Homeಚಳವಳಿರೈತ ಹೋರಾಟದ ಹುತಾತ್ಮರಿಗೆ ಇಂದು ಶ್ರದ್ಧಾಂಜಲಿ: ಇಲ್ಲಿವೆ ಪ್ರಮುಖ ಅಂಶಗಳು

ರೈತ ಹೋರಾಟದ ಹುತಾತ್ಮರಿಗೆ ಇಂದು ಶ್ರದ್ಧಾಂಜಲಿ: ಇಲ್ಲಿವೆ ಪ್ರಮುಖ ಅಂಶಗಳು

“ಸರ್ಕಾರದಿಂದ ಅಥವಾ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ಯಾವುದೇ ಸಮಿತಿ ರಚನೆಯಾದರೆ, ಅದರಲ್ಲಿ ಎಲ್ಲಾ ರೈತ ಸಂಘಗಳ ಪ್ರತಿನಿಧಿಗಳೂ ಸದಸ್ಯರಾಗಿರಬೇಕು”

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 25 ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆಯ ನಡುವೆ ಮೃತಪಟ್ಟ ರೈತರಿಗೆ ಇಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಂತರ ಉತ್ತರ ಪ್ರದೇಶದ ಗಾಜಿಯಾಬಾದ್‌ನಿಂದ ದೆಹಲಿಗೆ ಸಂಪರ್ಕಿಸುವ ಹೆದ್ದಾರಿಯನ್ನು ನಿರ್ಬಂಧಿಸಲಾಗುವುದು ಎಂದು ರೈತ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ರೈತರು ಒತ್ತಾಯಿಸುತ್ತಿದ್ದು, ಆದರೆ ಸರ್ಕಾರ ಈ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುತ್ತಲೆ ಇದೆ. ಹಾಗಾಗಿ ರೈತರು ತಮ್ಮ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನಾ ನಿರತ ರೈತರು ವಿರೋಧ ಪಕ್ಷಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎನ್ನುತ್ತಿರುವ ಕೇಂದ್ರ ಸರ್ಕಾರಕ್ಕೆ ತಿರುಗೇಟು ನೀಡಿದ AIKSCC, “ಡಿಸೆಂಬರ್ 22 ರಂದು ಮುಂಬೈನ ಅಂಬಾನಿ ಮತ್ತು ಅದಾನಿ ಗುಂಪುಗಳ ಕಚೇರಿಗಳ ಬಳಿ ರ್ಯಾಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ರೈತರ ಸಮಸ್ಯೆಗಳನ್ನು ಪರಿಹರಿಸುವ ಬದಲು ‘ಬಿಜೆಪಿ ಮತ್ತು ವಿರೋಧ ಪಕ್ಷ’ ಎಂದು ರಾಜಕೀಯದ ಆಟ ಆಡುತ್ತಿದ್ದಾರೆ” ಎಂದು ಆರೋಪಿಸಿದೆ.

ಇದನ್ನೂ ಓದಿ: ಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ – ಮಸೀದಿಗಿಂತ 6 ಪಟ್ಟು ದೊಡ್ಡ…

“ದೊಡ್ಡ ಉದ್ಯಮಗಳಿಗೆ ಅನುಕೂಲಕರವಾದ ಈ ಕಾನೂನಗಳನ್ನು ರದ್ದುಗೊಳಿಸುವ ಬದಲು ಅವರಿಗೇ ಸಹಕಾರಿಯಾಗಿರುವ ನರೇಂದ್ರ ಮೋದಿ ತಮ್ಮ ಪಾತ್ರವನ್ನು ದುರ್ಬಲಗೊಳಿಸಿಕೊಳ್ಳುತ್ತಿದ್ದಾರೆ. ರೈತರಿಗೆ ಸಹಕಾರಿಯಾಗಲು ಹಣವಿಲ್ಲ ಎನ್ನುತ್ತಿರುವ ಮೋದಿ ಸರ್ಕಾರ, ಕಾರ್ಪೊರೇಟ್‌ಗಳು ಕೃಷಿ ವಲಯದಲ್ಲಿ ಹೂಡಿಕೆ ಮಾಡಲು ಒಂದು ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ನಿಜಕ್ಕೂ ಖಂಡನೀಯ”

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರೈತರಿಗೆ ಬರೆದ ಪತ್ರವನ್ನು ಉಲ್ಲೇಖಿಸಿದ AIKSCC, “ರೈತರು ತಮ್ಮ ಭೂಮಿಯನ್ನು ಕಳೆದುಕೊಳ್ಳುವುದಿಲ್ಲ ಎಂದು ಕಾಲ್ಪನಿಕ ಹೇಳಿಕೆ ನೀಡಿದ್ದಾರೆ. ಆದರೆ ಈ ಕಾಯಿದೆಯು ರೈತರ ಭೂಮಿಯನ್ನು ಅಡಮಾನ ಇಡಲು ಪ್ರಚೋದಿಸುತ್ತದೆ” ಎಂದು ಹೇಳಿದೆ.

ಕೃಷಿ ಕಾನೂನಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂ ಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಇದನ್ನೂ ಓದಿ: ಅಸ್ಸಾಂ: ಗುವಾಹಟಿಯಲ್ಲಿ 30 ಸಿಲಿಂಡರ್‌ ಸ್ಫೋಟ, 66 ಗುಡಿಸಲುಗಳು ಭಸ್ಮ

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ನಿನ್ನೆ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.

ಭಾರತೀಯ ಕಿಸಾನ್ ಒಕ್ಕೂಟದ (ಏಕ್ತಾ ಉಗ್ರಾಹನ್) ಅಧ್ಯಕ್ಷ ಜೋಗಿಂದರ್ ಸಿಂಗ್ ಉಗ್ರಾಹನ್, “ಯಾವುದೇ ಸಮಿತಿಯು ಸರ್ಕಾರದಿಂದ ಅಥವಾ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ರಚನೆಯಾದರೆ ಅದರಲ್ಲಿ ಎಲ್ಲಾ ರೈತ ಸಂಘಗಳ ಪ್ರತಿನಿಧಿಗಳೂ ಸದಸ್ಯರಾಗಿರಬೇಕು” ಎಂದು ಹೇಳಿದರು.

ಇದನ್ನೂ ಓದಿ: Big Breaking: ನೇಪಾಳ ಸಂಸತ್ತು ವಿಸರ್ಜನೆಗೆ ಪ್ರಧಾನಿ ಕೆ ಪಿ ಶರ್ಮಾ ಒಲಿ ನಿರ್ಧಾರ!

“ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ಮಾತನಾಡಿದರೆ ಉಪಯೋಗವಿಲ್ಲ. ಏಕೆಂದರೆ ಅವರು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಕೃಷಿ ಕಾನೂನುಗಳ ಬಗ್ಗೆ ಯಾವುದೇ ನಿರ್ಧಾರವನ್ನು ಪ್ರಧಾನ ಮಂತ್ರಿ ಮಟ್ಟದಲ್ಲಿ ತೆಗೆದುಕೊಳ್ಳುವುದರಿಂದ ಪ್ರಧಾನಿ ಅಥವಾ ಗೃಹ ಸಚಿವರು ಮಾತನಾಡಬೇಕು” ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ‍‍ಷಾಮೀಲಾಗಿದೆ: ಸಿದ್ದರಾಮಯ್ಯ ಸರಣಿ ಟ್ವೀಟ್

ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬೇಡಿಕೆಯನ್ನು ಪುನರುಚ್ಚರಿಸುತ್ತಾ, ಬಿಕೆಯು (ಕ್ಯಾಡಿಯನ್ ಗ್ರೂಪ್) ನ ಹರ್ಮೀತ್ ಸಿಂಗ್ ಕಡಿಯನ್, “ಸರ್ಕಾರದೊಂದಿಗಿನ ನಮ್ಮ ಮಾತುಕತೆಯಲ್ಲಿ, ನಾವು 18 ತಿದ್ದುಪಡಿಗಳನ್ನು ನೀಡಿದ್ದೇವೆ. ಸರ್ಕಾರವು ಈವರೆಗೆ ಎಂಟಕ್ಕೆ ಒಪ್ಪಿಗೆ ನೀಡಿದೆ. ಉಳಿದ 10 ತಿದ್ದುಪಡಿಗಳ ಕಥೆ ಏನು? ಕಾನೂನುಗಳನ್ನು ತಿದ್ದುಪಡಿ ಮಾಡುವ ಬದಲು ಅದನ್ನು ರದ್ದುಪಡಿಸುವುದು ಉತ್ತಮ ಪರಿಹಾರವಾಗಿದೆ” ಎಂದು ಹೇಳಿದರು.

ಡಿಸೆಂಬರ್ 25 ರಂದು ‘ದಿಲ್ಲಿ ಚಲೋ’ ಪ್ರತಿಭಟನೆಗೆ ಒಂದು ತಿಂಗಳು ಪೂರ್ಣಗೊಳ್ಳಲಿರುವುದರಿಂದ ದೆಹಲಿ ಗಡಿಯಲ್ಲಿ ನಡೆಯುವ ಹೋರಾಟಕ್ಕೆ ಹೆಚ್ಚಿನ ರೈತರು ಸೇರಲಿದ್ದಾರೆ. ಡಿಸೆಂಬರ್ 26 ರಂದು 15,000 ಪ್ರತಿಭಟನಾಕಾರರು ಖಾನೌರಿ ಗಡಿಯಿಂದ ಮೆರವಣಿಗೆ ನಡೆಸಲಿದ್ದು, ಡಿಸೆಂಬರ್ 27 ರಂದು 15,000 ಮಂದಿ ದಬ್ವಾಲಿಯಿಂದ ಮೆರವಣಿಗೆ ಆರಂಭಿಸಲಿದ್ದಾರೆ ಎಂದು ರೈತ ಸಂಘಟನೆಗಳು ತಿಳಿಸಿವೆ.


ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರದ ಬಿರುಗಾಳಿ: ಬಿಜೆಪಿ ಸೇರಿದ 9 ಶಾಸಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...