Homeಮುಖಪುಟರಾಜಕೀಯ ಬಹುಮತ ತೋರಿಸಿ, ಶಾಸಕಾಂಗದ್ದಲ್ಲ; ಶಿಂಧೆ ಬಣಕ್ಕೆ ಸುಪ್ರೀಂ ತಾಕೀತು

ರಾಜಕೀಯ ಬಹುಮತ ತೋರಿಸಿ, ಶಾಸಕಾಂಗದ್ದಲ್ಲ; ಶಿಂಧೆ ಬಣಕ್ಕೆ ಸುಪ್ರೀಂ ತಾಕೀತು

- Advertisement -
- Advertisement -

“ಶಿವಸೇನೆ ನಮಗೆ ಸೇರಿದ್ದು” ಎಂದು ಹಕ್ಕು ಪ್ರತಿಪಾದಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಸಿಂಧೆ ಬಣವು, “ಶಾಸಕಾಂಗ ಪಕ್ಷವು ಅವಿಭಾಜ್ಯವಾಗಿದೆ ಮತ್ತು ರಾಜಕೀಯ ಪಕ್ಷದೊಂದಿಗೆ ಸಾವಯವವಾಗಿ ಸಂಪರ್ಕ ಹೊಂದಿದೆ” ಸುಪ್ರೀಂಕೋರ್ಟ್‌ನಲ್ಲಿ ವಾದಿಸಿದೆ.

ಶಿಂಧೆ ಬಣದ ಪರ ವಾದ ಮಂಡಿಸಿದ ಹಿರಿಯ ವಕೀಲ ಎನ್‌ಕೆ ಕೌಲ್‌, “ಪ್ರತಿಸ್ಪರ್ಧಿ ನಾಯಕರಿಗೆ ಸಚಿವ ಸಂಪುಟದಲ್ಲಿ ಇನ್ನು ನಂಬಿಕೆ ಇಲ್ಲ” ಎಂದು ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠಕ್ಕೆ ತಿಳಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಎಂ.ಆರ್.ಷಾ, ಕೃಷ್ಣ ಮುರಾರಿ, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದ ವಿಷಯದ ಕುರಿತು ವಿಚಾರಣೆ ನಡೆಸುತ್ತಿದೆ.

ಪೀಠದ ಭಾಗವಾಗಿದ್ದ ನ್ಯಾಯಮೂರ್ತಿ ನರಸಿಂಹ ಅವರು ಶಿಂಧೆ ಬಣವನ್ನು ಪ್ರಶ್ನಿಸಿದ್ದು, “ರಾಜಕೀಯ ಬಹುಮತವಿದೆ ಎಂಬುದನ್ನು ತೋರಿಸಬೇಕೇ ಹೊರತು ಶಾಸಕಾಂಗದ ಬಹುಮತವಲ್ಲ” ಎಂದಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಯಲ್ಲಿ ತಿಳಿಸುವುದಾಗಿ ಹಿರಿಯ ವಕೀಲ ಎನ್‌.ಕೆ.ಕೌಲ್‌ ಅವರು ನ್ಯಾಯಾಲಯಕ್ಕೆ ಉತ್ತರಿಸಿದ್ದಾರೆ.

ಹಲವು ತೀರ್ಪುಗಳ ಕಾನೂನು ದೃಷ್ಟಿಕೋನಗಳ ಕುರಿತು, ಪಕ್ಷಾಂತರ ಮತ್ತು ಬಹುಮತ ಸಾಬೀತನ್ನು ವಿಭಿನ್ನವಾಗಿ ಹೇಗೆ ನೋಡಬೇಕೆಂಬುದರ ಸಂಬಂಧ ಹಲವಾರು ಪ್ರಶ್ನೆಗಳನ್ನು ನ್ಯಾಯಾಲಯ ಶಿಂಧೆ ಬಣಕ್ಕೆ ಕೇಳಿದೆ.

ಸಿಜೆಐ ಚಂದ್ರಚೂಡ್ ಅವರು ಹತ್ತನೇ ಷಡ್ಯೂ‌ಲ್‌ ಉಲ್ಲಂಘನೆಯ ಪ್ರಸ್ತಾಪ ಮಾಡಿದ್ದಾರೆ. ಹತ್ತನೇ ಶೆಡ್ಯೂಲ್ ಅಡಿಯಲ್ಲಿ ಅನುಮತಿಸದ ಪಕ್ಷಾಂತರವನ್ನು ಅವರು ಕಾನೂನುಬದ್ಧಗೊಳಿಸುತ್ತಿದ್ದಾರೆಯೇ ಎಂದು ತಿಳಿಯಲು ನ್ಯಾಯಾಲಯವು ಕೋರಿದೆ.

ವಕೀಲರು ಪ್ರತಿಕ್ರಿಯಿಸಿ, “ತಮ್ಮ ಪ್ರಕರಣವು ಹತ್ತನೇ ಶೆಡ್ಯೂಲ್ ಅಡಿಯಲ್ಲಿ ವಿಭಜನೆಯಾದ ಪ್ರಕರಣವಲ್ಲ, ಪಕ್ಷದೊಳಗಿನ ಭಿನ್ನಾಭಿಪ್ರಾಯ ಮತ್ತು ಪಕ್ಷದೊಳಗಿನ ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿದೆ, ಪಕ್ಷವು ನಮ್ಮ ಬಣಕ್ಕೆ ಸೇರಿದೆ” ಎಂದು ಪ್ರತಿಪಾದಿಸಿದ್ದಾರೆ.

ಬಹುಮತ ಅಗತ್ಯಕ್ಕೆ ಸಂಬಂಧಿಸಿದ ಸಮಸ್ಯೆಯು ಪಕ್ಷಾಂತರ ಆರೋಪದೊಂದಿಗೆ ಥಳುಕು ಹಾಕಿಕೊಂಡಿರುವುದನ್ನು ನ್ಯಾಯಾಲಯ ಗಮನಿಸಿದೆ. ಅನರ್ಹತೆಯ ಪ್ರಕ್ರಿಯೆಯೊಂದಿಗೆ ವಿಶ್ವಾಸ ಮತವೂ ಅಂತರ್ಗತವಾಗಿ ಸಂಬಂಧಿಸಿರುವುದರಿಂದ ಸಮಸ್ಯೆ ಉದ್ಭವಿಸುತ್ತದೆ ಎಂದಿದೆ.

ಇದು ಆಂತರಿಕ ಭಿನ್ನಾಭಿಪ್ರಾಯದ ಪ್ರಕರಣವಾಗಿದ್ದು, ಶಿಂಧೆ ಗುಂಪು ಶಿವಸೇನೆಯನ್ನು ಪ್ರತಿನಿಧಿಸುವ ಬಣವಾಗಿದೆ. ಇದನ್ನು ಭಾರತದ ಚುನಾವಣಾ ಆಯೋಗ ನಿರ್ಧರಿಸಬಹುದು ಎಂದು ಹಿರಿಯ ವಕೀಲ ಕೌಲ್ ಹೇಳಿದ್ದಾರೆ.

ಮುಖ್ಯಮಂತ್ರಿಗೆ ವಿಶ್ವಾಸವಿದೆಯೇ ಎಂಬ ವಿಷಯಕ್ಕೆ ಮಾತ್ರ ಬಹುಮತ ಸಾಬೀತು ವಿಚಾರ ಸಂಬಂಧಿಸಿದೆ ಎಂದು ಕೌಲ್ ವಾದಿಸಿದ್ದಾರೆ.

ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ರಾಜಕೀಯ ಪಕ್ಷದ ಮುಖ್ಯಸ್ಥರು ರಾಜ್ಯಪಾಲರಿಗೆ ಮಾಹಿತಿ ನೀಡಿಲ್ಲ ಎಂದು ನ್ಯಾಯಾಲಯ ಪ್ರತಿಕ್ರಿಯಿಸಿದೆ.

“55ರಲ್ಲಿ 34 ಮಂದಿ ಈ ಸರ್ಕಾರದ ಮೇಲೆ ನಂಬಿಕೆ ಇಲ್ಲ ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ” ಎಂದು ಕೌಲ್ ಉತ್ತರಿಸಿದ್ದಾರೆ.

ಈ ಹಿಂದೆ ಉದ್ಧವ್ ಠಾಕ್ರೆ ಬಣವು ಹತ್ತನೇ ಶೆಡ್ಯೂಲ್‌ ಪ್ರಕಾರ ಎದುರು ಪಾಳಯಕ್ಕೆ ಯಾವುದೇ ರಕ್ಷಣೆ ಇಲ್ಲ ಎಂದು ತಿಳಿಸಿತ್ತು.

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರತಿಸ್ಪರ್ಧಿ ಬಣಗಳಾದ ಉದ್ಧವ್ ಠಾಕ್ರೆ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಲ್ಲಿಸಿದ ಅರ್ಜಿಗಳನ್ನು ಐವರು ನ್ಯಾಯಾಧೀಶರ ಸಂವಿಧಾನ ಪೀಠವು ವಿಚಾರಣೆ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...