Homeಮುಖಪುಟ2017ರ ಗೂಗಲ್ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿಕೆ: ಸಿಕ್ಕಿಬಿದ್ದ ಸಂಸದ ಪ್ರತಾಪ್ ಸಿಂಹ

2017ರ ಗೂಗಲ್ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿಕೆ: ಸಿಕ್ಕಿಬಿದ್ದ ಸಂಸದ ಪ್ರತಾಪ್ ಸಿಂಹ

- Advertisement -
- Advertisement -

ಬೆಂಗಳೂರು-ಮೈಸೂರು ದಶಪಥ ರಸ್ತೆ ನಿರ್ಮಾಣದ ಕ್ರೆಡಿಟ್ ಪಡೆಯಲು ಹರಸಾಹಸ ಪಡುತ್ತಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹರವರು 2017ರಲ್ಲಿ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಬೆಂಗಳೂರು–ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯನ್ನು ಉದ್ಘಾಟನೆ ಮಾಡಿದರು. ಆದರೆ ಉದ್ಘಾಟನೆಯಾದ ಮರುದಿನವೇ ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಬಿಡದಿ ಬೈಪಾಸ್‌ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ರಸ್ತೆಯ ಟಾರ್ ಕಿತ್ತು ಬಂದಿದೆ. ಸದ್ಯ ದುರಸ್ತಿ ಕಾರ್ಯ ನಡೆಯುತ್ತಿದ್ದು, ಅರ್ಧಭಾಗದಲ್ಲಿ ವಾಹನಗಳು ಓಡಾಟದಂತೆ ಬ್ಯಾರಿಕೇಡ್‌ ಹಾಕಲಾಗಿದೆ. ಈ ಕುರಿತು ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ ರಸ್ತೆ ಕಿತ್ತು ಬಂದಿಲ್ಲ ಎಂದು ವಾದ ಮಾಡಿದ್ದ ಪ್ರತಾಪ್ ಸಿಂಹರವರು, “ಮಾಧ್ಯಮಗಳೇ, ರಸ್ತೆ ಕಿತ್ತು ಬಂದಿಲ್ಲ, Expansion joint ಬಳಿ ಇದ್ದ ಸಣ್ಣ ನ್ಯೂನ್ಯತೆಯನ್ನು ಅನ್ನು ಸರಿಪಡಿಸಲಾಗುತ್ತಿದೆ” ಎಂದು ಟ್ವೀಟ್ ಮಾಡಿದ್ದರು. ಅದರೊಟ್ಟಿಗೆ ರಸ್ತೆ ಕಿತ್ತುಬಂದಿರುವುದರ ಕುರಿತ ಪ್ರಜಾವಾಣಿ ಪತ್ರಿಕೆ ವರದಿಯ ಫೋಟೊ ಮತ್ತು ಬೆಂಗಳೂರು ಮೈಸೂರು ಹೆದ್ದಾರಿಯ Expansion joint ಎಂದು ಮತ್ತೊಂದು ಫೋಟೊವನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ಆ ಮೂಲಕ ರಸ್ತೆ ಕಿತ್ತು ಬಂದಿರುವ ಆರೋಪವನ್ನು ನಿರಾಕರಿಸಿದ್ದರು.

ಆದರೆ ಸಂಸದ ಪ್ರತಾಪ್ ಸಿಂಹರವರು ಬೇರೆ ಫೋಟೊ ತೋರಿಸಿ, ರಸ್ತೆ ಸರಿಯಾಗಿತ್ತು ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಹಲವು ಪ್ರಜ್ಞಾವಂತರು ಮತ್ತು ಕಾಂಗ್ರೆಸ್ ಪಕ್ಷ ಆರೋಪಿಸಿತ್ತು. ಈ ಕುರಿತು ಒಂದಷ್ಟು ಸಂಶೋಧನೆ ನಡೆಸಿದಾಗ ಪ್ರತಾಪ್ ಸಿಂಹರವರು ಹಂಚಿಕೊಂಡಿರುವ ಫೋಟೊ ಅಕ್ಟೋಬರ್ 05, 2017ರಲ್ಲಿಯೇ C for Civil ಎಂಬ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡಿರುವುದು ಕಂಡುಬಂದಿದೆ. ಅದರ ಸ್ಕ್ರೀನ್ ಶಾಟ್ ಅನ್ನು ಈ ಕೆಳಗೆ ನೋಡಬಹುದು.

 

ಪ್ರತಾಪ್ ಸಿಂಹರವರು ಹಂಚಿಕೊಂಡಿರುವ ಹಳೆಯ ಫೋಟೊದಲ್ಲಿನ ರಸ್ತೆ ಬದಿಯ ಡಿವೈಡರ್‌ಗೆ ಹಳದಿ – ಕಪ್ಪು ಬಣ್ಣ ಬಳಿಯಲಾಗಿದೆ. ಆದರೆ ಸದ್ಯ ಕಿತ್ತು ಹೋಗಿರುವ ಬೆಂಗಳೂರು ಮೈಸೂರು ರಸ್ತೆ ಬದಿಯ ಡಿವೈಡರ್‌ಗೆ ಬಿಳಿ ಮತ್ತು ಕಪ್ಪು ಬಣ್ಣ ಬಳಿಯಲಾಗಿದೆ. ಅಂದರೆ ಸಂಸದರು ತಮ್ಮ ಹುಳುಕು ಮುಚ್ಚಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ ಹಲವು ಪ್ರಜ್ಞಾವಂತರು ಆರೋಪಿಸಿದ್ದಾರೆ.

ಪ್ರತಾಪೂ ಏನು ಮಾಡಿದಾನೆ …. ಗೂಗಲ್ ಗೆ ಹೋಗಿ ಜಾಯಿಂಟ್ ಅಂತ ಏನೋ ಸರ್ಚ ಮಾಡಿದಾನೆ… ಈ ಪೋಟೋ ಸಿಕ್ಕಿದೆ…. ಈ ಪೋಟೋ ಎತ್ತಿಕೊಂಡು ಮೈಸೂರು ಬೆಂಗಳೂರು ರೋಡ್ ರಿಪೇರಿ ಇಸ್ಟೆ ಅಂತ ಬಳಾಂಗ್ ಶುರು ಮಾಡಿದ್ದಾನೆ ಪ್ರೆಂಡ್ಸ… ಎಂದು ಸಾಮಾಜಿಕ ಕಾರ್ಯಕರ್ತರಾದ ನಾಗೇಗೌಡ ಕೀಲಾರ ಶಿವಲಿಂಗಯ್ಯನವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಪ್ರತಾಪ್ ಸಿಂಹಣ್ಣ ಬಳಸಿರೋ ಫೋಟೋ ಸುಮಾರು ಐದು ವರ್ಷಗಳ ಹಿಂದಿನದ್ದು, C for Civil ಅನ್ನೋ ಒಂದು ವೆಬ್ಸೈಟ್ನಲ್ಲಿ ಬಂದ ಫೋಟೋವನ್ನ ಕದ್ದು ರಸ್ತೆ ಸರಿಮಾಡಿಸಲಾಗುತ್ತಿದೆ ಎಂದು ಪುಂಗುತ್ತಿದ್ದಾನೆ.
ನ್ಯೂಸ್ ಲಿಂಕ್ ಸಹ ಕಾಮೆಂಟ್ ಬಾಕ್ಸಿನಲ್ಲಿದೆ. ಡೇಟ್ ಸಮೇತ ನೋಡಿಕೊಂಡು ಬರಬ‌ಹುದು ಎಂದು ಜ್ಞಾನಿ ತಾವರೆಕೆರೆಯವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.
ಇನ್ನು ಪ್ರತಾಪ್ ಸಿಂಹರವರು ಬೆಳಿಗ್ಗೆ 10.13 ಗಂಟೆ ಸಮಯದಲ್ಲಿ ಮಾಡಿದ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಮಧ್ಯಾಹ್ನ 1.35 ಕ್ಕೆ ರಿಪ್ಲೈ ಮಾಡಿರುವ ಅವರು, ಅದು ರೆಪ್ರೆಸೆಂಟ್ ಪಿಕ್ ಆಗಿದ್ದು, Expansion joint ಕೆಲಸ ಹೇಗೆ ನಡೆಯುತ್ತೆ ಅಂತ ತೋರಿಸಲು ಆ ಚಿತ್ರ ಬಳಸಿದ್ದೇವೆ ಎಂದು ನುಣುಚಿಕೊಳ್ಳಲು ಯತ್ನಿಸಿದ್ದಾರೆ.
https://twitter.com/mepratap/status/1635915157518909441?t=zIFxqmnaxCH4KddexvMtEg&s=19

ಎಷ್ಟು ಸುಲಭವಾಗಿ ಸಂಸದರು ಸುಳ್ಳು ಹೇಳ್ತಿದ್ದಾರೆ.
ಮೊದಲ ಫೋಟೋದಲ್ಲಿ ರಸ್ತೆಯ ಬದಿಯಲ್ಲಿ ಹಳದಿ, ಕಪ್ಪು ಬಣ್ಣವೇ ಇಲ್ಲ.
ಎರಡನೆಯ ಫೋಟೋದಲ್ಲಿ ಹಳದಿ, ಕಪ್ಪು ಬಣ್ಣ ಇದೆ.
ಎಷ್ಟು ಚನ್ನಾಗಿ ಒಂದಕ್ಕೊಂದು ಸಂಬಂಧವೇ ಇಲ್ಲದ ಬೇರೆ ಬೇರೆ ಫೋಟೋಗಳನ್ನ ತೋರಿಸಿ ಜನರನ್ನ ಮಂಗ ಮಾಡ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರಾದ ಶರತ್ ಚಂದ್ರರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕರ್ನಾಟಕ ಕಾಂಗ್ರೆಸ್ ಸಹ ಕಿಡಿಕಾರಿದೆ. “ಮಾನ್ಯ ಸಂಸದರೇ, ಯಾರ ಕಿವ ಮೇಲೆ ಹೂವ ಇಡ್ತೀದಿರಿ? ಒಂದರಲ್ಲಿ ಹಳದಿ ಪಟ್ಟಿ, ಮತ್ತೊಂದರಲ್ಲಿ ಬಿಳಿ ಪಟ್ಟಿ, ಜನರ ದಿಕ್ಕು ತಪ್ಪಿಸುವುದಕ್ಕೂ ಮಿತಿ ಬೇಡವೇ? ಅಂದಹಾಗೆ
◆ನ್ಯೂನ್ಯತೆಗಳಿರುವ ರಸ್ತೆಯನ್ನು ತುರತುರಿಯಲ್ಲಿ ಉದ್ಘಾಟಿಸಿದ್ದೇಕೆ?
◆ಇಂತಹ ಹಲವು ನ್ಯೂನ್ಯತೆಗಳಿಗೆ 80 ಅಪಘಾತಗಳಾದವೇ?
◆ನ್ಯೂನ್ಯತೆಯ ರಸ್ತೆಗೆ ಜನ ಟೋಲ್ ನೀಡಬೇಕೆ?” ಎಂದು ಟ್ವೀಟ್ ಮೂಲಕ ಪ್ರಶ್ನಿಸಿದೆ.

ಒಟ್ಟಿನಲ್ಲಿ ಬೆಂಗಳೂರು-ಮೈಸೂರು ದಶಪಥ ರಸ್ತೆ ನಿರ್ಮಾಣದ ಕ್ರೆಡಿಟ್ ಪಡೆಯಲು ಬಿಜೆಪಿ ಸರ್ಕಾರ ಮತ್ತು ಸಂಸದ ಪ್ರತಾಪ್ ಸಿಂಹರವರು ಹಲವಾರು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಪ್ರತಾಪ್ ಸಿಂಹರವರಂತೂ ವಾರಕ್ಕೊಮ್ಮೆಯಾದರೂ ಫೇಸ್‌ಬುಕ್ ಲೈವ್ ಬಂದು ಕಾಮಗಾರಿ ಕುರಿತು ಮಾತನಾಡುತ್ತಿದ್ದರು. ಆದರೆ ಕಳಪೆ ಮತ್ತು ಅವೈಜ್ಞಾನಿಕವಾಗಿ ರಸ್ತೆ ನಿರ್ಮಿಸಲಾಗಿದೆ, ಕಮಿಷನ್ ಹೊಡೆಯಲಾಗಿದೆ, ಅಧಿಕ ಟೋಲ್ ಮೂಲಕ ಲೂಟಿ ಮಾಡಲಾಗುತ್ತಿದೆ ಎಂಬ ಆರೋಪಗಳು ಪ್ರತಿನಿತ್ಯ ಕೇಳಿ ಬರುತ್ತಿವೆ. ಈಗಾಗಲೇ 80ಕ್ಕೆ ಹೆಚ್ಚು ಅಪಘಾತಗಳು ಸಂಭವಿಸಿದ್ದು ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದರ ಕ್ರೆಡಿಟ್ ಸಹ ಬಿಜೆಪಿಯವರಿಗೆ ಸಲ್ಲಬೇಕೆಲ್ಲವೆ ಎಂಬ ಆಕ್ರೋಶ ಸಹ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...