Homeಕರ್ನಾಟಕ'ಕಳ್ಳರನ್ನು ಕಳ್ಳ ಎನ್ನದೆ ಸಾಧು-ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ?': ಸಿದ್ದರಾಮಯ್ಯ ಪ್ರಶ್ನೆ

‘ಕಳ್ಳರನ್ನು ಕಳ್ಳ ಎನ್ನದೆ ಸಾಧು-ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ?’: ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ರವಿವಾರ ದೇಶಾದ್ಯಂತ ಅಹೋರಾತ್ರಿ ಸತ್ಯಾಗ್ರಹ ನಡೆಸಲು ಕರೆ ಕೊಡಲಾಗಿತ್ತು. ರಾಜ್ಯದಲ್ಲಿ ಬೆಂಗಳೂರು ಕೇಂದ್ರ, ದಕ್ಷಿಣ ಹಾಗೂ ಉತ್ತರ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಭಾನುವಾರ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ”ಭಾರತ್‌ ಜೋಡೊ ಯಾತ್ರೆಯ ಬಳಿಕ ರಾಹುಲ್‌ ಗಾಂಧಿ ಅವರ ವರ್ಚಸ್ಸು ವೃದ್ಧಿಯಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರ ಆತಂಕ ಹೆಚ್ಚಿಸಿದೆ. ರಾಜಕೀಯ ದ್ವೇಷದಿಂದ ಅನರ್ಹತೆ ಮಾಡಲಾಗಿದೆ” ಎಂದು ಹೇಳಿದರು.

”ಇದು ಹಿಟ್ಲರ್‌ನ ಜರ್ಮನಿಯೂ ಅಲ್ಲ. ಮುಸೊಲಿನಿಯ ಇಟಲಿಯೂ ಅಲ್ಲ. ನಾವು ಪ್ರಜಾಪ್ರಭುತ್ವ ಒಪ್ಪಿಕೊಂಡು ಬದುಕುತ್ತಿದ್ದೇವೆ. ಅನರ್ಹತೆ ಕ್ರಮವು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಆಘಾತ ತಂದಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡಲಾಗುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

”2019ರ ಲೋಕಸಭೆ ಚುನಾವಣೆ ಹಿನ್ನೆಲೆ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ರಾಹುಲ್‌ ಗಾಂಧಿ ಅವರು ಭಾಷಣ ಮಾಡುವ ವೇಳೆ ನಾನೂ ವೇದಿಕೆಯಲ್ಲಿದ್ದೆ. ಜಾತಿ ನಿಂದನೆ ಅಥವಾ ಮಾನಹಾನಿಕರ ರೀತಿಯಲ್ಲಿ ಮಾತನಾಡಿಲ್ಲ. ದೇಶದ ಜನರ ಹಣವನ್ನು ಕೊಳ್ಳೆ ಹೊಡೆದು ವಿದೇಶಕ್ಕೆ ಹೋದವರ ಹೆಸರು ಪ್ರಸ್ತಾಪಿಸಿದ್ದರು. ಅವರನ್ನು ಕಳ್ಳರು ಎಂದು ಕರೆಯುವ ಸ್ವಾತಂತ್ರ್ಯವೂ ಇಲ್ಲವೇ? ಹಾಗಿದ್ದರೆ ಅವರು ಸಮಾಜ ಸುಧಾರಕರೇ? ಹಿಟ್ಲರ್‌, ಮುಸೊಲಿನಿ ವಂಶಸ್ಥರಿಂದ ನಾವು ದೇಶ ಭಕ್ತಿಯ ಪಾಠ ಕಲಿಯಬೇಕಿಲ್ಲ” ಎಂದು ಹೇಳಿದರು.

”ಕಳ್ಳರನ್ನು ಕಳ್ಳ ಎಂದು ಕರೆಯದೇ ಸಾಧುಗಳು, ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಇದನ್ನೂ ಓದಿ: ರಾಹುಲ್ ಅನರ್ಹತೆ ವಿರೋಧಿಸಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಅಹೋರಾತ್ರಿ ಸತ್ಯಾಗ್ರಹ

ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಮಾತನಾಡಿ, ”ಲಲಿತ್ ಮೋದಿ, ನೀರವ್‌ ಮೋದಿ ಸೇರಿ ಹಲವರು ಬ್ಯಾಂಕ್‌ಗಳನ್ನು ಕೊಳ್ಳೆ ಹೊಡೆದು ವಿದೇಶದಲ್ಲಿದ್ದಾರೆ. ಅದು ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ, ನಳಿನ್‌ಕುಮಾರ್ ಕಟೀಲ್‌, ನಡ್ಡಾ, ಅಮಿತ್‌ ಶಾ ಅವರ ಹಣ ಅಲ್ಲ. ಜನರ ದುಡ್ಡು. ಪ್ರಜಾಪ್ರಭುತ್ವದ ತಾಯಿ ಭಾರತವೆಂದು ಕರೆಯಲಾಗುತ್ತಿತ್ತು. ಅದನ್ನೇ ನಾಶ ಪಡಿಸಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ದಿನೇಶ್‌ ಗುಂಡೂರಾವ್‌ ಮಾತನಾಡಿ, ”ತನ್ನ ವಿರುದ್ಧ ಮಾತನಾಡುವವರನ್ನು ಬಿಜೆಪಿ ಅನರ್ಹಗೊಳಿಸುತ್ತಿದೆ. ಪ್ರಜಾಪ್ರಭುತ್ವದ ವಿರೋಧಿ ನಡೆಯನ್ನು ಮಾಧ್ಯಮಗಳೂ ಪ್ರಶ್ನಿಸುತ್ತಿಲ್ಲ. ತಪ್ಪು ಮಾಡಿದಾಗ ಟೀಕೆಗಳು ಪ್ರಜಾತಂತ್ರ ವ್ಯವಸ್ಥೆಯ ಭಾಗ. ದುರುದ್ದೇಶದಿಂದ ರಾಹುಲ್‌ ಅವರ ಬಾಯಿ ಮುಚ್ಚಿಸಲು ಅನರ್ಹತೆ ಕ್ರಮ ಬಳಸಲಾಗಿದೆ” ಎಂದು ಕಿಡಿಕಾರಿದರು.

ಈ ಪ್ರತಿಭಟನೆಯಲ್ಲಿ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌, ಶಾಸಕರಾದ ಕೆ.ಜೆ.ಜಾರ್ಜ್‌, ಎನ್‌.ಎ. ಹ್ಯಾರೀಸ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್‌ ಇತರರು ಭಾಗಿಯಾಗಿದ್ದರು.

ಪ್ರತಿಪಕ್ಷಗಳಿಂದಲೂ ಪ್ರತಿಭಟನೆ

ರಾಹುಲ್ ಗಾಂಧಿಯವರನ್ನು ಲೋಕಸಭೆಯಿಂದ ಅನರ್ಹಗೊಳಿಸುವುದರ ವಿರುದ್ಧ ರವಿವಾರ ದೇಶಾದ್ಯಂತ ಕಾಂಗ್ರೆಸ್ ಅಹೋರಾತ್ರಿ ಸತ್ಯಾಗ್ರಹ ನಡೆಸಿತು. ರಾಹುಲ್ ಅನರ್ಹತೆ ಖಂಡಿಸಿ ಸೋಮವಾರ 17 ಪ್ರತಿಪಕ್ಷಗಳು ದೆಹಲಿಯಲ್ಲಿ ಜಂಟಿ ಪ್ರತಿಭಟನೆ ನಡೆಸಿದವು.

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್, ಸಿಎಂಕೆ, ಸಮಾಜವಾದಿ ಪಾರ್ಟಿ, ಜೆಡಿಯು, ಬಿಆರ್‌ಎಸ್, ಸಿಪಿಎಂ, ಆರ್‌ಜೆಡಿ, ನ್ಯಾಷನಲ್ ಕಾಂಗ್ರೆಸ್ ಪಕ್ಷ, ಸಿಪಿಐ, ಇಂಡೀಯನ್ ಯುನಿಯನ್ ಮುಸ್ಲಿಂ ಲೀಗ್, ಎಮ್‌ಡಿಎಮ್‌ಕೆ, ಕೆಸಿ, ಟಿಎಂಸಿ, ಶಿವಸೇನಾ ಹಾಗೂ ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಭಾಗವಹಿಸಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...