Homeಕರೋನಾ ತಲ್ಲಣರೋಗಲಕ್ಷಣಗಳು ಇರುವವರು, ಇಲ್ಲದವರು ಕೊರೊನಾ ಪರೀಕ್ಷೆ ಮಾಡಿಸಬೇಕೆ, ಬೇಡವೇ?

ರೋಗಲಕ್ಷಣಗಳು ಇರುವವರು, ಇಲ್ಲದವರು ಕೊರೊನಾ ಪರೀಕ್ಷೆ ಮಾಡಿಸಬೇಕೆ, ಬೇಡವೇ?

- Advertisement -
- Advertisement -

ಚೀನಾದಲ್ಲಿ ಹುಟ್ಟಿಕೊಂಡಿತು ಎನ್ನಲಾಗಿರುವ ಕೊರೊನಾ ವೈರಸ್ ವಿಶ್ವದಾದ್ಯಂತ ಆವರಿಸಿ ಸರ್ವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕೊರೊನಾ ಹೊಡೆತದಿಂದ ವಿಶ್ವವನ್ನು ಹೊರತರಬೇಕು ಎಂದು ಹಲವಾರು ವಿಜ್ಞಾನಿಗಳು ಅದಕ್ಕೆ ಲಸಿಕೆ ಕಂಡುಹಿಡಿಯುವ ಸ್ಫರ್ಧೆಗೆ ಇಳಿದಿದ್ದಾರೆ.

ಭಾರತದಂತಹ ಜನಸಾಂದ್ರತೆ ಹೊಂದಿರುವ ದೇಶದಲ್ಲಿ ವಿಶ್ವದ ಅತೀ ದೀರ್ಘವಾದ ಲಾಕ್‌ಡೌನ್ ಹಾಕಿದ ಪರಿಣಾಮ ದೇಶದ ಕೋಟ್ಯಾಂತರ ಜನರು ದೇಶದ ಹೆದ್ದಾರಿಗಳಲ್ಲಿ ರಕ್ತದ ಮೆರವಣಿಗೆ ನಡೆಸಿದರು. ಅಂದು ಹೇರಲ್ಪಟ್ಟ ಲಾಕ್‌ಡೌನ್ ಇನ್ನೂ ಸಹ ಸಂಪೂರ್ಣವಾಗಿ ತೆರವುಗೊಂಡಿಲ್ಲ. ಆದರೆ ಇಂತಹ ಸಂದರ್ಭದಲ್ಲಿ ಜನ ಸಾಮಾನ್ಯರೂ ನೂರಾರು ಗೊಂದಲಗಳಲ್ಲಿ ಸಿಕ್ಕಿ ನಲುಗುತ್ತಿದ್ದಾರೆ. ಈ ಗೊಂದಲ ನಿವಾರಿಸಲು ಸರ್ಕಾರ ಮಾಡಿದ್ದೇನು? ಧೀರ್ಘ ಅವಧಿಯ ಲಾಕ್‌ಡೌನ್ ಘೊಷಿಸುವ ಸಂಧರ್ಭದಲ್ಲೇ ಮುಂದಾಲೋಚನೆ ಮಾಡದ ಸರ್ಕಾರ ಈಗ ಮಾಡುತ್ತದೆಯೇ? ಉತ್ತರ ಶೂನ್ಯ.

ದಿಲ್ಲಿ ಮತ್ತು ನೊಯಿಡಾದಿಂ ಉತ್ತರ ಪ್ರದೇಶ ಮತ್ತಿತರ ರಾಜ್ಯಗಳಿಗೆ ಕಾಲ್ನಡಿಗೆಯಲ್ಲಿ ಹೋಗುತ್ತಿರುವ ವಲಸೆ ಕಾರ್ಮಿಕರ ಕುರಿತು ಕಲಾವಿದೆ ಲಬಾನಿ ಜಾಂಗಿ ಅವರ ವರ್ಣಚಿತ್ರ

ದೇಶದಲ್ಲಿ ಕೊರೊನಾ ಪ್ರಾರಂಭವಾಗಿ 7 ತಿಂಗಳಾದರೂ ಸರ್ಕಾರದಿಂದ ಏರ್ಪಟ್ಟ ಗೊಂದಲಗಳು ಇನ್ನೂ ಬಗೆಹರಿದಿಲ್ಲ. ಸರ್ಕಾರಗಳೇ ಗೊಂದಲ ಉಂಟುಮಾಡಿದರೆ ಅದರಿಂದ ಕಷ್ಟಪಡುವುದು ಸಾಮಾನ್ಯ ಜನರು. ಈಗಾಗಲೆ ಜನರು ಖಾಸಗಿ ಆಸ್ಪತ್ರೆಗಳಲ್ಲಿ ಸುಲಿಗೆಗೆ ಒಳಗಾಗಿದ್ದಾರೆ. ಇನ್ನೊಂದು ಕಡೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಒತ್ತಡದಲ್ಲಿ ಸಿಲುಕಿದ್ದಾರೆ. ಈ ವೈದ್ಯರಿಗೆ, ಕೊರೊನಾ ನೋಡಲ್ ಅಧಿಕಾರಿಗಳಿಗೆ ಸರ್ಕಾರವೆ ದಿನಕ್ಕೆ ಇಂತಿಷ್ಟು ಕೊರೊನಾ ಪರೀಕ್ಷಗಳನ್ನು ನಡೆಸಿ ಎಂದು ಟಾರ್ಗೆಟ್ ಕೊಡುತ್ತಿದೆ. ಏಕೆ ಟಾರ್ಗೆಟ್? ಇದರಿಂದ ಏನು ಪ್ರಯೋಜನ ಎಂದು ಮಾತ್ರ ಸರ್ಕಾರ ಹೇಳುತ್ತಿಲ್ಲ.

ಇದನ್ನೂ ಓದಿ: 6ನೇ ತರಗತಿ ‘ವೇದ ಕಾಲದ ಸಂಸ್ಕೃತಿ’ ಪಾಠ ಮಾಡದಂತೆ ಶಿಕ್ಷಣ ಸಚಿವರ ಆದೇಶ: ಅಂಥದ್ದೇನಿದೆ ಪಾಠದಲ್ಲಿ?

ಕಳೆದ ವಾರವಷ್ಟೆ ಮೈಸೂರಿನ ಸರ್ಕಾರಿ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಕಾರಣ ’ಕೊರೊನಾ ಟೆಸ್ಟ್ ಟಾರ್ಗೆಟ್’ ಕೊಡುತ್ತಿದ್ದದ್ದೇ ಎಂದು ಅವರ ಕುಟುಂಬ ಸದಸ್ಯರು ದೂರಿದ್ದಾರೆ. ಇದರಲ್ಲೂ ಹುರುಳಿಲ್ಲದಿಲ್ಲ. ರ್‍ಯಾಪಿಡ್ ಟೆಸ್ಟ್, ಆರ್‌‌‌ಟಿ ಪಿಸಿಆರ್ ಟೆಸ್ಟ್‌‌ಗಳು ಎಂದೆಲ್ಲ ಹಲವಾರು ಟೆಸ್ಟ್‌ಗಳನ್ನು ಸರ್ಕಾರ ಟಾರ್ಗೆಟ್ ಕೊಟ್ಟು ಮಾಡಿಸುತ್ತಿದೆ. ಹೆಚ್ಚಿನ ವೈದ್ಯರು ರೋಗ ಲಕ್ಷಣಗಳಿದ್ದರಷ್ಟೆ ಆಸ್ಪತ್ರೆಗೆ ಹೋಗಿ, ಬೇಕಾಬಿಟ್ಟಿ ಟೆಸ್ಟ್‌ಗಳು ಅಗತ್ಯವಿಲ್ಲ ಎಂದು ಹೇಳುತ್ತಿದ್ದರೂ, ಸರ್ಕಾರ ಮಾತ್ರ ಜಿದ್ದಿಗೆ ಬಿದ್ದು ಇಂತಿಷ್ಟು ಟೆಸ್ಟ್‌ಗಳು ಆಗಲೆಬೇಕು ಎಂದು ಹಠ ಹಿಡಿದಿದೆ.

ಮೈಸೂರಿನ ವೈದ್ಯ ಡಾ. ನಾಗೇಂದ್ರ

ಈ ಟೆಸ್ಟ್ ಟಾರ್ಗೆಟ್ ಹಿಂದೆ ಭ್ರಷ್ಟಾಚಾರದ ವಾಸನೆಯಿದೆ ಎಂಬ ದೊಡ್ಡ ಆರೋಪ ಕೇಳಿಬಂದಿದೆ. ಇಲ್ಲದಿದ್ದರೆ ಯಾವುದೇ ರೋಗ ಲಕ್ಷಣಗಳು ಇಲ್ಲದೆ ಇರುವವರನ್ನು ತಂದು ಪರೀಕ್ಷೆ ಮಾಡುವ ಜರೂರತ್ತಾದರೂ ಏನು?  ಬೆಂಗಳೂರಿನಲ್ಲಿ ಸಾಮಾನ್ಯವಾಗಿರು ದೃಶ್ಯವೆಂದರೆ ಬೀದಿ ಬೀದಿಯಲ್ಲಿ ಪರೀಕ್ಷಾ ಮಾದರಿ ಸಂಗ್ರಹಿಸಿವ ಟೆಂಟ್ ಹಾಕಿ ಹಾದಿ ಬೀದಿಯಲ್ಲಿ ಹೋಗುವವರನ್ನು ಕರೆದು, ಮನೆ ಮನೆ ತೆರಳಿ “ಉಚಿತ ಟೆಸ್ಟ್ ಮಾಡಿಸಿಕೊಳ್ಳಿ” ಎನ್ನುವುದರಲ್ಲಿ ಯಾರ ಹಿತಾಸಕ್ತಿ ಅಡಗಿದೆ? ಒಟ್ಟಿನಲ್ಲಿ ಲಕ್ಷಗಟ್ಟಲೇ ಟೆಸ್ಟ್‌ ಕಿಟ್‌ಗಳನ್ನು ತರಿಸುವ, ಅದರಲ್ಲಿ ಕಿಕ್‌ ಬ್ಯಾಕ್ ಪಡೆಯುವ ಉದ್ದೇಶ ಬಿಟ್ಟರೆ ಇದರಲ್ಲಿ ಬೇರೇನಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಾಮಾನ್ಯ ಜನರು ಕೊರೊನಾ ಪರೀಕ್ಷೆ ಮಾಡಿಸಬೇಕೆ? ಬೇಡವೇ? ರೋಗ ಲಕ್ಷಣಗಳಿರುವವರ ಮಾತ್ರ ಮಾಡಿಸಿದರೆ ಸಾಕೇ ಇತ್ಯಾದಿ ಗೊಂದಲಗಳು ಸಾರ್ವಜನಿಕರಲ್ಲಿ ಮೂಡಿವೆ. ಒಂದು ಕಡೆ ಸರ್ಕಾರದ ಟಾರ್ಗೆಟ್, ಇನ್ನೊಂದು ಕಡೆ ಸೋಂಕು ಇಲ್ಲದಿದ್ದರೂ ಪರೀಕ್ಷಾ ತಪ್ಪಿನಿಂದಾಗಿ ಪಾಸಿಟಿವ್ ಬಂದುಬಿಡಬಹುದೆಂಬ ಭಯ ಜನರನ್ನು ಕಾಡುತ್ತಿದೆ.

ಈ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಮೀಷನರ್ ಮಂಜುನಾಥ್ ಪ್ರಸಾದ್‌ರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ರ್‍ಯಾಪಿಡ್‌ ಟೆಸ್ಟ್‌ ಎಲ್ಲರಿಗೂ ಮಾಡುವುದಿಲ್ಲ. ಕೊರೊನಾ ರೋಗಿಗಳ ಪ್ರಾಥಮಿಕ ಸಂಪರ್ಕ, ದ್ವಿತೀಯ ಸಂಪರ್ಕ ಹೊಂದಿರುವವರಿಗೆ, ಕಂಟೈನ್‌ಮೆಂಟ್ ಪ್ರದೇಶದಲ್ಲಿವವರಿಗೆ, SARI (ತೀವ್ರವಾದ ಉಸಿರಾಟದ ಸೋಂಕು) ಇರುವವರಿಗೆ, ವೈದ್ಯರು ಶಿಫಾರಸ್ಸು ಮಾಡಿದವರಿಗೆ ಮಾತ್ರ ಪರೀಕ್ಷೆ ಮಾಡುತ್ತೇವೆ. ಅದು ಬಿಟ್ಟು ಸಿಕ್ಕಸಿಕ್ಕವರನ್ನು ತಂದು ಪರೀಕ್ಷೆ ಮಾಡಿದರೆ, ಟೆಸ್ಟ್‌ ಕಿಟ್‌ಗಳು ವ್ಯರ್ಥವಾಗುತ್ತವೆ ಅಷ್ಟೇ. ಅದರಿಂದ ಏನೂ ಪ್ರಯೋಜನವಿಲ್ಲ” ಎಂದಿದ್ದಾರೆ.

ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್ ಪ್ರಸಾದ್‌

ಬೆಂಗಳೂರಿನಲ್ಲಿ ಮನೆಮನೆಗೆ ಹೋಗಿ ’ಫ್ರೀ ಟೆಸ್ಟ್ ಮಾಡಿಸಿ’ ಎಂಬ ಅಭಿಯಾನ ನಡೆಯುತ್ತಿರುವುದರ ಬಗ್ಗೆ ಆಯುಕ್ತರ ಗಮನಕ್ಕೆ ತಂದಾಗ, “ಮನೆಮನೆ ಸರ್ವೆ ಮಾಡುತ್ತಿರುವಾಗ ಯಾರಿಗಾದರು SARI ಲಕ್ಷಣಗಳು ಕಂಡು ಬಂದರೆ, ಕೊಮೋರ್ಬಿಡ್ ಇದ್ದರೆ ಅಂತವರಿಗೆ ಟೆಸ್ಟ್ ಮಾಡಿಸುವುದು ಒಳ್ಳಯದೆ ಮತ್ತು ಅಂತವರಿಗೆ ಮಾತ್ರ ಟೆಸ್ಟ್ ಮಾಡಿಸುತ್ತಿದ್ದೇವೆ” ಎಂದರು.

ಇದನ್ನೂ ಓದಿ: NEET, JEE ಪರೀಕ್ಷೆ ವಿಳಂಬ ವಿದ್ಯಾರ್ಥಿಗಳ ಭವಿಷ್ಯ ಮುಂದೂಡಿದಂತೆ: ಪರೀಕ್ಷೆಗೆ ಒತ್ತಾಯಿಸಿ ಮೋದಿಗೆ ಪತ್ರ

ಈ ಬಗ್ಗೆ ಮಾತನಾಡಿದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ, “ಸೋಂಕಿನ ಗುಣಲಕ್ಷಣ ಹೊಂದಿರುವವರು ಮನೆಯಲ್ಲೇ ಇರಿ ಎಂದು ಸರ್ಕಾರವೆ ಹೇಳುತ್ತಿದೆ. ಅಂದರೆ ಇದರ ಉದ್ದೇಶ ಇದಕ್ಕೆ ಪರೀಕ್ಷೆಯು ಬೇಕಾಗಿಲ್ಲ ಎಂದಲ್ಲವೆ?. ಆದರೆ ಮನೆಯಲ್ಲೆ ಇರಲು ಹೇಳುವ ಸರ್ಕಾರ ಮತ್ತೊಂದೆಡೆ ಟೆಸ್ಟ್‌ ಮಾಡಿಸಲು ಹೇಳುತ್ತಿದೆ. ಸರ್ಕಾರಕ್ಕೆ ಕಾಯಿಲೆಯನ್ನು ನಿಯಂತ್ರಿಸುವ ಆಸಕ್ತಿ ಇದ್ದರೆ ಜನರನ್ನು ಮನೆಯಲ್ಲೇ ಇದ್ದು, ಅಲ್ಲಿಂದಲೆ ಆರೋಗ್ಯದ ಮಾಹಿತಿಯನ್ನು ನೀಡಲು ಕೇಳಬಹುದಿತ್ತು. ಆದರೆ ಅದನ್ನು ಸರ್ಕಾರ ಮಾಡುತ್ತಿಲ್ಲ. ಅದಲ್ಲದೆ ಎಲ್ಲರಿಗೂ ಪರೀಕ್ಷೆಗಳು ನಡೆಸಿದರೆ ಕೋಟ್ಯಾಂತರ ರೂಪಾಯಿಗಳು ಬೇಕಾಗುತ್ತದೆ. ಖಜಾನೆಯಲ್ಲಿ ಹಣವಿಲ್ಲ ಎಂದು ಹೇಳುವ ಸರ್ಕಾರಕ್ಕೆ ಸ್ಪಷ್ಟ ಯೋಜನೆಯಿಲ್ಲ” ಎಂದು ಹೇಳಿದರು.

ಡಾ. ಶ್ರೀನಿವಾಸ ಕಕ್ಕಿಲ್ಲಾಯ

“ನಿಜವಾಗಿಯೂ ಕೊರೊನಾ ಪರೀಕ್ಷೆಗಳನ್ನು ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಯಾರಿಗೆ ಕೊರೊನಾ ಲಕ್ಷಣಗಳಿವೆಯೋ ಅವರು ಸಹ ಪರೀಕ್ಷೆ ಮಾಡಿಸಬೇಕಾಗದ ಅಗತ್ಯವಿಲ್ಲ. ಅವರು ಮನೆಯಲ್ಲೇ ಐಸೋಲೇಷನ್‌ಗೆ ಒಳಗಾದರೆ ಯಾವುದೇ ಸಮಸ್ಯೆ ಆಗುವುದಿಲ್ಲ, ಮಕ್ಕಳು, ವೃದ್ದರು ಮತ್ತು ಇತರ ರೋಗಗಳಿಂದ ಬಳಲುತ್ತಿರುವವರನ್ನು ಹೊರತುಪಡಿಸಿದರೆ ಉಳಿದ ಬಹುತೇಕ ಜನರಿಗೆ ಚಿಕಿತ್ಸೆಯ ಅಗತ್ಯವು ಇರುವುದಿಲ್ಲ. ನಿಮ್ಮ ರಕ್ತದಲ್ಲಿರುವ ಆಮ್ಲಜನಕದ ಪ್ರಮಾಣವನ್ನು ಪರೀಕ್ಷಿಸುತ್ತಾ ಅದರಲ್ಲಿ 95% ಕ್ಕಿಂತ ಕಡಿಮೆ ಬಂದರೆ ಮಾತ್ರ ಆಸ್ಪತ್ರೆಗಳಿಗೆ ಹೋಗಬೇಕು” ಎಂದು ಡಾ. ಕಕ್ಕಿಲ್ಲಾಯ ಮಾಹಿತಿ ನೀಡಿದರು.

ಗುಣಮಟ್ಟ ಸರಿಯಾಗಿಲ್ಲ ಎಂದು ಹೇಳುತ್ತಾ ಸರ್ಕಾರಿ ಆಸ್ಪತ್ರೆಗಳಿಗೆ ಹೋಗಲು ಭಯಪಡುತ್ತಿದ್ದ ಜನರು ಇತ್ತ ಲಕ್ಷಗಟ್ಟಲೆ ದುಡ್ಡು ತೆತ್ತು ಖಾಸಗಿ ಆಸ್ಪತ್ರೆಗಳಿಗೂ ಹೋಗಲು ಹೆದರುತ್ತಿದ್ದಾರೆ. ಸರ್ಕಾರ ಕೂಡಾ ದಿನಕ್ಕೊಂದು ಕೊರೊನಾ ಮಾರ್ಗಸೂಚಿಗಳನ್ನು ಹೊರಡಿಸುತ್ತಾ ಜನರನ್ನು ಮತ್ತಷ್ಟು ಗೊಂದಲಕ್ಕೆ ದೂಡುತ್ತಿದೆ. ಮಾಸ್ಕ್‌ ಕಡ್ಡಾಯದ ವಿಚಾರದಲ್ಲಾಗಲಿ, ಸೀಲ್‌ಡೌನ್‌ ಮಾಡಬೇಕೇ, ಬೇಡವೇ ಎನ್ನುವ ವಿಚಾರದಲ್ಲಾಗಲಿ ಸರ್ಕಾರಕ್ಕೆ ಇನ್ನೂ ಸಹ ಸರಿಯಾದ ನಿರ್ಧಾರಕ್ಕೆ ಬರಲಾಗಿಲ್ಲ.


ಇದನ್ನೂ ಓದಿ: ವೀರ ಹೋರಾಟಗಾರ ’ಮೈಸೂರು ಹುಲಿ’ ಟಿಪ್ಪು ಸುಲ್ತಾನ್ ಈ ನೆಲದ ಮಗ: ಬಿಜೆಪಿ ನಾಯಕ ವಿಶ್ವನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...