Homeಮುಖಪುಟನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ: VHP ಗೆ ಕುನಾಲ್ ಕಮ್ರಾ ಸವಾಲು

ನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ: VHP ಗೆ ಕುನಾಲ್ ಕಮ್ರಾ ಸವಾಲು

ನಾನು ಹೆಮ್ಮಯಿಂದ ಜೈ ಶ್ರೀ ಸೀತಾ-ರಾಮ್, ಜೈ ರಾಧ ಕೃಷ್ಣ ಎಂದು ಘೋಷಣೆ ಕೂಗುತ್ತೇನೆ. ನೀವು ನಿಜವಾದ ಭಾರತದ ಮಕ್ಕಳೆ ಆಗಿದ್ದರೆ ಗೋಡ್ಸೆ ಮುರ್ದಾಬಾದ್ ಎಂದು ಘೋಷಣೆ ಕೂಗುವಿರಾ?

- Advertisement -
- Advertisement -

ಹರಿಯಾಣದಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾರವರ ಪ್ರದರ್ಶನ ರದ್ದುಗೊಳಿಸಿದ VHP ವಿರುದ್ಧ ಕಡಿಕಾರಿರುವ ಅವರು ‘ನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ’ ಎಂದು ಸವಾಲು ಹಾಕಿದ್ದಾರೆ.

ಸೆಪ್ಟಂಬರ್ 17 ಮತ್ತು 18 ರಂದು ಗುರ್ಗಾವ್‌ನ ಸೆಕ್ಟರ್‌ 29ರಲ್ಲಿನ ಸ್ಟುಡಿಯೊ ಎಕ್ಸ್‌ಒ ಬಾರ್‌ನಲ್ಲಿ ಕುನಾಲ್ ಕಮ್ರಾರವರ ಪ್ರದರ್ಶನ ಏರ್ಪಡಿಸಲಾಗಿತ್ತು. ಆದರೆ ಬಜರಂಗದಳ ಮತ್ತು VHP ಕುನಾಲ್ ಕಮ್ರಾರನ್ನು ಹಿಂದೂ ದೇವತೆಗಳನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ತಹಶೀಲ್ದಾರ್‌ ಮೂಲಕ ಒತ್ತಡ ತಂದಿದ್ದರೆ ಪರಿಣಾಮವಾಗಿ ಪ್ರದರ್ಶನ ರದ್ದಾಗಿದೆ.

ಈ ಕುರಿತು VHPಗೆ ಬಹಿರಂಗ ಪತ್ರ ಬರೆದಿರುವ ಕುನಾಲ್ ಕಮ್ರಾ, “ನಾನುಗಿಂತ VHPಗಿಂತ ದೊಡ್ಡ ಹಿಂದೂ. ಏಕೆಂದರೆ ನಿಮ್ಮ ರೀತಿ ಜನರಲ್ಲಿ ಭಯ ಹುಟ್ಟಿಸಿ, ಬೆದರಿಕೆ ಹಾಕಿ ಗಳಿಸಿದ ಹಣದಿಂದ ಜೀವನ ನಡೆಸುತ್ತಿಲ್ಲ” ಎಂದು ಕಿಡಿಕಾರಿದ್ದಾರೆ.

ನಾನು ಹೆಮ್ಮಯಿಂದ, ಜೋರಾಗಿ ಜೈ ಶ್ರೀ ಸೀತಾ-ರಾಮ್, ಜೈ ರಾಧ ಕೃಷ್ಣ ಎಂದು ಘೋಷಣೆ ಕೂಗುತ್ತೇನೆ. ನೀವು ನಿಜವಾದ ಭಾರತದ ಮಕ್ಕಳೆ ಆಗಿದ್ದರೆ ಗೋಡ್ಸೆ ಮುರ್ದಾಬಾದ್ ಎಂದು ಘೋಷಣೆ ಕೂಗುವಿರಾ? ಕೂಗಿದಿದ್ದರೆ ನೀವು ದೊಡ್ಡ ಹಿಂದೂ ವಿರೋಧಿಗಳು ಮತ್ತು ಭಯೋತ್ಪಾದನೆ ಬೆಂಬಲಿಗರು ಎಂದು ಕುನಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋಡ್ಸೆಯನ್ನು ದೇವರೆಂದು ಪರಿಗಣಿಸುತ್ತೀರೆಂದು ನನ್ನ ಬಳಿ ಹೇಳಬೇಡಿ. ಅದು ನಿಜವಾದರೆ ನೀವು ಮುಂದಕ್ಕೂ ನನ್ನ ಪ್ರದರ್ಶನಗಳನ್ನು ರದ್ದುಗೊಳಿಸಿ. ಈ ಪರೀಕ್ಷೆಯಲ್ಲಿ ನಾನು ಸಂತೋಷದಿಂದ ಗೆದ್ದುಬರುತ್ತೇನೆ ಮತ್ತು ನಿಮಗಿಂತ ದೊಡ್ಡ ಹಿಂದೂ ಎಂದು ನಿರೂಪಿಸುತ್ತೇನೆ. ನಾನು ಕಷ್ಟಪಟ್ಟು ಗಳಿಸಿದ ಹಣದಿಂದ ಜೀವನ ನಡೆಸುತ್ತಿದ್ದೇನೆ ಹೊರತು ನಿಮ್ಮ ರೀತಿ ಜನರನ್ನು ಹೆದರಿಸಿ, ಬೆದರಿಸಿ ಹಣ ವಸೂಲಿ ಮಾಡುತ್ತಿಲ್ಲ. ಇದೊಂದು ನಿಮ್ಮ ಕಾಯಿಲೆಯಾಗಿದೆ ಎಂದು ಅವರು ಬರೆದಿದ್ದಾರೆ.

ನನ್ನ ಇದುವರೆಗಿನ ಕಾಮಿಡಿ ಶೋಗಳಲ್ಲಿ ಹಿಂದೂ ದೇವರನ್ನು ನಿಂದಿಸಿರುವ, ಅವಹೇಳನ ಮಾಡಿರುವ ಪುರಾವೆಗಳಿದ್ದರೆ, ಆ ವಿಡಿಯೋಗಳಿದ್ದರೆ ನನಗೆ ತೋರಿಸಿ. ನಾನು ಸರ್ಕಾರಗಳನ್ನು ಅಣಕ ಮಾಡುತ್ತೇನೆ, ನೀವು ಸರ್ಕಾರದ ಚಮಚಗಳಾಗಿದ್ದರೆ ನಿಮಗೆ ನೋವಾಗುವುದಕ್ಕೆ ಅರ್ಥವಿದೆ. ಆದರೆ ಇದರಲ್ಲಿ ಹಿಂದೂ ಧರ್ಮವನ್ನು ಏಕೆ ಎಳೆದು ತರುತ್ತೀರಿ ಎಂದು ಕಮ್ರಾ ಪ್ರಶ್ನಿಸಿದ್ದಾರೆ.

ಬಾರ್ ಮಾಲೀಕರಿಗೆ ಬೆದರಿಕೆ ಹಾಕಿದ್ದಕ್ಕೆ ನನ್ನ ಪ್ರದರ್ಶನ ರದ್ದುಗೊಂಡಿದೆ. ಹಾಗಾಗಿ ನಾನು ಅವರನ್ನು ದೂಷಿಸುವುದಿಲ್ಲ. ಅವರು ತಮ್ಮ ವ್ಯವಹಾರ ಮಾಡುತ್ತಿದ್ದಾರೆ ಅಷ್ಟೆ. ಅವರು ಈ ಗೂಂಡಾಗಳೊಂದಿಗೆ ವ್ಯವಹರಿಸಲು ಸಾಧ್ಯವೇ? ಅವರು ಪೊಲೀಸರ ಬಳಿ ಸಹ ಹೋಗಲು ಸಾಧ್ಯವಿಲ್ಲ. ಒಂದು ವೇಳೆ ಹೋದರೂ ಸಹ ಪೊಲೀಸರು ದಯವಿಟ್ಟು ಪ್ರದರ್ಶನ ರದ್ದುಗೊಳಿಸಿ ಎಂದು ಮನವಿ ಮಾಡುತ್ತಾರೆ ಅಷ್ಟೆ. ಏಕೆಂದರೆ ಇಡೀ ವ್ಯವಸ್ಥೆಯ ನಿಮ್ಮ ಜೊತೆ ಇದೆ ಎಂದು VHP ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ‘ವಿಶ್ವಗುರು’ ನುಡಿಯಲ್ಲಿ ಆಗಿ ನಡೆಯಲ್ಲಿ ತಪ್ಪಬಹುದೆ?  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...