Homeಮುಖಪುಟರಾಜಕೀಯ ಬಹುಮತ ತೋರಿಸಿ, ಶಾಸಕಾಂಗದ್ದಲ್ಲ; ಶಿಂಧೆ ಬಣಕ್ಕೆ ಸುಪ್ರೀಂ ತಾಕೀತು

ರಾಜಕೀಯ ಬಹುಮತ ತೋರಿಸಿ, ಶಾಸಕಾಂಗದ್ದಲ್ಲ; ಶಿಂಧೆ ಬಣಕ್ಕೆ ಸುಪ್ರೀಂ ತಾಕೀತು

- Advertisement -
- Advertisement -

“ಶಿವಸೇನೆ ನಮಗೆ ಸೇರಿದ್ದು” ಎಂದು ಹಕ್ಕು ಪ್ರತಿಪಾದಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಸಿಂಧೆ ಬಣವು, “ಶಾಸಕಾಂಗ ಪಕ್ಷವು ಅವಿಭಾಜ್ಯವಾಗಿದೆ ಮತ್ತು ರಾಜಕೀಯ ಪಕ್ಷದೊಂದಿಗೆ ಸಾವಯವವಾಗಿ ಸಂಪರ್ಕ ಹೊಂದಿದೆ” ಸುಪ್ರೀಂಕೋರ್ಟ್‌ನಲ್ಲಿ ವಾದಿಸಿದೆ.

ಶಿಂಧೆ ಬಣದ ಪರ ವಾದ ಮಂಡಿಸಿದ ಹಿರಿಯ ವಕೀಲ ಎನ್‌ಕೆ ಕೌಲ್‌, “ಪ್ರತಿಸ್ಪರ್ಧಿ ನಾಯಕರಿಗೆ ಸಚಿವ ಸಂಪುಟದಲ್ಲಿ ಇನ್ನು ನಂಬಿಕೆ ಇಲ್ಲ” ಎಂದು ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠಕ್ಕೆ ತಿಳಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಎಂ.ಆರ್.ಷಾ, ಕೃಷ್ಣ ಮುರಾರಿ, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದ ವಿಷಯದ ಕುರಿತು ವಿಚಾರಣೆ ನಡೆಸುತ್ತಿದೆ.

ಪೀಠದ ಭಾಗವಾಗಿದ್ದ ನ್ಯಾಯಮೂರ್ತಿ ನರಸಿಂಹ ಅವರು ಶಿಂಧೆ ಬಣವನ್ನು ಪ್ರಶ್ನಿಸಿದ್ದು, “ರಾಜಕೀಯ ಬಹುಮತವಿದೆ ಎಂಬುದನ್ನು ತೋರಿಸಬೇಕೇ ಹೊರತು ಶಾಸಕಾಂಗದ ಬಹುಮತವಲ್ಲ” ಎಂದಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಯಲ್ಲಿ ತಿಳಿಸುವುದಾಗಿ ಹಿರಿಯ ವಕೀಲ ಎನ್‌.ಕೆ.ಕೌಲ್‌ ಅವರು ನ್ಯಾಯಾಲಯಕ್ಕೆ ಉತ್ತರಿಸಿದ್ದಾರೆ.

ಹಲವು ತೀರ್ಪುಗಳ ಕಾನೂನು ದೃಷ್ಟಿಕೋನಗಳ ಕುರಿತು, ಪಕ್ಷಾಂತರ ಮತ್ತು ಬಹುಮತ ಸಾಬೀತನ್ನು ವಿಭಿನ್ನವಾಗಿ ಹೇಗೆ ನೋಡಬೇಕೆಂಬುದರ ಸಂಬಂಧ ಹಲವಾರು ಪ್ರಶ್ನೆಗಳನ್ನು ನ್ಯಾಯಾಲಯ ಶಿಂಧೆ ಬಣಕ್ಕೆ ಕೇಳಿದೆ.

ಸಿಜೆಐ ಚಂದ್ರಚೂಡ್ ಅವರು ಹತ್ತನೇ ಷಡ್ಯೂ‌ಲ್‌ ಉಲ್ಲಂಘನೆಯ ಪ್ರಸ್ತಾಪ ಮಾಡಿದ್ದಾರೆ. ಹತ್ತನೇ ಶೆಡ್ಯೂಲ್ ಅಡಿಯಲ್ಲಿ ಅನುಮತಿಸದ ಪಕ್ಷಾಂತರವನ್ನು ಅವರು ಕಾನೂನುಬದ್ಧಗೊಳಿಸುತ್ತಿದ್ದಾರೆಯೇ ಎಂದು ತಿಳಿಯಲು ನ್ಯಾಯಾಲಯವು ಕೋರಿದೆ.

ವಕೀಲರು ಪ್ರತಿಕ್ರಿಯಿಸಿ, “ತಮ್ಮ ಪ್ರಕರಣವು ಹತ್ತನೇ ಶೆಡ್ಯೂಲ್ ಅಡಿಯಲ್ಲಿ ವಿಭಜನೆಯಾದ ಪ್ರಕರಣವಲ್ಲ, ಪಕ್ಷದೊಳಗಿನ ಭಿನ್ನಾಭಿಪ್ರಾಯ ಮತ್ತು ಪಕ್ಷದೊಳಗಿನ ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿದೆ, ಪಕ್ಷವು ನಮ್ಮ ಬಣಕ್ಕೆ ಸೇರಿದೆ” ಎಂದು ಪ್ರತಿಪಾದಿಸಿದ್ದಾರೆ.

ಬಹುಮತ ಅಗತ್ಯಕ್ಕೆ ಸಂಬಂಧಿಸಿದ ಸಮಸ್ಯೆಯು ಪಕ್ಷಾಂತರ ಆರೋಪದೊಂದಿಗೆ ಥಳುಕು ಹಾಕಿಕೊಂಡಿರುವುದನ್ನು ನ್ಯಾಯಾಲಯ ಗಮನಿಸಿದೆ. ಅನರ್ಹತೆಯ ಪ್ರಕ್ರಿಯೆಯೊಂದಿಗೆ ವಿಶ್ವಾಸ ಮತವೂ ಅಂತರ್ಗತವಾಗಿ ಸಂಬಂಧಿಸಿರುವುದರಿಂದ ಸಮಸ್ಯೆ ಉದ್ಭವಿಸುತ್ತದೆ ಎಂದಿದೆ.

ಇದು ಆಂತರಿಕ ಭಿನ್ನಾಭಿಪ್ರಾಯದ ಪ್ರಕರಣವಾಗಿದ್ದು, ಶಿಂಧೆ ಗುಂಪು ಶಿವಸೇನೆಯನ್ನು ಪ್ರತಿನಿಧಿಸುವ ಬಣವಾಗಿದೆ. ಇದನ್ನು ಭಾರತದ ಚುನಾವಣಾ ಆಯೋಗ ನಿರ್ಧರಿಸಬಹುದು ಎಂದು ಹಿರಿಯ ವಕೀಲ ಕೌಲ್ ಹೇಳಿದ್ದಾರೆ.

ಮುಖ್ಯಮಂತ್ರಿಗೆ ವಿಶ್ವಾಸವಿದೆಯೇ ಎಂಬ ವಿಷಯಕ್ಕೆ ಮಾತ್ರ ಬಹುಮತ ಸಾಬೀತು ವಿಚಾರ ಸಂಬಂಧಿಸಿದೆ ಎಂದು ಕೌಲ್ ವಾದಿಸಿದ್ದಾರೆ.

ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ರಾಜಕೀಯ ಪಕ್ಷದ ಮುಖ್ಯಸ್ಥರು ರಾಜ್ಯಪಾಲರಿಗೆ ಮಾಹಿತಿ ನೀಡಿಲ್ಲ ಎಂದು ನ್ಯಾಯಾಲಯ ಪ್ರತಿಕ್ರಿಯಿಸಿದೆ.

“55ರಲ್ಲಿ 34 ಮಂದಿ ಈ ಸರ್ಕಾರದ ಮೇಲೆ ನಂಬಿಕೆ ಇಲ್ಲ ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ” ಎಂದು ಕೌಲ್ ಉತ್ತರಿಸಿದ್ದಾರೆ.

ಈ ಹಿಂದೆ ಉದ್ಧವ್ ಠಾಕ್ರೆ ಬಣವು ಹತ್ತನೇ ಶೆಡ್ಯೂಲ್‌ ಪ್ರಕಾರ ಎದುರು ಪಾಳಯಕ್ಕೆ ಯಾವುದೇ ರಕ್ಷಣೆ ಇಲ್ಲ ಎಂದು ತಿಳಿಸಿತ್ತು.

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರತಿಸ್ಪರ್ಧಿ ಬಣಗಳಾದ ಉದ್ಧವ್ ಠಾಕ್ರೆ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಲ್ಲಿಸಿದ ಅರ್ಜಿಗಳನ್ನು ಐವರು ನ್ಯಾಯಾಧೀಶರ ಸಂವಿಧಾನ ಪೀಠವು ವಿಚಾರಣೆ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...