Homeಮುಖಪುಟನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ: VHP ಗೆ ಕುನಾಲ್ ಕಮ್ರಾ ಸವಾಲು

ನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ: VHP ಗೆ ಕುನಾಲ್ ಕಮ್ರಾ ಸವಾಲು

ನಾನು ಹೆಮ್ಮಯಿಂದ ಜೈ ಶ್ರೀ ಸೀತಾ-ರಾಮ್, ಜೈ ರಾಧ ಕೃಷ್ಣ ಎಂದು ಘೋಷಣೆ ಕೂಗುತ್ತೇನೆ. ನೀವು ನಿಜವಾದ ಭಾರತದ ಮಕ್ಕಳೆ ಆಗಿದ್ದರೆ ಗೋಡ್ಸೆ ಮುರ್ದಾಬಾದ್ ಎಂದು ಘೋಷಣೆ ಕೂಗುವಿರಾ?

- Advertisement -
- Advertisement -

ಹರಿಯಾಣದಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾರವರ ಪ್ರದರ್ಶನ ರದ್ದುಗೊಳಿಸಿದ VHP ವಿರುದ್ಧ ಕಡಿಕಾರಿರುವ ಅವರು ‘ನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ’ ಎಂದು ಸವಾಲು ಹಾಕಿದ್ದಾರೆ.

ಸೆಪ್ಟಂಬರ್ 17 ಮತ್ತು 18 ರಂದು ಗುರ್ಗಾವ್‌ನ ಸೆಕ್ಟರ್‌ 29ರಲ್ಲಿನ ಸ್ಟುಡಿಯೊ ಎಕ್ಸ್‌ಒ ಬಾರ್‌ನಲ್ಲಿ ಕುನಾಲ್ ಕಮ್ರಾರವರ ಪ್ರದರ್ಶನ ಏರ್ಪಡಿಸಲಾಗಿತ್ತು. ಆದರೆ ಬಜರಂಗದಳ ಮತ್ತು VHP ಕುನಾಲ್ ಕಮ್ರಾರನ್ನು ಹಿಂದೂ ದೇವತೆಗಳನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ತಹಶೀಲ್ದಾರ್‌ ಮೂಲಕ ಒತ್ತಡ ತಂದಿದ್ದರೆ ಪರಿಣಾಮವಾಗಿ ಪ್ರದರ್ಶನ ರದ್ದಾಗಿದೆ.

ಈ ಕುರಿತು VHPಗೆ ಬಹಿರಂಗ ಪತ್ರ ಬರೆದಿರುವ ಕುನಾಲ್ ಕಮ್ರಾ, “ನಾನುಗಿಂತ VHPಗಿಂತ ದೊಡ್ಡ ಹಿಂದೂ. ಏಕೆಂದರೆ ನಿಮ್ಮ ರೀತಿ ಜನರಲ್ಲಿ ಭಯ ಹುಟ್ಟಿಸಿ, ಬೆದರಿಕೆ ಹಾಕಿ ಗಳಿಸಿದ ಹಣದಿಂದ ಜೀವನ ನಡೆಸುತ್ತಿಲ್ಲ” ಎಂದು ಕಿಡಿಕಾರಿದ್ದಾರೆ.

ನಾನು ಹೆಮ್ಮಯಿಂದ, ಜೋರಾಗಿ ಜೈ ಶ್ರೀ ಸೀತಾ-ರಾಮ್, ಜೈ ರಾಧ ಕೃಷ್ಣ ಎಂದು ಘೋಷಣೆ ಕೂಗುತ್ತೇನೆ. ನೀವು ನಿಜವಾದ ಭಾರತದ ಮಕ್ಕಳೆ ಆಗಿದ್ದರೆ ಗೋಡ್ಸೆ ಮುರ್ದಾಬಾದ್ ಎಂದು ಘೋಷಣೆ ಕೂಗುವಿರಾ? ಕೂಗಿದಿದ್ದರೆ ನೀವು ದೊಡ್ಡ ಹಿಂದೂ ವಿರೋಧಿಗಳು ಮತ್ತು ಭಯೋತ್ಪಾದನೆ ಬೆಂಬಲಿಗರು ಎಂದು ಕುನಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋಡ್ಸೆಯನ್ನು ದೇವರೆಂದು ಪರಿಗಣಿಸುತ್ತೀರೆಂದು ನನ್ನ ಬಳಿ ಹೇಳಬೇಡಿ. ಅದು ನಿಜವಾದರೆ ನೀವು ಮುಂದಕ್ಕೂ ನನ್ನ ಪ್ರದರ್ಶನಗಳನ್ನು ರದ್ದುಗೊಳಿಸಿ. ಈ ಪರೀಕ್ಷೆಯಲ್ಲಿ ನಾನು ಸಂತೋಷದಿಂದ ಗೆದ್ದುಬರುತ್ತೇನೆ ಮತ್ತು ನಿಮಗಿಂತ ದೊಡ್ಡ ಹಿಂದೂ ಎಂದು ನಿರೂಪಿಸುತ್ತೇನೆ. ನಾನು ಕಷ್ಟಪಟ್ಟು ಗಳಿಸಿದ ಹಣದಿಂದ ಜೀವನ ನಡೆಸುತ್ತಿದ್ದೇನೆ ಹೊರತು ನಿಮ್ಮ ರೀತಿ ಜನರನ್ನು ಹೆದರಿಸಿ, ಬೆದರಿಸಿ ಹಣ ವಸೂಲಿ ಮಾಡುತ್ತಿಲ್ಲ. ಇದೊಂದು ನಿಮ್ಮ ಕಾಯಿಲೆಯಾಗಿದೆ ಎಂದು ಅವರು ಬರೆದಿದ್ದಾರೆ.

ನನ್ನ ಇದುವರೆಗಿನ ಕಾಮಿಡಿ ಶೋಗಳಲ್ಲಿ ಹಿಂದೂ ದೇವರನ್ನು ನಿಂದಿಸಿರುವ, ಅವಹೇಳನ ಮಾಡಿರುವ ಪುರಾವೆಗಳಿದ್ದರೆ, ಆ ವಿಡಿಯೋಗಳಿದ್ದರೆ ನನಗೆ ತೋರಿಸಿ. ನಾನು ಸರ್ಕಾರಗಳನ್ನು ಅಣಕ ಮಾಡುತ್ತೇನೆ, ನೀವು ಸರ್ಕಾರದ ಚಮಚಗಳಾಗಿದ್ದರೆ ನಿಮಗೆ ನೋವಾಗುವುದಕ್ಕೆ ಅರ್ಥವಿದೆ. ಆದರೆ ಇದರಲ್ಲಿ ಹಿಂದೂ ಧರ್ಮವನ್ನು ಏಕೆ ಎಳೆದು ತರುತ್ತೀರಿ ಎಂದು ಕಮ್ರಾ ಪ್ರಶ್ನಿಸಿದ್ದಾರೆ.

ಬಾರ್ ಮಾಲೀಕರಿಗೆ ಬೆದರಿಕೆ ಹಾಕಿದ್ದಕ್ಕೆ ನನ್ನ ಪ್ರದರ್ಶನ ರದ್ದುಗೊಂಡಿದೆ. ಹಾಗಾಗಿ ನಾನು ಅವರನ್ನು ದೂಷಿಸುವುದಿಲ್ಲ. ಅವರು ತಮ್ಮ ವ್ಯವಹಾರ ಮಾಡುತ್ತಿದ್ದಾರೆ ಅಷ್ಟೆ. ಅವರು ಈ ಗೂಂಡಾಗಳೊಂದಿಗೆ ವ್ಯವಹರಿಸಲು ಸಾಧ್ಯವೇ? ಅವರು ಪೊಲೀಸರ ಬಳಿ ಸಹ ಹೋಗಲು ಸಾಧ್ಯವಿಲ್ಲ. ಒಂದು ವೇಳೆ ಹೋದರೂ ಸಹ ಪೊಲೀಸರು ದಯವಿಟ್ಟು ಪ್ರದರ್ಶನ ರದ್ದುಗೊಳಿಸಿ ಎಂದು ಮನವಿ ಮಾಡುತ್ತಾರೆ ಅಷ್ಟೆ. ಏಕೆಂದರೆ ಇಡೀ ವ್ಯವಸ್ಥೆಯ ನಿಮ್ಮ ಜೊತೆ ಇದೆ ಎಂದು VHP ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ‘ವಿಶ್ವಗುರು’ ನುಡಿಯಲ್ಲಿ ಆಗಿ ನಡೆಯಲ್ಲಿ ತಪ್ಪಬಹುದೆ?  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...