Homeಕರೋನಾ ತಲ್ಲಣರೋಗಲಕ್ಷಣಗಳು ಇರುವವರು, ಇಲ್ಲದವರು ಕೊರೊನಾ ಪರೀಕ್ಷೆ ಮಾಡಿಸಬೇಕೆ, ಬೇಡವೇ?

ರೋಗಲಕ್ಷಣಗಳು ಇರುವವರು, ಇಲ್ಲದವರು ಕೊರೊನಾ ಪರೀಕ್ಷೆ ಮಾಡಿಸಬೇಕೆ, ಬೇಡವೇ?

- Advertisement -
- Advertisement -

ಚೀನಾದಲ್ಲಿ ಹುಟ್ಟಿಕೊಂಡಿತು ಎನ್ನಲಾಗಿರುವ ಕೊರೊನಾ ವೈರಸ್ ವಿಶ್ವದಾದ್ಯಂತ ಆವರಿಸಿ ಸರ್ವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕೊರೊನಾ ಹೊಡೆತದಿಂದ ವಿಶ್ವವನ್ನು ಹೊರತರಬೇಕು ಎಂದು ಹಲವಾರು ವಿಜ್ಞಾನಿಗಳು ಅದಕ್ಕೆ ಲಸಿಕೆ ಕಂಡುಹಿಡಿಯುವ ಸ್ಫರ್ಧೆಗೆ ಇಳಿದಿದ್ದಾರೆ.

ಭಾರತದಂತಹ ಜನಸಾಂದ್ರತೆ ಹೊಂದಿರುವ ದೇಶದಲ್ಲಿ ವಿಶ್ವದ ಅತೀ ದೀರ್ಘವಾದ ಲಾಕ್‌ಡೌನ್ ಹಾಕಿದ ಪರಿಣಾಮ ದೇಶದ ಕೋಟ್ಯಾಂತರ ಜನರು ದೇಶದ ಹೆದ್ದಾರಿಗಳಲ್ಲಿ ರಕ್ತದ ಮೆರವಣಿಗೆ ನಡೆಸಿದರು. ಅಂದು ಹೇರಲ್ಪಟ್ಟ ಲಾಕ್‌ಡೌನ್ ಇನ್ನೂ ಸಹ ಸಂಪೂರ್ಣವಾಗಿ ತೆರವುಗೊಂಡಿಲ್ಲ. ಆದರೆ ಇಂತಹ ಸಂದರ್ಭದಲ್ಲಿ ಜನ ಸಾಮಾನ್ಯರೂ ನೂರಾರು ಗೊಂದಲಗಳಲ್ಲಿ ಸಿಕ್ಕಿ ನಲುಗುತ್ತಿದ್ದಾರೆ. ಈ ಗೊಂದಲ ನಿವಾರಿಸಲು ಸರ್ಕಾರ ಮಾಡಿದ್ದೇನು? ಧೀರ್ಘ ಅವಧಿಯ ಲಾಕ್‌ಡೌನ್ ಘೊಷಿಸುವ ಸಂಧರ್ಭದಲ್ಲೇ ಮುಂದಾಲೋಚನೆ ಮಾಡದ ಸರ್ಕಾರ ಈಗ ಮಾಡುತ್ತದೆಯೇ? ಉತ್ತರ ಶೂನ್ಯ.

ದಿಲ್ಲಿ ಮತ್ತು ನೊಯಿಡಾದಿಂ ಉತ್ತರ ಪ್ರದೇಶ ಮತ್ತಿತರ ರಾಜ್ಯಗಳಿಗೆ ಕಾಲ್ನಡಿಗೆಯಲ್ಲಿ ಹೋಗುತ್ತಿರುವ ವಲಸೆ ಕಾರ್ಮಿಕರ ಕುರಿತು ಕಲಾವಿದೆ ಲಬಾನಿ ಜಾಂಗಿ ಅವರ ವರ್ಣಚಿತ್ರ

ದೇಶದಲ್ಲಿ ಕೊರೊನಾ ಪ್ರಾರಂಭವಾಗಿ 7 ತಿಂಗಳಾದರೂ ಸರ್ಕಾರದಿಂದ ಏರ್ಪಟ್ಟ ಗೊಂದಲಗಳು ಇನ್ನೂ ಬಗೆಹರಿದಿಲ್ಲ. ಸರ್ಕಾರಗಳೇ ಗೊಂದಲ ಉಂಟುಮಾಡಿದರೆ ಅದರಿಂದ ಕಷ್ಟಪಡುವುದು ಸಾಮಾನ್ಯ ಜನರು. ಈಗಾಗಲೆ ಜನರು ಖಾಸಗಿ ಆಸ್ಪತ್ರೆಗಳಲ್ಲಿ ಸುಲಿಗೆಗೆ ಒಳಗಾಗಿದ್ದಾರೆ. ಇನ್ನೊಂದು ಕಡೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಒತ್ತಡದಲ್ಲಿ ಸಿಲುಕಿದ್ದಾರೆ. ಈ ವೈದ್ಯರಿಗೆ, ಕೊರೊನಾ ನೋಡಲ್ ಅಧಿಕಾರಿಗಳಿಗೆ ಸರ್ಕಾರವೆ ದಿನಕ್ಕೆ ಇಂತಿಷ್ಟು ಕೊರೊನಾ ಪರೀಕ್ಷಗಳನ್ನು ನಡೆಸಿ ಎಂದು ಟಾರ್ಗೆಟ್ ಕೊಡುತ್ತಿದೆ. ಏಕೆ ಟಾರ್ಗೆಟ್? ಇದರಿಂದ ಏನು ಪ್ರಯೋಜನ ಎಂದು ಮಾತ್ರ ಸರ್ಕಾರ ಹೇಳುತ್ತಿಲ್ಲ.

ಇದನ್ನೂ ಓದಿ: 6ನೇ ತರಗತಿ ‘ವೇದ ಕಾಲದ ಸಂಸ್ಕೃತಿ’ ಪಾಠ ಮಾಡದಂತೆ ಶಿಕ್ಷಣ ಸಚಿವರ ಆದೇಶ: ಅಂಥದ್ದೇನಿದೆ ಪಾಠದಲ್ಲಿ?

ಕಳೆದ ವಾರವಷ್ಟೆ ಮೈಸೂರಿನ ಸರ್ಕಾರಿ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಕಾರಣ ’ಕೊರೊನಾ ಟೆಸ್ಟ್ ಟಾರ್ಗೆಟ್’ ಕೊಡುತ್ತಿದ್ದದ್ದೇ ಎಂದು ಅವರ ಕುಟುಂಬ ಸದಸ್ಯರು ದೂರಿದ್ದಾರೆ. ಇದರಲ್ಲೂ ಹುರುಳಿಲ್ಲದಿಲ್ಲ. ರ್‍ಯಾಪಿಡ್ ಟೆಸ್ಟ್, ಆರ್‌‌‌ಟಿ ಪಿಸಿಆರ್ ಟೆಸ್ಟ್‌‌ಗಳು ಎಂದೆಲ್ಲ ಹಲವಾರು ಟೆಸ್ಟ್‌ಗಳನ್ನು ಸರ್ಕಾರ ಟಾರ್ಗೆಟ್ ಕೊಟ್ಟು ಮಾಡಿಸುತ್ತಿದೆ. ಹೆಚ್ಚಿನ ವೈದ್ಯರು ರೋಗ ಲಕ್ಷಣಗಳಿದ್ದರಷ್ಟೆ ಆಸ್ಪತ್ರೆಗೆ ಹೋಗಿ, ಬೇಕಾಬಿಟ್ಟಿ ಟೆಸ್ಟ್‌ಗಳು ಅಗತ್ಯವಿಲ್ಲ ಎಂದು ಹೇಳುತ್ತಿದ್ದರೂ, ಸರ್ಕಾರ ಮಾತ್ರ ಜಿದ್ದಿಗೆ ಬಿದ್ದು ಇಂತಿಷ್ಟು ಟೆಸ್ಟ್‌ಗಳು ಆಗಲೆಬೇಕು ಎಂದು ಹಠ ಹಿಡಿದಿದೆ.

ಮೈಸೂರಿನ ವೈದ್ಯ ಡಾ. ನಾಗೇಂದ್ರ

ಈ ಟೆಸ್ಟ್ ಟಾರ್ಗೆಟ್ ಹಿಂದೆ ಭ್ರಷ್ಟಾಚಾರದ ವಾಸನೆಯಿದೆ ಎಂಬ ದೊಡ್ಡ ಆರೋಪ ಕೇಳಿಬಂದಿದೆ. ಇಲ್ಲದಿದ್ದರೆ ಯಾವುದೇ ರೋಗ ಲಕ್ಷಣಗಳು ಇಲ್ಲದೆ ಇರುವವರನ್ನು ತಂದು ಪರೀಕ್ಷೆ ಮಾಡುವ ಜರೂರತ್ತಾದರೂ ಏನು?  ಬೆಂಗಳೂರಿನಲ್ಲಿ ಸಾಮಾನ್ಯವಾಗಿರು ದೃಶ್ಯವೆಂದರೆ ಬೀದಿ ಬೀದಿಯಲ್ಲಿ ಪರೀಕ್ಷಾ ಮಾದರಿ ಸಂಗ್ರಹಿಸಿವ ಟೆಂಟ್ ಹಾಕಿ ಹಾದಿ ಬೀದಿಯಲ್ಲಿ ಹೋಗುವವರನ್ನು ಕರೆದು, ಮನೆ ಮನೆ ತೆರಳಿ “ಉಚಿತ ಟೆಸ್ಟ್ ಮಾಡಿಸಿಕೊಳ್ಳಿ” ಎನ್ನುವುದರಲ್ಲಿ ಯಾರ ಹಿತಾಸಕ್ತಿ ಅಡಗಿದೆ? ಒಟ್ಟಿನಲ್ಲಿ ಲಕ್ಷಗಟ್ಟಲೇ ಟೆಸ್ಟ್‌ ಕಿಟ್‌ಗಳನ್ನು ತರಿಸುವ, ಅದರಲ್ಲಿ ಕಿಕ್‌ ಬ್ಯಾಕ್ ಪಡೆಯುವ ಉದ್ದೇಶ ಬಿಟ್ಟರೆ ಇದರಲ್ಲಿ ಬೇರೇನಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಾಮಾನ್ಯ ಜನರು ಕೊರೊನಾ ಪರೀಕ್ಷೆ ಮಾಡಿಸಬೇಕೆ? ಬೇಡವೇ? ರೋಗ ಲಕ್ಷಣಗಳಿರುವವರ ಮಾತ್ರ ಮಾಡಿಸಿದರೆ ಸಾಕೇ ಇತ್ಯಾದಿ ಗೊಂದಲಗಳು ಸಾರ್ವಜನಿಕರಲ್ಲಿ ಮೂಡಿವೆ. ಒಂದು ಕಡೆ ಸರ್ಕಾರದ ಟಾರ್ಗೆಟ್, ಇನ್ನೊಂದು ಕಡೆ ಸೋಂಕು ಇಲ್ಲದಿದ್ದರೂ ಪರೀಕ್ಷಾ ತಪ್ಪಿನಿಂದಾಗಿ ಪಾಸಿಟಿವ್ ಬಂದುಬಿಡಬಹುದೆಂಬ ಭಯ ಜನರನ್ನು ಕಾಡುತ್ತಿದೆ.

ಈ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಮೀಷನರ್ ಮಂಜುನಾಥ್ ಪ್ರಸಾದ್‌ರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ರ್‍ಯಾಪಿಡ್‌ ಟೆಸ್ಟ್‌ ಎಲ್ಲರಿಗೂ ಮಾಡುವುದಿಲ್ಲ. ಕೊರೊನಾ ರೋಗಿಗಳ ಪ್ರಾಥಮಿಕ ಸಂಪರ್ಕ, ದ್ವಿತೀಯ ಸಂಪರ್ಕ ಹೊಂದಿರುವವರಿಗೆ, ಕಂಟೈನ್‌ಮೆಂಟ್ ಪ್ರದೇಶದಲ್ಲಿವವರಿಗೆ, SARI (ತೀವ್ರವಾದ ಉಸಿರಾಟದ ಸೋಂಕು) ಇರುವವರಿಗೆ, ವೈದ್ಯರು ಶಿಫಾರಸ್ಸು ಮಾಡಿದವರಿಗೆ ಮಾತ್ರ ಪರೀಕ್ಷೆ ಮಾಡುತ್ತೇವೆ. ಅದು ಬಿಟ್ಟು ಸಿಕ್ಕಸಿಕ್ಕವರನ್ನು ತಂದು ಪರೀಕ್ಷೆ ಮಾಡಿದರೆ, ಟೆಸ್ಟ್‌ ಕಿಟ್‌ಗಳು ವ್ಯರ್ಥವಾಗುತ್ತವೆ ಅಷ್ಟೇ. ಅದರಿಂದ ಏನೂ ಪ್ರಯೋಜನವಿಲ್ಲ” ಎಂದಿದ್ದಾರೆ.

ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್ ಪ್ರಸಾದ್‌

ಬೆಂಗಳೂರಿನಲ್ಲಿ ಮನೆಮನೆಗೆ ಹೋಗಿ ’ಫ್ರೀ ಟೆಸ್ಟ್ ಮಾಡಿಸಿ’ ಎಂಬ ಅಭಿಯಾನ ನಡೆಯುತ್ತಿರುವುದರ ಬಗ್ಗೆ ಆಯುಕ್ತರ ಗಮನಕ್ಕೆ ತಂದಾಗ, “ಮನೆಮನೆ ಸರ್ವೆ ಮಾಡುತ್ತಿರುವಾಗ ಯಾರಿಗಾದರು SARI ಲಕ್ಷಣಗಳು ಕಂಡು ಬಂದರೆ, ಕೊಮೋರ್ಬಿಡ್ ಇದ್ದರೆ ಅಂತವರಿಗೆ ಟೆಸ್ಟ್ ಮಾಡಿಸುವುದು ಒಳ್ಳಯದೆ ಮತ್ತು ಅಂತವರಿಗೆ ಮಾತ್ರ ಟೆಸ್ಟ್ ಮಾಡಿಸುತ್ತಿದ್ದೇವೆ” ಎಂದರು.

ಇದನ್ನೂ ಓದಿ: NEET, JEE ಪರೀಕ್ಷೆ ವಿಳಂಬ ವಿದ್ಯಾರ್ಥಿಗಳ ಭವಿಷ್ಯ ಮುಂದೂಡಿದಂತೆ: ಪರೀಕ್ಷೆಗೆ ಒತ್ತಾಯಿಸಿ ಮೋದಿಗೆ ಪತ್ರ

ಈ ಬಗ್ಗೆ ಮಾತನಾಡಿದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ, “ಸೋಂಕಿನ ಗುಣಲಕ್ಷಣ ಹೊಂದಿರುವವರು ಮನೆಯಲ್ಲೇ ಇರಿ ಎಂದು ಸರ್ಕಾರವೆ ಹೇಳುತ್ತಿದೆ. ಅಂದರೆ ಇದರ ಉದ್ದೇಶ ಇದಕ್ಕೆ ಪರೀಕ್ಷೆಯು ಬೇಕಾಗಿಲ್ಲ ಎಂದಲ್ಲವೆ?. ಆದರೆ ಮನೆಯಲ್ಲೆ ಇರಲು ಹೇಳುವ ಸರ್ಕಾರ ಮತ್ತೊಂದೆಡೆ ಟೆಸ್ಟ್‌ ಮಾಡಿಸಲು ಹೇಳುತ್ತಿದೆ. ಸರ್ಕಾರಕ್ಕೆ ಕಾಯಿಲೆಯನ್ನು ನಿಯಂತ್ರಿಸುವ ಆಸಕ್ತಿ ಇದ್ದರೆ ಜನರನ್ನು ಮನೆಯಲ್ಲೇ ಇದ್ದು, ಅಲ್ಲಿಂದಲೆ ಆರೋಗ್ಯದ ಮಾಹಿತಿಯನ್ನು ನೀಡಲು ಕೇಳಬಹುದಿತ್ತು. ಆದರೆ ಅದನ್ನು ಸರ್ಕಾರ ಮಾಡುತ್ತಿಲ್ಲ. ಅದಲ್ಲದೆ ಎಲ್ಲರಿಗೂ ಪರೀಕ್ಷೆಗಳು ನಡೆಸಿದರೆ ಕೋಟ್ಯಾಂತರ ರೂಪಾಯಿಗಳು ಬೇಕಾಗುತ್ತದೆ. ಖಜಾನೆಯಲ್ಲಿ ಹಣವಿಲ್ಲ ಎಂದು ಹೇಳುವ ಸರ್ಕಾರಕ್ಕೆ ಸ್ಪಷ್ಟ ಯೋಜನೆಯಿಲ್ಲ” ಎಂದು ಹೇಳಿದರು.

ಡಾ. ಶ್ರೀನಿವಾಸ ಕಕ್ಕಿಲ್ಲಾಯ

“ನಿಜವಾಗಿಯೂ ಕೊರೊನಾ ಪರೀಕ್ಷೆಗಳನ್ನು ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಯಾರಿಗೆ ಕೊರೊನಾ ಲಕ್ಷಣಗಳಿವೆಯೋ ಅವರು ಸಹ ಪರೀಕ್ಷೆ ಮಾಡಿಸಬೇಕಾಗದ ಅಗತ್ಯವಿಲ್ಲ. ಅವರು ಮನೆಯಲ್ಲೇ ಐಸೋಲೇಷನ್‌ಗೆ ಒಳಗಾದರೆ ಯಾವುದೇ ಸಮಸ್ಯೆ ಆಗುವುದಿಲ್ಲ, ಮಕ್ಕಳು, ವೃದ್ದರು ಮತ್ತು ಇತರ ರೋಗಗಳಿಂದ ಬಳಲುತ್ತಿರುವವರನ್ನು ಹೊರತುಪಡಿಸಿದರೆ ಉಳಿದ ಬಹುತೇಕ ಜನರಿಗೆ ಚಿಕಿತ್ಸೆಯ ಅಗತ್ಯವು ಇರುವುದಿಲ್ಲ. ನಿಮ್ಮ ರಕ್ತದಲ್ಲಿರುವ ಆಮ್ಲಜನಕದ ಪ್ರಮಾಣವನ್ನು ಪರೀಕ್ಷಿಸುತ್ತಾ ಅದರಲ್ಲಿ 95% ಕ್ಕಿಂತ ಕಡಿಮೆ ಬಂದರೆ ಮಾತ್ರ ಆಸ್ಪತ್ರೆಗಳಿಗೆ ಹೋಗಬೇಕು” ಎಂದು ಡಾ. ಕಕ್ಕಿಲ್ಲಾಯ ಮಾಹಿತಿ ನೀಡಿದರು.

ಗುಣಮಟ್ಟ ಸರಿಯಾಗಿಲ್ಲ ಎಂದು ಹೇಳುತ್ತಾ ಸರ್ಕಾರಿ ಆಸ್ಪತ್ರೆಗಳಿಗೆ ಹೋಗಲು ಭಯಪಡುತ್ತಿದ್ದ ಜನರು ಇತ್ತ ಲಕ್ಷಗಟ್ಟಲೆ ದುಡ್ಡು ತೆತ್ತು ಖಾಸಗಿ ಆಸ್ಪತ್ರೆಗಳಿಗೂ ಹೋಗಲು ಹೆದರುತ್ತಿದ್ದಾರೆ. ಸರ್ಕಾರ ಕೂಡಾ ದಿನಕ್ಕೊಂದು ಕೊರೊನಾ ಮಾರ್ಗಸೂಚಿಗಳನ್ನು ಹೊರಡಿಸುತ್ತಾ ಜನರನ್ನು ಮತ್ತಷ್ಟು ಗೊಂದಲಕ್ಕೆ ದೂಡುತ್ತಿದೆ. ಮಾಸ್ಕ್‌ ಕಡ್ಡಾಯದ ವಿಚಾರದಲ್ಲಾಗಲಿ, ಸೀಲ್‌ಡೌನ್‌ ಮಾಡಬೇಕೇ, ಬೇಡವೇ ಎನ್ನುವ ವಿಚಾರದಲ್ಲಾಗಲಿ ಸರ್ಕಾರಕ್ಕೆ ಇನ್ನೂ ಸಹ ಸರಿಯಾದ ನಿರ್ಧಾರಕ್ಕೆ ಬರಲಾಗಿಲ್ಲ.


ಇದನ್ನೂ ಓದಿ: ವೀರ ಹೋರಾಟಗಾರ ’ಮೈಸೂರು ಹುಲಿ’ ಟಿಪ್ಪು ಸುಲ್ತಾನ್ ಈ ನೆಲದ ಮಗ: ಬಿಜೆಪಿ ನಾಯಕ ವಿಶ್ವನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...