Homeಕರ್ನಾಟಕ‘ಮಹಿಳೆಯ ವಿರುದ್ಧ ಕೂಗಾಡದೆ ಆರತಿ ಎತ್ತಬೇಕಿತ್ತೆ?’: BJP ಶಾಸಕ ಲಿಂಬಾವಳಿ ನಡೆ ಸಮರ್ಥಿಸಿಕೊಂಡ ವೈಟ್‌‌ಫೀಲ್ಡ್‌‌ ಎಸಿಪಿ!

‘ಮಹಿಳೆಯ ವಿರುದ್ಧ ಕೂಗಾಡದೆ ಆರತಿ ಎತ್ತಬೇಕಿತ್ತೆ?’: BJP ಶಾಸಕ ಲಿಂಬಾವಳಿ ನಡೆ ಸಮರ್ಥಿಸಿಕೊಂಡ ವೈಟ್‌‌ಫೀಲ್ಡ್‌‌ ಎಸಿಪಿ!

- Advertisement -
- Advertisement -

ಅಹವಾಲು ಸಲ್ಲಿಸಲು ಬಂದ ಮಹಿಳೆಯೊಬ್ಬರ ವಿರುದ್ಧ ದರ್ಪ ಮರೆದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರ ನಡೆಯನ್ನು ಬೆಂಗಳೂರಿನ ವೈಟ್‌ಫೀಲ್ಡ್‌‌ ಸಬ್‌ಡಿವಿಸನ್‌ ಎಸಿಪಿ ಶಾಂತ ಮಲ್ಲಪ್ಪ ಸಮರ್ಥಿಸಿಕೊಂಡಿದ್ದಾರೆ. ‘ಮಹಿಳೆಯ ವಿರುದ್ಧ ಶಾಕಸರು ಕೂಗಾಡದೆ, ಆರತಿ ಎತ್ತಬೇಕಿತ್ತೆ. ಶಾಸಕರು ಜನರ ಪರವಾಗಿ ಮಾತನಾಡಿದ್ದಾರೆ’ ಎಂದು ನಾನುಗೌರಿ.ಕಾಂ ಜೊತೆಗೆ ಹೇಳಿದ್ದಾರೆ.

ತನಗೆ ಅಹವಾಲು ಸಲ್ಲಿಸಲು ಬಂದ ಮಹಿಳೆಯೊಬ್ಬರ ವಿರುದ್ಧ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ಕಿರುಚಾಡಿ, ಮಹಿಳೆ ಎಂಬುವುದನ್ನು ನೋಡದೆ ಕೆಟ್ಟದಾಗಿ ನಡೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಶನಿವಾರ ನಡೆದಿತ್ತು. ಶಾಸಕ ಲಿಂಬಾವಳಿ ಮಹಿಳೆಯನ್ನು ಬಂಧಿಸುವಂತೆ ಪೊಲೀಸರಿಗೆ ಹೇಳಿದ್ದು, ನಂತರ ಬಿಬಿಎಂಪಿ ಅಧಿಕಾರಿಗಳು ನೀಡಿದ ದೂರಿನ ಅನ್ವಯ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ವಿವರಣೆಗಾಗಿ ಸಂಪರ್ಕಿಸಿದ್ದ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ವೈಟ್‌ಫೀಲ್ಡ್‌ ಎಸಿಪಿ, “ಮಹಿಳೆಯ ಮೇಲೆ ಎಫ್‌ಐಆರ್‌ ಆಗಿರುವುದು ನಿಜ. ರಾಜಕಾಲುವೆಯನ್ನು ಒತ್ತುವರಿ ಮಾಡಿ ಕಾಂಪೌಂಡ್‌ ಕಟ್ಟಿದ್ದರಿಂದ ನೀರು ಸರಾಗವಾಗಿ ಹರಿಯದೆ 300 ಮನೆಗಳಿಗೆ ನೀರು ನುಗ್ಗಿದೆ. ಸಂತ್ರಸ್ತ ಜನರು ಊಟ ತಿಂಡಿಗಾಗಿ ಒದ್ದಾಡ್ತಾ ಇದ್ದಾರೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು ದೂರು ಕೊಟ್ಟಿದ್ದರಿಂದ ಎಫ್‌ಐಆರ್‌ ದಾಖಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಅಹವಾಲು ಸಲ್ಲಿಸಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

ಶಾಸಕನ ಜೊತೆಗೆ ಗಟ್ಟಿ ಧ್ವನಿಯಲ್ಲಿ ಮಾತನಾಡಿದ್ದಕ್ಕೆ ಎಫ್‌ಐಆರ್‌ ಆಗಿದೆಯೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಸಿಪಿ,“ಬಿಬಿಎಂಪಿ ಕಂದಾಯ ಅಧಿಕಾರಿಗಳ ದೂರಿನ ಆಧಾರದಲ್ಲಿ ಎಫ್‌ಐಆರ್‌‌ ಆಗಿದೆ. ಶಾಸಕರು ಮಾತನಾಡಿರುವುದು ಸಾರ್ವಜನಿಕರ ಪರವಾಗಿ, ಆದರೆ ಅದನ್ನು ಯಾರೂ ಹೇಳುತ್ತಿಲ್ಲ” ಎಂದು ಹೇಳಿದ್ದಾರೆ.

“ಶಾಸಕರು ಕೂಗಾಡದೆ ಏನ್‌ ಮಾಡಬೇಕಿತ್ತು? ಆರತಿ ಎತ್ತಬೇಕಿತ್ತೆ ಅವರಿಗೆ? ಈ ಮಹಿಳೆ ರಾಜಕಾಲುವೆ ಮೇಲೆ ಕಾಂಪೌಂಡ್‌ ಹಾಕಿದ್ದರಿಂದ, ಮುನ್ನೂರು ಮನೆಗಳಿಗೆ ಊಟ-ತಿಂಡಿ ಇಲ್ಲದೆ ಒದ್ದಾಡ್ತಾ ಇದ್ದಾರೆ. ಅವರ ವಸ್ತುಗಳೆಲ್ಲವೂ ನೆನೆದು ಹೋಗಿವೆ. ಅಲ್ಲಿ ಆಗಿರುವುದನ್ನು ಬಂದು ನೋಡಿ, ನಂತರ ಮಾತನಾಡಿ. ಬರಿ ಶಾಸಕರು ಕೂಗಾಡಿರುವುದನ್ನು ಹೇಳುವುದಲ್ಲ” ಎಂದು ಎಸಿಪಿ ಹೇಳಿದ್ದಾರೆ.

ಅರ್ಜಿಯೊಂದನ್ನು ತಂದು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು ಪ್ರಯತ್ನಿಸಿದ ಮಹಿಳೆಯಿಂದ ಮಹದೇವಪುರ ಬಿಜೆಪಿ ಶಾಸಕರೂ ಆಗಿರುವ ಲಿಂಬಾವಳಿ ಅವರು ಅರ್ಜಿಯನ್ನು ಕಿತ್ತುಕೊಂಡಿದ್ದಾರೆ. ಮಹಿಳೆಯ ವಿರುದ್ಧ ಆಕ್ರೋಶದಿಂದ ಕಿರುಚಿದ್ದಾರೆ. ನಂತರ ಮಹಿಳೆಯನ್ನು ಬಂಧಿಸುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ. ಶಾಸಕರ ಈ ನಡೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು ಅಧಿಕಾರ ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: 2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಸುರಿದ ಮಳೆಯಿಂದಾಗಿ ವರ್ತೂರು ಕೆರೆಯ ಕೋಡಿ ಬಿದ್ದು ನೆರೆ ಉಂಟಾಗಿತ್ತು. ಹೀಗಾಗಿ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಅರವಿಂದ್ ಲಿಂಬಾವಳಿ ಭೇಟಿ ನೀಡಿದ್ದರು. ಈ ವೇಳೆ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮಹಿಳೆ ಕಾನೂನು ಬಾಹಿರವಾಗಿ ಕಾಂಪೌಂಡ್ ಕಟ್ಟಿದ್ದರೂ, ಶಾಸಕರು ಈ ರೀತಿ ಕೂಗಾಡಬಾರದಿತ್ತು ಎಂದು ಅಭಿಪ್ರಾಯ ವ್ಯಕ್ತವಾಗಿದೆ. “ಜನಪ್ರತಿನಿಧಿಯೊಬ್ಬ ತಟಸ್ಥವಾಗಿದ್ದು ಮಹಿಳೆಯ ಅಹವಾಲನ್ನು ಕೂಡಾ ಕೇಳಬೇಕಾತ್ತು. ಮಹಿಳೆ ಕೂಡಾ ತಮ್ಮ ಬಳಿ ದಾಖಲೆಗಳಿವೆ ಎಂದು ಹೇಳಿದ್ದಾರೆ. ಅದನ್ನು ಪರಿಶೀಲಿಸಬೇಕಿತ್ತು” ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....