Homeಮುಖಪುಟನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ: VHP ಗೆ ಕುನಾಲ್ ಕಮ್ರಾ ಸವಾಲು

ನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ: VHP ಗೆ ಕುನಾಲ್ ಕಮ್ರಾ ಸವಾಲು

ನಾನು ಹೆಮ್ಮಯಿಂದ ಜೈ ಶ್ರೀ ಸೀತಾ-ರಾಮ್, ಜೈ ರಾಧ ಕೃಷ್ಣ ಎಂದು ಘೋಷಣೆ ಕೂಗುತ್ತೇನೆ. ನೀವು ನಿಜವಾದ ಭಾರತದ ಮಕ್ಕಳೆ ಆಗಿದ್ದರೆ ಗೋಡ್ಸೆ ಮುರ್ದಾಬಾದ್ ಎಂದು ಘೋಷಣೆ ಕೂಗುವಿರಾ?

- Advertisement -
- Advertisement -

ಹರಿಯಾಣದಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾರವರ ಪ್ರದರ್ಶನ ರದ್ದುಗೊಳಿಸಿದ VHP ವಿರುದ್ಧ ಕಡಿಕಾರಿರುವ ಅವರು ‘ನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ’ ಎಂದು ಸವಾಲು ಹಾಕಿದ್ದಾರೆ.

ಸೆಪ್ಟಂಬರ್ 17 ಮತ್ತು 18 ರಂದು ಗುರ್ಗಾವ್‌ನ ಸೆಕ್ಟರ್‌ 29ರಲ್ಲಿನ ಸ್ಟುಡಿಯೊ ಎಕ್ಸ್‌ಒ ಬಾರ್‌ನಲ್ಲಿ ಕುನಾಲ್ ಕಮ್ರಾರವರ ಪ್ರದರ್ಶನ ಏರ್ಪಡಿಸಲಾಗಿತ್ತು. ಆದರೆ ಬಜರಂಗದಳ ಮತ್ತು VHP ಕುನಾಲ್ ಕಮ್ರಾರನ್ನು ಹಿಂದೂ ದೇವತೆಗಳನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ತಹಶೀಲ್ದಾರ್‌ ಮೂಲಕ ಒತ್ತಡ ತಂದಿದ್ದರೆ ಪರಿಣಾಮವಾಗಿ ಪ್ರದರ್ಶನ ರದ್ದಾಗಿದೆ.

ಈ ಕುರಿತು VHPಗೆ ಬಹಿರಂಗ ಪತ್ರ ಬರೆದಿರುವ ಕುನಾಲ್ ಕಮ್ರಾ, “ನಾನುಗಿಂತ VHPಗಿಂತ ದೊಡ್ಡ ಹಿಂದೂ. ಏಕೆಂದರೆ ನಿಮ್ಮ ರೀತಿ ಜನರಲ್ಲಿ ಭಯ ಹುಟ್ಟಿಸಿ, ಬೆದರಿಕೆ ಹಾಕಿ ಗಳಿಸಿದ ಹಣದಿಂದ ಜೀವನ ನಡೆಸುತ್ತಿಲ್ಲ” ಎಂದು ಕಿಡಿಕಾರಿದ್ದಾರೆ.

ನಾನು ಹೆಮ್ಮಯಿಂದ, ಜೋರಾಗಿ ಜೈ ಶ್ರೀ ಸೀತಾ-ರಾಮ್, ಜೈ ರಾಧ ಕೃಷ್ಣ ಎಂದು ಘೋಷಣೆ ಕೂಗುತ್ತೇನೆ. ನೀವು ನಿಜವಾದ ಭಾರತದ ಮಕ್ಕಳೆ ಆಗಿದ್ದರೆ ಗೋಡ್ಸೆ ಮುರ್ದಾಬಾದ್ ಎಂದು ಘೋಷಣೆ ಕೂಗುವಿರಾ? ಕೂಗಿದಿದ್ದರೆ ನೀವು ದೊಡ್ಡ ಹಿಂದೂ ವಿರೋಧಿಗಳು ಮತ್ತು ಭಯೋತ್ಪಾದನೆ ಬೆಂಬಲಿಗರು ಎಂದು ಕುನಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋಡ್ಸೆಯನ್ನು ದೇವರೆಂದು ಪರಿಗಣಿಸುತ್ತೀರೆಂದು ನನ್ನ ಬಳಿ ಹೇಳಬೇಡಿ. ಅದು ನಿಜವಾದರೆ ನೀವು ಮುಂದಕ್ಕೂ ನನ್ನ ಪ್ರದರ್ಶನಗಳನ್ನು ರದ್ದುಗೊಳಿಸಿ. ಈ ಪರೀಕ್ಷೆಯಲ್ಲಿ ನಾನು ಸಂತೋಷದಿಂದ ಗೆದ್ದುಬರುತ್ತೇನೆ ಮತ್ತು ನಿಮಗಿಂತ ದೊಡ್ಡ ಹಿಂದೂ ಎಂದು ನಿರೂಪಿಸುತ್ತೇನೆ. ನಾನು ಕಷ್ಟಪಟ್ಟು ಗಳಿಸಿದ ಹಣದಿಂದ ಜೀವನ ನಡೆಸುತ್ತಿದ್ದೇನೆ ಹೊರತು ನಿಮ್ಮ ರೀತಿ ಜನರನ್ನು ಹೆದರಿಸಿ, ಬೆದರಿಸಿ ಹಣ ವಸೂಲಿ ಮಾಡುತ್ತಿಲ್ಲ. ಇದೊಂದು ನಿಮ್ಮ ಕಾಯಿಲೆಯಾಗಿದೆ ಎಂದು ಅವರು ಬರೆದಿದ್ದಾರೆ.

ನನ್ನ ಇದುವರೆಗಿನ ಕಾಮಿಡಿ ಶೋಗಳಲ್ಲಿ ಹಿಂದೂ ದೇವರನ್ನು ನಿಂದಿಸಿರುವ, ಅವಹೇಳನ ಮಾಡಿರುವ ಪುರಾವೆಗಳಿದ್ದರೆ, ಆ ವಿಡಿಯೋಗಳಿದ್ದರೆ ನನಗೆ ತೋರಿಸಿ. ನಾನು ಸರ್ಕಾರಗಳನ್ನು ಅಣಕ ಮಾಡುತ್ತೇನೆ, ನೀವು ಸರ್ಕಾರದ ಚಮಚಗಳಾಗಿದ್ದರೆ ನಿಮಗೆ ನೋವಾಗುವುದಕ್ಕೆ ಅರ್ಥವಿದೆ. ಆದರೆ ಇದರಲ್ಲಿ ಹಿಂದೂ ಧರ್ಮವನ್ನು ಏಕೆ ಎಳೆದು ತರುತ್ತೀರಿ ಎಂದು ಕಮ್ರಾ ಪ್ರಶ್ನಿಸಿದ್ದಾರೆ.

ಬಾರ್ ಮಾಲೀಕರಿಗೆ ಬೆದರಿಕೆ ಹಾಕಿದ್ದಕ್ಕೆ ನನ್ನ ಪ್ರದರ್ಶನ ರದ್ದುಗೊಂಡಿದೆ. ಹಾಗಾಗಿ ನಾನು ಅವರನ್ನು ದೂಷಿಸುವುದಿಲ್ಲ. ಅವರು ತಮ್ಮ ವ್ಯವಹಾರ ಮಾಡುತ್ತಿದ್ದಾರೆ ಅಷ್ಟೆ. ಅವರು ಈ ಗೂಂಡಾಗಳೊಂದಿಗೆ ವ್ಯವಹರಿಸಲು ಸಾಧ್ಯವೇ? ಅವರು ಪೊಲೀಸರ ಬಳಿ ಸಹ ಹೋಗಲು ಸಾಧ್ಯವಿಲ್ಲ. ಒಂದು ವೇಳೆ ಹೋದರೂ ಸಹ ಪೊಲೀಸರು ದಯವಿಟ್ಟು ಪ್ರದರ್ಶನ ರದ್ದುಗೊಳಿಸಿ ಎಂದು ಮನವಿ ಮಾಡುತ್ತಾರೆ ಅಷ್ಟೆ. ಏಕೆಂದರೆ ಇಡೀ ವ್ಯವಸ್ಥೆಯ ನಿಮ್ಮ ಜೊತೆ ಇದೆ ಎಂದು VHP ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ‘ವಿಶ್ವಗುರು’ ನುಡಿಯಲ್ಲಿ ಆಗಿ ನಡೆಯಲ್ಲಿ ತಪ್ಪಬಹುದೆ?  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...