Homeಮುಖಪುಟಕೊಲಿಜಿಯಂ ಸೂಚಿಸಿದ ನ್ಯಾಯಮೂರ್ತಿಗಳನ್ನು ಏಕೆ ನೇಮಕ ಮಾಡಿಲ್ಲ? ವಿವರಣೆ ಕೊಡಿ : ಕೇಂದ್ರಕ್ಕೆ ಸುಪ್ರೀಂ ತಾಕೀತು

ಕೊಲಿಜಿಯಂ ಸೂಚಿಸಿದ ನ್ಯಾಯಮೂರ್ತಿಗಳನ್ನು ಏಕೆ ನೇಮಕ ಮಾಡಿಲ್ಲ? ವಿವರಣೆ ಕೊಡಿ : ಕೇಂದ್ರಕ್ಕೆ ಸುಪ್ರೀಂ ತಾಕೀತು

- Advertisement -
- Advertisement -

ನ್ಯಾಯಮೂರ್ತಿಗಳ ಹುದ್ದೆಗೆ ಕೊಲಿಜಿಯಂ ಪುನರುಚ್ಚರಿಸಿದ್ದ ಹೆಸರುಗಳ ಪಟ್ಟಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಇಂದು (ಸೆ.20) ತಾಕೀತು ಮಾಡಿರುವ ಸುಪ್ರೀಂ ಕೋರ್ಟ್‌, ಆ ಹೆಸರುಗಳನ್ನು ಇನ್ನೂ ಏಕೆ ಅಂಗೀಕರಿಸಿಲ್ಲ ಎಂಬುವುದನ್ನು ವಿವರಿಸುವಂತೆಯೂ ಸೂಚಿಸಿದೆ ಎಂದು ಬಾರ್ &ಬೆಂಚ್ ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ  ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಹಾಗೂಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಎರಡು ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡಿದೆ.

ಮೊದಲನೆಯದು ನ್ಯಾ. ಎಂ ಎಸ್ ರಾಮಚಂದ್ರ ರಾವ್ ಅವರನ್ನು ಜಾರ್ಖಂಡ್ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಕೊಲಿಜಿಯಂ ಮಾಡಿದ್ದ ಶಿಫಾರಸನ್ನು ಅಂಗೀಕರಿಸದ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೋರಿ ಜಾರ್ಖಂಡ್ ಸರ್ಕಾರ ಸಲ್ಲಿಸಿದ್ದಾಗಿದೆ.

ಇನ್ನೊಂದು ಅರ್ಜಿಯನ್ನು  ಕೊಲಿಜಿಯಂ ನಿರ್ಣಯಗಳನ್ನು ಪ್ರಕ್ರಿಯೆಗೊಳಿಸಲು ಮತ್ತು ಅಂಗೀಕರಿಸಲು ನಿಗದಿತ ಗಡುವು ವಿಧಿಸುವಂತೆ ಕೋರಿ ವಕೀಲ ಹರ್ಷ್ ವಿಭೋರ್ ಸಿಂಗಲ್ ಅವರು ಸಲ್ಲಿಸಿದ್ದಾರೆ.

ಇಂದು ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾದ ವಕೀಲ ಸಿಂಗಲ್‌ ಅವರು “ಶಿಫಾರಸು ಮುಂದೂಡುವುದರಿಂದ ಕೇಂದ್ರಕ್ಕೆ ಏನು ಸಿಗುತ್ತದೆ ಎಂಬುವುದು ಅರ್ಥವಾಗುತ್ತಿಲ್ಲ ಎಂದರು.

ವಾದ ಮಂಡಿಸಿದ ಇನ್ನೋರ್ವ ವಕೀಲ ಪ್ರಶಾಂತ್‌ ಭೂಷಣ್‌ ಅವರು “ಸೌರಭ್ ಕಿರ್ಪಾಲ್ ಮುಂತಾದವರ ಹೆಸರುಗಳನ್ನು ಅಂಗೀಕರಿಸದ ಪ್ರಕರಣಗಳಿವೆ. ಕೊಲಿಜಿಯಂ ಶಿಫಾರಸುಗಳ ಬಗ್ಗೆ ವರ್ಷಗಳ ಕಾಲ ಕೇಂದ್ರ ಸರ್ಕಾರ ನಿಷ್ಕ್ರಿಯವಾಗಿರುವ ಅನೇಕ ನಿದರ್ಶನಗಳಿವೆ” ಎಂದು ಹೇಳಿದರು.

ಜಾರ್ಖಂಡ್ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್  ಅವರು, ನ್ಯಾ. ಬಿ ಆರ್‌ ಸಾರಂಗಿ ಅವರ ಹೆಸರನ್ನು ಜಾರ್ಖಂಡ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಡಿಸೆಂಬರ್ 2023ರಲ್ಲಿ ಶಿಫಾರಸು ಮಾಡಲಾಗಿತ್ತು. ಆದರೂ, ಅವರು 6 ತಿಂಗಳವರೆಗೆ ಹುದ್ದೆ ಅಲಂಕರಿಸಲು ಸಾಧ್ಯವಾಗಲಿಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಅಟಾರ್ನಿ ಜನರಲ್ (ಎಜಿ) ಆರ್‌ ವೆಂಕಟರಮಣಿ “ಇಂತಹ ಹೆಸರುಗಳು ಬಾಕಿ ಉಳಿದಿರುವುದಕ್ಕೆ ಹಲವಾರು ಕಾರಣಗಳಿವೆ ಮತ್ತು ನಮಗೆ ಯಾವುದೇ ಹಿಂಜರಿಕೆಯಿಲ್ಲ. ನ್ಯಾಯಾಲಯಕ್ಕೆ ಬಂದು (ಅರ್ಜಿದಾರರು) ಇದೆಲ್ಲವನ್ನೂ ಹೇಳುವುದು ತುಂಬಾ ಸುಲಭ” ಎಂದರು.

ಆಗ ಅಟಾರ್ನಿ ಜನರಲ್ (ಎಜಿ) ಆರ್‌ ವೆಂಕಟರಮಣಿ ಅವರನ್ನು ಉದ್ದೇಶಿಸಿ ಸಿಜೆಐ ಚಂದ್ರಚೂಡ್‌ ಅವರು, ನ್ಯಾಯಾಲಯ ಪುನರುಚ್ಚರಿಸಿದ ನ್ಯಾಯಮೂರ್ತಿಗಳ ಪಟ್ಟಿ ತಯಾರಿಸಿ ಅವರ ನೇಮಕಾತಿ ಏಕೆ ಬಾಕಿ ಉಳಿದಿದೆ ಎಂಬುದನ್ನು ತಿಳಿಸುವಂತೆ ಸೂಚಿಸಿದರು.

ಇದನ್ನೂ ಓದಿ : ನ್ಯಾಯಾಧೀಶರ ಹೇಳಿಕೆ ವೈರಲ್ : ಅನುಮತಿ ಇಲ್ಲದೆ ಕಲಾಪದ ವಿಡಿಯೋ ಬಳಕೆಗೆ ಹೈಕೋರ್ಟ್ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...