Homeಮುಖಪುಟನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ: VHP ಗೆ ಕುನಾಲ್ ಕಮ್ರಾ ಸವಾಲು

ನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ: VHP ಗೆ ಕುನಾಲ್ ಕಮ್ರಾ ಸವಾಲು

ನಾನು ಹೆಮ್ಮಯಿಂದ ಜೈ ಶ್ರೀ ಸೀತಾ-ರಾಮ್, ಜೈ ರಾಧ ಕೃಷ್ಣ ಎಂದು ಘೋಷಣೆ ಕೂಗುತ್ತೇನೆ. ನೀವು ನಿಜವಾದ ಭಾರತದ ಮಕ್ಕಳೆ ಆಗಿದ್ದರೆ ಗೋಡ್ಸೆ ಮುರ್ದಾಬಾದ್ ಎಂದು ಘೋಷಣೆ ಕೂಗುವಿರಾ?

- Advertisement -
- Advertisement -

ಹರಿಯಾಣದಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾರವರ ಪ್ರದರ್ಶನ ರದ್ದುಗೊಳಿಸಿದ VHP ವಿರುದ್ಧ ಕಡಿಕಾರಿರುವ ಅವರು ‘ನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ’ ಎಂದು ಸವಾಲು ಹಾಕಿದ್ದಾರೆ.

ಸೆಪ್ಟಂಬರ್ 17 ಮತ್ತು 18 ರಂದು ಗುರ್ಗಾವ್‌ನ ಸೆಕ್ಟರ್‌ 29ರಲ್ಲಿನ ಸ್ಟುಡಿಯೊ ಎಕ್ಸ್‌ಒ ಬಾರ್‌ನಲ್ಲಿ ಕುನಾಲ್ ಕಮ್ರಾರವರ ಪ್ರದರ್ಶನ ಏರ್ಪಡಿಸಲಾಗಿತ್ತು. ಆದರೆ ಬಜರಂಗದಳ ಮತ್ತು VHP ಕುನಾಲ್ ಕಮ್ರಾರನ್ನು ಹಿಂದೂ ದೇವತೆಗಳನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ತಹಶೀಲ್ದಾರ್‌ ಮೂಲಕ ಒತ್ತಡ ತಂದಿದ್ದರೆ ಪರಿಣಾಮವಾಗಿ ಪ್ರದರ್ಶನ ರದ್ದಾಗಿದೆ.

ಈ ಕುರಿತು VHPಗೆ ಬಹಿರಂಗ ಪತ್ರ ಬರೆದಿರುವ ಕುನಾಲ್ ಕಮ್ರಾ, “ನಾನುಗಿಂತ VHPಗಿಂತ ದೊಡ್ಡ ಹಿಂದೂ. ಏಕೆಂದರೆ ನಿಮ್ಮ ರೀತಿ ಜನರಲ್ಲಿ ಭಯ ಹುಟ್ಟಿಸಿ, ಬೆದರಿಕೆ ಹಾಕಿ ಗಳಿಸಿದ ಹಣದಿಂದ ಜೀವನ ನಡೆಸುತ್ತಿಲ್ಲ” ಎಂದು ಕಿಡಿಕಾರಿದ್ದಾರೆ.

ನಾನು ಹೆಮ್ಮಯಿಂದ, ಜೋರಾಗಿ ಜೈ ಶ್ರೀ ಸೀತಾ-ರಾಮ್, ಜೈ ರಾಧ ಕೃಷ್ಣ ಎಂದು ಘೋಷಣೆ ಕೂಗುತ್ತೇನೆ. ನೀವು ನಿಜವಾದ ಭಾರತದ ಮಕ್ಕಳೆ ಆಗಿದ್ದರೆ ಗೋಡ್ಸೆ ಮುರ್ದಾಬಾದ್ ಎಂದು ಘೋಷಣೆ ಕೂಗುವಿರಾ? ಕೂಗಿದಿದ್ದರೆ ನೀವು ದೊಡ್ಡ ಹಿಂದೂ ವಿರೋಧಿಗಳು ಮತ್ತು ಭಯೋತ್ಪಾದನೆ ಬೆಂಬಲಿಗರು ಎಂದು ಕುನಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋಡ್ಸೆಯನ್ನು ದೇವರೆಂದು ಪರಿಗಣಿಸುತ್ತೀರೆಂದು ನನ್ನ ಬಳಿ ಹೇಳಬೇಡಿ. ಅದು ನಿಜವಾದರೆ ನೀವು ಮುಂದಕ್ಕೂ ನನ್ನ ಪ್ರದರ್ಶನಗಳನ್ನು ರದ್ದುಗೊಳಿಸಿ. ಈ ಪರೀಕ್ಷೆಯಲ್ಲಿ ನಾನು ಸಂತೋಷದಿಂದ ಗೆದ್ದುಬರುತ್ತೇನೆ ಮತ್ತು ನಿಮಗಿಂತ ದೊಡ್ಡ ಹಿಂದೂ ಎಂದು ನಿರೂಪಿಸುತ್ತೇನೆ. ನಾನು ಕಷ್ಟಪಟ್ಟು ಗಳಿಸಿದ ಹಣದಿಂದ ಜೀವನ ನಡೆಸುತ್ತಿದ್ದೇನೆ ಹೊರತು ನಿಮ್ಮ ರೀತಿ ಜನರನ್ನು ಹೆದರಿಸಿ, ಬೆದರಿಸಿ ಹಣ ವಸೂಲಿ ಮಾಡುತ್ತಿಲ್ಲ. ಇದೊಂದು ನಿಮ್ಮ ಕಾಯಿಲೆಯಾಗಿದೆ ಎಂದು ಅವರು ಬರೆದಿದ್ದಾರೆ.

ನನ್ನ ಇದುವರೆಗಿನ ಕಾಮಿಡಿ ಶೋಗಳಲ್ಲಿ ಹಿಂದೂ ದೇವರನ್ನು ನಿಂದಿಸಿರುವ, ಅವಹೇಳನ ಮಾಡಿರುವ ಪುರಾವೆಗಳಿದ್ದರೆ, ಆ ವಿಡಿಯೋಗಳಿದ್ದರೆ ನನಗೆ ತೋರಿಸಿ. ನಾನು ಸರ್ಕಾರಗಳನ್ನು ಅಣಕ ಮಾಡುತ್ತೇನೆ, ನೀವು ಸರ್ಕಾರದ ಚಮಚಗಳಾಗಿದ್ದರೆ ನಿಮಗೆ ನೋವಾಗುವುದಕ್ಕೆ ಅರ್ಥವಿದೆ. ಆದರೆ ಇದರಲ್ಲಿ ಹಿಂದೂ ಧರ್ಮವನ್ನು ಏಕೆ ಎಳೆದು ತರುತ್ತೀರಿ ಎಂದು ಕಮ್ರಾ ಪ್ರಶ್ನಿಸಿದ್ದಾರೆ.

ಬಾರ್ ಮಾಲೀಕರಿಗೆ ಬೆದರಿಕೆ ಹಾಕಿದ್ದಕ್ಕೆ ನನ್ನ ಪ್ರದರ್ಶನ ರದ್ದುಗೊಂಡಿದೆ. ಹಾಗಾಗಿ ನಾನು ಅವರನ್ನು ದೂಷಿಸುವುದಿಲ್ಲ. ಅವರು ತಮ್ಮ ವ್ಯವಹಾರ ಮಾಡುತ್ತಿದ್ದಾರೆ ಅಷ್ಟೆ. ಅವರು ಈ ಗೂಂಡಾಗಳೊಂದಿಗೆ ವ್ಯವಹರಿಸಲು ಸಾಧ್ಯವೇ? ಅವರು ಪೊಲೀಸರ ಬಳಿ ಸಹ ಹೋಗಲು ಸಾಧ್ಯವಿಲ್ಲ. ಒಂದು ವೇಳೆ ಹೋದರೂ ಸಹ ಪೊಲೀಸರು ದಯವಿಟ್ಟು ಪ್ರದರ್ಶನ ರದ್ದುಗೊಳಿಸಿ ಎಂದು ಮನವಿ ಮಾಡುತ್ತಾರೆ ಅಷ್ಟೆ. ಏಕೆಂದರೆ ಇಡೀ ವ್ಯವಸ್ಥೆಯ ನಿಮ್ಮ ಜೊತೆ ಇದೆ ಎಂದು VHP ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ‘ವಿಶ್ವಗುರು’ ನುಡಿಯಲ್ಲಿ ಆಗಿ ನಡೆಯಲ್ಲಿ ತಪ್ಪಬಹುದೆ?  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...