Homeಮುಖಪುಟಪ್ರತಿ ಊರಿನ ಸರ್ಕಾರಿ ಶಾಲೆಯಲ್ಲೂ ಇಂತಹ ಶಿಕ್ಷಕಿ ಇರಬೇಕಲ್ಲವೇ?

ಪ್ರತಿ ಊರಿನ ಸರ್ಕಾರಿ ಶಾಲೆಯಲ್ಲೂ ಇಂತಹ ಶಿಕ್ಷಕಿ ಇರಬೇಕಲ್ಲವೇ?

- Advertisement -
- Advertisement -

ಶಿಕ್ಷಣವು ನಿಮ್ಮನ್ನು ಬಾನೆತ್ತರಕ್ಕೆ ಕೊಂಡೊಯ್ಯುತ್ತದೆ…. ಉತ್ತಮ ಶಿಕ್ಷಣ, ಉತ್ತಮ ಜ್ಞಾನವು ನಮ್ಮ ಪ್ರತಿಭೆಯನ್ನು ಹೆಚ್ಚಿಸುತ್ತದೆ. ಅದೇ ರೀತಿಯಲ್ಲಿ ತಮಿಳುನಾಡಿನ ಸರ್ಕಾರ ಶಾಲೆಯಲ್ಲಿ ಓದುತ್ತಿರುವ ದಿನಗೂಲಿ ಕಾರ್ಮಿಕನ ಚಿಕ್ಕ ಮಗಳು ವಿಮಾನ ಹತ್ತುತ್ತಾಳೆ ಎಂಬುದನ್ನು ಆಕೆಯ ಪೋಷಕರೇ ನಂಬಲಾಗಲಿಲ್ಲ.

‘ಸೂರರೈ ಪೋಟ್ರು’ ಸಿನಿಮಾದ ಚಿತ್ರತಂಡವು ಆಯೋಚಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಸೇಲಂ ಜಿಲ್ಲೆಯ ಜಾನ್ ಚೆಟ್ಟಿಮಂಕುರಿಚಿಯಲ್ಲಿರುವ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಅಂತರಿಕ್ಷಾ ಮೊದಲ ಬಹುಮಾನ ಪಡೆದುಕೊಂಡಳು. ಪ್ರತಿಫಲವಾಗಿ ಆಕೆಗೆ ವಿಮಾನಯಾನ ಮಾಡುವ ಅವಕಾಶವನ್ನು ಚಿತ್ರತಂಡ ಬಹುಮಾನವಾಗಿ ನೀಡಿದೆ.

ಇಂತಹ ಅವಕಾಶಕ್ಕಾಗಿ ಆಕೆ ತನ್ನ ಶಿಕ್ಷಕಿ ಎಸ್ ಉಮಾ ಮಹೇಶ್ವರಿ ಅವರಿಗೆ ಧನ್ಯವಾದ ಹೇಳುತ್ತಾಳೆ. ಪುಸ್ತಕ ಓದುವ ಅಭಿರುಚಿಯನ್ನು ಮೈಗೂಡಿಸಿಕೊಂಡಿರುವ ಉಮಾ ಅವರು ಸುಮಾರು ಎರಡು ದಶಕಗಳಿಂದ ಹಲವು ಸರ್ಕಾರಿ ಶಾಲೆಯ ಮಕ್ಕಳ ಜೀವನದಲ್ಲಿ ಹೊಸ ಚಿತ್ತಾರ ಮೂಡಿಸಿದ್ದಾರೆ.

ಮಕ್ಕಳಲ್ಲಿ ಹೊಸ ಹುರುಪು, ಚೈತನ್ಯವನ್ನು ತುಂಬುವ ಅವರು, 2005ರಲ್ಲಿ ಆರಂಭವಾದ ಜಾನ್ ಚೆಟ್ಟಿಮಂಕುರಿಚಿ ಸರ್ಕಾರಿ ಶಾಲೆಯಲ್ಲಿ ‘ಕಲೈಕತಿರ್’ ಎಂಬ ಪತ್ರಿಕೆಯನ್ನು ತರುತ್ತಿದ್ದಾರೆ. ಅದು ನಿಯಮಿತವಾಗಿ 6, 7 ಮತ್ತು 8 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೆನ್ನುಹೊರೆಯನ್ನು ಕಡಿಮೆ ಮಾಡುವ ಮೂಲಕ ಹೆಚ್ಚಿನ ಓದು ಮತ್ತು ವಿಜ್ಞಾನ ಪ್ರಯೋಗಗಳಿಗೆ ಸಹಕಾರಿಯಾಗಿದೆ. ಉಮಾ ಅವರ ಈ ಚಿಕ್ಕ ಪ್ರಯೋಗವು ವಿದ್ಯಾರ್ಥಿಗಳಲ್ಲಿ ಓದಿನಲ್ಲಿ ಸಾಕಷ್ಟು ಬದಲಾವಣೆಯನ್ನು ತರುತ್ತಿದೆ.

ಸದಾ ಓದಿನಲ್ಲೇ ತಮ್ಮ ಹೆಚ್ಚು ಸಮಯ ಕಳೆಯುವ ಉಮಾ ಅವರು ತಮ್ಮ ವಿದ್ಯಾರ್ಥಿಗಳಿಗೂ ಓದುವ ಹವ್ಯಾಸವನ್ನು ತುಂಬಿದ್ದಾರೆ. ಅವರು ಕೆಲಸ ಮಾಡುವ ಪ್ರತಿಯೊಂದು ಶಾಲೆಯಲ್ಲಿಯೂ ತಮ್ಮ ವಿದ್ಯಾರ್ಥಿಗಳಿಗೆ ನಿಗದಿತ ಪಠ್ಯಪುಸ್ತಕಗಳನ್ನು ಮೀರಿ ಓದುವ ಹವ್ಯಾಸವನ್ನು ಬಿತ್ತಿದ್ದಾರೆ ಮತ್ತು ಬಿತ್ತುತ್ತಿದ್ದಾರೆ.

ಇದನ್ನೂ ಓದಿರಿ: 334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

2018ರಲ್ಲಿ ಕ್ರೋಮ್‌ಪೇಟೆಯ ಸರ್ಕಾರಿ ಶಾಲೆಯಲ್ಲಿ ಅವರು ಪ್ರಕಟಿಸುತ್ತಿದ್ದ ‘ಕ್ಲಾಸ್ ರೂಮ್ ಲೈಬ್ರರಿ’, ‘ತುಂಬಿ’ ಮತ್ತು ಅಗರಮ್‌ ಶಾಲೆಯಲ್ಲಿ ಪ್ರಕಟಿಸುತ್ತಿದ್ದ ‘ಯಧುಮ್’ ಎಂಬ ಹೆಸರಿನ ನಿಯತಕಾಲಿಕೆಗಳು ವಿದ್ಯಾರ್ಥಿಗಳಿಗೆ ನೆರವಾಗಿವೆ. ಅನೇಕ ವಿದ್ಯಾರ್ಥಿಗಳು ಹೆಚ್ಚು ಪದಗಳನ್ನು ಕಲಿಯಲು, ಅವುಗಳ ಅರ್ಥಗಳನ್ನು ತಿಳಿಯಲು ಈ ನಿಯತಕಾಲಿಕೆಗಳು ಸಹಾಯ ಮಾಡಿವೆ.

ಅಂಕಪಟ್ಟಿಯ ಅಂಕಗಳು ವಿದ್ಯಾರ್ಥಿಗಳಲ್ಲಿ ಪ್ರಬುದ್ದತೆಯನ್ನು ರೂಪಿಸುವುದಿಲ್ಲ. ಆದರೆ, ಅಂಕಗಳಿಗೂ ಹೊರತಾದ ಜ್ಞಾನವು ಶಾಲಾ ಮಕ್ಕಳನ್ನು ಭಾವಪರವಶರನ್ನಾಗಿಸುತ್ತದೆ. ಅಪ್ರಬುದ್ಧತೆಯನ್ನು ಅಳಿಸಿ ಪ್ರಬುದ್ದತೆಯನ್ನು ಬೆಳೆಸುತ್ತದೆ. ಇದೂ ಕೂಡ ವಿದ್ಯಾರ್ಥಿಗಳು ಹೆಚ್ಚು ಅಂಕಗಳನ್ನೂ ಪಡೆಯಲು ಸಹಾಯ ಮಾಡುತ್ತದೆ ಎನ್ನುತ್ತಾರೆ ಉಮಾ.

ಈಗ ವಿದ್ಯಾರ್ಥಿಗಳ ಮೂಲ ಕಲ್ಪನೆಗಳು, ಕಥೆಗಳು, ಲೇಖನಗಳು ಮತ್ತು ಸೃಜನಶೀಲ ಚಿತ್ರಣಗಳೊಂದಿಗೆ ಶಾಲೆಯು ಅಭಿವೃದ್ಧಿ ಹೊಂದುತ್ತಿದೆ. ತನ್ನ ಬಿಡುವಿನ ವೇಳೆಯಲ್ಲಿ, ಲೇಖಕರನ್ನು ಭೇಟಿ ಮಾಡಲು ಮತ್ತು ಹೊಸ ಶೀರ್ಷಿಕೆಗಳನ್ನು ಹುಡುಕಲು ಉಮಾ ಅವರು ತಮ್ಮ ಶಾಲೆಯ ಆರು ವಿದ್ಯಾರ್ಥಿಗಳನ್ನು ನಂದನಂನಲ್ಲಿರುವ ಚೆನ್ನೈ ಪುಸ್ತಕ ಮೇಳಕ್ಕೆ ಕರೆದೊಯ್ದು ವಿದ್ಯಾರ್ಥಿಗಳ ಜ್ಞಾನವನ್ನು ಮತ್ತಷ್ಟು ವಿಸ್ತರಿಸುತ್ತಿದ್ದಾರೆ.

ಮಕ್ಕಳು ಮತ್ತು ಶಿಕ್ಷಕರಿಗೆ ಹುಟ್ಟುಹಬ್ಬದ ಸಂದರ್ಭದಲ್ಲಿ ಉಮಾ ಅವರು ನೀಡುವ ಉಡುಗೊರೆಗಳು ಅದ್ಭುತ ಪುಸ್ತಕಗಳಾಗಿರುತ್ತವೆ. ಅವರ ಈ ನಡೆ ಸುತ್ತಲಿನ ಜನರಲ್ಲಿ ಲವಲವಿಕೆಯ ಮನೋಭಾವವನ್ನು ಬೆಳೆಸುತ್ತದೆ ಎಂದು ಕ್ರೋಂಪೇಟೆಯ ಎಂಬಿಎನ್ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕಿ ಎಂ ಗಾಂಧಿಮತಿ ಹೇಳುತ್ತಾರೆ.

“ವಿದ್ಯಾರ್ಥಿಗಳು ಒಮ್ಮೆ ಪುಸ್ತಕವನ್ನು ತೆಗೆದುಕೊಂಡರೆ, ಅವರು ಬೇಗನೆ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾರೆ. ವಿಶೇಷವಾಗಿ ಈ ವಯಸ್ಸಿನಲ್ಲಿ ಮಕ್ಕಳು ಹೆಚ್ಚು ಓದುವುದು ಗಮನಾರ್ಹ” ಎಂದು ಗಾಂಧಿಮತಿ ಹೇಳುತ್ತಾರೆ.

ಮಕ್ಕಳ ಪೋಷಕರು ತಮ್ಮ ಮಕ್ಕಳು ಪುಸ್ತಕಗಳ ಓದಿನಲ್ಲಿ ಮುಳುಗಿರುವುದನ್ನು ನೋಡಿ ಕುತೂಹಲಗೊಳ್ಳುತ್ತಾರೆ ಮತ್ತು ಸಂತೋಷ ಪಡುತ್ತಾರೆ. ಉಮಾ ಅವರ ಸಣ್ಣ ಪುಸ್ತಕ ಸಂಗ್ರಹವು ಈಗ ದೊಡ್ಡ ಗ್ರಂಥಾಲಯವಾಗಿ ಮಾರ್ಪಟ್ಟಿದೆ. ಏಕೆಂದರೆ ಪೋಷಕರು ಪುಸ್ತಕಗಳ ಬಂಡಲ್‌ಗಳನ್ನು ದಾನ ಮಾಡುತ್ತಿದ್ದಾರೆ, ಲೇಖಕರು ತಮ್ಮ ಪುಸ್ತಕಗಳ ಸಹಿ ಮಾಡಿದ ಪ್ರತಿಗಳನ್ನು ಕೊಡುಗೆ ನೀಡುತ್ತಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕರು ಹೇಳುತ್ತಾರೆ.

ವಿದ್ಯಾರ್ಥಿಗಳು ಬರೆದ ಪುಸ್ತಕ ವಿಮರ್ಶೆಗಳನ್ನು ಸ್ಥಳೀಯ ಪತ್ರಿಕೆಗಳು ಪ್ರಕಟಿಸುತ್ತವೆ. ಶಾಲೆಯ ಇಬ್ಬರು ಹುಡುಗಿಯರು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. “ಈ ಅವಕಾಶವಿಲ್ಲದಿದ್ದರೆ, ನನಗೆ ಎಂದಾದರೂ ವಿಮಾನದಲ್ಲಿ ಹಾರಲು ಅವಕಾಶ ಸಿಗುತ್ತಿತ್ತೇ ಎಂದು ನನಗೆ ಊಹಿಸಲೂ ಸಾಧ್ಯವಿಲ್ಲ” ಎಂದು ವಿದ್ಯಾರ್ಥಿನಿ ಅಂತರಿಕ್ಷಾ ಹೇಳುತ್ತಾರೆ.


ಇದನ್ನೂ ಓದಿರಿ: ಮಹಿಳಾ ವಿಶ್ವಕಪ್‌: ಪಾಕ್‌ ವಿರುದ್ಧ ಭಾರತ ಜಯಭೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹ ಶಿಕ್ಷಕರು ವಿಧ್ಯಾರ್ಥಿಗಳ ಪಾಲಿಗೆ ದೇವರಿದ್ದ ಹಾಗೆ… ಅಭಿನಂದನೆಗಳು ಈ ಶಿಕ್ಷಕರಿಗೆ.

  2. I would like to congratulate and big Salute for a Ideal Teacher Miss Uma . I suggest to the government of India MHRD consider your valuable service and Award as RASHTRIYA SHIKSHAK SAMMAN PURASKAR 5th September 2022 .
    With regards
    Best of luck
    Your faithfully
    A.P.MUHSIN GPT Teacher govt higher primary Urdu school Aladakatti Haveri Karnataka
    9902653162

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...