Homeಮುಖಪುಟ‘ಅಫ್ತಾಬ್‌ ಕೊಲೆ ಬೆದರಿಕೆ ಹಾಕಿದ್ದಾನೆಂದು ಶ್ರದ್ಧಾ 2 ವರ್ಷಗಳ ಹಿಂದೆಯೇ ಪೊಲೀಸರಿಗೆ ದೂರು ನೀಡಿದ್ದರು’

‘ಅಫ್ತಾಬ್‌ ಕೊಲೆ ಬೆದರಿಕೆ ಹಾಕಿದ್ದಾನೆಂದು ಶ್ರದ್ಧಾ 2 ವರ್ಷಗಳ ಹಿಂದೆಯೇ ಪೊಲೀಸರಿಗೆ ದೂರು ನೀಡಿದ್ದರು’

- Advertisement -
- Advertisement -

ಹೊಸದಿಲ್ಲಿ: ತನ್ನ ಪ್ರಿಯಕರ ಅಫ್ತಾಬ್ ಪೂನಾವಾಲಾನಿಂದ ಕೊಲೆಯಾದ ಶ್ರದ್ಧಾ ವಾಕರ್ ಎರಡು ವರ್ಷಗಳ ಹಿಂದೆಯೇ ತನಗಿರುವ ಕೊಲೆ ಬೆದರಿಕೆಯ ಕುರಿತು ದೂರು ನೀಡಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ.

“ನಿನ್ನನ್ನು ಕೊಂದು ಹಾಕುತ್ತೇನೆ, ಕತ್ತರಿಸಿ ಹಾಕುತ್ತೇನೆ” ಎಂದು ಅಫ್ತಾಬ್‌ ಎಚ್ಚರಿಸಿದ್ದ ಎಂದು ಶ್ರದ್ಧಾ ವಾಕರ್‌, ನವೆಂಬರ್ 23, 2020ರಂದು ತನ್ನ ತವರೂರಾದ ವಸಾಯಿಯಲ್ಲಿರುವ ತಿಲುಂಜ್‌ನಲ್ಲಿ ಪೊಲೀಸರಿಗೆ ದೂರು ನೀಡಿದ್ದರು ಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ.

“ಇಂದು ಅವನು ನನ್ನನ್ನು ಉಸಿರುಗಟ್ಟಿಸಿ ಕೊಲ್ಲಲು ಪ್ರಯತ್ನಿಸಿದನು. ಅವನು ನನ್ನನ್ನು ಹೆದರಿಸಿದನು. ನಿನ್ನನ್ನು ಕೊಲ್ಲುತ್ತೇನೆ, ತುಂಡುಗಳಾಗಿ ಕತ್ತರಿಸಿ ಎಸೆಯುತ್ತೇನೆ ಎಂದು ನನಗೆ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ. ಅವನು ನನ್ನನ್ನು ಆರು ತಿಂಗಳಿಂದ ಹೊಡೆದಿದ್ದಾರೆ. ಆದರೆ ಪೊಲೀಸರ ಬಳಿ ಹೋಗಲು ಧೈರ್ಯವಿರಲಿಲ್ಲ. ಏಕೆಂದರೆ ಅವನು ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದಾನೆ” ಎಂಬುದು ವಾಕರ್ ಅವರ ಪತ್ರದಲ್ಲಿ ದಾಖಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೂನಾವಾಲಾ ಜೊತೆಯಲ್ಲಿ ಇನ್ನು ಮುಂದೆ ಬದುಕಲು ಬಯಸುವುದಿಲ್ಲ” ಎಂಬ ಘೋಷಣೆಯನ್ನೂ ಶ್ರದ್ಧಾ ಮಾಡಿರುವುದನ್ನು ಪತ್ರದಲ್ಲಿ ಕಾಣಬಹುದು. “ಆತ ನನ್ನನ್ನು ಕೊಲ್ಲವುದಾಗಿ ನೋಯಿಸುವುದಾಗಿ ಬ್ಲ್ಯಾಕ್‌ಮೇಲ್ ಮಾಡಿರುವುದರಿಂದಾಗಿ ಅವನು ನನ್ನನ್ನು ಎಲ್ಲಿಯಾದರೂ ನೋಡಿದರೆ ನನಗಾಗುವ ದೈಹಿಕ ಹಲ್ಲೆಯೆಂದು ಪರಿಗಣಿಸಬೇಕು” ಎಂದು ಶ್ರದ್ಧಾ ಕೋರಿದ್ದರು.

ಶ್ರದ್ಧಾ ಅವರ ಕುಟುಂಬವು ಈ ಸಂಬಂಧವನ್ನು ಒಪ್ಪರಲಿಲ್ಲ. ಹೀಗಾಗಿ ಕುಟುಂಬ ಮತ್ತು ಶ್ರದ್ಧಾ ಸಂಪರ್ಕವನ್ನು ಕಳೆಕೊಂಡಿದ್ದರು.

ಪೋಲೀಸರು ವಾಕರ್‌ನಿಂದ ಲಿಖಿತ ಹೇಳಿಕೆಯನ್ನು ಸ್ವೀಕರಿಸಿದ್ದರು. ಆ ಹೇಳಿಕೆಯಲ್ಲಿ “ಅಫ್ತಾಬ್‌ ಪೂನಾವಾಲಾ ಅವರ ಪೋಷಕರು ನನ್ನೊಂದಿಗೆ ಮಾತನಾಡಿದ್ದಾರೆ. ಇನ್ನು ಮುಂದೆ ಇಬ್ಬರಿಗೂ ಯಾವುದೇ ಜಗಳವಿರುವುದಿಲ್ಲ ಎಂದಿದ್ದಾರೆ” ಎಂಬುದು ಉಲ್ಲೇಖಗೊಂಡಿದೆ.

ಯಾವುದೇ ಕ್ರಮ ಕೈಗೊಳ್ಳಲು ವಾಕರ್ ಕೋರಿದ್ದರು. ಇದಾದ ನಂತರ ಈ ವರ್ಷ ಇಬ್ಬರೂ ದೆಹಲಿಗೆ ತೆರಳಿದ್ದರು. 2019ರಲ್ಲಿ ಡೇಟಿಂಗ್ ಅಪ್ಲಿಕೇಶನ್ ಬಂಬಲ್ (Bumbl) ಮೂಲಕ, ವಸಾಯ್‌ನಲ್ಲಿ ವಾಸಿಸುತ್ತಿದ್ದ ಅಫ್ತಾಬ್‌ನನ್ನು ಶ್ರದ್ಧಾ ಭೇಟಿಯಾಗಿದ್ದರು. ಶ್ರದ್ಧಾ ಕುಟುಂಬವು ಈ ಸಂಬಂಧವನ್ನು ಒಪ್ಪಿಕೊಳ್ಳಲಿಲ್ಲ. ಆದ್ದರಿಂದ ಶ್ರದ್ಧಾ ಅಫ್ತಾಬ್‌ನೊಂದಿಗೆ ವಾಸಿಸಲೆಂದು ತನ್ನ ಕುಟುಂಬವನ್ನು ತೊರೆದರು. ಮೊದಲು ಮುಂಬೈನಲ್ಲಿ ವಾಸವಿದ್ದರು. ನಂತರ ಮೇ 2022ರಿಂದ ದೆಹಲಿಯಲ್ಲಿ ಜೀವಿಸುತ್ತಿದ್ದರು.

“2019ರಲ್ಲಿ ಶ್ರದ್ಧಾ-ಅಫ್ತಾಬ್ ಜೊತೆಯಲ್ಲಿ ವಾಸಿಸಲು ಆರಂಭಿಸಿದ್ದರು” ಎಂದು ಶ್ರದ್ಧಾ ಸಂಪರ್ಕದಲ್ಲಿದ್ದ ಆಕೆಯ ಸ್ನೇಹಿತ ಲಕ್ಷ್ಮಣ್ ನಾಡಾರ್ ಹೇಳುತ್ತಾರೆ. “ಶ್ರದ್ಧಾ ಆತನನ್ನು ಮದುವೆಯಾಗಲು ಬಯಸಿದ್ದಳು. ಆದರೆ ಅವಳ ತಾಯಿ ವಿರೋಧಿಸಿದರು. ಆದ್ದರಿಂದ ಆಕೆ ಮನೆ ಬಿಟ್ಟಿದ್ದರು”.

ಶ್ರದ್ಧಾ ಮನೆಯಿಂದ ಹೊರಬಂದ ನಂತರ ಇಡೀ ಕುಟುಂಬದಲ್ಲಿ ಆಕೆಯ ತಾಯಿ ಮಾತ್ರ ಶ್ರದ್ಧಾ ಜೊತೆಯಲ್ಲಿ ಸಂಪರ್ಕದಲ್ಲಿದ್ದರು ಎನ್ನುತ್ತಾರೆ ಲಕ್ಷ್ಮಣ್. ಶ್ರದ್ಧಾ ಅವರ ತಾಯಿ 2020ರಲ್ಲಿ ನಿಧನರಾದರು. ಶ್ರದ್ಧಾ ಅವರ ಕುಟುಂಬದೊಂದಿಗಿನ ಏಕೈಕ ಸಂಪರ್ಕ ಲಕ್ಷ್ಮಣ್ ಮಾತ್ರ ಆಗಿದ್ದರು. ಆಕೆ ದೆಹಲಿಗೆ ತೆರಳಿ, ಸಂಪರ್ಕ ಕಡಿತವಾಗುವವರೆಗೂ ಲಕ್ಷ್ಮಣ್ ಮಾತನಾಡಿದ್ದರು. ಶ್ರದ್ಧಾ ಅವರ ತಂದೆ ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಮಗಳ ಮೇಲೆ ನಿಗಾ ಇಟ್ಟಿದ್ದರು.

ಶ್ರದ್ಧಾ ಅವರ ತಂದೆ ತಾಯಿ ನಾಲ್ಕು ವರ್ಷಗಳ ಹಿಂದೆ ಬೇರೆಯಾಗಿದ್ದರು. ಶ್ರದ್ಧಾ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದರು. 2018ರಲ್ಲಿ ಅವರು ವಸೈನಲ್ಲಿನ ಕಾಲ್ ಸೆಂಟರ್‌ನಲ್ಲಿ ಉದ್ಯೋಗ ಆರಂಭಿಸಿದ್ದರು.

ಇದನ್ನೂ ಓದಿರಿ: ಊನಾ ಪ್ರಕರಣದ ಆರೋಪಿಗಳಿಂದ ದಲಿತ ಸಂತ್ರಸ್ತರಿಗೆ ಜೀವ ಬೆದರಿಕೆ; ಎಫ್‌ಐಆರ್‌

ಶ್ರದ್ಧಾರನ್ನು ಮಾತನಾಡಿಸಲು ಲಕ್ಷ್ಮಣ್ ಪ್ರಯತ್ನಿಸುತ್ತಲೇ ಇದ್ದರು. ಅವರು ಜೂನ್ ಮತ್ತು ಜುಲೈನಲ್ಲಿ ಸಾಕಷ್ಟು ಸಲ ಆಕೆಗೆ ಕರೆ ಮಾಡಿದರು. ಆದರೆ ಆಕೆಯ ಮೊಬೈಲ್‌ ಸಂಖ್ಯೆ ಸ್ವಿಚ್ ಆಫ್ ಆಗಿತ್ತು. ಲಕ್ಷ್ಮಣ್ ಕಳುಹಿಸಿದ ಸಂದೇಶಗಳಿಗೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ.

ಶ್ರದ್ಧಾ ಅವರ ಸಹೋದರ ಶ್ರೀಜಯ್ ವಾಕರ್ ಅವರಿಗೆ ಸೆಪ್ಟೆಂಬರ್ 14ರಂದು ಕರೆ ಮಾಡಿದ ಲಕ್ಷ್ಮಣ್, ಎರಡು ತಿಂಗಳಿನಿಂದ ಶ್ರದ್ಧಾ ಅವರ ಫೋನ್ ಆಫ್ ಆಗಿದೆ ಎಂದು ತಿಳಿಸಿದ್ದರು. ಶ್ರೀಜಯ್ ತನ್ನ ತಂದೆ ವಿಕಾಸ್ ವಾಕರ್‌ಗೆ ಮಾಹಿತಿ ನೀಡಿದ್ದು, ಅವರು ಮಹಾರಾಷ್ಟ್ರದ ಮಾಣಿಕ್‌ಪುರದಲ್ಲಿ ಮಿಸ್ಸಿಂಗ್ ದೂರು ದಾಖಲಿಸಿದ್ದರು.

ಕೆಲವು ದಿನಗಳ ನಂತರ, ವಿಕಾಸ್‌ ವಾಕರ್‌ ಅವರಿಗೆ ಮಾಣಿಕ್‌ಪುರ ಪೊಲೀಸರು ಪ್ರತಿಕ್ರಿಯಿಸಿ, “ದೆಹಲಿಯ ಛತ್ತರ್‌ಪುರದಲ್ಲಿ ನಿಮ್ಮ ಮಗಳು ಆಕೆಯ ಗೆಳೆಯ ಅಫ್ತಾಬ್‌ನೊಂದಿಗೆ ವಾಸಿಸುತ್ತಿದ್ದಳು” ಎಂದು ಮಾಹಿತಿ ನೀಡಿದರು. ವಿಕಾಸ್ ನವೆಂಬರ್ 8ರಂದು ಶ್ರದ್ಧಾ ಅವರ ಫ್ಲಾಟ್‌ಗೆ ಬಂದರು. ಆದರೆ ಅದು ಲಾಕ್ ಆಗಿತ್ತು. ದೆಹಲಿಯ ಮೆಹ್ರೌಲಿ ಪೊಲೀಸ್ ಠಾಣೆಯಲ್ಲಿ ಮಗಳ ಅಪಹರಣದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದರು. ಆ ನಂತರ ಕೊಲೆ ಪ್ರಕರಣ ಬಯಲಿಗೆ ಬಂದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...