Homeಮುಖಪುಟ2017ರ ಗೂಗಲ್ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿಕೆ: ಸಿಕ್ಕಿಬಿದ್ದ ಸಂಸದ ಪ್ರತಾಪ್ ಸಿಂಹ

2017ರ ಗೂಗಲ್ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿಕೆ: ಸಿಕ್ಕಿಬಿದ್ದ ಸಂಸದ ಪ್ರತಾಪ್ ಸಿಂಹ

- Advertisement -
- Advertisement -

ಬೆಂಗಳೂರು-ಮೈಸೂರು ದಶಪಥ ರಸ್ತೆ ನಿರ್ಮಾಣದ ಕ್ರೆಡಿಟ್ ಪಡೆಯಲು ಹರಸಾಹಸ ಪಡುತ್ತಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹರವರು 2017ರಲ್ಲಿ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಬೆಂಗಳೂರು–ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯನ್ನು ಉದ್ಘಾಟನೆ ಮಾಡಿದರು. ಆದರೆ ಉದ್ಘಾಟನೆಯಾದ ಮರುದಿನವೇ ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಬಿಡದಿ ಬೈಪಾಸ್‌ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ರಸ್ತೆಯ ಟಾರ್ ಕಿತ್ತು ಬಂದಿದೆ. ಸದ್ಯ ದುರಸ್ತಿ ಕಾರ್ಯ ನಡೆಯುತ್ತಿದ್ದು, ಅರ್ಧಭಾಗದಲ್ಲಿ ವಾಹನಗಳು ಓಡಾಟದಂತೆ ಬ್ಯಾರಿಕೇಡ್‌ ಹಾಕಲಾಗಿದೆ. ಈ ಕುರಿತು ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ ರಸ್ತೆ ಕಿತ್ತು ಬಂದಿಲ್ಲ ಎಂದು ವಾದ ಮಾಡಿದ್ದ ಪ್ರತಾಪ್ ಸಿಂಹರವರು, “ಮಾಧ್ಯಮಗಳೇ, ರಸ್ತೆ ಕಿತ್ತು ಬಂದಿಲ್ಲ, Expansion joint ಬಳಿ ಇದ್ದ ಸಣ್ಣ ನ್ಯೂನ್ಯತೆಯನ್ನು ಅನ್ನು ಸರಿಪಡಿಸಲಾಗುತ್ತಿದೆ” ಎಂದು ಟ್ವೀಟ್ ಮಾಡಿದ್ದರು. ಅದರೊಟ್ಟಿಗೆ ರಸ್ತೆ ಕಿತ್ತುಬಂದಿರುವುದರ ಕುರಿತ ಪ್ರಜಾವಾಣಿ ಪತ್ರಿಕೆ ವರದಿಯ ಫೋಟೊ ಮತ್ತು ಬೆಂಗಳೂರು ಮೈಸೂರು ಹೆದ್ದಾರಿಯ Expansion joint ಎಂದು ಮತ್ತೊಂದು ಫೋಟೊವನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ಆ ಮೂಲಕ ರಸ್ತೆ ಕಿತ್ತು ಬಂದಿರುವ ಆರೋಪವನ್ನು ನಿರಾಕರಿಸಿದ್ದರು.

ಆದರೆ ಸಂಸದ ಪ್ರತಾಪ್ ಸಿಂಹರವರು ಬೇರೆ ಫೋಟೊ ತೋರಿಸಿ, ರಸ್ತೆ ಸರಿಯಾಗಿತ್ತು ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಹಲವು ಪ್ರಜ್ಞಾವಂತರು ಮತ್ತು ಕಾಂಗ್ರೆಸ್ ಪಕ್ಷ ಆರೋಪಿಸಿತ್ತು. ಈ ಕುರಿತು ಒಂದಷ್ಟು ಸಂಶೋಧನೆ ನಡೆಸಿದಾಗ ಪ್ರತಾಪ್ ಸಿಂಹರವರು ಹಂಚಿಕೊಂಡಿರುವ ಫೋಟೊ ಅಕ್ಟೋಬರ್ 05, 2017ರಲ್ಲಿಯೇ C for Civil ಎಂಬ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡಿರುವುದು ಕಂಡುಬಂದಿದೆ. ಅದರ ಸ್ಕ್ರೀನ್ ಶಾಟ್ ಅನ್ನು ಈ ಕೆಳಗೆ ನೋಡಬಹುದು.

 

ಪ್ರತಾಪ್ ಸಿಂಹರವರು ಹಂಚಿಕೊಂಡಿರುವ ಹಳೆಯ ಫೋಟೊದಲ್ಲಿನ ರಸ್ತೆ ಬದಿಯ ಡಿವೈಡರ್‌ಗೆ ಹಳದಿ – ಕಪ್ಪು ಬಣ್ಣ ಬಳಿಯಲಾಗಿದೆ. ಆದರೆ ಸದ್ಯ ಕಿತ್ತು ಹೋಗಿರುವ ಬೆಂಗಳೂರು ಮೈಸೂರು ರಸ್ತೆ ಬದಿಯ ಡಿವೈಡರ್‌ಗೆ ಬಿಳಿ ಮತ್ತು ಕಪ್ಪು ಬಣ್ಣ ಬಳಿಯಲಾಗಿದೆ. ಅಂದರೆ ಸಂಸದರು ತಮ್ಮ ಹುಳುಕು ಮುಚ್ಚಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ ಹಲವು ಪ್ರಜ್ಞಾವಂತರು ಆರೋಪಿಸಿದ್ದಾರೆ.

ಪ್ರತಾಪೂ ಏನು ಮಾಡಿದಾನೆ …. ಗೂಗಲ್ ಗೆ ಹೋಗಿ ಜಾಯಿಂಟ್ ಅಂತ ಏನೋ ಸರ್ಚ ಮಾಡಿದಾನೆ… ಈ ಪೋಟೋ ಸಿಕ್ಕಿದೆ…. ಈ ಪೋಟೋ ಎತ್ತಿಕೊಂಡು ಮೈಸೂರು ಬೆಂಗಳೂರು ರೋಡ್ ರಿಪೇರಿ ಇಸ್ಟೆ ಅಂತ ಬಳಾಂಗ್ ಶುರು ಮಾಡಿದ್ದಾನೆ ಪ್ರೆಂಡ್ಸ… ಎಂದು ಸಾಮಾಜಿಕ ಕಾರ್ಯಕರ್ತರಾದ ನಾಗೇಗೌಡ ಕೀಲಾರ ಶಿವಲಿಂಗಯ್ಯನವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಪ್ರತಾಪ್ ಸಿಂಹಣ್ಣ ಬಳಸಿರೋ ಫೋಟೋ ಸುಮಾರು ಐದು ವರ್ಷಗಳ ಹಿಂದಿನದ್ದು, C for Civil ಅನ್ನೋ ಒಂದು ವೆಬ್ಸೈಟ್ನಲ್ಲಿ ಬಂದ ಫೋಟೋವನ್ನ ಕದ್ದು ರಸ್ತೆ ಸರಿಮಾಡಿಸಲಾಗುತ್ತಿದೆ ಎಂದು ಪುಂಗುತ್ತಿದ್ದಾನೆ.
ನ್ಯೂಸ್ ಲಿಂಕ್ ಸಹ ಕಾಮೆಂಟ್ ಬಾಕ್ಸಿನಲ್ಲಿದೆ. ಡೇಟ್ ಸಮೇತ ನೋಡಿಕೊಂಡು ಬರಬ‌ಹುದು ಎಂದು ಜ್ಞಾನಿ ತಾವರೆಕೆರೆಯವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.
ಇನ್ನು ಪ್ರತಾಪ್ ಸಿಂಹರವರು ಬೆಳಿಗ್ಗೆ 10.13 ಗಂಟೆ ಸಮಯದಲ್ಲಿ ಮಾಡಿದ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಮಧ್ಯಾಹ್ನ 1.35 ಕ್ಕೆ ರಿಪ್ಲೈ ಮಾಡಿರುವ ಅವರು, ಅದು ರೆಪ್ರೆಸೆಂಟ್ ಪಿಕ್ ಆಗಿದ್ದು, Expansion joint ಕೆಲಸ ಹೇಗೆ ನಡೆಯುತ್ತೆ ಅಂತ ತೋರಿಸಲು ಆ ಚಿತ್ರ ಬಳಸಿದ್ದೇವೆ ಎಂದು ನುಣುಚಿಕೊಳ್ಳಲು ಯತ್ನಿಸಿದ್ದಾರೆ.
https://twitter.com/mepratap/status/1635915157518909441?t=zIFxqmnaxCH4KddexvMtEg&s=19

ಎಷ್ಟು ಸುಲಭವಾಗಿ ಸಂಸದರು ಸುಳ್ಳು ಹೇಳ್ತಿದ್ದಾರೆ.
ಮೊದಲ ಫೋಟೋದಲ್ಲಿ ರಸ್ತೆಯ ಬದಿಯಲ್ಲಿ ಹಳದಿ, ಕಪ್ಪು ಬಣ್ಣವೇ ಇಲ್ಲ.
ಎರಡನೆಯ ಫೋಟೋದಲ್ಲಿ ಹಳದಿ, ಕಪ್ಪು ಬಣ್ಣ ಇದೆ.
ಎಷ್ಟು ಚನ್ನಾಗಿ ಒಂದಕ್ಕೊಂದು ಸಂಬಂಧವೇ ಇಲ್ಲದ ಬೇರೆ ಬೇರೆ ಫೋಟೋಗಳನ್ನ ತೋರಿಸಿ ಜನರನ್ನ ಮಂಗ ಮಾಡ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರಾದ ಶರತ್ ಚಂದ್ರರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕರ್ನಾಟಕ ಕಾಂಗ್ರೆಸ್ ಸಹ ಕಿಡಿಕಾರಿದೆ. “ಮಾನ್ಯ ಸಂಸದರೇ, ಯಾರ ಕಿವ ಮೇಲೆ ಹೂವ ಇಡ್ತೀದಿರಿ? ಒಂದರಲ್ಲಿ ಹಳದಿ ಪಟ್ಟಿ, ಮತ್ತೊಂದರಲ್ಲಿ ಬಿಳಿ ಪಟ್ಟಿ, ಜನರ ದಿಕ್ಕು ತಪ್ಪಿಸುವುದಕ್ಕೂ ಮಿತಿ ಬೇಡವೇ? ಅಂದಹಾಗೆ
◆ನ್ಯೂನ್ಯತೆಗಳಿರುವ ರಸ್ತೆಯನ್ನು ತುರತುರಿಯಲ್ಲಿ ಉದ್ಘಾಟಿಸಿದ್ದೇಕೆ?
◆ಇಂತಹ ಹಲವು ನ್ಯೂನ್ಯತೆಗಳಿಗೆ 80 ಅಪಘಾತಗಳಾದವೇ?
◆ನ್ಯೂನ್ಯತೆಯ ರಸ್ತೆಗೆ ಜನ ಟೋಲ್ ನೀಡಬೇಕೆ?” ಎಂದು ಟ್ವೀಟ್ ಮೂಲಕ ಪ್ರಶ್ನಿಸಿದೆ.

ಒಟ್ಟಿನಲ್ಲಿ ಬೆಂಗಳೂರು-ಮೈಸೂರು ದಶಪಥ ರಸ್ತೆ ನಿರ್ಮಾಣದ ಕ್ರೆಡಿಟ್ ಪಡೆಯಲು ಬಿಜೆಪಿ ಸರ್ಕಾರ ಮತ್ತು ಸಂಸದ ಪ್ರತಾಪ್ ಸಿಂಹರವರು ಹಲವಾರು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಪ್ರತಾಪ್ ಸಿಂಹರವರಂತೂ ವಾರಕ್ಕೊಮ್ಮೆಯಾದರೂ ಫೇಸ್‌ಬುಕ್ ಲೈವ್ ಬಂದು ಕಾಮಗಾರಿ ಕುರಿತು ಮಾತನಾಡುತ್ತಿದ್ದರು. ಆದರೆ ಕಳಪೆ ಮತ್ತು ಅವೈಜ್ಞಾನಿಕವಾಗಿ ರಸ್ತೆ ನಿರ್ಮಿಸಲಾಗಿದೆ, ಕಮಿಷನ್ ಹೊಡೆಯಲಾಗಿದೆ, ಅಧಿಕ ಟೋಲ್ ಮೂಲಕ ಲೂಟಿ ಮಾಡಲಾಗುತ್ತಿದೆ ಎಂಬ ಆರೋಪಗಳು ಪ್ರತಿನಿತ್ಯ ಕೇಳಿ ಬರುತ್ತಿವೆ. ಈಗಾಗಲೇ 80ಕ್ಕೆ ಹೆಚ್ಚು ಅಪಘಾತಗಳು ಸಂಭವಿಸಿದ್ದು ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದರ ಕ್ರೆಡಿಟ್ ಸಹ ಬಿಜೆಪಿಯವರಿಗೆ ಸಲ್ಲಬೇಕೆಲ್ಲವೆ ಎಂಬ ಆಕ್ರೋಶ ಸಹ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...