Homeಮುಖಪುಟಪ್ರತಿ ಊರಿನ ಸರ್ಕಾರಿ ಶಾಲೆಯಲ್ಲೂ ಇಂತಹ ಶಿಕ್ಷಕಿ ಇರಬೇಕಲ್ಲವೇ?

ಪ್ರತಿ ಊರಿನ ಸರ್ಕಾರಿ ಶಾಲೆಯಲ್ಲೂ ಇಂತಹ ಶಿಕ್ಷಕಿ ಇರಬೇಕಲ್ಲವೇ?

- Advertisement -
- Advertisement -

ಶಿಕ್ಷಣವು ನಿಮ್ಮನ್ನು ಬಾನೆತ್ತರಕ್ಕೆ ಕೊಂಡೊಯ್ಯುತ್ತದೆ…. ಉತ್ತಮ ಶಿಕ್ಷಣ, ಉತ್ತಮ ಜ್ಞಾನವು ನಮ್ಮ ಪ್ರತಿಭೆಯನ್ನು ಹೆಚ್ಚಿಸುತ್ತದೆ. ಅದೇ ರೀತಿಯಲ್ಲಿ ತಮಿಳುನಾಡಿನ ಸರ್ಕಾರ ಶಾಲೆಯಲ್ಲಿ ಓದುತ್ತಿರುವ ದಿನಗೂಲಿ ಕಾರ್ಮಿಕನ ಚಿಕ್ಕ ಮಗಳು ವಿಮಾನ ಹತ್ತುತ್ತಾಳೆ ಎಂಬುದನ್ನು ಆಕೆಯ ಪೋಷಕರೇ ನಂಬಲಾಗಲಿಲ್ಲ.

‘ಸೂರರೈ ಪೋಟ್ರು’ ಸಿನಿಮಾದ ಚಿತ್ರತಂಡವು ಆಯೋಚಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಸೇಲಂ ಜಿಲ್ಲೆಯ ಜಾನ್ ಚೆಟ್ಟಿಮಂಕುರಿಚಿಯಲ್ಲಿರುವ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಅಂತರಿಕ್ಷಾ ಮೊದಲ ಬಹುಮಾನ ಪಡೆದುಕೊಂಡಳು. ಪ್ರತಿಫಲವಾಗಿ ಆಕೆಗೆ ವಿಮಾನಯಾನ ಮಾಡುವ ಅವಕಾಶವನ್ನು ಚಿತ್ರತಂಡ ಬಹುಮಾನವಾಗಿ ನೀಡಿದೆ.

ಇಂತಹ ಅವಕಾಶಕ್ಕಾಗಿ ಆಕೆ ತನ್ನ ಶಿಕ್ಷಕಿ ಎಸ್ ಉಮಾ ಮಹೇಶ್ವರಿ ಅವರಿಗೆ ಧನ್ಯವಾದ ಹೇಳುತ್ತಾಳೆ. ಪುಸ್ತಕ ಓದುವ ಅಭಿರುಚಿಯನ್ನು ಮೈಗೂಡಿಸಿಕೊಂಡಿರುವ ಉಮಾ ಅವರು ಸುಮಾರು ಎರಡು ದಶಕಗಳಿಂದ ಹಲವು ಸರ್ಕಾರಿ ಶಾಲೆಯ ಮಕ್ಕಳ ಜೀವನದಲ್ಲಿ ಹೊಸ ಚಿತ್ತಾರ ಮೂಡಿಸಿದ್ದಾರೆ.

ಮಕ್ಕಳಲ್ಲಿ ಹೊಸ ಹುರುಪು, ಚೈತನ್ಯವನ್ನು ತುಂಬುವ ಅವರು, 2005ರಲ್ಲಿ ಆರಂಭವಾದ ಜಾನ್ ಚೆಟ್ಟಿಮಂಕುರಿಚಿ ಸರ್ಕಾರಿ ಶಾಲೆಯಲ್ಲಿ ‘ಕಲೈಕತಿರ್’ ಎಂಬ ಪತ್ರಿಕೆಯನ್ನು ತರುತ್ತಿದ್ದಾರೆ. ಅದು ನಿಯಮಿತವಾಗಿ 6, 7 ಮತ್ತು 8 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೆನ್ನುಹೊರೆಯನ್ನು ಕಡಿಮೆ ಮಾಡುವ ಮೂಲಕ ಹೆಚ್ಚಿನ ಓದು ಮತ್ತು ವಿಜ್ಞಾನ ಪ್ರಯೋಗಗಳಿಗೆ ಸಹಕಾರಿಯಾಗಿದೆ. ಉಮಾ ಅವರ ಈ ಚಿಕ್ಕ ಪ್ರಯೋಗವು ವಿದ್ಯಾರ್ಥಿಗಳಲ್ಲಿ ಓದಿನಲ್ಲಿ ಸಾಕಷ್ಟು ಬದಲಾವಣೆಯನ್ನು ತರುತ್ತಿದೆ.

ಸದಾ ಓದಿನಲ್ಲೇ ತಮ್ಮ ಹೆಚ್ಚು ಸಮಯ ಕಳೆಯುವ ಉಮಾ ಅವರು ತಮ್ಮ ವಿದ್ಯಾರ್ಥಿಗಳಿಗೂ ಓದುವ ಹವ್ಯಾಸವನ್ನು ತುಂಬಿದ್ದಾರೆ. ಅವರು ಕೆಲಸ ಮಾಡುವ ಪ್ರತಿಯೊಂದು ಶಾಲೆಯಲ್ಲಿಯೂ ತಮ್ಮ ವಿದ್ಯಾರ್ಥಿಗಳಿಗೆ ನಿಗದಿತ ಪಠ್ಯಪುಸ್ತಕಗಳನ್ನು ಮೀರಿ ಓದುವ ಹವ್ಯಾಸವನ್ನು ಬಿತ್ತಿದ್ದಾರೆ ಮತ್ತು ಬಿತ್ತುತ್ತಿದ್ದಾರೆ.

ಇದನ್ನೂ ಓದಿರಿ: 334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

2018ರಲ್ಲಿ ಕ್ರೋಮ್‌ಪೇಟೆಯ ಸರ್ಕಾರಿ ಶಾಲೆಯಲ್ಲಿ ಅವರು ಪ್ರಕಟಿಸುತ್ತಿದ್ದ ‘ಕ್ಲಾಸ್ ರೂಮ್ ಲೈಬ್ರರಿ’, ‘ತುಂಬಿ’ ಮತ್ತು ಅಗರಮ್‌ ಶಾಲೆಯಲ್ಲಿ ಪ್ರಕಟಿಸುತ್ತಿದ್ದ ‘ಯಧುಮ್’ ಎಂಬ ಹೆಸರಿನ ನಿಯತಕಾಲಿಕೆಗಳು ವಿದ್ಯಾರ್ಥಿಗಳಿಗೆ ನೆರವಾಗಿವೆ. ಅನೇಕ ವಿದ್ಯಾರ್ಥಿಗಳು ಹೆಚ್ಚು ಪದಗಳನ್ನು ಕಲಿಯಲು, ಅವುಗಳ ಅರ್ಥಗಳನ್ನು ತಿಳಿಯಲು ಈ ನಿಯತಕಾಲಿಕೆಗಳು ಸಹಾಯ ಮಾಡಿವೆ.

ಅಂಕಪಟ್ಟಿಯ ಅಂಕಗಳು ವಿದ್ಯಾರ್ಥಿಗಳಲ್ಲಿ ಪ್ರಬುದ್ದತೆಯನ್ನು ರೂಪಿಸುವುದಿಲ್ಲ. ಆದರೆ, ಅಂಕಗಳಿಗೂ ಹೊರತಾದ ಜ್ಞಾನವು ಶಾಲಾ ಮಕ್ಕಳನ್ನು ಭಾವಪರವಶರನ್ನಾಗಿಸುತ್ತದೆ. ಅಪ್ರಬುದ್ಧತೆಯನ್ನು ಅಳಿಸಿ ಪ್ರಬುದ್ದತೆಯನ್ನು ಬೆಳೆಸುತ್ತದೆ. ಇದೂ ಕೂಡ ವಿದ್ಯಾರ್ಥಿಗಳು ಹೆಚ್ಚು ಅಂಕಗಳನ್ನೂ ಪಡೆಯಲು ಸಹಾಯ ಮಾಡುತ್ತದೆ ಎನ್ನುತ್ತಾರೆ ಉಮಾ.

ಈಗ ವಿದ್ಯಾರ್ಥಿಗಳ ಮೂಲ ಕಲ್ಪನೆಗಳು, ಕಥೆಗಳು, ಲೇಖನಗಳು ಮತ್ತು ಸೃಜನಶೀಲ ಚಿತ್ರಣಗಳೊಂದಿಗೆ ಶಾಲೆಯು ಅಭಿವೃದ್ಧಿ ಹೊಂದುತ್ತಿದೆ. ತನ್ನ ಬಿಡುವಿನ ವೇಳೆಯಲ್ಲಿ, ಲೇಖಕರನ್ನು ಭೇಟಿ ಮಾಡಲು ಮತ್ತು ಹೊಸ ಶೀರ್ಷಿಕೆಗಳನ್ನು ಹುಡುಕಲು ಉಮಾ ಅವರು ತಮ್ಮ ಶಾಲೆಯ ಆರು ವಿದ್ಯಾರ್ಥಿಗಳನ್ನು ನಂದನಂನಲ್ಲಿರುವ ಚೆನ್ನೈ ಪುಸ್ತಕ ಮೇಳಕ್ಕೆ ಕರೆದೊಯ್ದು ವಿದ್ಯಾರ್ಥಿಗಳ ಜ್ಞಾನವನ್ನು ಮತ್ತಷ್ಟು ವಿಸ್ತರಿಸುತ್ತಿದ್ದಾರೆ.

ಮಕ್ಕಳು ಮತ್ತು ಶಿಕ್ಷಕರಿಗೆ ಹುಟ್ಟುಹಬ್ಬದ ಸಂದರ್ಭದಲ್ಲಿ ಉಮಾ ಅವರು ನೀಡುವ ಉಡುಗೊರೆಗಳು ಅದ್ಭುತ ಪುಸ್ತಕಗಳಾಗಿರುತ್ತವೆ. ಅವರ ಈ ನಡೆ ಸುತ್ತಲಿನ ಜನರಲ್ಲಿ ಲವಲವಿಕೆಯ ಮನೋಭಾವವನ್ನು ಬೆಳೆಸುತ್ತದೆ ಎಂದು ಕ್ರೋಂಪೇಟೆಯ ಎಂಬಿಎನ್ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕಿ ಎಂ ಗಾಂಧಿಮತಿ ಹೇಳುತ್ತಾರೆ.

“ವಿದ್ಯಾರ್ಥಿಗಳು ಒಮ್ಮೆ ಪುಸ್ತಕವನ್ನು ತೆಗೆದುಕೊಂಡರೆ, ಅವರು ಬೇಗನೆ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾರೆ. ವಿಶೇಷವಾಗಿ ಈ ವಯಸ್ಸಿನಲ್ಲಿ ಮಕ್ಕಳು ಹೆಚ್ಚು ಓದುವುದು ಗಮನಾರ್ಹ” ಎಂದು ಗಾಂಧಿಮತಿ ಹೇಳುತ್ತಾರೆ.

ಮಕ್ಕಳ ಪೋಷಕರು ತಮ್ಮ ಮಕ್ಕಳು ಪುಸ್ತಕಗಳ ಓದಿನಲ್ಲಿ ಮುಳುಗಿರುವುದನ್ನು ನೋಡಿ ಕುತೂಹಲಗೊಳ್ಳುತ್ತಾರೆ ಮತ್ತು ಸಂತೋಷ ಪಡುತ್ತಾರೆ. ಉಮಾ ಅವರ ಸಣ್ಣ ಪುಸ್ತಕ ಸಂಗ್ರಹವು ಈಗ ದೊಡ್ಡ ಗ್ರಂಥಾಲಯವಾಗಿ ಮಾರ್ಪಟ್ಟಿದೆ. ಏಕೆಂದರೆ ಪೋಷಕರು ಪುಸ್ತಕಗಳ ಬಂಡಲ್‌ಗಳನ್ನು ದಾನ ಮಾಡುತ್ತಿದ್ದಾರೆ, ಲೇಖಕರು ತಮ್ಮ ಪುಸ್ತಕಗಳ ಸಹಿ ಮಾಡಿದ ಪ್ರತಿಗಳನ್ನು ಕೊಡುಗೆ ನೀಡುತ್ತಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕರು ಹೇಳುತ್ತಾರೆ.

ವಿದ್ಯಾರ್ಥಿಗಳು ಬರೆದ ಪುಸ್ತಕ ವಿಮರ್ಶೆಗಳನ್ನು ಸ್ಥಳೀಯ ಪತ್ರಿಕೆಗಳು ಪ್ರಕಟಿಸುತ್ತವೆ. ಶಾಲೆಯ ಇಬ್ಬರು ಹುಡುಗಿಯರು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. “ಈ ಅವಕಾಶವಿಲ್ಲದಿದ್ದರೆ, ನನಗೆ ಎಂದಾದರೂ ವಿಮಾನದಲ್ಲಿ ಹಾರಲು ಅವಕಾಶ ಸಿಗುತ್ತಿತ್ತೇ ಎಂದು ನನಗೆ ಊಹಿಸಲೂ ಸಾಧ್ಯವಿಲ್ಲ” ಎಂದು ವಿದ್ಯಾರ್ಥಿನಿ ಅಂತರಿಕ್ಷಾ ಹೇಳುತ್ತಾರೆ.


ಇದನ್ನೂ ಓದಿರಿ: ಮಹಿಳಾ ವಿಶ್ವಕಪ್‌: ಪಾಕ್‌ ವಿರುದ್ಧ ಭಾರತ ಜಯಭೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹ ಶಿಕ್ಷಕರು ವಿಧ್ಯಾರ್ಥಿಗಳ ಪಾಲಿಗೆ ದೇವರಿದ್ದ ಹಾಗೆ… ಅಭಿನಂದನೆಗಳು ಈ ಶಿಕ್ಷಕರಿಗೆ.

  2. I would like to congratulate and big Salute for a Ideal Teacher Miss Uma . I suggest to the government of India MHRD consider your valuable service and Award as RASHTRIYA SHIKSHAK SAMMAN PURASKAR 5th September 2022 .
    With regards
    Best of luck
    Your faithfully
    A.P.MUHSIN GPT Teacher govt higher primary Urdu school Aladakatti Haveri Karnataka
    9902653162

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...