Homeಕರ್ನಾಟಕಬಡವರ ಬೆಂಬಲಕ್ಕೆ ನಿಲ್ಲದ ಬಿಜೆಪಿ ಸರ್ಕಾರವನ್ನು ಗೆಲ್ಲಿಸಬೇಕೇ: ಸಿಎಂ ಸಿದ್ದರಾಮಯ್ಯ

ಬಡವರ ಬೆಂಬಲಕ್ಕೆ ನಿಲ್ಲದ ಬಿಜೆಪಿ ಸರ್ಕಾರವನ್ನು ಗೆಲ್ಲಿಸಬೇಕೇ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

‘ಕೊಟ್ಟ ಮಾತಿನಂತೆ ನಡೆದುಕೊಳ್ಳುವವರನ್ನು ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ; ಬಡವರ ಬೆಂಬಲಕ್ಕೆ ನಿಲ್ಲದ ಬಿಜೆಪಿ ಸರ್ಕಾರವನ್ನು ಗೆಲ್ಲಿಸಬೇಕೇ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನರನ್ನು ಪ್ರಶ್ನಿಸಿದರು.

ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಆಯೋಜಿಸಲಾಗಿದ್ದ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ, ವಿವಿಧ ಯೋಜನೆಗಳ ಸವಲತ್ತುಗಳನ್ನು ನೀಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಅನ್ನಭಾಗ್ಯ ಯೋಜನೆಯಡಿ 5 ಕೆಜಿಯ ಜೊತೆಗೆ 5 ಕೆಜಿ ಅಕ್ಕಿ ನೀಡಿ, ರಾಜ್ಯವನ್ನು ಹಸಿವು ಮುಕ್ತ ಮಾಡುವ ಸರ್ಕಾರದ ಉದ್ದೇಶಕ್ಕೆ ಕೇಂದ್ರ ಸರ್ಕಾರ ಸಹಕರಿಸಲಿಲ್ಲ. ಆದ್ದರಿಂದ 5 ಕೆಜಿ ಬದಲಿಗೆ 170 ರೂ.ಗಳನ್ನು ನೀಡುತ್ತಿದ್ದೇವೆ. ಜಿಲ್ಲೆಯಲ್ಲಿ 438705 ಫಲಾನುಭವಿಗಳಿಗೆ 166 ಕೋಟಿ ರೂ.ಗಳ ಅನ್ನಭಾಗ್ಯದ ಆರ್ಥಿಕ ನೆರವು ನೀಡಲಾಗಿದೆ. ಬಡವರ ಬೆಂಬಲಕ್ಕೆ ನಿಲ್ಲದ ಬಿಜೆಪಿ ಸರ್ಕಾರವನ್ನು ಗೆಲ್ಲಿಸಬೇಕೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಕಳೆದ ಚುನಾವಣೆಯಲ್ಲಿ ರಾಜ್ಯದ ಜನ ನಮ್ಮ ನಿರೀಕ್ಷೆಯನ್ನೂ ಮೀರಿ ಆಶೀರ್ವಾದ ಮಾಡಿದ್ದಾರೆ. 136 ಸ್ಥಾನಗಳಲ್ಲಿ ನಮ್ಮನ್ನು ಗೆಲ್ಲಿಸಿದ್ದಾರೆ. ಕರ್ನಾಟಕದ ಜನ ಪ್ರಭುದ್ಧವಾದ ತೀರ್ಮಾನ ಮಾಡಿದ್ದಾರೆ. ಮಂಡ್ಯ ಜನರೂ ಕೂಡ ಸುಳ್ಳು ಭರವಸೆ ನೀಡಿದ್ದರೂ, ದಾರಿ ತಪ್ಪಿಸುವ ಕೆಲಸ ಮಾಡಿದ್ದರೂ ಸರಿಯಾದ ತೀರ್ಮಾನವನ್ನೇ ಮಾಡಿದ್ದಾರೆ ಎಂದರು.

ಚುನಾವಣಾ ಪೂರ್ವದಲ್ಲಿ ನೀಡಿದ್ದ ಅನೇಕ ಭರವಸೆಗಳ ಪೈಕಿ ಪ್ರಮುಖವಾಗಿ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೆ ತಂದೆವು. ಪ್ರಮಾಣವಚನ ಸ್ವೀಕಾರ ಮಾಡಿದ ದಿನವೇ 5 ಗ್ಯಾರಂಟಿಗಳ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದೆವು. ರಾಜ್ಯದ 3.50 ಕೋಟಿ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾದ ಶಕ್ತಿ ಯೋಜನೆಗೆ ಚಾಲನೆ ನೀಡಿದೆವು. 50 ರಿಂದ 60 ಲಕ್ಷ ಮಹಿಳೆಯರು ಈ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ ಎಂದರು.

ಕೃಷಿ ಇಲಾಖೆಗೆ 600 ಕೋಟಿ ರೂ.ಗಳನ್ನು ಬೆಳೆ ವಿಮೆಗೆ ನೀಡಲಾಗಿದ್ದು, ಇನ್ನೂ 800 ಕೋಟಿ ರೂ.ಗಳನ್ನು ನೀಡಲಾಗುವುದು. 33.25 ಲಕ್ಷ ರೈತರಿಗೆ 631 ಕೋಟಿ ರೂ.ಗಳನ್ನು ತಲಾ 2000 ರೂ.ಗಳ ಬೆಳೆ ಪರಿಹಾರಕ್ಕೆ ನೀಡಿದ್ದೇವೆ ಎಂದು ವಿವರಿಸಿದರು.

ಮಂಡ್ಯ ಜಿಲ್ಲೆ ಸಂಪೂರ್ಣ ಅಭಿವೃದ್ಧಿ:

ಬಿಜೆಪಿಯವರ ಮೇಲೆ ಜೆಡಿಎಸ್ ನಾಯಕರಿಗೆ ಬಹಳ ಪ್ರೀತಿ ಉಂಟಾಗಿದೆ; ನಮ್ಮ ಗ್ಯಾರಂಟಿಗಳ ಬಗ್ಗೆ ಟೀಕಿಸುತ್ತಾರೆ. ಜನರಿಗೆ ಸತ್ಯ ತಿಳಿಸದೆ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಾವು ನಿಮ್ಮ ಪರ ಇದ್ದೇವೆ. ಮಂಡ್ಯ ಜಿಲ್ಲೆಯನ್ನು ಸಂಪೂರ್ಣ ಅಭಿವೃದ್ಧಿ ಮಾಡಲಾಗುವುದು. 500 ಕೋಟಿ ರೂ.ಗಳನ್ನು ಜಿಲ್ಲೆಗೆ ನೀಡಲಾಗುತ್ತಿದೆ. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ನೀರಾವರಿಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ವ್ಯವಸಾಯದ ಮೇಲೆ ಅವಲಂಬಿತ ಜನ ಹೆಚ್ಚಿದ್ದು, ಅಭಿವೃದ್ಧಿ ಮಾಡಲು ಪಣ ತೊಟ್ಟಿದ್ದೇವೆ. ಯಾರೂ ಏನೇ ಹೇಳಿದರೂ ಕೆಲಸ ಮಾಡಿದವರನ್ನು ಗೆಲ್ಲಿಸಬೇಕು ಎಂದರು.

ಮಂಡ್ಯದಲ್ಲಿ 4.57 ಕೋಟಿ ಮಹಿಳೆಯರು ಹಾಗೂ ಇಡೀ ರಾಜ್ಯದಲ್ಲಿ 170 ಕೋಟಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ನಂತರ ಜನರನ್ನು ಸಂಪೂರ್ಣವಾಗಿ ಹಿಂದಿನ ಸರ್ಕಾರ ಮರೆತಿತ್ತು. ಆದರೆ ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿಯವರು ರೈತಪರ , ಬಡವರಪರ ಎಂದು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೂ, ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ಅವರು ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲಿಲ್ಲ. ಕುಮಾರಸ್ವಾಮಿಯವರು ಸಿಎಂ ಆಗಿದ್ದಾಗ, ಬಿಜೆಪಿಯ ಯಡಿಯೂರಪ್ಪನವರು 17 ಶಾಸಕರನ್ನು ಕೊಂಡು ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರು. ಮಾಜಿ ಪ್ರಧಾನಿ ದೇವೇಗೌಡರು ಕೋಮುವಾದಿಗಳೊಂದಿಗೆ ಸೇರುವುದಿಲ್ಲ ಎಂದಿದ್ದವರು, ಈಗ ಅವರನ್ನೇ ಬೆಂಬಲಿಸುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನ ಅಪವಿತ್ರ ಮೈತ್ರಿಯನ್ನು ಸೋಲಿಸಿ, ನಮ್ಮ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಬೇಕೆಂದು ಜನರನ್ನು ಕೋರಿದರು.

4.60 ಕೋಟಿ ಜನ ಗ್ಯಾರಂಟಿ ಫಲಾನುಭವಿಗಳು

ಮಂಡ್ಯ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಇಲ್ಲಿನ ಜನರಿಗೆ 464303 ಜನ ನೋಂದಾಯಿಸಿಕೊಂಡಿದ್ದು, 104 ಕೋಟಿ ರೂ. ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 449197 ಮಹಿಳೆಯರು ನೊಂದಾಯಿಸಿಕೊಂಡಿದ್ದು, 512 ಕೋಟಿ ರೂ. ಗಳನ್ನು ನೀಡಲಾಗಿದೆ. ಯುವನಿಧಿ 3148 ಅರ್ಜಿಗಳು ನೋಂದಾವಣೆಯಾಗಿದ್ದು, 22 ಲಕ್ಷ ರೂ.ಗಳನ್ನು ವರ್ಗಾಯಿಸಲಾಗಿದೆ. ಬಡವರು, ಮಹಿಳೆಯರು, ದಲಿತರು, ರೈತರು ಸೇರಿದಂತೆ ಎಲ್ಲ ಜಾತಿಧರ್ಮದವರಿಗೂ ಆರ್ಥಿಕವಾಗಿ ಬಲ ತುಂಬಲಾಗುತ್ತಿದೆ. 4.60 ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ತಲುಪುತ್ತಿದೆ. ಈವರ್ಷ 36 ಸಾವಿರ ಕೋಟಿ, ನಂತರ 52009 ಕೋಟಿ ರೂ.ಗಳನ್ನು ಬಜೆಟನಲ್ಲಿ ನಿಗದಿಪಡಿಸಲಾಗಿದೆ. ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಶಾಸಕರಾದ ರವಿಕುಮಾರ್ , ರಮೇಶ್, ನರೇಂದ್ರಸ್ವಾಮಿ , ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ ಉದಯ, ವಿಧಾನಪರಿಷತ್ ಸದಸ್ಯರಾದ ಮಧು ಮಾದೇಗೌಡ ದಿನೇಶ್ ಗೂಳಿಗೌಡ, ಮರೀತಿಬ್ಬೇಗೌಡ, ರವಿಶಂಕರ್, ಲೋಕಸಭಾ ಅಭ್ಯರ್ಥಿ ವೆಂಕಟರಮಣ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ; ‘ಮಮತಾ ಬ್ಯಾನರ್ಜಿ ಪ್ರಧಾನಿ ಕಾರ್ಯಾಲಯಕ್ಕೆ ಸಂದೇಶ ಕಳುಹಿಸಿದ್ದಾರೆ..’; ಟಿಎಂಸಿ ಪಟ್ಟಿ ಬಿಡುಗಡೆಗೆ ಅಧೀರ್ ಲೇವಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...