Homeಚಳವಳಿರೈತ ಹೋರಾಟದ ಹುತಾತ್ಮರಿಗೆ ಇಂದು ಶ್ರದ್ಧಾಂಜಲಿ: ಇಲ್ಲಿವೆ ಪ್ರಮುಖ ಅಂಶಗಳು

ರೈತ ಹೋರಾಟದ ಹುತಾತ್ಮರಿಗೆ ಇಂದು ಶ್ರದ್ಧಾಂಜಲಿ: ಇಲ್ಲಿವೆ ಪ್ರಮುಖ ಅಂಶಗಳು

“ಸರ್ಕಾರದಿಂದ ಅಥವಾ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ಯಾವುದೇ ಸಮಿತಿ ರಚನೆಯಾದರೆ, ಅದರಲ್ಲಿ ಎಲ್ಲಾ ರೈತ ಸಂಘಗಳ ಪ್ರತಿನಿಧಿಗಳೂ ಸದಸ್ಯರಾಗಿರಬೇಕು”

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 25 ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆಯ ನಡುವೆ ಮೃತಪಟ್ಟ ರೈತರಿಗೆ ಇಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಂತರ ಉತ್ತರ ಪ್ರದೇಶದ ಗಾಜಿಯಾಬಾದ್‌ನಿಂದ ದೆಹಲಿಗೆ ಸಂಪರ್ಕಿಸುವ ಹೆದ್ದಾರಿಯನ್ನು ನಿರ್ಬಂಧಿಸಲಾಗುವುದು ಎಂದು ರೈತ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ರೈತರು ಒತ್ತಾಯಿಸುತ್ತಿದ್ದು, ಆದರೆ ಸರ್ಕಾರ ಈ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುತ್ತಲೆ ಇದೆ. ಹಾಗಾಗಿ ರೈತರು ತಮ್ಮ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನಾ ನಿರತ ರೈತರು ವಿರೋಧ ಪಕ್ಷಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎನ್ನುತ್ತಿರುವ ಕೇಂದ್ರ ಸರ್ಕಾರಕ್ಕೆ ತಿರುಗೇಟು ನೀಡಿದ AIKSCC, “ಡಿಸೆಂಬರ್ 22 ರಂದು ಮುಂಬೈನ ಅಂಬಾನಿ ಮತ್ತು ಅದಾನಿ ಗುಂಪುಗಳ ಕಚೇರಿಗಳ ಬಳಿ ರ್ಯಾಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ರೈತರ ಸಮಸ್ಯೆಗಳನ್ನು ಪರಿಹರಿಸುವ ಬದಲು ‘ಬಿಜೆಪಿ ಮತ್ತು ವಿರೋಧ ಪಕ್ಷ’ ಎಂದು ರಾಜಕೀಯದ ಆಟ ಆಡುತ್ತಿದ್ದಾರೆ” ಎಂದು ಆರೋಪಿಸಿದೆ.

ಇದನ್ನೂ ಓದಿ: ಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ – ಮಸೀದಿಗಿಂತ 6 ಪಟ್ಟು ದೊಡ್ಡ…

“ದೊಡ್ಡ ಉದ್ಯಮಗಳಿಗೆ ಅನುಕೂಲಕರವಾದ ಈ ಕಾನೂನಗಳನ್ನು ರದ್ದುಗೊಳಿಸುವ ಬದಲು ಅವರಿಗೇ ಸಹಕಾರಿಯಾಗಿರುವ ನರೇಂದ್ರ ಮೋದಿ ತಮ್ಮ ಪಾತ್ರವನ್ನು ದುರ್ಬಲಗೊಳಿಸಿಕೊಳ್ಳುತ್ತಿದ್ದಾರೆ. ರೈತರಿಗೆ ಸಹಕಾರಿಯಾಗಲು ಹಣವಿಲ್ಲ ಎನ್ನುತ್ತಿರುವ ಮೋದಿ ಸರ್ಕಾರ, ಕಾರ್ಪೊರೇಟ್‌ಗಳು ಕೃಷಿ ವಲಯದಲ್ಲಿ ಹೂಡಿಕೆ ಮಾಡಲು ಒಂದು ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ನಿಜಕ್ಕೂ ಖಂಡನೀಯ”

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರೈತರಿಗೆ ಬರೆದ ಪತ್ರವನ್ನು ಉಲ್ಲೇಖಿಸಿದ AIKSCC, “ರೈತರು ತಮ್ಮ ಭೂಮಿಯನ್ನು ಕಳೆದುಕೊಳ್ಳುವುದಿಲ್ಲ ಎಂದು ಕಾಲ್ಪನಿಕ ಹೇಳಿಕೆ ನೀಡಿದ್ದಾರೆ. ಆದರೆ ಈ ಕಾಯಿದೆಯು ರೈತರ ಭೂಮಿಯನ್ನು ಅಡಮಾನ ಇಡಲು ಪ್ರಚೋದಿಸುತ್ತದೆ” ಎಂದು ಹೇಳಿದೆ.

ಕೃಷಿ ಕಾನೂನಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂ ಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಇದನ್ನೂ ಓದಿ: ಅಸ್ಸಾಂ: ಗುವಾಹಟಿಯಲ್ಲಿ 30 ಸಿಲಿಂಡರ್‌ ಸ್ಫೋಟ, 66 ಗುಡಿಸಲುಗಳು ಭಸ್ಮ

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ನಿನ್ನೆ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.

ಭಾರತೀಯ ಕಿಸಾನ್ ಒಕ್ಕೂಟದ (ಏಕ್ತಾ ಉಗ್ರಾಹನ್) ಅಧ್ಯಕ್ಷ ಜೋಗಿಂದರ್ ಸಿಂಗ್ ಉಗ್ರಾಹನ್, “ಯಾವುದೇ ಸಮಿತಿಯು ಸರ್ಕಾರದಿಂದ ಅಥವಾ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ರಚನೆಯಾದರೆ ಅದರಲ್ಲಿ ಎಲ್ಲಾ ರೈತ ಸಂಘಗಳ ಪ್ರತಿನಿಧಿಗಳೂ ಸದಸ್ಯರಾಗಿರಬೇಕು” ಎಂದು ಹೇಳಿದರು.

ಇದನ್ನೂ ಓದಿ: Big Breaking: ನೇಪಾಳ ಸಂಸತ್ತು ವಿಸರ್ಜನೆಗೆ ಪ್ರಧಾನಿ ಕೆ ಪಿ ಶರ್ಮಾ ಒಲಿ ನಿರ್ಧಾರ!

“ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ಮಾತನಾಡಿದರೆ ಉಪಯೋಗವಿಲ್ಲ. ಏಕೆಂದರೆ ಅವರು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಕೃಷಿ ಕಾನೂನುಗಳ ಬಗ್ಗೆ ಯಾವುದೇ ನಿರ್ಧಾರವನ್ನು ಪ್ರಧಾನ ಮಂತ್ರಿ ಮಟ್ಟದಲ್ಲಿ ತೆಗೆದುಕೊಳ್ಳುವುದರಿಂದ ಪ್ರಧಾನಿ ಅಥವಾ ಗೃಹ ಸಚಿವರು ಮಾತನಾಡಬೇಕು” ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ‍‍ಷಾಮೀಲಾಗಿದೆ: ಸಿದ್ದರಾಮಯ್ಯ ಸರಣಿ ಟ್ವೀಟ್

ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬೇಡಿಕೆಯನ್ನು ಪುನರುಚ್ಚರಿಸುತ್ತಾ, ಬಿಕೆಯು (ಕ್ಯಾಡಿಯನ್ ಗ್ರೂಪ್) ನ ಹರ್ಮೀತ್ ಸಿಂಗ್ ಕಡಿಯನ್, “ಸರ್ಕಾರದೊಂದಿಗಿನ ನಮ್ಮ ಮಾತುಕತೆಯಲ್ಲಿ, ನಾವು 18 ತಿದ್ದುಪಡಿಗಳನ್ನು ನೀಡಿದ್ದೇವೆ. ಸರ್ಕಾರವು ಈವರೆಗೆ ಎಂಟಕ್ಕೆ ಒಪ್ಪಿಗೆ ನೀಡಿದೆ. ಉಳಿದ 10 ತಿದ್ದುಪಡಿಗಳ ಕಥೆ ಏನು? ಕಾನೂನುಗಳನ್ನು ತಿದ್ದುಪಡಿ ಮಾಡುವ ಬದಲು ಅದನ್ನು ರದ್ದುಪಡಿಸುವುದು ಉತ್ತಮ ಪರಿಹಾರವಾಗಿದೆ” ಎಂದು ಹೇಳಿದರು.

ಡಿಸೆಂಬರ್ 25 ರಂದು ‘ದಿಲ್ಲಿ ಚಲೋ’ ಪ್ರತಿಭಟನೆಗೆ ಒಂದು ತಿಂಗಳು ಪೂರ್ಣಗೊಳ್ಳಲಿರುವುದರಿಂದ ದೆಹಲಿ ಗಡಿಯಲ್ಲಿ ನಡೆಯುವ ಹೋರಾಟಕ್ಕೆ ಹೆಚ್ಚಿನ ರೈತರು ಸೇರಲಿದ್ದಾರೆ. ಡಿಸೆಂಬರ್ 26 ರಂದು 15,000 ಪ್ರತಿಭಟನಾಕಾರರು ಖಾನೌರಿ ಗಡಿಯಿಂದ ಮೆರವಣಿಗೆ ನಡೆಸಲಿದ್ದು, ಡಿಸೆಂಬರ್ 27 ರಂದು 15,000 ಮಂದಿ ದಬ್ವಾಲಿಯಿಂದ ಮೆರವಣಿಗೆ ಆರಂಭಿಸಲಿದ್ದಾರೆ ಎಂದು ರೈತ ಸಂಘಟನೆಗಳು ತಿಳಿಸಿವೆ.


ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರದ ಬಿರುಗಾಳಿ: ಬಿಜೆಪಿ ಸೇರಿದ 9 ಶಾಸಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...