂ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ವಿರೋಧಿ ಭಾವನೆಯನ್ನು ಉದ್ದೀಪಿಸುವುದು ಮಾತ್ರ ಬದಲಾಗಿಲ್ಲ. ಉದಾಹರಣೆಗೆ ಈ ಚುನಾವಣೆಯಲ್ಲಿಯೂ ಬಿಜೆಪಿ ಯಾವುದೇ ಮುಸ್ಲಿಂ ವ್ಯಕ್ತಿಗೆ ಟಿಕೆಟ್ ನೀಡದೆ ತನ್ನ ಸಂಪ್ರದಾಯವನ್ನು ಮುಂದುವರಿಸಿದೆ. ಇನ್ನು ಲಿಂಗಾಯತರಿಗೆ ಸುಮಾರು 65ಕ್ಕೂ ಹೆಚ್ಚು ಟಿಕೆಟ್ ಕೊಟ್ಟಿದೆ. ಅಂದರೆ ವಿಧಾನಸಭಾ ಒಟ್ಟು ಕ್ಷೇತ್ರಗಳ ಸುಮಾರು 30%. ಇವುಗಳಲ್ಲಿ ಮೀಸಲು ಕ್ಷೇತ್ರಗಳನ್ನು ಹೊರತುಪಡಿಸಿ ಹೇಳುವುದಾದರೆ 40% ಟಿಕೆಟ್ ಲಿಂಗಾಯತ ಸಮುದಾಯಕ್ಕೆ ಹೋಗಿವೆ. ಇನ್ನು ಲಿಂಗಾಯತ, ಒಕ್ಕಲಿಗ ಮತ್ತು ಬ್ರಾಹ್ಮಣ ಅಭ್ಯರ್ಥಿಗಳ ಸಂಖ್ಯೆಯನ್ನು ಒಟ್ಟಿಗೆ ತೆಗೆದುಕೊಂಡು, ಮೀಸಲು ಕ್ಷೇತ್ರಗಳನ್ನು ಹೊರತುಪಡಿಸಿದರೆ ಈ ಮೂರು ಜಾತಿಗಳಿಗೆ ಶೇ.70ಕ್ಕಿಂತಲೂ ಹೆಚ್ಚು ಪ್ರತಿನಿಧಿತ್ವ ಸಿಕ್ಕಿದೆ. ಅಂದರೆ ಶೇ.30 ಟಿಕೆಟ್‌ಗಳನ್ನು ಉಳಿದ ಹಿಂದುಳಿದ ಸಮುದಾಯದ ಅಭ್ಯರ್ಥಿಗಳಿಗೆ ಹಂಚಿದಾಗ ಎಷ್ಟೋ ಸಮುದಾಯಗಳ ಹೆಸರು ಕೂಡ ಅಲ್ಲಿ ಕಾಣುವುದಿಲ್ಲ. (ಮಡಿವಾಳ, ಉಪ್ಪಾರ ಹೀಗೇ ನೂರಾರು ಜಾತಿ ಸಮುದಾಯಗಳಿಗೆ ಪ್ರತಿನಿಧಿತ್ವವೇ ಅಲ್ಲಿಲ್ಲ.) ಲಿಂಗಾಯತರನ್ನು ಯಾರು ಎಷ್ಟು ಅವಮಾನ ಮಾಡುತ್ತಿದ್ದಾರೆಂಬ ಅರ್ಥಹೀನ ಚರ್ಚೆಯಲ್ಲಿ ಈ ಎಲ್ಲ ಸಮುದಾಯಗಳ ಪ್ರತಿನಿಧಿತ್ವದ ಪ್ರಶ್ನೆ ಗೌಣವಾಗಿ ಹೋಗಿದೆ. ಈ ಸಮುದಾಯಗಳ ವ್ಯಕ್ತಿಗಳಿಗೆ ಕನಿಷ್ಠ ಚುನಾವಣೆಯನ್ನು ಎದುರಿಸುವ ಅವಕಾಶವನ್ನಾದರೂ ನೀಡಬೇಕೆಂಬ ಕಾಳಜಿಯೂ ಕಾಣೆಯಾಗಿದೆ. ಬಸವಣ್ಣನವರ ಆಶಯಗಳು ಅಲ್ಲಿಗೆ ಬಸವ ಜಯಂತಿಗಷ್ಟೇ ಮೀಸಲಾಗಿ ಹೋದವು.

ಇದನ್ನೂ ಓದಿ: ‘ಈದಿನ’ ಮಾಧ್ಯಮದ ಚುನಾವಣಾ ಮೆಗಾ ಸರ್ವೇ; ಬೊಮ್ಮಾಯಿ ಬೇಡ ಎಂದ ಜನತೆ

ಇನ್ನು ಚುನಾವಣೆಯಲ್ಲಿ ಅತಿಹೆಚ್ಚು ಅಭ್ಯರ್ಥಿಗಳನ್ನು ನಿಯೋಜಿಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕೂಡ ಲಿಂಗಾಯತ ಮತ್ತು ಒಕ್ಕಲಿಗ ಅಭ್ಯರ್ಥಿಗಳಿಗೆ ಹೆಚ್ಚು ಮಣೆ ಹಾಕಿರುವುದು ಕ್ರೂರ ವಾಸ್ತವಕ್ಕೆ ಕನ್ನಡಿ ಹಿಡಿದಿದೆ. ಮುಸಲ್ಮಾನ ಸಮುದಾಯದ ವ್ಯಕ್ತಿಗಳನ್ನು ಈ ಎರಡೂ ಪಕ್ಷಗಳು ಒಂದು ಮಟ್ಟಕ್ಕೆ ಅಭ್ಯರ್ಥಿಯನ್ನಾಗಿಸಿವೆ ಎಂಬ ಅಂಶವನ್ನು ಹೊರತುಪಡಿಸಿದರೆ, ಟಿಕೆಟ್ ಹಂಚಿಕೆಯಲ್ಲಿ ಬಹುಸಂಖ್ಯಾತವಾದ ಮೂಗಿಗೆ ಬಡಿಯುತ್ತದೆ.

ಇಂತಹ ಸಂದರ್ಭದಲ್ಲಿ ಯಾವ ಪಕ್ಷ ಸರ್ಕಾರ ರಚಿಸಿದರೂ ಇವೇ ಪ್ರಬಲ ಸಮುದಾಯದ ಶಾಸಕರು ಹೆಚ್ಚೆಚ್ಚು ಸಚಿವ ಸ್ಥಾನಗಳನ್ನು ಕಬಳಿಸುವುದರಲ್ಲಿ ಅನುಮಾನವೇನೂ ಉಳಿದಿರುವುದಿಲ್ಲ. ಒಂದು ಕಾಲದಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸ್ ಅವರು ಅತಿ ಸಣ್ಣಸಣ್ಣ ಸಮುದಾಯದ ವ್ಯಕ್ತಿಗಳಿಗೆ ಟಿಕೆಟ್ ಕೊಡಿಸಿ ಗೆಲ್ಲಿಸಿ ಅವರನ್ನು ಸಚಿವರನ್ನಾಗಿ ಮಾಡುವ ವಿವೇಕದ ನಡೆಯನ್ನು ಕರ್ನಾಟಕಕ್ಕೆ ಹಾಕಿಕೊಟ್ಟಿದ್ದರು. ನಂತರ ಬಂದ ಸಾಲುಸಾಲು ಸರ್ಕಾರಗಳು ಅದನ್ನು ಮರೆಯುತ್ತಾ ಹೋದವು. ಇನ್ನು ಬಿಜೆಪಿ ಕರ್ನಾಟಕದ ರಾಜಕೀಯದ ಮೂಲಕ ದಕ್ಷಿಣ ಭಾರತದಲ್ಲಿ ತನ್ನ ಪ್ರವೇಶದ್ವಾರವನ್ನು ಕಲ್ಪಿಸಿಕೊಂಡ ನಂತರವಂತೂ, ಕೆಲವು ಸಮುದಾಯಗಳನ್ನು ಟಾರ್ಗೆಟ್ ಮಾಡಿ ತನ್ನ ವೋಟ್ ಬ್ಯಾಂಕ್ ಮಾಡಿಕೊಂಡಿತು. ಇದರರ್ಥ ಲಿಂಗಾಯತರೋ ಅಥವಾ ಮತ್ಯಾವುದೋ ಒಂದು ಸಮುದಾಯದ ಜನ ಸಾರಾಸಗಟಾಗಿ ಬಿಜೆಪಿಗೇ ಮತ ಚಲಾಯಿಸುತ್ತಾರೆಂದಲ್ಲ. ಆದರೆ ಮುಖ್ಯಮಂತ್ರಿ ತಮ್ಮ ಸಮುದಾಯದದಿನಾಗಬೇಕು ಎನ್ನುವುದನ್ನು ಭಾವನಾತ್ಮಕ ಅಸ್ತ್ರವನ್ನಾಗಿಸಿ, ಪಕ್ಷಗಳು ನಿರ್ದಿಷ್ಟ ಸಮುದಾಯದ ವೋಟುಗಳನ್ನು ತಮ್ಮೆಡೆಗೆ ಪೋಲರೈಸ್ ಮಾಡುವುದು ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ತೀವ್ರವಾಯಿತು. ಈ ಬೆಳವಣಿಗೆಯಿಂದ ಲಿಂಗಾಯತ ಸಮುದಾಯ ಹೆಚ್ಚು ಬಿಜೆಪಿ ಪರ ವಾಲುತ್ತದೆಂಬ ಹವಾ ಸೃಷ್ಟಿ ಮಾಡಲಾಯಿತು. ಇದು ನಿಜವಲ್ಲ ಎಂದು ಸಾಬೀತುಪಡಿಸುವ ಹತ್ತಾರು ಕ್ಷೇತ್ರಗಳು ಕರ್ನಾಟಕದಲ್ಲಿವೆ ಅನ್ನುವುದು ಕೂಡ ವಾಸ್ತವ.

ಇತ್ತೀಚಿಗೆ ಈದಿನ.ಕಾಂ ನಡೆಸಿದ ಸರ್ವೆಯೊಂದರಲ್ಲಿ ಕೂಡ ಒಂದು ಭರವಸೆಯ ಅಂಶ ಬೆಳಕಿಗೆ ಬಂದಿದೆ. ಬಹುತೇಕ ಎಲ್ಲ ಸಮುದಾಯಗಳಲ್ಲೂ ಸದರಿ ಸರ್ಕಾರ ಮರು ಆಯ್ಕೆಯಾಗಬಾರದು ಎಂದು ಹೇಳುವವರ ಸಂಖ್ಯೆ ದೊಡ್ಡದಿದ್ದರೆ, ಲಿಂಗಾಯತ ಸಮುದಾಯದಲ್ಲಿಯೂ 47% ಜನ ಸದರಿ ಸರ್ಕಾರದ ಮರುಆಯ್ಕೆ ಬೇಡವೆಂದಿದ್ದಾರೆ. ಯಾವ ಒಂದು ಸಮುದಾಯ ಬಿಜೆಪಿ ಪಕ್ಷದ ನಿಷ್ಠ ಮತದಾರರು ಎಂದು ನಂಬಲಾಗಿತ್ತೋ ಅವರು ಆ ಪಕ್ಷದಿಂದ ಬಹಳಷ್ಟು ದೂರ ಸರಿಯುತ್ತಿರುವ ಸೂಚನೆ ಅದು. ಯಾರೋ ಒಂದಿಬ್ಬರು ನಾಯಕರು ಬಿಜೆಪಿ ಪಕ್ಷ ತೊರೆದಿರುವುದರಿಂದ ಖಂಡಿತಾ ಇದು ಸಂಭವಿಸಿರುವುದಿಲ್ಲ. ಜನಸಾಮಾನ್ಯರ ವಿವೇಕ ಎಂದಿಗಾದರೂ ಜಾಗೃತವಾಗಬಹುದು. ಅದಕ್ಕೆ ಬಸವಣ್ಣನವರ ಪರಂಪರೆಯೂ ಸಹಕರಿಸಿರಬಹುದು. ಜನಪರ ಹೋರಾಟಗಳೂ! ಒಟ್ಟಿನಲ್ಲಿ ಇನ್ನು ಮುಂದಾದರೂ ಬಹುಸಂಖ್ಯಾತ ಜಾತಿಗಳ ರಾಜಕಾರಣವನ್ನು ಮೀರಿದ ರಾಜಕೀಯ ಕರ್ನಾಟಕದಲ್ಲಿ ಬೆಳೆಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...