Homeಕರೋನಾ ತಲ್ಲಣರೋಗಲಕ್ಷಣಗಳು ಇರುವವರು, ಇಲ್ಲದವರು ಕೊರೊನಾ ಪರೀಕ್ಷೆ ಮಾಡಿಸಬೇಕೆ, ಬೇಡವೇ?

ರೋಗಲಕ್ಷಣಗಳು ಇರುವವರು, ಇಲ್ಲದವರು ಕೊರೊನಾ ಪರೀಕ್ಷೆ ಮಾಡಿಸಬೇಕೆ, ಬೇಡವೇ?

- Advertisement -
- Advertisement -

ಚೀನಾದಲ್ಲಿ ಹುಟ್ಟಿಕೊಂಡಿತು ಎನ್ನಲಾಗಿರುವ ಕೊರೊನಾ ವೈರಸ್ ವಿಶ್ವದಾದ್ಯಂತ ಆವರಿಸಿ ಸರ್ವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕೊರೊನಾ ಹೊಡೆತದಿಂದ ವಿಶ್ವವನ್ನು ಹೊರತರಬೇಕು ಎಂದು ಹಲವಾರು ವಿಜ್ಞಾನಿಗಳು ಅದಕ್ಕೆ ಲಸಿಕೆ ಕಂಡುಹಿಡಿಯುವ ಸ್ಫರ್ಧೆಗೆ ಇಳಿದಿದ್ದಾರೆ.

ಭಾರತದಂತಹ ಜನಸಾಂದ್ರತೆ ಹೊಂದಿರುವ ದೇಶದಲ್ಲಿ ವಿಶ್ವದ ಅತೀ ದೀರ್ಘವಾದ ಲಾಕ್‌ಡೌನ್ ಹಾಕಿದ ಪರಿಣಾಮ ದೇಶದ ಕೋಟ್ಯಾಂತರ ಜನರು ದೇಶದ ಹೆದ್ದಾರಿಗಳಲ್ಲಿ ರಕ್ತದ ಮೆರವಣಿಗೆ ನಡೆಸಿದರು. ಅಂದು ಹೇರಲ್ಪಟ್ಟ ಲಾಕ್‌ಡೌನ್ ಇನ್ನೂ ಸಹ ಸಂಪೂರ್ಣವಾಗಿ ತೆರವುಗೊಂಡಿಲ್ಲ. ಆದರೆ ಇಂತಹ ಸಂದರ್ಭದಲ್ಲಿ ಜನ ಸಾಮಾನ್ಯರೂ ನೂರಾರು ಗೊಂದಲಗಳಲ್ಲಿ ಸಿಕ್ಕಿ ನಲುಗುತ್ತಿದ್ದಾರೆ. ಈ ಗೊಂದಲ ನಿವಾರಿಸಲು ಸರ್ಕಾರ ಮಾಡಿದ್ದೇನು? ಧೀರ್ಘ ಅವಧಿಯ ಲಾಕ್‌ಡೌನ್ ಘೊಷಿಸುವ ಸಂಧರ್ಭದಲ್ಲೇ ಮುಂದಾಲೋಚನೆ ಮಾಡದ ಸರ್ಕಾರ ಈಗ ಮಾಡುತ್ತದೆಯೇ? ಉತ್ತರ ಶೂನ್ಯ.

ದಿಲ್ಲಿ ಮತ್ತು ನೊಯಿಡಾದಿಂ ಉತ್ತರ ಪ್ರದೇಶ ಮತ್ತಿತರ ರಾಜ್ಯಗಳಿಗೆ ಕಾಲ್ನಡಿಗೆಯಲ್ಲಿ ಹೋಗುತ್ತಿರುವ ವಲಸೆ ಕಾರ್ಮಿಕರ ಕುರಿತು ಕಲಾವಿದೆ ಲಬಾನಿ ಜಾಂಗಿ ಅವರ ವರ್ಣಚಿತ್ರ

ದೇಶದಲ್ಲಿ ಕೊರೊನಾ ಪ್ರಾರಂಭವಾಗಿ 7 ತಿಂಗಳಾದರೂ ಸರ್ಕಾರದಿಂದ ಏರ್ಪಟ್ಟ ಗೊಂದಲಗಳು ಇನ್ನೂ ಬಗೆಹರಿದಿಲ್ಲ. ಸರ್ಕಾರಗಳೇ ಗೊಂದಲ ಉಂಟುಮಾಡಿದರೆ ಅದರಿಂದ ಕಷ್ಟಪಡುವುದು ಸಾಮಾನ್ಯ ಜನರು. ಈಗಾಗಲೆ ಜನರು ಖಾಸಗಿ ಆಸ್ಪತ್ರೆಗಳಲ್ಲಿ ಸುಲಿಗೆಗೆ ಒಳಗಾಗಿದ್ದಾರೆ. ಇನ್ನೊಂದು ಕಡೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಒತ್ತಡದಲ್ಲಿ ಸಿಲುಕಿದ್ದಾರೆ. ಈ ವೈದ್ಯರಿಗೆ, ಕೊರೊನಾ ನೋಡಲ್ ಅಧಿಕಾರಿಗಳಿಗೆ ಸರ್ಕಾರವೆ ದಿನಕ್ಕೆ ಇಂತಿಷ್ಟು ಕೊರೊನಾ ಪರೀಕ್ಷಗಳನ್ನು ನಡೆಸಿ ಎಂದು ಟಾರ್ಗೆಟ್ ಕೊಡುತ್ತಿದೆ. ಏಕೆ ಟಾರ್ಗೆಟ್? ಇದರಿಂದ ಏನು ಪ್ರಯೋಜನ ಎಂದು ಮಾತ್ರ ಸರ್ಕಾರ ಹೇಳುತ್ತಿಲ್ಲ.

ಇದನ್ನೂ ಓದಿ: 6ನೇ ತರಗತಿ ‘ವೇದ ಕಾಲದ ಸಂಸ್ಕೃತಿ’ ಪಾಠ ಮಾಡದಂತೆ ಶಿಕ್ಷಣ ಸಚಿವರ ಆದೇಶ: ಅಂಥದ್ದೇನಿದೆ ಪಾಠದಲ್ಲಿ?

ಕಳೆದ ವಾರವಷ್ಟೆ ಮೈಸೂರಿನ ಸರ್ಕಾರಿ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಕಾರಣ ’ಕೊರೊನಾ ಟೆಸ್ಟ್ ಟಾರ್ಗೆಟ್’ ಕೊಡುತ್ತಿದ್ದದ್ದೇ ಎಂದು ಅವರ ಕುಟುಂಬ ಸದಸ್ಯರು ದೂರಿದ್ದಾರೆ. ಇದರಲ್ಲೂ ಹುರುಳಿಲ್ಲದಿಲ್ಲ. ರ್‍ಯಾಪಿಡ್ ಟೆಸ್ಟ್, ಆರ್‌‌‌ಟಿ ಪಿಸಿಆರ್ ಟೆಸ್ಟ್‌‌ಗಳು ಎಂದೆಲ್ಲ ಹಲವಾರು ಟೆಸ್ಟ್‌ಗಳನ್ನು ಸರ್ಕಾರ ಟಾರ್ಗೆಟ್ ಕೊಟ್ಟು ಮಾಡಿಸುತ್ತಿದೆ. ಹೆಚ್ಚಿನ ವೈದ್ಯರು ರೋಗ ಲಕ್ಷಣಗಳಿದ್ದರಷ್ಟೆ ಆಸ್ಪತ್ರೆಗೆ ಹೋಗಿ, ಬೇಕಾಬಿಟ್ಟಿ ಟೆಸ್ಟ್‌ಗಳು ಅಗತ್ಯವಿಲ್ಲ ಎಂದು ಹೇಳುತ್ತಿದ್ದರೂ, ಸರ್ಕಾರ ಮಾತ್ರ ಜಿದ್ದಿಗೆ ಬಿದ್ದು ಇಂತಿಷ್ಟು ಟೆಸ್ಟ್‌ಗಳು ಆಗಲೆಬೇಕು ಎಂದು ಹಠ ಹಿಡಿದಿದೆ.

ಮೈಸೂರಿನ ವೈದ್ಯ ಡಾ. ನಾಗೇಂದ್ರ

ಈ ಟೆಸ್ಟ್ ಟಾರ್ಗೆಟ್ ಹಿಂದೆ ಭ್ರಷ್ಟಾಚಾರದ ವಾಸನೆಯಿದೆ ಎಂಬ ದೊಡ್ಡ ಆರೋಪ ಕೇಳಿಬಂದಿದೆ. ಇಲ್ಲದಿದ್ದರೆ ಯಾವುದೇ ರೋಗ ಲಕ್ಷಣಗಳು ಇಲ್ಲದೆ ಇರುವವರನ್ನು ತಂದು ಪರೀಕ್ಷೆ ಮಾಡುವ ಜರೂರತ್ತಾದರೂ ಏನು?  ಬೆಂಗಳೂರಿನಲ್ಲಿ ಸಾಮಾನ್ಯವಾಗಿರು ದೃಶ್ಯವೆಂದರೆ ಬೀದಿ ಬೀದಿಯಲ್ಲಿ ಪರೀಕ್ಷಾ ಮಾದರಿ ಸಂಗ್ರಹಿಸಿವ ಟೆಂಟ್ ಹಾಕಿ ಹಾದಿ ಬೀದಿಯಲ್ಲಿ ಹೋಗುವವರನ್ನು ಕರೆದು, ಮನೆ ಮನೆ ತೆರಳಿ “ಉಚಿತ ಟೆಸ್ಟ್ ಮಾಡಿಸಿಕೊಳ್ಳಿ” ಎನ್ನುವುದರಲ್ಲಿ ಯಾರ ಹಿತಾಸಕ್ತಿ ಅಡಗಿದೆ? ಒಟ್ಟಿನಲ್ಲಿ ಲಕ್ಷಗಟ್ಟಲೇ ಟೆಸ್ಟ್‌ ಕಿಟ್‌ಗಳನ್ನು ತರಿಸುವ, ಅದರಲ್ಲಿ ಕಿಕ್‌ ಬ್ಯಾಕ್ ಪಡೆಯುವ ಉದ್ದೇಶ ಬಿಟ್ಟರೆ ಇದರಲ್ಲಿ ಬೇರೇನಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಾಮಾನ್ಯ ಜನರು ಕೊರೊನಾ ಪರೀಕ್ಷೆ ಮಾಡಿಸಬೇಕೆ? ಬೇಡವೇ? ರೋಗ ಲಕ್ಷಣಗಳಿರುವವರ ಮಾತ್ರ ಮಾಡಿಸಿದರೆ ಸಾಕೇ ಇತ್ಯಾದಿ ಗೊಂದಲಗಳು ಸಾರ್ವಜನಿಕರಲ್ಲಿ ಮೂಡಿವೆ. ಒಂದು ಕಡೆ ಸರ್ಕಾರದ ಟಾರ್ಗೆಟ್, ಇನ್ನೊಂದು ಕಡೆ ಸೋಂಕು ಇಲ್ಲದಿದ್ದರೂ ಪರೀಕ್ಷಾ ತಪ್ಪಿನಿಂದಾಗಿ ಪಾಸಿಟಿವ್ ಬಂದುಬಿಡಬಹುದೆಂಬ ಭಯ ಜನರನ್ನು ಕಾಡುತ್ತಿದೆ.

ಈ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಮೀಷನರ್ ಮಂಜುನಾಥ್ ಪ್ರಸಾದ್‌ರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ರ್‍ಯಾಪಿಡ್‌ ಟೆಸ್ಟ್‌ ಎಲ್ಲರಿಗೂ ಮಾಡುವುದಿಲ್ಲ. ಕೊರೊನಾ ರೋಗಿಗಳ ಪ್ರಾಥಮಿಕ ಸಂಪರ್ಕ, ದ್ವಿತೀಯ ಸಂಪರ್ಕ ಹೊಂದಿರುವವರಿಗೆ, ಕಂಟೈನ್‌ಮೆಂಟ್ ಪ್ರದೇಶದಲ್ಲಿವವರಿಗೆ, SARI (ತೀವ್ರವಾದ ಉಸಿರಾಟದ ಸೋಂಕು) ಇರುವವರಿಗೆ, ವೈದ್ಯರು ಶಿಫಾರಸ್ಸು ಮಾಡಿದವರಿಗೆ ಮಾತ್ರ ಪರೀಕ್ಷೆ ಮಾಡುತ್ತೇವೆ. ಅದು ಬಿಟ್ಟು ಸಿಕ್ಕಸಿಕ್ಕವರನ್ನು ತಂದು ಪರೀಕ್ಷೆ ಮಾಡಿದರೆ, ಟೆಸ್ಟ್‌ ಕಿಟ್‌ಗಳು ವ್ಯರ್ಥವಾಗುತ್ತವೆ ಅಷ್ಟೇ. ಅದರಿಂದ ಏನೂ ಪ್ರಯೋಜನವಿಲ್ಲ” ಎಂದಿದ್ದಾರೆ.

ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್ ಪ್ರಸಾದ್‌

ಬೆಂಗಳೂರಿನಲ್ಲಿ ಮನೆಮನೆಗೆ ಹೋಗಿ ’ಫ್ರೀ ಟೆಸ್ಟ್ ಮಾಡಿಸಿ’ ಎಂಬ ಅಭಿಯಾನ ನಡೆಯುತ್ತಿರುವುದರ ಬಗ್ಗೆ ಆಯುಕ್ತರ ಗಮನಕ್ಕೆ ತಂದಾಗ, “ಮನೆಮನೆ ಸರ್ವೆ ಮಾಡುತ್ತಿರುವಾಗ ಯಾರಿಗಾದರು SARI ಲಕ್ಷಣಗಳು ಕಂಡು ಬಂದರೆ, ಕೊಮೋರ್ಬಿಡ್ ಇದ್ದರೆ ಅಂತವರಿಗೆ ಟೆಸ್ಟ್ ಮಾಡಿಸುವುದು ಒಳ್ಳಯದೆ ಮತ್ತು ಅಂತವರಿಗೆ ಮಾತ್ರ ಟೆಸ್ಟ್ ಮಾಡಿಸುತ್ತಿದ್ದೇವೆ” ಎಂದರು.

ಇದನ್ನೂ ಓದಿ: NEET, JEE ಪರೀಕ್ಷೆ ವಿಳಂಬ ವಿದ್ಯಾರ್ಥಿಗಳ ಭವಿಷ್ಯ ಮುಂದೂಡಿದಂತೆ: ಪರೀಕ್ಷೆಗೆ ಒತ್ತಾಯಿಸಿ ಮೋದಿಗೆ ಪತ್ರ

ಈ ಬಗ್ಗೆ ಮಾತನಾಡಿದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ, “ಸೋಂಕಿನ ಗುಣಲಕ್ಷಣ ಹೊಂದಿರುವವರು ಮನೆಯಲ್ಲೇ ಇರಿ ಎಂದು ಸರ್ಕಾರವೆ ಹೇಳುತ್ತಿದೆ. ಅಂದರೆ ಇದರ ಉದ್ದೇಶ ಇದಕ್ಕೆ ಪರೀಕ್ಷೆಯು ಬೇಕಾಗಿಲ್ಲ ಎಂದಲ್ಲವೆ?. ಆದರೆ ಮನೆಯಲ್ಲೆ ಇರಲು ಹೇಳುವ ಸರ್ಕಾರ ಮತ್ತೊಂದೆಡೆ ಟೆಸ್ಟ್‌ ಮಾಡಿಸಲು ಹೇಳುತ್ತಿದೆ. ಸರ್ಕಾರಕ್ಕೆ ಕಾಯಿಲೆಯನ್ನು ನಿಯಂತ್ರಿಸುವ ಆಸಕ್ತಿ ಇದ್ದರೆ ಜನರನ್ನು ಮನೆಯಲ್ಲೇ ಇದ್ದು, ಅಲ್ಲಿಂದಲೆ ಆರೋಗ್ಯದ ಮಾಹಿತಿಯನ್ನು ನೀಡಲು ಕೇಳಬಹುದಿತ್ತು. ಆದರೆ ಅದನ್ನು ಸರ್ಕಾರ ಮಾಡುತ್ತಿಲ್ಲ. ಅದಲ್ಲದೆ ಎಲ್ಲರಿಗೂ ಪರೀಕ್ಷೆಗಳು ನಡೆಸಿದರೆ ಕೋಟ್ಯಾಂತರ ರೂಪಾಯಿಗಳು ಬೇಕಾಗುತ್ತದೆ. ಖಜಾನೆಯಲ್ಲಿ ಹಣವಿಲ್ಲ ಎಂದು ಹೇಳುವ ಸರ್ಕಾರಕ್ಕೆ ಸ್ಪಷ್ಟ ಯೋಜನೆಯಿಲ್ಲ” ಎಂದು ಹೇಳಿದರು.

ಡಾ. ಶ್ರೀನಿವಾಸ ಕಕ್ಕಿಲ್ಲಾಯ

“ನಿಜವಾಗಿಯೂ ಕೊರೊನಾ ಪರೀಕ್ಷೆಗಳನ್ನು ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಯಾರಿಗೆ ಕೊರೊನಾ ಲಕ್ಷಣಗಳಿವೆಯೋ ಅವರು ಸಹ ಪರೀಕ್ಷೆ ಮಾಡಿಸಬೇಕಾಗದ ಅಗತ್ಯವಿಲ್ಲ. ಅವರು ಮನೆಯಲ್ಲೇ ಐಸೋಲೇಷನ್‌ಗೆ ಒಳಗಾದರೆ ಯಾವುದೇ ಸಮಸ್ಯೆ ಆಗುವುದಿಲ್ಲ, ಮಕ್ಕಳು, ವೃದ್ದರು ಮತ್ತು ಇತರ ರೋಗಗಳಿಂದ ಬಳಲುತ್ತಿರುವವರನ್ನು ಹೊರತುಪಡಿಸಿದರೆ ಉಳಿದ ಬಹುತೇಕ ಜನರಿಗೆ ಚಿಕಿತ್ಸೆಯ ಅಗತ್ಯವು ಇರುವುದಿಲ್ಲ. ನಿಮ್ಮ ರಕ್ತದಲ್ಲಿರುವ ಆಮ್ಲಜನಕದ ಪ್ರಮಾಣವನ್ನು ಪರೀಕ್ಷಿಸುತ್ತಾ ಅದರಲ್ಲಿ 95% ಕ್ಕಿಂತ ಕಡಿಮೆ ಬಂದರೆ ಮಾತ್ರ ಆಸ್ಪತ್ರೆಗಳಿಗೆ ಹೋಗಬೇಕು” ಎಂದು ಡಾ. ಕಕ್ಕಿಲ್ಲಾಯ ಮಾಹಿತಿ ನೀಡಿದರು.

ಗುಣಮಟ್ಟ ಸರಿಯಾಗಿಲ್ಲ ಎಂದು ಹೇಳುತ್ತಾ ಸರ್ಕಾರಿ ಆಸ್ಪತ್ರೆಗಳಿಗೆ ಹೋಗಲು ಭಯಪಡುತ್ತಿದ್ದ ಜನರು ಇತ್ತ ಲಕ್ಷಗಟ್ಟಲೆ ದುಡ್ಡು ತೆತ್ತು ಖಾಸಗಿ ಆಸ್ಪತ್ರೆಗಳಿಗೂ ಹೋಗಲು ಹೆದರುತ್ತಿದ್ದಾರೆ. ಸರ್ಕಾರ ಕೂಡಾ ದಿನಕ್ಕೊಂದು ಕೊರೊನಾ ಮಾರ್ಗಸೂಚಿಗಳನ್ನು ಹೊರಡಿಸುತ್ತಾ ಜನರನ್ನು ಮತ್ತಷ್ಟು ಗೊಂದಲಕ್ಕೆ ದೂಡುತ್ತಿದೆ. ಮಾಸ್ಕ್‌ ಕಡ್ಡಾಯದ ವಿಚಾರದಲ್ಲಾಗಲಿ, ಸೀಲ್‌ಡೌನ್‌ ಮಾಡಬೇಕೇ, ಬೇಡವೇ ಎನ್ನುವ ವಿಚಾರದಲ್ಲಾಗಲಿ ಸರ್ಕಾರಕ್ಕೆ ಇನ್ನೂ ಸಹ ಸರಿಯಾದ ನಿರ್ಧಾರಕ್ಕೆ ಬರಲಾಗಿಲ್ಲ.


ಇದನ್ನೂ ಓದಿ: ವೀರ ಹೋರಾಟಗಾರ ’ಮೈಸೂರು ಹುಲಿ’ ಟಿಪ್ಪು ಸುಲ್ತಾನ್ ಈ ನೆಲದ ಮಗ: ಬಿಜೆಪಿ ನಾಯಕ ವಿಶ್ವನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...