Homeಕರ್ನಾಟಕ'ಕಳ್ಳರನ್ನು ಕಳ್ಳ ಎನ್ನದೆ ಸಾಧು-ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ?': ಸಿದ್ದರಾಮಯ್ಯ ಪ್ರಶ್ನೆ

‘ಕಳ್ಳರನ್ನು ಕಳ್ಳ ಎನ್ನದೆ ಸಾಧು-ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ?’: ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ರವಿವಾರ ದೇಶಾದ್ಯಂತ ಅಹೋರಾತ್ರಿ ಸತ್ಯಾಗ್ರಹ ನಡೆಸಲು ಕರೆ ಕೊಡಲಾಗಿತ್ತು. ರಾಜ್ಯದಲ್ಲಿ ಬೆಂಗಳೂರು ಕೇಂದ್ರ, ದಕ್ಷಿಣ ಹಾಗೂ ಉತ್ತರ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಭಾನುವಾರ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ”ಭಾರತ್‌ ಜೋಡೊ ಯಾತ್ರೆಯ ಬಳಿಕ ರಾಹುಲ್‌ ಗಾಂಧಿ ಅವರ ವರ್ಚಸ್ಸು ವೃದ್ಧಿಯಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರ ಆತಂಕ ಹೆಚ್ಚಿಸಿದೆ. ರಾಜಕೀಯ ದ್ವೇಷದಿಂದ ಅನರ್ಹತೆ ಮಾಡಲಾಗಿದೆ” ಎಂದು ಹೇಳಿದರು.

”ಇದು ಹಿಟ್ಲರ್‌ನ ಜರ್ಮನಿಯೂ ಅಲ್ಲ. ಮುಸೊಲಿನಿಯ ಇಟಲಿಯೂ ಅಲ್ಲ. ನಾವು ಪ್ರಜಾಪ್ರಭುತ್ವ ಒಪ್ಪಿಕೊಂಡು ಬದುಕುತ್ತಿದ್ದೇವೆ. ಅನರ್ಹತೆ ಕ್ರಮವು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಆಘಾತ ತಂದಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡಲಾಗುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

”2019ರ ಲೋಕಸಭೆ ಚುನಾವಣೆ ಹಿನ್ನೆಲೆ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ರಾಹುಲ್‌ ಗಾಂಧಿ ಅವರು ಭಾಷಣ ಮಾಡುವ ವೇಳೆ ನಾನೂ ವೇದಿಕೆಯಲ್ಲಿದ್ದೆ. ಜಾತಿ ನಿಂದನೆ ಅಥವಾ ಮಾನಹಾನಿಕರ ರೀತಿಯಲ್ಲಿ ಮಾತನಾಡಿಲ್ಲ. ದೇಶದ ಜನರ ಹಣವನ್ನು ಕೊಳ್ಳೆ ಹೊಡೆದು ವಿದೇಶಕ್ಕೆ ಹೋದವರ ಹೆಸರು ಪ್ರಸ್ತಾಪಿಸಿದ್ದರು. ಅವರನ್ನು ಕಳ್ಳರು ಎಂದು ಕರೆಯುವ ಸ್ವಾತಂತ್ರ್ಯವೂ ಇಲ್ಲವೇ? ಹಾಗಿದ್ದರೆ ಅವರು ಸಮಾಜ ಸುಧಾರಕರೇ? ಹಿಟ್ಲರ್‌, ಮುಸೊಲಿನಿ ವಂಶಸ್ಥರಿಂದ ನಾವು ದೇಶ ಭಕ್ತಿಯ ಪಾಠ ಕಲಿಯಬೇಕಿಲ್ಲ” ಎಂದು ಹೇಳಿದರು.

”ಕಳ್ಳರನ್ನು ಕಳ್ಳ ಎಂದು ಕರೆಯದೇ ಸಾಧುಗಳು, ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಇದನ್ನೂ ಓದಿ: ರಾಹುಲ್ ಅನರ್ಹತೆ ವಿರೋಧಿಸಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಅಹೋರಾತ್ರಿ ಸತ್ಯಾಗ್ರಹ

ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಮಾತನಾಡಿ, ”ಲಲಿತ್ ಮೋದಿ, ನೀರವ್‌ ಮೋದಿ ಸೇರಿ ಹಲವರು ಬ್ಯಾಂಕ್‌ಗಳನ್ನು ಕೊಳ್ಳೆ ಹೊಡೆದು ವಿದೇಶದಲ್ಲಿದ್ದಾರೆ. ಅದು ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ, ನಳಿನ್‌ಕುಮಾರ್ ಕಟೀಲ್‌, ನಡ್ಡಾ, ಅಮಿತ್‌ ಶಾ ಅವರ ಹಣ ಅಲ್ಲ. ಜನರ ದುಡ್ಡು. ಪ್ರಜಾಪ್ರಭುತ್ವದ ತಾಯಿ ಭಾರತವೆಂದು ಕರೆಯಲಾಗುತ್ತಿತ್ತು. ಅದನ್ನೇ ನಾಶ ಪಡಿಸಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ದಿನೇಶ್‌ ಗುಂಡೂರಾವ್‌ ಮಾತನಾಡಿ, ”ತನ್ನ ವಿರುದ್ಧ ಮಾತನಾಡುವವರನ್ನು ಬಿಜೆಪಿ ಅನರ್ಹಗೊಳಿಸುತ್ತಿದೆ. ಪ್ರಜಾಪ್ರಭುತ್ವದ ವಿರೋಧಿ ನಡೆಯನ್ನು ಮಾಧ್ಯಮಗಳೂ ಪ್ರಶ್ನಿಸುತ್ತಿಲ್ಲ. ತಪ್ಪು ಮಾಡಿದಾಗ ಟೀಕೆಗಳು ಪ್ರಜಾತಂತ್ರ ವ್ಯವಸ್ಥೆಯ ಭಾಗ. ದುರುದ್ದೇಶದಿಂದ ರಾಹುಲ್‌ ಅವರ ಬಾಯಿ ಮುಚ್ಚಿಸಲು ಅನರ್ಹತೆ ಕ್ರಮ ಬಳಸಲಾಗಿದೆ” ಎಂದು ಕಿಡಿಕಾರಿದರು.

ಈ ಪ್ರತಿಭಟನೆಯಲ್ಲಿ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌, ಶಾಸಕರಾದ ಕೆ.ಜೆ.ಜಾರ್ಜ್‌, ಎನ್‌.ಎ. ಹ್ಯಾರೀಸ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್‌ ಇತರರು ಭಾಗಿಯಾಗಿದ್ದರು.

ಪ್ರತಿಪಕ್ಷಗಳಿಂದಲೂ ಪ್ರತಿಭಟನೆ

ರಾಹುಲ್ ಗಾಂಧಿಯವರನ್ನು ಲೋಕಸಭೆಯಿಂದ ಅನರ್ಹಗೊಳಿಸುವುದರ ವಿರುದ್ಧ ರವಿವಾರ ದೇಶಾದ್ಯಂತ ಕಾಂಗ್ರೆಸ್ ಅಹೋರಾತ್ರಿ ಸತ್ಯಾಗ್ರಹ ನಡೆಸಿತು. ರಾಹುಲ್ ಅನರ್ಹತೆ ಖಂಡಿಸಿ ಸೋಮವಾರ 17 ಪ್ರತಿಪಕ್ಷಗಳು ದೆಹಲಿಯಲ್ಲಿ ಜಂಟಿ ಪ್ರತಿಭಟನೆ ನಡೆಸಿದವು.

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್, ಸಿಎಂಕೆ, ಸಮಾಜವಾದಿ ಪಾರ್ಟಿ, ಜೆಡಿಯು, ಬಿಆರ್‌ಎಸ್, ಸಿಪಿಎಂ, ಆರ್‌ಜೆಡಿ, ನ್ಯಾಷನಲ್ ಕಾಂಗ್ರೆಸ್ ಪಕ್ಷ, ಸಿಪಿಐ, ಇಂಡೀಯನ್ ಯುನಿಯನ್ ಮುಸ್ಲಿಂ ಲೀಗ್, ಎಮ್‌ಡಿಎಮ್‌ಕೆ, ಕೆಸಿ, ಟಿಎಂಸಿ, ಶಿವಸೇನಾ ಹಾಗೂ ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಭಾಗವಹಿಸಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...