Homeಮುಖಪುಟಕೊಲಿಜಿಯಂ ಸೂಚಿಸಿದ ನ್ಯಾಯಮೂರ್ತಿಗಳನ್ನು ಏಕೆ ನೇಮಕ ಮಾಡಿಲ್ಲ? ವಿವರಣೆ ಕೊಡಿ : ಕೇಂದ್ರಕ್ಕೆ ಸುಪ್ರೀಂ ತಾಕೀತು

ಕೊಲಿಜಿಯಂ ಸೂಚಿಸಿದ ನ್ಯಾಯಮೂರ್ತಿಗಳನ್ನು ಏಕೆ ನೇಮಕ ಮಾಡಿಲ್ಲ? ವಿವರಣೆ ಕೊಡಿ : ಕೇಂದ್ರಕ್ಕೆ ಸುಪ್ರೀಂ ತಾಕೀತು

- Advertisement -
- Advertisement -

ನ್ಯಾಯಮೂರ್ತಿಗಳ ಹುದ್ದೆಗೆ ಕೊಲಿಜಿಯಂ ಪುನರುಚ್ಚರಿಸಿದ್ದ ಹೆಸರುಗಳ ಪಟ್ಟಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಇಂದು (ಸೆ.20) ತಾಕೀತು ಮಾಡಿರುವ ಸುಪ್ರೀಂ ಕೋರ್ಟ್‌, ಆ ಹೆಸರುಗಳನ್ನು ಇನ್ನೂ ಏಕೆ ಅಂಗೀಕರಿಸಿಲ್ಲ ಎಂಬುವುದನ್ನು ವಿವರಿಸುವಂತೆಯೂ ಸೂಚಿಸಿದೆ ಎಂದು ಬಾರ್ &ಬೆಂಚ್ ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ  ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಹಾಗೂಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಎರಡು ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡಿದೆ.

ಮೊದಲನೆಯದು ನ್ಯಾ. ಎಂ ಎಸ್ ರಾಮಚಂದ್ರ ರಾವ್ ಅವರನ್ನು ಜಾರ್ಖಂಡ್ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಕೊಲಿಜಿಯಂ ಮಾಡಿದ್ದ ಶಿಫಾರಸನ್ನು ಅಂಗೀಕರಿಸದ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೋರಿ ಜಾರ್ಖಂಡ್ ಸರ್ಕಾರ ಸಲ್ಲಿಸಿದ್ದಾಗಿದೆ.

ಇನ್ನೊಂದು ಅರ್ಜಿಯನ್ನು  ಕೊಲಿಜಿಯಂ ನಿರ್ಣಯಗಳನ್ನು ಪ್ರಕ್ರಿಯೆಗೊಳಿಸಲು ಮತ್ತು ಅಂಗೀಕರಿಸಲು ನಿಗದಿತ ಗಡುವು ವಿಧಿಸುವಂತೆ ಕೋರಿ ವಕೀಲ ಹರ್ಷ್ ವಿಭೋರ್ ಸಿಂಗಲ್ ಅವರು ಸಲ್ಲಿಸಿದ್ದಾರೆ.

ಇಂದು ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾದ ವಕೀಲ ಸಿಂಗಲ್‌ ಅವರು “ಶಿಫಾರಸು ಮುಂದೂಡುವುದರಿಂದ ಕೇಂದ್ರಕ್ಕೆ ಏನು ಸಿಗುತ್ತದೆ ಎಂಬುವುದು ಅರ್ಥವಾಗುತ್ತಿಲ್ಲ ಎಂದರು.

ವಾದ ಮಂಡಿಸಿದ ಇನ್ನೋರ್ವ ವಕೀಲ ಪ್ರಶಾಂತ್‌ ಭೂಷಣ್‌ ಅವರು “ಸೌರಭ್ ಕಿರ್ಪಾಲ್ ಮುಂತಾದವರ ಹೆಸರುಗಳನ್ನು ಅಂಗೀಕರಿಸದ ಪ್ರಕರಣಗಳಿವೆ. ಕೊಲಿಜಿಯಂ ಶಿಫಾರಸುಗಳ ಬಗ್ಗೆ ವರ್ಷಗಳ ಕಾಲ ಕೇಂದ್ರ ಸರ್ಕಾರ ನಿಷ್ಕ್ರಿಯವಾಗಿರುವ ಅನೇಕ ನಿದರ್ಶನಗಳಿವೆ” ಎಂದು ಹೇಳಿದರು.

ಜಾರ್ಖಂಡ್ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್  ಅವರು, ನ್ಯಾ. ಬಿ ಆರ್‌ ಸಾರಂಗಿ ಅವರ ಹೆಸರನ್ನು ಜಾರ್ಖಂಡ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಡಿಸೆಂಬರ್ 2023ರಲ್ಲಿ ಶಿಫಾರಸು ಮಾಡಲಾಗಿತ್ತು. ಆದರೂ, ಅವರು 6 ತಿಂಗಳವರೆಗೆ ಹುದ್ದೆ ಅಲಂಕರಿಸಲು ಸಾಧ್ಯವಾಗಲಿಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಅಟಾರ್ನಿ ಜನರಲ್ (ಎಜಿ) ಆರ್‌ ವೆಂಕಟರಮಣಿ “ಇಂತಹ ಹೆಸರುಗಳು ಬಾಕಿ ಉಳಿದಿರುವುದಕ್ಕೆ ಹಲವಾರು ಕಾರಣಗಳಿವೆ ಮತ್ತು ನಮಗೆ ಯಾವುದೇ ಹಿಂಜರಿಕೆಯಿಲ್ಲ. ನ್ಯಾಯಾಲಯಕ್ಕೆ ಬಂದು (ಅರ್ಜಿದಾರರು) ಇದೆಲ್ಲವನ್ನೂ ಹೇಳುವುದು ತುಂಬಾ ಸುಲಭ” ಎಂದರು.

ಆಗ ಅಟಾರ್ನಿ ಜನರಲ್ (ಎಜಿ) ಆರ್‌ ವೆಂಕಟರಮಣಿ ಅವರನ್ನು ಉದ್ದೇಶಿಸಿ ಸಿಜೆಐ ಚಂದ್ರಚೂಡ್‌ ಅವರು, ನ್ಯಾಯಾಲಯ ಪುನರುಚ್ಚರಿಸಿದ ನ್ಯಾಯಮೂರ್ತಿಗಳ ಪಟ್ಟಿ ತಯಾರಿಸಿ ಅವರ ನೇಮಕಾತಿ ಏಕೆ ಬಾಕಿ ಉಳಿದಿದೆ ಎಂಬುದನ್ನು ತಿಳಿಸುವಂತೆ ಸೂಚಿಸಿದರು.

ಇದನ್ನೂ ಓದಿ : ನ್ಯಾಯಾಧೀಶರ ಹೇಳಿಕೆ ವೈರಲ್ : ಅನುಮತಿ ಇಲ್ಲದೆ ಕಲಾಪದ ವಿಡಿಯೋ ಬಳಕೆಗೆ ಹೈಕೋರ್ಟ್ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....