Homeಕರೋನಾ ತಲ್ಲಣರೋಗಲಕ್ಷಣಗಳು ಇರುವವರು, ಇಲ್ಲದವರು ಕೊರೊನಾ ಪರೀಕ್ಷೆ ಮಾಡಿಸಬೇಕೆ, ಬೇಡವೇ?

ರೋಗಲಕ್ಷಣಗಳು ಇರುವವರು, ಇಲ್ಲದವರು ಕೊರೊನಾ ಪರೀಕ್ಷೆ ಮಾಡಿಸಬೇಕೆ, ಬೇಡವೇ?

- Advertisement -
- Advertisement -

ಚೀನಾದಲ್ಲಿ ಹುಟ್ಟಿಕೊಂಡಿತು ಎನ್ನಲಾಗಿರುವ ಕೊರೊನಾ ವೈರಸ್ ವಿಶ್ವದಾದ್ಯಂತ ಆವರಿಸಿ ಸರ್ವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕೊರೊನಾ ಹೊಡೆತದಿಂದ ವಿಶ್ವವನ್ನು ಹೊರತರಬೇಕು ಎಂದು ಹಲವಾರು ವಿಜ್ಞಾನಿಗಳು ಅದಕ್ಕೆ ಲಸಿಕೆ ಕಂಡುಹಿಡಿಯುವ ಸ್ಫರ್ಧೆಗೆ ಇಳಿದಿದ್ದಾರೆ.

ಭಾರತದಂತಹ ಜನಸಾಂದ್ರತೆ ಹೊಂದಿರುವ ದೇಶದಲ್ಲಿ ವಿಶ್ವದ ಅತೀ ದೀರ್ಘವಾದ ಲಾಕ್‌ಡೌನ್ ಹಾಕಿದ ಪರಿಣಾಮ ದೇಶದ ಕೋಟ್ಯಾಂತರ ಜನರು ದೇಶದ ಹೆದ್ದಾರಿಗಳಲ್ಲಿ ರಕ್ತದ ಮೆರವಣಿಗೆ ನಡೆಸಿದರು. ಅಂದು ಹೇರಲ್ಪಟ್ಟ ಲಾಕ್‌ಡೌನ್ ಇನ್ನೂ ಸಹ ಸಂಪೂರ್ಣವಾಗಿ ತೆರವುಗೊಂಡಿಲ್ಲ. ಆದರೆ ಇಂತಹ ಸಂದರ್ಭದಲ್ಲಿ ಜನ ಸಾಮಾನ್ಯರೂ ನೂರಾರು ಗೊಂದಲಗಳಲ್ಲಿ ಸಿಕ್ಕಿ ನಲುಗುತ್ತಿದ್ದಾರೆ. ಈ ಗೊಂದಲ ನಿವಾರಿಸಲು ಸರ್ಕಾರ ಮಾಡಿದ್ದೇನು? ಧೀರ್ಘ ಅವಧಿಯ ಲಾಕ್‌ಡೌನ್ ಘೊಷಿಸುವ ಸಂಧರ್ಭದಲ್ಲೇ ಮುಂದಾಲೋಚನೆ ಮಾಡದ ಸರ್ಕಾರ ಈಗ ಮಾಡುತ್ತದೆಯೇ? ಉತ್ತರ ಶೂನ್ಯ.

ದಿಲ್ಲಿ ಮತ್ತು ನೊಯಿಡಾದಿಂ ಉತ್ತರ ಪ್ರದೇಶ ಮತ್ತಿತರ ರಾಜ್ಯಗಳಿಗೆ ಕಾಲ್ನಡಿಗೆಯಲ್ಲಿ ಹೋಗುತ್ತಿರುವ ವಲಸೆ ಕಾರ್ಮಿಕರ ಕುರಿತು ಕಲಾವಿದೆ ಲಬಾನಿ ಜಾಂಗಿ ಅವರ ವರ್ಣಚಿತ್ರ

ದೇಶದಲ್ಲಿ ಕೊರೊನಾ ಪ್ರಾರಂಭವಾಗಿ 7 ತಿಂಗಳಾದರೂ ಸರ್ಕಾರದಿಂದ ಏರ್ಪಟ್ಟ ಗೊಂದಲಗಳು ಇನ್ನೂ ಬಗೆಹರಿದಿಲ್ಲ. ಸರ್ಕಾರಗಳೇ ಗೊಂದಲ ಉಂಟುಮಾಡಿದರೆ ಅದರಿಂದ ಕಷ್ಟಪಡುವುದು ಸಾಮಾನ್ಯ ಜನರು. ಈಗಾಗಲೆ ಜನರು ಖಾಸಗಿ ಆಸ್ಪತ್ರೆಗಳಲ್ಲಿ ಸುಲಿಗೆಗೆ ಒಳಗಾಗಿದ್ದಾರೆ. ಇನ್ನೊಂದು ಕಡೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಒತ್ತಡದಲ್ಲಿ ಸಿಲುಕಿದ್ದಾರೆ. ಈ ವೈದ್ಯರಿಗೆ, ಕೊರೊನಾ ನೋಡಲ್ ಅಧಿಕಾರಿಗಳಿಗೆ ಸರ್ಕಾರವೆ ದಿನಕ್ಕೆ ಇಂತಿಷ್ಟು ಕೊರೊನಾ ಪರೀಕ್ಷಗಳನ್ನು ನಡೆಸಿ ಎಂದು ಟಾರ್ಗೆಟ್ ಕೊಡುತ್ತಿದೆ. ಏಕೆ ಟಾರ್ಗೆಟ್? ಇದರಿಂದ ಏನು ಪ್ರಯೋಜನ ಎಂದು ಮಾತ್ರ ಸರ್ಕಾರ ಹೇಳುತ್ತಿಲ್ಲ.

ಇದನ್ನೂ ಓದಿ: 6ನೇ ತರಗತಿ ‘ವೇದ ಕಾಲದ ಸಂಸ್ಕೃತಿ’ ಪಾಠ ಮಾಡದಂತೆ ಶಿಕ್ಷಣ ಸಚಿವರ ಆದೇಶ: ಅಂಥದ್ದೇನಿದೆ ಪಾಠದಲ್ಲಿ?

ಕಳೆದ ವಾರವಷ್ಟೆ ಮೈಸೂರಿನ ಸರ್ಕಾರಿ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಕಾರಣ ’ಕೊರೊನಾ ಟೆಸ್ಟ್ ಟಾರ್ಗೆಟ್’ ಕೊಡುತ್ತಿದ್ದದ್ದೇ ಎಂದು ಅವರ ಕುಟುಂಬ ಸದಸ್ಯರು ದೂರಿದ್ದಾರೆ. ಇದರಲ್ಲೂ ಹುರುಳಿಲ್ಲದಿಲ್ಲ. ರ್‍ಯಾಪಿಡ್ ಟೆಸ್ಟ್, ಆರ್‌‌‌ಟಿ ಪಿಸಿಆರ್ ಟೆಸ್ಟ್‌‌ಗಳು ಎಂದೆಲ್ಲ ಹಲವಾರು ಟೆಸ್ಟ್‌ಗಳನ್ನು ಸರ್ಕಾರ ಟಾರ್ಗೆಟ್ ಕೊಟ್ಟು ಮಾಡಿಸುತ್ತಿದೆ. ಹೆಚ್ಚಿನ ವೈದ್ಯರು ರೋಗ ಲಕ್ಷಣಗಳಿದ್ದರಷ್ಟೆ ಆಸ್ಪತ್ರೆಗೆ ಹೋಗಿ, ಬೇಕಾಬಿಟ್ಟಿ ಟೆಸ್ಟ್‌ಗಳು ಅಗತ್ಯವಿಲ್ಲ ಎಂದು ಹೇಳುತ್ತಿದ್ದರೂ, ಸರ್ಕಾರ ಮಾತ್ರ ಜಿದ್ದಿಗೆ ಬಿದ್ದು ಇಂತಿಷ್ಟು ಟೆಸ್ಟ್‌ಗಳು ಆಗಲೆಬೇಕು ಎಂದು ಹಠ ಹಿಡಿದಿದೆ.

ಮೈಸೂರಿನ ವೈದ್ಯ ಡಾ. ನಾಗೇಂದ್ರ

ಈ ಟೆಸ್ಟ್ ಟಾರ್ಗೆಟ್ ಹಿಂದೆ ಭ್ರಷ್ಟಾಚಾರದ ವಾಸನೆಯಿದೆ ಎಂಬ ದೊಡ್ಡ ಆರೋಪ ಕೇಳಿಬಂದಿದೆ. ಇಲ್ಲದಿದ್ದರೆ ಯಾವುದೇ ರೋಗ ಲಕ್ಷಣಗಳು ಇಲ್ಲದೆ ಇರುವವರನ್ನು ತಂದು ಪರೀಕ್ಷೆ ಮಾಡುವ ಜರೂರತ್ತಾದರೂ ಏನು?  ಬೆಂಗಳೂರಿನಲ್ಲಿ ಸಾಮಾನ್ಯವಾಗಿರು ದೃಶ್ಯವೆಂದರೆ ಬೀದಿ ಬೀದಿಯಲ್ಲಿ ಪರೀಕ್ಷಾ ಮಾದರಿ ಸಂಗ್ರಹಿಸಿವ ಟೆಂಟ್ ಹಾಕಿ ಹಾದಿ ಬೀದಿಯಲ್ಲಿ ಹೋಗುವವರನ್ನು ಕರೆದು, ಮನೆ ಮನೆ ತೆರಳಿ “ಉಚಿತ ಟೆಸ್ಟ್ ಮಾಡಿಸಿಕೊಳ್ಳಿ” ಎನ್ನುವುದರಲ್ಲಿ ಯಾರ ಹಿತಾಸಕ್ತಿ ಅಡಗಿದೆ? ಒಟ್ಟಿನಲ್ಲಿ ಲಕ್ಷಗಟ್ಟಲೇ ಟೆಸ್ಟ್‌ ಕಿಟ್‌ಗಳನ್ನು ತರಿಸುವ, ಅದರಲ್ಲಿ ಕಿಕ್‌ ಬ್ಯಾಕ್ ಪಡೆಯುವ ಉದ್ದೇಶ ಬಿಟ್ಟರೆ ಇದರಲ್ಲಿ ಬೇರೇನಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಾಮಾನ್ಯ ಜನರು ಕೊರೊನಾ ಪರೀಕ್ಷೆ ಮಾಡಿಸಬೇಕೆ? ಬೇಡವೇ? ರೋಗ ಲಕ್ಷಣಗಳಿರುವವರ ಮಾತ್ರ ಮಾಡಿಸಿದರೆ ಸಾಕೇ ಇತ್ಯಾದಿ ಗೊಂದಲಗಳು ಸಾರ್ವಜನಿಕರಲ್ಲಿ ಮೂಡಿವೆ. ಒಂದು ಕಡೆ ಸರ್ಕಾರದ ಟಾರ್ಗೆಟ್, ಇನ್ನೊಂದು ಕಡೆ ಸೋಂಕು ಇಲ್ಲದಿದ್ದರೂ ಪರೀಕ್ಷಾ ತಪ್ಪಿನಿಂದಾಗಿ ಪಾಸಿಟಿವ್ ಬಂದುಬಿಡಬಹುದೆಂಬ ಭಯ ಜನರನ್ನು ಕಾಡುತ್ತಿದೆ.

ಈ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಮೀಷನರ್ ಮಂಜುನಾಥ್ ಪ್ರಸಾದ್‌ರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ರ್‍ಯಾಪಿಡ್‌ ಟೆಸ್ಟ್‌ ಎಲ್ಲರಿಗೂ ಮಾಡುವುದಿಲ್ಲ. ಕೊರೊನಾ ರೋಗಿಗಳ ಪ್ರಾಥಮಿಕ ಸಂಪರ್ಕ, ದ್ವಿತೀಯ ಸಂಪರ್ಕ ಹೊಂದಿರುವವರಿಗೆ, ಕಂಟೈನ್‌ಮೆಂಟ್ ಪ್ರದೇಶದಲ್ಲಿವವರಿಗೆ, SARI (ತೀವ್ರವಾದ ಉಸಿರಾಟದ ಸೋಂಕು) ಇರುವವರಿಗೆ, ವೈದ್ಯರು ಶಿಫಾರಸ್ಸು ಮಾಡಿದವರಿಗೆ ಮಾತ್ರ ಪರೀಕ್ಷೆ ಮಾಡುತ್ತೇವೆ. ಅದು ಬಿಟ್ಟು ಸಿಕ್ಕಸಿಕ್ಕವರನ್ನು ತಂದು ಪರೀಕ್ಷೆ ಮಾಡಿದರೆ, ಟೆಸ್ಟ್‌ ಕಿಟ್‌ಗಳು ವ್ಯರ್ಥವಾಗುತ್ತವೆ ಅಷ್ಟೇ. ಅದರಿಂದ ಏನೂ ಪ್ರಯೋಜನವಿಲ್ಲ” ಎಂದಿದ್ದಾರೆ.

ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್ ಪ್ರಸಾದ್‌

ಬೆಂಗಳೂರಿನಲ್ಲಿ ಮನೆಮನೆಗೆ ಹೋಗಿ ’ಫ್ರೀ ಟೆಸ್ಟ್ ಮಾಡಿಸಿ’ ಎಂಬ ಅಭಿಯಾನ ನಡೆಯುತ್ತಿರುವುದರ ಬಗ್ಗೆ ಆಯುಕ್ತರ ಗಮನಕ್ಕೆ ತಂದಾಗ, “ಮನೆಮನೆ ಸರ್ವೆ ಮಾಡುತ್ತಿರುವಾಗ ಯಾರಿಗಾದರು SARI ಲಕ್ಷಣಗಳು ಕಂಡು ಬಂದರೆ, ಕೊಮೋರ್ಬಿಡ್ ಇದ್ದರೆ ಅಂತವರಿಗೆ ಟೆಸ್ಟ್ ಮಾಡಿಸುವುದು ಒಳ್ಳಯದೆ ಮತ್ತು ಅಂತವರಿಗೆ ಮಾತ್ರ ಟೆಸ್ಟ್ ಮಾಡಿಸುತ್ತಿದ್ದೇವೆ” ಎಂದರು.

ಇದನ್ನೂ ಓದಿ: NEET, JEE ಪರೀಕ್ಷೆ ವಿಳಂಬ ವಿದ್ಯಾರ್ಥಿಗಳ ಭವಿಷ್ಯ ಮುಂದೂಡಿದಂತೆ: ಪರೀಕ್ಷೆಗೆ ಒತ್ತಾಯಿಸಿ ಮೋದಿಗೆ ಪತ್ರ

ಈ ಬಗ್ಗೆ ಮಾತನಾಡಿದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ, “ಸೋಂಕಿನ ಗುಣಲಕ್ಷಣ ಹೊಂದಿರುವವರು ಮನೆಯಲ್ಲೇ ಇರಿ ಎಂದು ಸರ್ಕಾರವೆ ಹೇಳುತ್ತಿದೆ. ಅಂದರೆ ಇದರ ಉದ್ದೇಶ ಇದಕ್ಕೆ ಪರೀಕ್ಷೆಯು ಬೇಕಾಗಿಲ್ಲ ಎಂದಲ್ಲವೆ?. ಆದರೆ ಮನೆಯಲ್ಲೆ ಇರಲು ಹೇಳುವ ಸರ್ಕಾರ ಮತ್ತೊಂದೆಡೆ ಟೆಸ್ಟ್‌ ಮಾಡಿಸಲು ಹೇಳುತ್ತಿದೆ. ಸರ್ಕಾರಕ್ಕೆ ಕಾಯಿಲೆಯನ್ನು ನಿಯಂತ್ರಿಸುವ ಆಸಕ್ತಿ ಇದ್ದರೆ ಜನರನ್ನು ಮನೆಯಲ್ಲೇ ಇದ್ದು, ಅಲ್ಲಿಂದಲೆ ಆರೋಗ್ಯದ ಮಾಹಿತಿಯನ್ನು ನೀಡಲು ಕೇಳಬಹುದಿತ್ತು. ಆದರೆ ಅದನ್ನು ಸರ್ಕಾರ ಮಾಡುತ್ತಿಲ್ಲ. ಅದಲ್ಲದೆ ಎಲ್ಲರಿಗೂ ಪರೀಕ್ಷೆಗಳು ನಡೆಸಿದರೆ ಕೋಟ್ಯಾಂತರ ರೂಪಾಯಿಗಳು ಬೇಕಾಗುತ್ತದೆ. ಖಜಾನೆಯಲ್ಲಿ ಹಣವಿಲ್ಲ ಎಂದು ಹೇಳುವ ಸರ್ಕಾರಕ್ಕೆ ಸ್ಪಷ್ಟ ಯೋಜನೆಯಿಲ್ಲ” ಎಂದು ಹೇಳಿದರು.

ಡಾ. ಶ್ರೀನಿವಾಸ ಕಕ್ಕಿಲ್ಲಾಯ

“ನಿಜವಾಗಿಯೂ ಕೊರೊನಾ ಪರೀಕ್ಷೆಗಳನ್ನು ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಯಾರಿಗೆ ಕೊರೊನಾ ಲಕ್ಷಣಗಳಿವೆಯೋ ಅವರು ಸಹ ಪರೀಕ್ಷೆ ಮಾಡಿಸಬೇಕಾಗದ ಅಗತ್ಯವಿಲ್ಲ. ಅವರು ಮನೆಯಲ್ಲೇ ಐಸೋಲೇಷನ್‌ಗೆ ಒಳಗಾದರೆ ಯಾವುದೇ ಸಮಸ್ಯೆ ಆಗುವುದಿಲ್ಲ, ಮಕ್ಕಳು, ವೃದ್ದರು ಮತ್ತು ಇತರ ರೋಗಗಳಿಂದ ಬಳಲುತ್ತಿರುವವರನ್ನು ಹೊರತುಪಡಿಸಿದರೆ ಉಳಿದ ಬಹುತೇಕ ಜನರಿಗೆ ಚಿಕಿತ್ಸೆಯ ಅಗತ್ಯವು ಇರುವುದಿಲ್ಲ. ನಿಮ್ಮ ರಕ್ತದಲ್ಲಿರುವ ಆಮ್ಲಜನಕದ ಪ್ರಮಾಣವನ್ನು ಪರೀಕ್ಷಿಸುತ್ತಾ ಅದರಲ್ಲಿ 95% ಕ್ಕಿಂತ ಕಡಿಮೆ ಬಂದರೆ ಮಾತ್ರ ಆಸ್ಪತ್ರೆಗಳಿಗೆ ಹೋಗಬೇಕು” ಎಂದು ಡಾ. ಕಕ್ಕಿಲ್ಲಾಯ ಮಾಹಿತಿ ನೀಡಿದರು.

ಗುಣಮಟ್ಟ ಸರಿಯಾಗಿಲ್ಲ ಎಂದು ಹೇಳುತ್ತಾ ಸರ್ಕಾರಿ ಆಸ್ಪತ್ರೆಗಳಿಗೆ ಹೋಗಲು ಭಯಪಡುತ್ತಿದ್ದ ಜನರು ಇತ್ತ ಲಕ್ಷಗಟ್ಟಲೆ ದುಡ್ಡು ತೆತ್ತು ಖಾಸಗಿ ಆಸ್ಪತ್ರೆಗಳಿಗೂ ಹೋಗಲು ಹೆದರುತ್ತಿದ್ದಾರೆ. ಸರ್ಕಾರ ಕೂಡಾ ದಿನಕ್ಕೊಂದು ಕೊರೊನಾ ಮಾರ್ಗಸೂಚಿಗಳನ್ನು ಹೊರಡಿಸುತ್ತಾ ಜನರನ್ನು ಮತ್ತಷ್ಟು ಗೊಂದಲಕ್ಕೆ ದೂಡುತ್ತಿದೆ. ಮಾಸ್ಕ್‌ ಕಡ್ಡಾಯದ ವಿಚಾರದಲ್ಲಾಗಲಿ, ಸೀಲ್‌ಡೌನ್‌ ಮಾಡಬೇಕೇ, ಬೇಡವೇ ಎನ್ನುವ ವಿಚಾರದಲ್ಲಾಗಲಿ ಸರ್ಕಾರಕ್ಕೆ ಇನ್ನೂ ಸಹ ಸರಿಯಾದ ನಿರ್ಧಾರಕ್ಕೆ ಬರಲಾಗಿಲ್ಲ.


ಇದನ್ನೂ ಓದಿ: ವೀರ ಹೋರಾಟಗಾರ ’ಮೈಸೂರು ಹುಲಿ’ ಟಿಪ್ಪು ಸುಲ್ತಾನ್ ಈ ನೆಲದ ಮಗ: ಬಿಜೆಪಿ ನಾಯಕ ವಿಶ್ವನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...