Homeಮುಖಪುಟಕೊಲಿಜಿಯಂ ಸೂಚಿಸಿದ ನ್ಯಾಯಮೂರ್ತಿಗಳನ್ನು ಏಕೆ ನೇಮಕ ಮಾಡಿಲ್ಲ? ವಿವರಣೆ ಕೊಡಿ : ಕೇಂದ್ರಕ್ಕೆ ಸುಪ್ರೀಂ ತಾಕೀತು

ಕೊಲಿಜಿಯಂ ಸೂಚಿಸಿದ ನ್ಯಾಯಮೂರ್ತಿಗಳನ್ನು ಏಕೆ ನೇಮಕ ಮಾಡಿಲ್ಲ? ವಿವರಣೆ ಕೊಡಿ : ಕೇಂದ್ರಕ್ಕೆ ಸುಪ್ರೀಂ ತಾಕೀತು

- Advertisement -
- Advertisement -

ನ್ಯಾಯಮೂರ್ತಿಗಳ ಹುದ್ದೆಗೆ ಕೊಲಿಜಿಯಂ ಪುನರುಚ್ಚರಿಸಿದ್ದ ಹೆಸರುಗಳ ಪಟ್ಟಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಇಂದು (ಸೆ.20) ತಾಕೀತು ಮಾಡಿರುವ ಸುಪ್ರೀಂ ಕೋರ್ಟ್‌, ಆ ಹೆಸರುಗಳನ್ನು ಇನ್ನೂ ಏಕೆ ಅಂಗೀಕರಿಸಿಲ್ಲ ಎಂಬುವುದನ್ನು ವಿವರಿಸುವಂತೆಯೂ ಸೂಚಿಸಿದೆ ಎಂದು ಬಾರ್ &ಬೆಂಚ್ ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ  ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಹಾಗೂಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಎರಡು ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡಿದೆ.

ಮೊದಲನೆಯದು ನ್ಯಾ. ಎಂ ಎಸ್ ರಾಮಚಂದ್ರ ರಾವ್ ಅವರನ್ನು ಜಾರ್ಖಂಡ್ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಕೊಲಿಜಿಯಂ ಮಾಡಿದ್ದ ಶಿಫಾರಸನ್ನು ಅಂಗೀಕರಿಸದ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೋರಿ ಜಾರ್ಖಂಡ್ ಸರ್ಕಾರ ಸಲ್ಲಿಸಿದ್ದಾಗಿದೆ.

ಇನ್ನೊಂದು ಅರ್ಜಿಯನ್ನು  ಕೊಲಿಜಿಯಂ ನಿರ್ಣಯಗಳನ್ನು ಪ್ರಕ್ರಿಯೆಗೊಳಿಸಲು ಮತ್ತು ಅಂಗೀಕರಿಸಲು ನಿಗದಿತ ಗಡುವು ವಿಧಿಸುವಂತೆ ಕೋರಿ ವಕೀಲ ಹರ್ಷ್ ವಿಭೋರ್ ಸಿಂಗಲ್ ಅವರು ಸಲ್ಲಿಸಿದ್ದಾರೆ.

ಇಂದು ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾದ ವಕೀಲ ಸಿಂಗಲ್‌ ಅವರು “ಶಿಫಾರಸು ಮುಂದೂಡುವುದರಿಂದ ಕೇಂದ್ರಕ್ಕೆ ಏನು ಸಿಗುತ್ತದೆ ಎಂಬುವುದು ಅರ್ಥವಾಗುತ್ತಿಲ್ಲ ಎಂದರು.

ವಾದ ಮಂಡಿಸಿದ ಇನ್ನೋರ್ವ ವಕೀಲ ಪ್ರಶಾಂತ್‌ ಭೂಷಣ್‌ ಅವರು “ಸೌರಭ್ ಕಿರ್ಪಾಲ್ ಮುಂತಾದವರ ಹೆಸರುಗಳನ್ನು ಅಂಗೀಕರಿಸದ ಪ್ರಕರಣಗಳಿವೆ. ಕೊಲಿಜಿಯಂ ಶಿಫಾರಸುಗಳ ಬಗ್ಗೆ ವರ್ಷಗಳ ಕಾಲ ಕೇಂದ್ರ ಸರ್ಕಾರ ನಿಷ್ಕ್ರಿಯವಾಗಿರುವ ಅನೇಕ ನಿದರ್ಶನಗಳಿವೆ” ಎಂದು ಹೇಳಿದರು.

ಜಾರ್ಖಂಡ್ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್  ಅವರು, ನ್ಯಾ. ಬಿ ಆರ್‌ ಸಾರಂಗಿ ಅವರ ಹೆಸರನ್ನು ಜಾರ್ಖಂಡ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಡಿಸೆಂಬರ್ 2023ರಲ್ಲಿ ಶಿಫಾರಸು ಮಾಡಲಾಗಿತ್ತು. ಆದರೂ, ಅವರು 6 ತಿಂಗಳವರೆಗೆ ಹುದ್ದೆ ಅಲಂಕರಿಸಲು ಸಾಧ್ಯವಾಗಲಿಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಅಟಾರ್ನಿ ಜನರಲ್ (ಎಜಿ) ಆರ್‌ ವೆಂಕಟರಮಣಿ “ಇಂತಹ ಹೆಸರುಗಳು ಬಾಕಿ ಉಳಿದಿರುವುದಕ್ಕೆ ಹಲವಾರು ಕಾರಣಗಳಿವೆ ಮತ್ತು ನಮಗೆ ಯಾವುದೇ ಹಿಂಜರಿಕೆಯಿಲ್ಲ. ನ್ಯಾಯಾಲಯಕ್ಕೆ ಬಂದು (ಅರ್ಜಿದಾರರು) ಇದೆಲ್ಲವನ್ನೂ ಹೇಳುವುದು ತುಂಬಾ ಸುಲಭ” ಎಂದರು.

ಆಗ ಅಟಾರ್ನಿ ಜನರಲ್ (ಎಜಿ) ಆರ್‌ ವೆಂಕಟರಮಣಿ ಅವರನ್ನು ಉದ್ದೇಶಿಸಿ ಸಿಜೆಐ ಚಂದ್ರಚೂಡ್‌ ಅವರು, ನ್ಯಾಯಾಲಯ ಪುನರುಚ್ಚರಿಸಿದ ನ್ಯಾಯಮೂರ್ತಿಗಳ ಪಟ್ಟಿ ತಯಾರಿಸಿ ಅವರ ನೇಮಕಾತಿ ಏಕೆ ಬಾಕಿ ಉಳಿದಿದೆ ಎಂಬುದನ್ನು ತಿಳಿಸುವಂತೆ ಸೂಚಿಸಿದರು.

ಇದನ್ನೂ ಓದಿ : ನ್ಯಾಯಾಧೀಶರ ಹೇಳಿಕೆ ವೈರಲ್ : ಅನುಮತಿ ಇಲ್ಲದೆ ಕಲಾಪದ ವಿಡಿಯೋ ಬಳಕೆಗೆ ಹೈಕೋರ್ಟ್ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...