Homeಮುಖಪುಟಪ್ರತಿ ಊರಿನ ಸರ್ಕಾರಿ ಶಾಲೆಯಲ್ಲೂ ಇಂತಹ ಶಿಕ್ಷಕಿ ಇರಬೇಕಲ್ಲವೇ?

ಪ್ರತಿ ಊರಿನ ಸರ್ಕಾರಿ ಶಾಲೆಯಲ್ಲೂ ಇಂತಹ ಶಿಕ್ಷಕಿ ಇರಬೇಕಲ್ಲವೇ?

- Advertisement -
- Advertisement -

ಶಿಕ್ಷಣವು ನಿಮ್ಮನ್ನು ಬಾನೆತ್ತರಕ್ಕೆ ಕೊಂಡೊಯ್ಯುತ್ತದೆ…. ಉತ್ತಮ ಶಿಕ್ಷಣ, ಉತ್ತಮ ಜ್ಞಾನವು ನಮ್ಮ ಪ್ರತಿಭೆಯನ್ನು ಹೆಚ್ಚಿಸುತ್ತದೆ. ಅದೇ ರೀತಿಯಲ್ಲಿ ತಮಿಳುನಾಡಿನ ಸರ್ಕಾರ ಶಾಲೆಯಲ್ಲಿ ಓದುತ್ತಿರುವ ದಿನಗೂಲಿ ಕಾರ್ಮಿಕನ ಚಿಕ್ಕ ಮಗಳು ವಿಮಾನ ಹತ್ತುತ್ತಾಳೆ ಎಂಬುದನ್ನು ಆಕೆಯ ಪೋಷಕರೇ ನಂಬಲಾಗಲಿಲ್ಲ.

‘ಸೂರರೈ ಪೋಟ್ರು’ ಸಿನಿಮಾದ ಚಿತ್ರತಂಡವು ಆಯೋಚಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಸೇಲಂ ಜಿಲ್ಲೆಯ ಜಾನ್ ಚೆಟ್ಟಿಮಂಕುರಿಚಿಯಲ್ಲಿರುವ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಅಂತರಿಕ್ಷಾ ಮೊದಲ ಬಹುಮಾನ ಪಡೆದುಕೊಂಡಳು. ಪ್ರತಿಫಲವಾಗಿ ಆಕೆಗೆ ವಿಮಾನಯಾನ ಮಾಡುವ ಅವಕಾಶವನ್ನು ಚಿತ್ರತಂಡ ಬಹುಮಾನವಾಗಿ ನೀಡಿದೆ.

ಇಂತಹ ಅವಕಾಶಕ್ಕಾಗಿ ಆಕೆ ತನ್ನ ಶಿಕ್ಷಕಿ ಎಸ್ ಉಮಾ ಮಹೇಶ್ವರಿ ಅವರಿಗೆ ಧನ್ಯವಾದ ಹೇಳುತ್ತಾಳೆ. ಪುಸ್ತಕ ಓದುವ ಅಭಿರುಚಿಯನ್ನು ಮೈಗೂಡಿಸಿಕೊಂಡಿರುವ ಉಮಾ ಅವರು ಸುಮಾರು ಎರಡು ದಶಕಗಳಿಂದ ಹಲವು ಸರ್ಕಾರಿ ಶಾಲೆಯ ಮಕ್ಕಳ ಜೀವನದಲ್ಲಿ ಹೊಸ ಚಿತ್ತಾರ ಮೂಡಿಸಿದ್ದಾರೆ.

ಮಕ್ಕಳಲ್ಲಿ ಹೊಸ ಹುರುಪು, ಚೈತನ್ಯವನ್ನು ತುಂಬುವ ಅವರು, 2005ರಲ್ಲಿ ಆರಂಭವಾದ ಜಾನ್ ಚೆಟ್ಟಿಮಂಕುರಿಚಿ ಸರ್ಕಾರಿ ಶಾಲೆಯಲ್ಲಿ ‘ಕಲೈಕತಿರ್’ ಎಂಬ ಪತ್ರಿಕೆಯನ್ನು ತರುತ್ತಿದ್ದಾರೆ. ಅದು ನಿಯಮಿತವಾಗಿ 6, 7 ಮತ್ತು 8 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೆನ್ನುಹೊರೆಯನ್ನು ಕಡಿಮೆ ಮಾಡುವ ಮೂಲಕ ಹೆಚ್ಚಿನ ಓದು ಮತ್ತು ವಿಜ್ಞಾನ ಪ್ರಯೋಗಗಳಿಗೆ ಸಹಕಾರಿಯಾಗಿದೆ. ಉಮಾ ಅವರ ಈ ಚಿಕ್ಕ ಪ್ರಯೋಗವು ವಿದ್ಯಾರ್ಥಿಗಳಲ್ಲಿ ಓದಿನಲ್ಲಿ ಸಾಕಷ್ಟು ಬದಲಾವಣೆಯನ್ನು ತರುತ್ತಿದೆ.

ಸದಾ ಓದಿನಲ್ಲೇ ತಮ್ಮ ಹೆಚ್ಚು ಸಮಯ ಕಳೆಯುವ ಉಮಾ ಅವರು ತಮ್ಮ ವಿದ್ಯಾರ್ಥಿಗಳಿಗೂ ಓದುವ ಹವ್ಯಾಸವನ್ನು ತುಂಬಿದ್ದಾರೆ. ಅವರು ಕೆಲಸ ಮಾಡುವ ಪ್ರತಿಯೊಂದು ಶಾಲೆಯಲ್ಲಿಯೂ ತಮ್ಮ ವಿದ್ಯಾರ್ಥಿಗಳಿಗೆ ನಿಗದಿತ ಪಠ್ಯಪುಸ್ತಕಗಳನ್ನು ಮೀರಿ ಓದುವ ಹವ್ಯಾಸವನ್ನು ಬಿತ್ತಿದ್ದಾರೆ ಮತ್ತು ಬಿತ್ತುತ್ತಿದ್ದಾರೆ.

ಇದನ್ನೂ ಓದಿರಿ: 334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

2018ರಲ್ಲಿ ಕ್ರೋಮ್‌ಪೇಟೆಯ ಸರ್ಕಾರಿ ಶಾಲೆಯಲ್ಲಿ ಅವರು ಪ್ರಕಟಿಸುತ್ತಿದ್ದ ‘ಕ್ಲಾಸ್ ರೂಮ್ ಲೈಬ್ರರಿ’, ‘ತುಂಬಿ’ ಮತ್ತು ಅಗರಮ್‌ ಶಾಲೆಯಲ್ಲಿ ಪ್ರಕಟಿಸುತ್ತಿದ್ದ ‘ಯಧುಮ್’ ಎಂಬ ಹೆಸರಿನ ನಿಯತಕಾಲಿಕೆಗಳು ವಿದ್ಯಾರ್ಥಿಗಳಿಗೆ ನೆರವಾಗಿವೆ. ಅನೇಕ ವಿದ್ಯಾರ್ಥಿಗಳು ಹೆಚ್ಚು ಪದಗಳನ್ನು ಕಲಿಯಲು, ಅವುಗಳ ಅರ್ಥಗಳನ್ನು ತಿಳಿಯಲು ಈ ನಿಯತಕಾಲಿಕೆಗಳು ಸಹಾಯ ಮಾಡಿವೆ.

ಅಂಕಪಟ್ಟಿಯ ಅಂಕಗಳು ವಿದ್ಯಾರ್ಥಿಗಳಲ್ಲಿ ಪ್ರಬುದ್ದತೆಯನ್ನು ರೂಪಿಸುವುದಿಲ್ಲ. ಆದರೆ, ಅಂಕಗಳಿಗೂ ಹೊರತಾದ ಜ್ಞಾನವು ಶಾಲಾ ಮಕ್ಕಳನ್ನು ಭಾವಪರವಶರನ್ನಾಗಿಸುತ್ತದೆ. ಅಪ್ರಬುದ್ಧತೆಯನ್ನು ಅಳಿಸಿ ಪ್ರಬುದ್ದತೆಯನ್ನು ಬೆಳೆಸುತ್ತದೆ. ಇದೂ ಕೂಡ ವಿದ್ಯಾರ್ಥಿಗಳು ಹೆಚ್ಚು ಅಂಕಗಳನ್ನೂ ಪಡೆಯಲು ಸಹಾಯ ಮಾಡುತ್ತದೆ ಎನ್ನುತ್ತಾರೆ ಉಮಾ.

ಈಗ ವಿದ್ಯಾರ್ಥಿಗಳ ಮೂಲ ಕಲ್ಪನೆಗಳು, ಕಥೆಗಳು, ಲೇಖನಗಳು ಮತ್ತು ಸೃಜನಶೀಲ ಚಿತ್ರಣಗಳೊಂದಿಗೆ ಶಾಲೆಯು ಅಭಿವೃದ್ಧಿ ಹೊಂದುತ್ತಿದೆ. ತನ್ನ ಬಿಡುವಿನ ವೇಳೆಯಲ್ಲಿ, ಲೇಖಕರನ್ನು ಭೇಟಿ ಮಾಡಲು ಮತ್ತು ಹೊಸ ಶೀರ್ಷಿಕೆಗಳನ್ನು ಹುಡುಕಲು ಉಮಾ ಅವರು ತಮ್ಮ ಶಾಲೆಯ ಆರು ವಿದ್ಯಾರ್ಥಿಗಳನ್ನು ನಂದನಂನಲ್ಲಿರುವ ಚೆನ್ನೈ ಪುಸ್ತಕ ಮೇಳಕ್ಕೆ ಕರೆದೊಯ್ದು ವಿದ್ಯಾರ್ಥಿಗಳ ಜ್ಞಾನವನ್ನು ಮತ್ತಷ್ಟು ವಿಸ್ತರಿಸುತ್ತಿದ್ದಾರೆ.

ಮಕ್ಕಳು ಮತ್ತು ಶಿಕ್ಷಕರಿಗೆ ಹುಟ್ಟುಹಬ್ಬದ ಸಂದರ್ಭದಲ್ಲಿ ಉಮಾ ಅವರು ನೀಡುವ ಉಡುಗೊರೆಗಳು ಅದ್ಭುತ ಪುಸ್ತಕಗಳಾಗಿರುತ್ತವೆ. ಅವರ ಈ ನಡೆ ಸುತ್ತಲಿನ ಜನರಲ್ಲಿ ಲವಲವಿಕೆಯ ಮನೋಭಾವವನ್ನು ಬೆಳೆಸುತ್ತದೆ ಎಂದು ಕ್ರೋಂಪೇಟೆಯ ಎಂಬಿಎನ್ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕಿ ಎಂ ಗಾಂಧಿಮತಿ ಹೇಳುತ್ತಾರೆ.

“ವಿದ್ಯಾರ್ಥಿಗಳು ಒಮ್ಮೆ ಪುಸ್ತಕವನ್ನು ತೆಗೆದುಕೊಂಡರೆ, ಅವರು ಬೇಗನೆ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾರೆ. ವಿಶೇಷವಾಗಿ ಈ ವಯಸ್ಸಿನಲ್ಲಿ ಮಕ್ಕಳು ಹೆಚ್ಚು ಓದುವುದು ಗಮನಾರ್ಹ” ಎಂದು ಗಾಂಧಿಮತಿ ಹೇಳುತ್ತಾರೆ.

ಮಕ್ಕಳ ಪೋಷಕರು ತಮ್ಮ ಮಕ್ಕಳು ಪುಸ್ತಕಗಳ ಓದಿನಲ್ಲಿ ಮುಳುಗಿರುವುದನ್ನು ನೋಡಿ ಕುತೂಹಲಗೊಳ್ಳುತ್ತಾರೆ ಮತ್ತು ಸಂತೋಷ ಪಡುತ್ತಾರೆ. ಉಮಾ ಅವರ ಸಣ್ಣ ಪುಸ್ತಕ ಸಂಗ್ರಹವು ಈಗ ದೊಡ್ಡ ಗ್ರಂಥಾಲಯವಾಗಿ ಮಾರ್ಪಟ್ಟಿದೆ. ಏಕೆಂದರೆ ಪೋಷಕರು ಪುಸ್ತಕಗಳ ಬಂಡಲ್‌ಗಳನ್ನು ದಾನ ಮಾಡುತ್ತಿದ್ದಾರೆ, ಲೇಖಕರು ತಮ್ಮ ಪುಸ್ತಕಗಳ ಸಹಿ ಮಾಡಿದ ಪ್ರತಿಗಳನ್ನು ಕೊಡುಗೆ ನೀಡುತ್ತಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕರು ಹೇಳುತ್ತಾರೆ.

ವಿದ್ಯಾರ್ಥಿಗಳು ಬರೆದ ಪುಸ್ತಕ ವಿಮರ್ಶೆಗಳನ್ನು ಸ್ಥಳೀಯ ಪತ್ರಿಕೆಗಳು ಪ್ರಕಟಿಸುತ್ತವೆ. ಶಾಲೆಯ ಇಬ್ಬರು ಹುಡುಗಿಯರು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. “ಈ ಅವಕಾಶವಿಲ್ಲದಿದ್ದರೆ, ನನಗೆ ಎಂದಾದರೂ ವಿಮಾನದಲ್ಲಿ ಹಾರಲು ಅವಕಾಶ ಸಿಗುತ್ತಿತ್ತೇ ಎಂದು ನನಗೆ ಊಹಿಸಲೂ ಸಾಧ್ಯವಿಲ್ಲ” ಎಂದು ವಿದ್ಯಾರ್ಥಿನಿ ಅಂತರಿಕ್ಷಾ ಹೇಳುತ್ತಾರೆ.


ಇದನ್ನೂ ಓದಿರಿ: ಮಹಿಳಾ ವಿಶ್ವಕಪ್‌: ಪಾಕ್‌ ವಿರುದ್ಧ ಭಾರತ ಜಯಭೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹ ಶಿಕ್ಷಕರು ವಿಧ್ಯಾರ್ಥಿಗಳ ಪಾಲಿಗೆ ದೇವರಿದ್ದ ಹಾಗೆ… ಅಭಿನಂದನೆಗಳು ಈ ಶಿಕ್ಷಕರಿಗೆ.

  2. I would like to congratulate and big Salute for a Ideal Teacher Miss Uma . I suggest to the government of India MHRD consider your valuable service and Award as RASHTRIYA SHIKSHAK SAMMAN PURASKAR 5th September 2022 .
    With regards
    Best of luck
    Your faithfully
    A.P.MUHSIN GPT Teacher govt higher primary Urdu school Aladakatti Haveri Karnataka
    9902653162

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...