Homeಚಳವಳಿರೈತ ಹೋರಾಟದ ಹುತಾತ್ಮರಿಗೆ ಇಂದು ಶ್ರದ್ಧಾಂಜಲಿ: ಇಲ್ಲಿವೆ ಪ್ರಮುಖ ಅಂಶಗಳು

ರೈತ ಹೋರಾಟದ ಹುತಾತ್ಮರಿಗೆ ಇಂದು ಶ್ರದ್ಧಾಂಜಲಿ: ಇಲ್ಲಿವೆ ಪ್ರಮುಖ ಅಂಶಗಳು

“ಸರ್ಕಾರದಿಂದ ಅಥವಾ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ಯಾವುದೇ ಸಮಿತಿ ರಚನೆಯಾದರೆ, ಅದರಲ್ಲಿ ಎಲ್ಲಾ ರೈತ ಸಂಘಗಳ ಪ್ರತಿನಿಧಿಗಳೂ ಸದಸ್ಯರಾಗಿರಬೇಕು”

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 25 ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆಯ ನಡುವೆ ಮೃತಪಟ್ಟ ರೈತರಿಗೆ ಇಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಂತರ ಉತ್ತರ ಪ್ರದೇಶದ ಗಾಜಿಯಾಬಾದ್‌ನಿಂದ ದೆಹಲಿಗೆ ಸಂಪರ್ಕಿಸುವ ಹೆದ್ದಾರಿಯನ್ನು ನಿರ್ಬಂಧಿಸಲಾಗುವುದು ಎಂದು ರೈತ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ರೈತರು ಒತ್ತಾಯಿಸುತ್ತಿದ್ದು, ಆದರೆ ಸರ್ಕಾರ ಈ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುತ್ತಲೆ ಇದೆ. ಹಾಗಾಗಿ ರೈತರು ತಮ್ಮ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನಾ ನಿರತ ರೈತರು ವಿರೋಧ ಪಕ್ಷಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎನ್ನುತ್ತಿರುವ ಕೇಂದ್ರ ಸರ್ಕಾರಕ್ಕೆ ತಿರುಗೇಟು ನೀಡಿದ AIKSCC, “ಡಿಸೆಂಬರ್ 22 ರಂದು ಮುಂಬೈನ ಅಂಬಾನಿ ಮತ್ತು ಅದಾನಿ ಗುಂಪುಗಳ ಕಚೇರಿಗಳ ಬಳಿ ರ್ಯಾಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ರೈತರ ಸಮಸ್ಯೆಗಳನ್ನು ಪರಿಹರಿಸುವ ಬದಲು ‘ಬಿಜೆಪಿ ಮತ್ತು ವಿರೋಧ ಪಕ್ಷ’ ಎಂದು ರಾಜಕೀಯದ ಆಟ ಆಡುತ್ತಿದ್ದಾರೆ” ಎಂದು ಆರೋಪಿಸಿದೆ.

ಇದನ್ನೂ ಓದಿ: ಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ – ಮಸೀದಿಗಿಂತ 6 ಪಟ್ಟು ದೊಡ್ಡ…

“ದೊಡ್ಡ ಉದ್ಯಮಗಳಿಗೆ ಅನುಕೂಲಕರವಾದ ಈ ಕಾನೂನಗಳನ್ನು ರದ್ದುಗೊಳಿಸುವ ಬದಲು ಅವರಿಗೇ ಸಹಕಾರಿಯಾಗಿರುವ ನರೇಂದ್ರ ಮೋದಿ ತಮ್ಮ ಪಾತ್ರವನ್ನು ದುರ್ಬಲಗೊಳಿಸಿಕೊಳ್ಳುತ್ತಿದ್ದಾರೆ. ರೈತರಿಗೆ ಸಹಕಾರಿಯಾಗಲು ಹಣವಿಲ್ಲ ಎನ್ನುತ್ತಿರುವ ಮೋದಿ ಸರ್ಕಾರ, ಕಾರ್ಪೊರೇಟ್‌ಗಳು ಕೃಷಿ ವಲಯದಲ್ಲಿ ಹೂಡಿಕೆ ಮಾಡಲು ಒಂದು ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ನಿಜಕ್ಕೂ ಖಂಡನೀಯ”

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರೈತರಿಗೆ ಬರೆದ ಪತ್ರವನ್ನು ಉಲ್ಲೇಖಿಸಿದ AIKSCC, “ರೈತರು ತಮ್ಮ ಭೂಮಿಯನ್ನು ಕಳೆದುಕೊಳ್ಳುವುದಿಲ್ಲ ಎಂದು ಕಾಲ್ಪನಿಕ ಹೇಳಿಕೆ ನೀಡಿದ್ದಾರೆ. ಆದರೆ ಈ ಕಾಯಿದೆಯು ರೈತರ ಭೂಮಿಯನ್ನು ಅಡಮಾನ ಇಡಲು ಪ್ರಚೋದಿಸುತ್ತದೆ” ಎಂದು ಹೇಳಿದೆ.

ಕೃಷಿ ಕಾನೂನಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂ ಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಇದನ್ನೂ ಓದಿ: ಅಸ್ಸಾಂ: ಗುವಾಹಟಿಯಲ್ಲಿ 30 ಸಿಲಿಂಡರ್‌ ಸ್ಫೋಟ, 66 ಗುಡಿಸಲುಗಳು ಭಸ್ಮ

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ನಿನ್ನೆ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.

ಭಾರತೀಯ ಕಿಸಾನ್ ಒಕ್ಕೂಟದ (ಏಕ್ತಾ ಉಗ್ರಾಹನ್) ಅಧ್ಯಕ್ಷ ಜೋಗಿಂದರ್ ಸಿಂಗ್ ಉಗ್ರಾಹನ್, “ಯಾವುದೇ ಸಮಿತಿಯು ಸರ್ಕಾರದಿಂದ ಅಥವಾ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ರಚನೆಯಾದರೆ ಅದರಲ್ಲಿ ಎಲ್ಲಾ ರೈತ ಸಂಘಗಳ ಪ್ರತಿನಿಧಿಗಳೂ ಸದಸ್ಯರಾಗಿರಬೇಕು” ಎಂದು ಹೇಳಿದರು.

ಇದನ್ನೂ ಓದಿ: Big Breaking: ನೇಪಾಳ ಸಂಸತ್ತು ವಿಸರ್ಜನೆಗೆ ಪ್ರಧಾನಿ ಕೆ ಪಿ ಶರ್ಮಾ ಒಲಿ ನಿರ್ಧಾರ!

“ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ಮಾತನಾಡಿದರೆ ಉಪಯೋಗವಿಲ್ಲ. ಏಕೆಂದರೆ ಅವರು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಕೃಷಿ ಕಾನೂನುಗಳ ಬಗ್ಗೆ ಯಾವುದೇ ನಿರ್ಧಾರವನ್ನು ಪ್ರಧಾನ ಮಂತ್ರಿ ಮಟ್ಟದಲ್ಲಿ ತೆಗೆದುಕೊಳ್ಳುವುದರಿಂದ ಪ್ರಧಾನಿ ಅಥವಾ ಗೃಹ ಸಚಿವರು ಮಾತನಾಡಬೇಕು” ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ‍‍ಷಾಮೀಲಾಗಿದೆ: ಸಿದ್ದರಾಮಯ್ಯ ಸರಣಿ ಟ್ವೀಟ್

ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬೇಡಿಕೆಯನ್ನು ಪುನರುಚ್ಚರಿಸುತ್ತಾ, ಬಿಕೆಯು (ಕ್ಯಾಡಿಯನ್ ಗ್ರೂಪ್) ನ ಹರ್ಮೀತ್ ಸಿಂಗ್ ಕಡಿಯನ್, “ಸರ್ಕಾರದೊಂದಿಗಿನ ನಮ್ಮ ಮಾತುಕತೆಯಲ್ಲಿ, ನಾವು 18 ತಿದ್ದುಪಡಿಗಳನ್ನು ನೀಡಿದ್ದೇವೆ. ಸರ್ಕಾರವು ಈವರೆಗೆ ಎಂಟಕ್ಕೆ ಒಪ್ಪಿಗೆ ನೀಡಿದೆ. ಉಳಿದ 10 ತಿದ್ದುಪಡಿಗಳ ಕಥೆ ಏನು? ಕಾನೂನುಗಳನ್ನು ತಿದ್ದುಪಡಿ ಮಾಡುವ ಬದಲು ಅದನ್ನು ರದ್ದುಪಡಿಸುವುದು ಉತ್ತಮ ಪರಿಹಾರವಾಗಿದೆ” ಎಂದು ಹೇಳಿದರು.

ಡಿಸೆಂಬರ್ 25 ರಂದು ‘ದಿಲ್ಲಿ ಚಲೋ’ ಪ್ರತಿಭಟನೆಗೆ ಒಂದು ತಿಂಗಳು ಪೂರ್ಣಗೊಳ್ಳಲಿರುವುದರಿಂದ ದೆಹಲಿ ಗಡಿಯಲ್ಲಿ ನಡೆಯುವ ಹೋರಾಟಕ್ಕೆ ಹೆಚ್ಚಿನ ರೈತರು ಸೇರಲಿದ್ದಾರೆ. ಡಿಸೆಂಬರ್ 26 ರಂದು 15,000 ಪ್ರತಿಭಟನಾಕಾರರು ಖಾನೌರಿ ಗಡಿಯಿಂದ ಮೆರವಣಿಗೆ ನಡೆಸಲಿದ್ದು, ಡಿಸೆಂಬರ್ 27 ರಂದು 15,000 ಮಂದಿ ದಬ್ವಾಲಿಯಿಂದ ಮೆರವಣಿಗೆ ಆರಂಭಿಸಲಿದ್ದಾರೆ ಎಂದು ರೈತ ಸಂಘಟನೆಗಳು ತಿಳಿಸಿವೆ.


ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರದ ಬಿರುಗಾಳಿ: ಬಿಜೆಪಿ ಸೇರಿದ 9 ಶಾಸಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...