Homeಮುಖಪುಟನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ: VHP ಗೆ ಕುನಾಲ್ ಕಮ್ರಾ ಸವಾಲು

ನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ: VHP ಗೆ ಕುನಾಲ್ ಕಮ್ರಾ ಸವಾಲು

ನಾನು ಹೆಮ್ಮಯಿಂದ ಜೈ ಶ್ರೀ ಸೀತಾ-ರಾಮ್, ಜೈ ರಾಧ ಕೃಷ್ಣ ಎಂದು ಘೋಷಣೆ ಕೂಗುತ್ತೇನೆ. ನೀವು ನಿಜವಾದ ಭಾರತದ ಮಕ್ಕಳೆ ಆಗಿದ್ದರೆ ಗೋಡ್ಸೆ ಮುರ್ದಾಬಾದ್ ಎಂದು ಘೋಷಣೆ ಕೂಗುವಿರಾ?

- Advertisement -
- Advertisement -

ಹರಿಯಾಣದಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾರವರ ಪ್ರದರ್ಶನ ರದ್ದುಗೊಳಿಸಿದ VHP ವಿರುದ್ಧ ಕಡಿಕಾರಿರುವ ಅವರು ‘ನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ’ ಎಂದು ಸವಾಲು ಹಾಕಿದ್ದಾರೆ.

ಸೆಪ್ಟಂಬರ್ 17 ಮತ್ತು 18 ರಂದು ಗುರ್ಗಾವ್‌ನ ಸೆಕ್ಟರ್‌ 29ರಲ್ಲಿನ ಸ್ಟುಡಿಯೊ ಎಕ್ಸ್‌ಒ ಬಾರ್‌ನಲ್ಲಿ ಕುನಾಲ್ ಕಮ್ರಾರವರ ಪ್ರದರ್ಶನ ಏರ್ಪಡಿಸಲಾಗಿತ್ತು. ಆದರೆ ಬಜರಂಗದಳ ಮತ್ತು VHP ಕುನಾಲ್ ಕಮ್ರಾರನ್ನು ಹಿಂದೂ ದೇವತೆಗಳನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ತಹಶೀಲ್ದಾರ್‌ ಮೂಲಕ ಒತ್ತಡ ತಂದಿದ್ದರೆ ಪರಿಣಾಮವಾಗಿ ಪ್ರದರ್ಶನ ರದ್ದಾಗಿದೆ.

ಈ ಕುರಿತು VHPಗೆ ಬಹಿರಂಗ ಪತ್ರ ಬರೆದಿರುವ ಕುನಾಲ್ ಕಮ್ರಾ, “ನಾನುಗಿಂತ VHPಗಿಂತ ದೊಡ್ಡ ಹಿಂದೂ. ಏಕೆಂದರೆ ನಿಮ್ಮ ರೀತಿ ಜನರಲ್ಲಿ ಭಯ ಹುಟ್ಟಿಸಿ, ಬೆದರಿಕೆ ಹಾಕಿ ಗಳಿಸಿದ ಹಣದಿಂದ ಜೀವನ ನಡೆಸುತ್ತಿಲ್ಲ” ಎಂದು ಕಿಡಿಕಾರಿದ್ದಾರೆ.

ನಾನು ಹೆಮ್ಮಯಿಂದ, ಜೋರಾಗಿ ಜೈ ಶ್ರೀ ಸೀತಾ-ರಾಮ್, ಜೈ ರಾಧ ಕೃಷ್ಣ ಎಂದು ಘೋಷಣೆ ಕೂಗುತ್ತೇನೆ. ನೀವು ನಿಜವಾದ ಭಾರತದ ಮಕ್ಕಳೆ ಆಗಿದ್ದರೆ ಗೋಡ್ಸೆ ಮುರ್ದಾಬಾದ್ ಎಂದು ಘೋಷಣೆ ಕೂಗುವಿರಾ? ಕೂಗಿದಿದ್ದರೆ ನೀವು ದೊಡ್ಡ ಹಿಂದೂ ವಿರೋಧಿಗಳು ಮತ್ತು ಭಯೋತ್ಪಾದನೆ ಬೆಂಬಲಿಗರು ಎಂದು ಕುನಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋಡ್ಸೆಯನ್ನು ದೇವರೆಂದು ಪರಿಗಣಿಸುತ್ತೀರೆಂದು ನನ್ನ ಬಳಿ ಹೇಳಬೇಡಿ. ಅದು ನಿಜವಾದರೆ ನೀವು ಮುಂದಕ್ಕೂ ನನ್ನ ಪ್ರದರ್ಶನಗಳನ್ನು ರದ್ದುಗೊಳಿಸಿ. ಈ ಪರೀಕ್ಷೆಯಲ್ಲಿ ನಾನು ಸಂತೋಷದಿಂದ ಗೆದ್ದುಬರುತ್ತೇನೆ ಮತ್ತು ನಿಮಗಿಂತ ದೊಡ್ಡ ಹಿಂದೂ ಎಂದು ನಿರೂಪಿಸುತ್ತೇನೆ. ನಾನು ಕಷ್ಟಪಟ್ಟು ಗಳಿಸಿದ ಹಣದಿಂದ ಜೀವನ ನಡೆಸುತ್ತಿದ್ದೇನೆ ಹೊರತು ನಿಮ್ಮ ರೀತಿ ಜನರನ್ನು ಹೆದರಿಸಿ, ಬೆದರಿಸಿ ಹಣ ವಸೂಲಿ ಮಾಡುತ್ತಿಲ್ಲ. ಇದೊಂದು ನಿಮ್ಮ ಕಾಯಿಲೆಯಾಗಿದೆ ಎಂದು ಅವರು ಬರೆದಿದ್ದಾರೆ.

ನನ್ನ ಇದುವರೆಗಿನ ಕಾಮಿಡಿ ಶೋಗಳಲ್ಲಿ ಹಿಂದೂ ದೇವರನ್ನು ನಿಂದಿಸಿರುವ, ಅವಹೇಳನ ಮಾಡಿರುವ ಪುರಾವೆಗಳಿದ್ದರೆ, ಆ ವಿಡಿಯೋಗಳಿದ್ದರೆ ನನಗೆ ತೋರಿಸಿ. ನಾನು ಸರ್ಕಾರಗಳನ್ನು ಅಣಕ ಮಾಡುತ್ತೇನೆ, ನೀವು ಸರ್ಕಾರದ ಚಮಚಗಳಾಗಿದ್ದರೆ ನಿಮಗೆ ನೋವಾಗುವುದಕ್ಕೆ ಅರ್ಥವಿದೆ. ಆದರೆ ಇದರಲ್ಲಿ ಹಿಂದೂ ಧರ್ಮವನ್ನು ಏಕೆ ಎಳೆದು ತರುತ್ತೀರಿ ಎಂದು ಕಮ್ರಾ ಪ್ರಶ್ನಿಸಿದ್ದಾರೆ.

ಬಾರ್ ಮಾಲೀಕರಿಗೆ ಬೆದರಿಕೆ ಹಾಕಿದ್ದಕ್ಕೆ ನನ್ನ ಪ್ರದರ್ಶನ ರದ್ದುಗೊಂಡಿದೆ. ಹಾಗಾಗಿ ನಾನು ಅವರನ್ನು ದೂಷಿಸುವುದಿಲ್ಲ. ಅವರು ತಮ್ಮ ವ್ಯವಹಾರ ಮಾಡುತ್ತಿದ್ದಾರೆ ಅಷ್ಟೆ. ಅವರು ಈ ಗೂಂಡಾಗಳೊಂದಿಗೆ ವ್ಯವಹರಿಸಲು ಸಾಧ್ಯವೇ? ಅವರು ಪೊಲೀಸರ ಬಳಿ ಸಹ ಹೋಗಲು ಸಾಧ್ಯವಿಲ್ಲ. ಒಂದು ವೇಳೆ ಹೋದರೂ ಸಹ ಪೊಲೀಸರು ದಯವಿಟ್ಟು ಪ್ರದರ್ಶನ ರದ್ದುಗೊಳಿಸಿ ಎಂದು ಮನವಿ ಮಾಡುತ್ತಾರೆ ಅಷ್ಟೆ. ಏಕೆಂದರೆ ಇಡೀ ವ್ಯವಸ್ಥೆಯ ನಿಮ್ಮ ಜೊತೆ ಇದೆ ಎಂದು VHP ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ‘ವಿಶ್ವಗುರು’ ನುಡಿಯಲ್ಲಿ ಆಗಿ ನಡೆಯಲ್ಲಿ ತಪ್ಪಬಹುದೆ?  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....