Homeಕರ್ನಾಟಕ'ಕಳ್ಳರನ್ನು ಕಳ್ಳ ಎನ್ನದೆ ಸಾಧು-ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ?': ಸಿದ್ದರಾಮಯ್ಯ ಪ್ರಶ್ನೆ

‘ಕಳ್ಳರನ್ನು ಕಳ್ಳ ಎನ್ನದೆ ಸಾಧು-ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ?’: ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ರವಿವಾರ ದೇಶಾದ್ಯಂತ ಅಹೋರಾತ್ರಿ ಸತ್ಯಾಗ್ರಹ ನಡೆಸಲು ಕರೆ ಕೊಡಲಾಗಿತ್ತು. ರಾಜ್ಯದಲ್ಲಿ ಬೆಂಗಳೂರು ಕೇಂದ್ರ, ದಕ್ಷಿಣ ಹಾಗೂ ಉತ್ತರ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಭಾನುವಾರ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ”ಭಾರತ್‌ ಜೋಡೊ ಯಾತ್ರೆಯ ಬಳಿಕ ರಾಹುಲ್‌ ಗಾಂಧಿ ಅವರ ವರ್ಚಸ್ಸು ವೃದ್ಧಿಯಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರ ಆತಂಕ ಹೆಚ್ಚಿಸಿದೆ. ರಾಜಕೀಯ ದ್ವೇಷದಿಂದ ಅನರ್ಹತೆ ಮಾಡಲಾಗಿದೆ” ಎಂದು ಹೇಳಿದರು.

”ಇದು ಹಿಟ್ಲರ್‌ನ ಜರ್ಮನಿಯೂ ಅಲ್ಲ. ಮುಸೊಲಿನಿಯ ಇಟಲಿಯೂ ಅಲ್ಲ. ನಾವು ಪ್ರಜಾಪ್ರಭುತ್ವ ಒಪ್ಪಿಕೊಂಡು ಬದುಕುತ್ತಿದ್ದೇವೆ. ಅನರ್ಹತೆ ಕ್ರಮವು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಆಘಾತ ತಂದಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡಲಾಗುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

”2019ರ ಲೋಕಸಭೆ ಚುನಾವಣೆ ಹಿನ್ನೆಲೆ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ರಾಹುಲ್‌ ಗಾಂಧಿ ಅವರು ಭಾಷಣ ಮಾಡುವ ವೇಳೆ ನಾನೂ ವೇದಿಕೆಯಲ್ಲಿದ್ದೆ. ಜಾತಿ ನಿಂದನೆ ಅಥವಾ ಮಾನಹಾನಿಕರ ರೀತಿಯಲ್ಲಿ ಮಾತನಾಡಿಲ್ಲ. ದೇಶದ ಜನರ ಹಣವನ್ನು ಕೊಳ್ಳೆ ಹೊಡೆದು ವಿದೇಶಕ್ಕೆ ಹೋದವರ ಹೆಸರು ಪ್ರಸ್ತಾಪಿಸಿದ್ದರು. ಅವರನ್ನು ಕಳ್ಳರು ಎಂದು ಕರೆಯುವ ಸ್ವಾತಂತ್ರ್ಯವೂ ಇಲ್ಲವೇ? ಹಾಗಿದ್ದರೆ ಅವರು ಸಮಾಜ ಸುಧಾರಕರೇ? ಹಿಟ್ಲರ್‌, ಮುಸೊಲಿನಿ ವಂಶಸ್ಥರಿಂದ ನಾವು ದೇಶ ಭಕ್ತಿಯ ಪಾಠ ಕಲಿಯಬೇಕಿಲ್ಲ” ಎಂದು ಹೇಳಿದರು.

”ಕಳ್ಳರನ್ನು ಕಳ್ಳ ಎಂದು ಕರೆಯದೇ ಸಾಧುಗಳು, ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಇದನ್ನೂ ಓದಿ: ರಾಹುಲ್ ಅನರ್ಹತೆ ವಿರೋಧಿಸಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಅಹೋರಾತ್ರಿ ಸತ್ಯಾಗ್ರಹ

ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಮಾತನಾಡಿ, ”ಲಲಿತ್ ಮೋದಿ, ನೀರವ್‌ ಮೋದಿ ಸೇರಿ ಹಲವರು ಬ್ಯಾಂಕ್‌ಗಳನ್ನು ಕೊಳ್ಳೆ ಹೊಡೆದು ವಿದೇಶದಲ್ಲಿದ್ದಾರೆ. ಅದು ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ, ನಳಿನ್‌ಕುಮಾರ್ ಕಟೀಲ್‌, ನಡ್ಡಾ, ಅಮಿತ್‌ ಶಾ ಅವರ ಹಣ ಅಲ್ಲ. ಜನರ ದುಡ್ಡು. ಪ್ರಜಾಪ್ರಭುತ್ವದ ತಾಯಿ ಭಾರತವೆಂದು ಕರೆಯಲಾಗುತ್ತಿತ್ತು. ಅದನ್ನೇ ನಾಶ ಪಡಿಸಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ದಿನೇಶ್‌ ಗುಂಡೂರಾವ್‌ ಮಾತನಾಡಿ, ”ತನ್ನ ವಿರುದ್ಧ ಮಾತನಾಡುವವರನ್ನು ಬಿಜೆಪಿ ಅನರ್ಹಗೊಳಿಸುತ್ತಿದೆ. ಪ್ರಜಾಪ್ರಭುತ್ವದ ವಿರೋಧಿ ನಡೆಯನ್ನು ಮಾಧ್ಯಮಗಳೂ ಪ್ರಶ್ನಿಸುತ್ತಿಲ್ಲ. ತಪ್ಪು ಮಾಡಿದಾಗ ಟೀಕೆಗಳು ಪ್ರಜಾತಂತ್ರ ವ್ಯವಸ್ಥೆಯ ಭಾಗ. ದುರುದ್ದೇಶದಿಂದ ರಾಹುಲ್‌ ಅವರ ಬಾಯಿ ಮುಚ್ಚಿಸಲು ಅನರ್ಹತೆ ಕ್ರಮ ಬಳಸಲಾಗಿದೆ” ಎಂದು ಕಿಡಿಕಾರಿದರು.

ಈ ಪ್ರತಿಭಟನೆಯಲ್ಲಿ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌, ಶಾಸಕರಾದ ಕೆ.ಜೆ.ಜಾರ್ಜ್‌, ಎನ್‌.ಎ. ಹ್ಯಾರೀಸ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್‌ ಇತರರು ಭಾಗಿಯಾಗಿದ್ದರು.

ಪ್ರತಿಪಕ್ಷಗಳಿಂದಲೂ ಪ್ರತಿಭಟನೆ

ರಾಹುಲ್ ಗಾಂಧಿಯವರನ್ನು ಲೋಕಸಭೆಯಿಂದ ಅನರ್ಹಗೊಳಿಸುವುದರ ವಿರುದ್ಧ ರವಿವಾರ ದೇಶಾದ್ಯಂತ ಕಾಂಗ್ರೆಸ್ ಅಹೋರಾತ್ರಿ ಸತ್ಯಾಗ್ರಹ ನಡೆಸಿತು. ರಾಹುಲ್ ಅನರ್ಹತೆ ಖಂಡಿಸಿ ಸೋಮವಾರ 17 ಪ್ರತಿಪಕ್ಷಗಳು ದೆಹಲಿಯಲ್ಲಿ ಜಂಟಿ ಪ್ರತಿಭಟನೆ ನಡೆಸಿದವು.

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್, ಸಿಎಂಕೆ, ಸಮಾಜವಾದಿ ಪಾರ್ಟಿ, ಜೆಡಿಯು, ಬಿಆರ್‌ಎಸ್, ಸಿಪಿಎಂ, ಆರ್‌ಜೆಡಿ, ನ್ಯಾಷನಲ್ ಕಾಂಗ್ರೆಸ್ ಪಕ್ಷ, ಸಿಪಿಐ, ಇಂಡೀಯನ್ ಯುನಿಯನ್ ಮುಸ್ಲಿಂ ಲೀಗ್, ಎಮ್‌ಡಿಎಮ್‌ಕೆ, ಕೆಸಿ, ಟಿಎಂಸಿ, ಶಿವಸೇನಾ ಹಾಗೂ ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಭಾಗವಹಿಸಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...