Homeಕರ್ನಾಟಕಬಿಜೆಪಿಯಲ್ಲಿಯೇ ಗುಲಾಮರಾಗಿ ಇರಬೇಕಿತ್ತಾ?: ಶೆಟ್ಟರ್‌ ವಾಗ್ದಾಳಿ

ಬಿಜೆಪಿಯಲ್ಲಿಯೇ ಗುಲಾಮರಾಗಿ ಇರಬೇಕಿತ್ತಾ?: ಶೆಟ್ಟರ್‌ ವಾಗ್ದಾಳಿ

ಲಿಂಗಾಯತ ನಾಯಕರ ಮೇಲೆ ಲಿಂಗಾಯತ ನಾಯಕರನ್ನು ಹತ್ತಿಕ್ಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ

- Advertisement -
- Advertisement -

“ನಾನು ಬಿಜೆಪಿಯಲ್ಲೇ ಗುಲಾಮನಾಗಿ ಇರಬೇಕಿತ್ತಾ?” ಎಂದು ಕೇಳುವ ಮೂಲಕ ಮಾಜಿ ಮುಖ್ಯಮಂತ್ರಿ, ಪ್ರಭಾವಿ ಲಿಂಗಾಯತ ನಾಯಕರಾದ ಜಗದೀಶ್‌ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಅವರು ಬಿಜೆಪಿ ಹೈಕಮಾಂಡ್ ವಿರುದ್ಧ ಹರಿಹಾಯ್ದಿದ್ದಾರೆ. “6 ಸಲ ಶಾಸಕನಾಗಿ ಆಯ್ಕೆಯಾಗಿದ್ದೇನೆ. ದೊಡ್ಡ ನಾಯಕನಾಗಿ ಬೆಳೆದಿದ್ದೇನೆ. ಇಷ್ಟು ವರ್ಷಗಳ ಕಾಲ ರಾಜಕೀಯದಲ್ಲಿ ಇದ್ದ ನನ್ನನ್ನು ಒಂದು ಕ್ಷಣದಲ್ಲಿ ಹೊಸಕಿಹಾಕಿದರೆ ಸುಮ್ಮನೆ ಇರಬೇಕಾ? ಗುಲಾಮನ ರೀತಿಯಲ್ಲಿ ಇರಬೇಕಾ?” ಎಂದು ಪ್ರಶ್ನಿಸಿದ್ದಾರೆ.

“ನನಗೆ ಏಕೆ ಟಿಕೆಟ್‌ ನಿರಾಕರಿಸಲಾಯಿತು ಎನ್ನುವುದನ್ನು ಇದುವರೆಗೆ ಹೇಳಿಲ್ಲ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕೂಡ ಏನೂ ಹೇಳಿಲ್ಲ. ಹೇಳಿದ್ದರೆ ಪಕ್ಷ ಬಿಡುತ್ತಿರಲಿಲ್ಲ” ಎಂದು ತಿಳಿಸಿದ್ದಾರೆ.

“ಜಗದೀಶ್ ಶೆಟ್ಟರ್ ಒಬ್ಬ ಬಡಪಾಯಿ, ಇಷ್ಟೊಂದು ಪ್ರಹಾರ ಯಾಕೆ ಎಂಬುವುದು ಗೊತ್ತಾಗುತ್ತಿಲ್ಲ. ಕೇಂದ್ರ, ರಾಜ್ಯ ನಾಯಕರು ಬಂದು ಶೆಟ್ಟರ ಅವರನ್ನು ಏನೇ ಆಗಲಿ ಸೋಲಿಸಬೇಕು ಎನ್ನುತ್ತಿದ್ದಾರೆ. ಲಿಂಗಾಯತ ನಾಯಕರ ಮೂಲಕ ನನ್ನ ವಿರುದ್ಧ ಮಾತನಾಡಿಸುತ್ತಿದ್ದಾರೆ. ಒಡೆದು ಆಳುವ ಕುತಂತ್ರವನ್ನು ಜನರು ನೋಡುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ನಾನು ಕೇಂದ್ರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಷ್ಟೇ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಮಿತ ಶಾ, ಬಿ.ಎಸ್.ಯಡಿಯೂರಪ್ಪ, ಸ್ಮೃತಿ ಇರಾನಿ ಸೇರಿದಂತೆ ಎಲ್ಲರೂ ಶೆಟ್ಟರ ಅವರನ್ನು ಸೋಲಿಸಬೇಕು ಎಂದು ಹೇಳುತ್ತಿದ್ದಾರೆ. ಬಡಪಾಯಿ ಶೆಟ್ಟರ ಮೇಲೆ ಯಾಕೆ ಇಷ್ಟೊಂದು ಪ್ರಹಾರ ಗೊತ್ತಾಗುತ್ತಿಲ್ಲ. ಈ ಬೆಳೆವಣಿಗೆಯನ್ನು ಕ್ಷೇತ್ರದ ಜನರು ಗಮನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಬಿಜೆಪಿಯಲ್ಲಿ ಸಿದ್ದಾಂತ ಉಳಿದಿದೆಯೇ. ಸೈದ್ಧಾಂತಿಕ ವಿರೋಧಿಗಳನ್ನು ಆಪರೇಷನ್ ಕಮಲದ ಮೂಲಕ ಕರೆದುಕೊಂಡು ಸರಕಾರ ರಚನೆ ಮಾಡಲಿಲ್ಲವೆ? ಸಿದ್ಧಾಂತಿಕ ವಿರೋಧಿಗಳಿಗೆ ಟಿಕೆಟ್ ನೀಡಿಲ್ಲವೆ?” ಎಂದು ಖಾರವಾಗಿ ಟೀಕಿಸಿದ್ದಾರೆ.

“ರೌಡಿ ಶೀಟರ್, ಸಿಡಿ ಸಚಿವರು, ಶಾಸಕರಿಗೆ ಟಿಕೆಟ್ ನೀಡಿದ್ದಾರೆ. ನನ್ನ ಸ್ವಾಭಿಮಾನಕ್ಕೆ ಧಕ್ಷೆಯಾಗಿ ಪಕ್ಷ ತೊರೆದಿದ್ದೇನೆ ಹೊರತು ಅಧಿಕಾರ ಲಾಲಸೆಗಲ್ಲ. ಈಗ ಪಕ್ಷದ ಸೈದ್ಧಾಂತಿಕ ವಿರೋಧ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಪಕ್ಷದಲ್ಲಿ ಸಿದ್ದಾಂತ ಉಳಿದಿದೆಯೇ ಎಂಬುವುದನ್ನು ಮೊದಲು ನೋಡಿಕೊಳ್ಳಿ” ಎಂದು ಸವಾಲು ಹಾಕಿದ್ದಾರೆ.

“ನನ್ನ, ನನ್ನಂತಹ ಹಾಗೂ ಪಕ್ಷದ ಪರಿಸ್ಥಿತಿಗೆ ಬಿ.ಎಲ್. ಸಂತೋಷ ಕಾರಣ ಎಂದು ಟೀಕೆ ಮಾಡಿದ್ದೆ. ಆದರೆ ಇದಕ್ಕೆ ಪ್ರತಿಯಾಗಿ ಅವರೇ ಟೀಕೆ ಮಾಡಬೇಕಿತ್ತು. ಆದರೆ ಯಡಿಯೂರಪ್ಪ ಅವರ ಮೂಲಕ ವಿರುದ್ಧ ಮಾತನಾಡಿಸುತ್ತಿದ್ದಾರೆ. ಒಬ್ಬ ಲಿಂಗಾಯತ ನಾಯಕನ ಮೇಲೆ ಲಿಂಗಾಯತ ನಾಯಕರನ್ನು ಹತ್ತಿಕ್ಕುವ ಕಲಸ ಪಕ್ಷ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ‘ಈದಿನ’ ಮಾಧ್ಯಮದ ಚುನಾವಣಾ ಮೆಗಾ ಸರ್ವೇ; ಬೊಮ್ಮಾಯಿ ಬೇಡ ಎಂದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...