Homeಕರ್ನಾಟಕ'ಕಳ್ಳರನ್ನು ಕಳ್ಳ ಎನ್ನದೆ ಸಾಧು-ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ?': ಸಿದ್ದರಾಮಯ್ಯ ಪ್ರಶ್ನೆ

‘ಕಳ್ಳರನ್ನು ಕಳ್ಳ ಎನ್ನದೆ ಸಾಧು-ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ?’: ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ರವಿವಾರ ದೇಶಾದ್ಯಂತ ಅಹೋರಾತ್ರಿ ಸತ್ಯಾಗ್ರಹ ನಡೆಸಲು ಕರೆ ಕೊಡಲಾಗಿತ್ತು. ರಾಜ್ಯದಲ್ಲಿ ಬೆಂಗಳೂರು ಕೇಂದ್ರ, ದಕ್ಷಿಣ ಹಾಗೂ ಉತ್ತರ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಭಾನುವಾರ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ”ಭಾರತ್‌ ಜೋಡೊ ಯಾತ್ರೆಯ ಬಳಿಕ ರಾಹುಲ್‌ ಗಾಂಧಿ ಅವರ ವರ್ಚಸ್ಸು ವೃದ್ಧಿಯಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರ ಆತಂಕ ಹೆಚ್ಚಿಸಿದೆ. ರಾಜಕೀಯ ದ್ವೇಷದಿಂದ ಅನರ್ಹತೆ ಮಾಡಲಾಗಿದೆ” ಎಂದು ಹೇಳಿದರು.

”ಇದು ಹಿಟ್ಲರ್‌ನ ಜರ್ಮನಿಯೂ ಅಲ್ಲ. ಮುಸೊಲಿನಿಯ ಇಟಲಿಯೂ ಅಲ್ಲ. ನಾವು ಪ್ರಜಾಪ್ರಭುತ್ವ ಒಪ್ಪಿಕೊಂಡು ಬದುಕುತ್ತಿದ್ದೇವೆ. ಅನರ್ಹತೆ ಕ್ರಮವು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಆಘಾತ ತಂದಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡಲಾಗುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

”2019ರ ಲೋಕಸಭೆ ಚುನಾವಣೆ ಹಿನ್ನೆಲೆ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ರಾಹುಲ್‌ ಗಾಂಧಿ ಅವರು ಭಾಷಣ ಮಾಡುವ ವೇಳೆ ನಾನೂ ವೇದಿಕೆಯಲ್ಲಿದ್ದೆ. ಜಾತಿ ನಿಂದನೆ ಅಥವಾ ಮಾನಹಾನಿಕರ ರೀತಿಯಲ್ಲಿ ಮಾತನಾಡಿಲ್ಲ. ದೇಶದ ಜನರ ಹಣವನ್ನು ಕೊಳ್ಳೆ ಹೊಡೆದು ವಿದೇಶಕ್ಕೆ ಹೋದವರ ಹೆಸರು ಪ್ರಸ್ತಾಪಿಸಿದ್ದರು. ಅವರನ್ನು ಕಳ್ಳರು ಎಂದು ಕರೆಯುವ ಸ್ವಾತಂತ್ರ್ಯವೂ ಇಲ್ಲವೇ? ಹಾಗಿದ್ದರೆ ಅವರು ಸಮಾಜ ಸುಧಾರಕರೇ? ಹಿಟ್ಲರ್‌, ಮುಸೊಲಿನಿ ವಂಶಸ್ಥರಿಂದ ನಾವು ದೇಶ ಭಕ್ತಿಯ ಪಾಠ ಕಲಿಯಬೇಕಿಲ್ಲ” ಎಂದು ಹೇಳಿದರು.

”ಕಳ್ಳರನ್ನು ಕಳ್ಳ ಎಂದು ಕರೆಯದೇ ಸಾಧುಗಳು, ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಇದನ್ನೂ ಓದಿ: ರಾಹುಲ್ ಅನರ್ಹತೆ ವಿರೋಧಿಸಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಅಹೋರಾತ್ರಿ ಸತ್ಯಾಗ್ರಹ

ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಮಾತನಾಡಿ, ”ಲಲಿತ್ ಮೋದಿ, ನೀರವ್‌ ಮೋದಿ ಸೇರಿ ಹಲವರು ಬ್ಯಾಂಕ್‌ಗಳನ್ನು ಕೊಳ್ಳೆ ಹೊಡೆದು ವಿದೇಶದಲ್ಲಿದ್ದಾರೆ. ಅದು ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ, ನಳಿನ್‌ಕುಮಾರ್ ಕಟೀಲ್‌, ನಡ್ಡಾ, ಅಮಿತ್‌ ಶಾ ಅವರ ಹಣ ಅಲ್ಲ. ಜನರ ದುಡ್ಡು. ಪ್ರಜಾಪ್ರಭುತ್ವದ ತಾಯಿ ಭಾರತವೆಂದು ಕರೆಯಲಾಗುತ್ತಿತ್ತು. ಅದನ್ನೇ ನಾಶ ಪಡಿಸಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ದಿನೇಶ್‌ ಗುಂಡೂರಾವ್‌ ಮಾತನಾಡಿ, ”ತನ್ನ ವಿರುದ್ಧ ಮಾತನಾಡುವವರನ್ನು ಬಿಜೆಪಿ ಅನರ್ಹಗೊಳಿಸುತ್ತಿದೆ. ಪ್ರಜಾಪ್ರಭುತ್ವದ ವಿರೋಧಿ ನಡೆಯನ್ನು ಮಾಧ್ಯಮಗಳೂ ಪ್ರಶ್ನಿಸುತ್ತಿಲ್ಲ. ತಪ್ಪು ಮಾಡಿದಾಗ ಟೀಕೆಗಳು ಪ್ರಜಾತಂತ್ರ ವ್ಯವಸ್ಥೆಯ ಭಾಗ. ದುರುದ್ದೇಶದಿಂದ ರಾಹುಲ್‌ ಅವರ ಬಾಯಿ ಮುಚ್ಚಿಸಲು ಅನರ್ಹತೆ ಕ್ರಮ ಬಳಸಲಾಗಿದೆ” ಎಂದು ಕಿಡಿಕಾರಿದರು.

ಈ ಪ್ರತಿಭಟನೆಯಲ್ಲಿ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌, ಶಾಸಕರಾದ ಕೆ.ಜೆ.ಜಾರ್ಜ್‌, ಎನ್‌.ಎ. ಹ್ಯಾರೀಸ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್‌ ಇತರರು ಭಾಗಿಯಾಗಿದ್ದರು.

ಪ್ರತಿಪಕ್ಷಗಳಿಂದಲೂ ಪ್ರತಿಭಟನೆ

ರಾಹುಲ್ ಗಾಂಧಿಯವರನ್ನು ಲೋಕಸಭೆಯಿಂದ ಅನರ್ಹಗೊಳಿಸುವುದರ ವಿರುದ್ಧ ರವಿವಾರ ದೇಶಾದ್ಯಂತ ಕಾಂಗ್ರೆಸ್ ಅಹೋರಾತ್ರಿ ಸತ್ಯಾಗ್ರಹ ನಡೆಸಿತು. ರಾಹುಲ್ ಅನರ್ಹತೆ ಖಂಡಿಸಿ ಸೋಮವಾರ 17 ಪ್ರತಿಪಕ್ಷಗಳು ದೆಹಲಿಯಲ್ಲಿ ಜಂಟಿ ಪ್ರತಿಭಟನೆ ನಡೆಸಿದವು.

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್, ಸಿಎಂಕೆ, ಸಮಾಜವಾದಿ ಪಾರ್ಟಿ, ಜೆಡಿಯು, ಬಿಆರ್‌ಎಸ್, ಸಿಪಿಎಂ, ಆರ್‌ಜೆಡಿ, ನ್ಯಾಷನಲ್ ಕಾಂಗ್ರೆಸ್ ಪಕ್ಷ, ಸಿಪಿಐ, ಇಂಡೀಯನ್ ಯುನಿಯನ್ ಮುಸ್ಲಿಂ ಲೀಗ್, ಎಮ್‌ಡಿಎಮ್‌ಕೆ, ಕೆಸಿ, ಟಿಎಂಸಿ, ಶಿವಸೇನಾ ಹಾಗೂ ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಭಾಗವಹಿಸಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...