Homeಮುಖಪುಟವಿಡಿಯೋ| ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1.75 ಕೋಟಿ ದೇಣಿಗೆ ಕೊಟ್ಟ ದಂಪತಿಗೊಂದು ಸೆಲ್ಯೂಟ್‌..

ವಿಡಿಯೋ| ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1.75 ಕೋಟಿ ದೇಣಿಗೆ ಕೊಟ್ಟ ದಂಪತಿಗೊಂದು ಸೆಲ್ಯೂಟ್‌..

ಮೂರು ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿದು ಜೂನ್‌ ತಿಂಗಳಿನಲ್ಲಿ ಮಕ್ಕಳು ಇದೇ ಶಾಲೆಯಲ್ಲಿ ಕಲಿಯಬೇಕೆನ್ನುವುದು ನಮ್ಮ ಆಶಯ ಎನ್ನುತ್ತಾರೆ ಶ್ರೀಹರ್ಷ-ಮಮತ ದಂಪತಿ.

- Advertisement -
- Advertisement -

ಸಮಾಜದಲ್ಲಿ ಒಳ್ಳೆಯವರು ಇನ್ನೂ ಇದ್ದಾರೆಂಬುದಕ್ಕೆ ಇವರೇ ಸಾಕ್ಷಿ. ತಾವು ದುಡಿದ ಹಣವನ್ನು ಒಳ್ಳೆಯ ಕೆಲಸ ಕಾರ್ಯಗಳಿಗೆ  ಬಳಸುವವರು ಅಪರೂಪ. ಎಲ್ಲವನ್ನು ಸದಾ ಲಾಭದ ದೃಷ್ಟಿಯಿಂದಲೇ ನೋಡುವಂತಹ ಈ ಕಾಲ ದಲ್ಲಿ ತನ್ನ ತಂದೆಯ ಹುಟ್ಟೂರಿನಲ್ಲಿ ಸರ್ಕಾರಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ದಂಪತಿಯೊಂದು 1 ಕೋಟಿ 75 ಲಕ್ಷ ಕೊಟ್ಟ ಅಪರೂಪದ ಘಟನೆ ತುಮಕೂರು ಜಿಲ್ಲೆಯ ಕೋರಾ ಗ್ರಾಮದಲ್ಲಿ ಜರುಗಿದೆ. ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಹೊತ್ತಿನಲ್ಲಿ ಸುಸಜ್ಜಿತ ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣ ಮಾಡಿಕೊಡಲು ಈ ದಂಪತಿ ಟೊಂಕ ಕಟ್ಟಿನಿಂತಿರುವುದು ಹಲವರಿಗೆ ಮಾದರಿಯಾಗಿದೆ.

ಅವರೇ ಬಳ್ಳಾರಿಯ ಶ್ರೀಹರ್ಷ ಮತ್ತು ಮಮತಗಳಾಗಿದ್ದಾರೆ., ತಮ್ಮ ಹಿಂದಿನ ಮೂರನೇ ತಲೆಮಾರು ಕೋರಾ ಗ್ರಾಮದಲ್ಲಿ ವಾಸವಿತ್ತು ಎಂಬ ಕಾರಣಕ್ಕೆ ಗ್ರಾಮವನ್ನು ಅರಸಿಕೊಂಡು ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಹಣ ನೀಡಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಶ್ರೀಹರ್ಷರವರ ಮಾತುಗಳನ್ನು ಕೇಳಿ

ಸರ್ಕಾರಿ ಶಾಲೆ 1 ಕೋಟಿ 75 ಲಕ್ಷ ದೇಣಿಗೆ ಕೊಟ್ಟ ದಂಪತಿ.

ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1 ಕೋಟಿ 75 ಲಕ್ಷ ಕೊಟ್ಟ ಶ್ರೀಹರ್ಷ ಮತ್ತು ಮಮತ ದಂಪತಿಗೊಂದು ಸೆಲ್ಯೂಟ್‌ ಇರಲಿ.. ಹರ್ಷರವರ ಮಾತುಗಳನ್ನು ಕೇಳಿ

Posted by Naanu Gauri on Thursday, March 12, 2020

ಶ್ರೀಹರ್ಷ ಮತ್ತು ಮಮತ ದಂಪತಿ ಬಳ್ಳಾರಿ ಜಿಲ್ಲೆಯ ಹಿರೇಕುಂಬಳಕುಂಟೆಯವರು. ಇವರ ವಂಶದ ಮೂರನೇ ತಲೆಮಾರು ತುಮಕೂರು ತಾಲೂಕಿನ ಕೋರಾದಲ್ಲಿ ವಾಸವಾಗಿತ್ತು. ಬಳ್ಳಾರಿಯಿಂದ ಬೆಂಗಳೂರಿಗೆ ಹೋಗಿಬರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುವಾಗಲೆಲ್ಲೆ ಕೋರಾ ನೋಡಿದರೆ ನಮ್ಮ ಹಿಂದಿನ ತಲೆಮಾರಿನ ನೆನಪಾಗುತ್ತಿತ್ತು. ರಸ್ತೆಯ ಬದಿಯಲ್ಲೇ ಇರುವ ಶಾಲೆಯನ್ನು ನೋಡುತ್ತಿದ್ದೆವು. ಹಾಗಾಗಿ ಈ ಗ್ರಾಮಕ್ಕೆ ಏನಾದರು ಕೊಡುಗೆ ನೀಡಬೇಕೆಂದು ಅಂದುಕೊಳ್ಳುತ್ತಿದ್ದೆವು. ಹಳೆಯ ತಲೆಮಾರಿನ ಸ್ಮರಣಾರ್ಥ ಗ್ರಾಮಕ್ಕೆ ಅಗತ್ಯವಿದ್ದ ಶಾಲೆ ಕಟ್ಟಿಸಿಕೊಡುವಂತಹ ತೀರ್ಮಾನ ಮಾಡಿದೆವು ಅನ್ನುತ್ತಾರೆ ಶ್ರೀಹರ್ಷ.

ಗ್ರಾಮ ಪಂಚಾಯಿತಿ, ಎಸ್‌ಡಿಎಂಸಿ ಅಧ್ಯಕ್ಷರನ್ನು ಮತ್ತು ಶಾಲೆಯ ಮುಖ್ಯಸ್ಥರನ್ನು ಭೇಟಿ ಮಾಡಿ ಚರ್ಚಿಸಿದೆವು. ನಮ್ಮ ಆಶಯಕ್ಕೆ ಅವರು ಪೂರಕವಾಗಿ ಸ್ಪಂದಿಸಿದರು. ಅದರ ಭಾಗವೇ ಇಂದು ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದೇವೆ. ಉತ್ತಮ ಶಾಲೆ ಕಟ್ಟಡ ನಿರ್ಮಿಸಿಕೊಟ್ಟರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಮೂರು ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿದು ಜೂನ್‌ ತಿಂಗಳಿನಲ್ಲಿ ಮಕ್ಕಳು ಇದೇ ಶಾಲೆಯಲ್ಲಿ ಕಲಿಯಬೇಕೆನ್ನುವುದು ನಮ್ಮ ಆಶಯ ಎನ್ನುತ್ತಾರೆ ಶ್ರೀಹರ್ಷ-ಮಮತ ದಂಪತಿ.

ಕೋರಾ ಗ್ರಾಮದ ಶಾಲೆ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಿದೆ. ರಸ್ತೆಯ ಪಕ್ಕದಲ್ಲೇ ಇರುವುದರಿಂದ ಅಪಘಾತ ಮತ್ತು ಪಾಠ ಪ್ರವಚನಕ್ಕೆ ತೊಂದರೆಯಾಗುತ್ತದೆ. ಇಲ್ಲಿ ಈಗಾಗಲೇ ಇಬ್ಬರು ಮಕ್ಕಳು ಅಪಘಾತದಿಂದ ಮೃತ ಪಟ್ಟಿದ್ದಾರೆ. ಇದರಿಂದ ಗ್ರಾಮಸ್ಥರು ಭೀತರಾಗಿದ್ದರು. ಈ ನಡುವೆ ಎನ್.ಎಚ್.4ನ್ನು ಅಷ್ಟಪಥ ರಸ್ತೆಯಾಗಿ ವಿಸ್ತರಿಸುವ ಯೋಜನೆಯಿದೆ. ಈ ಕಾರಣಕ್ಕಾಗಿ ಶಾಲೆಯನ್ನು ಬೇರೆಡೆ ಸ್ಥಳಾಂತರ ಮಾಡಬೇಕಿತ್ತು. ಅದಕ್ಕಾಗಿ ಕೋರಾ ಗ್ರಾಮ ಪಂಚಾಯಿತಿ ಗ್ರಾಮದ ಪೂರ್ವ ಭಾಗದಲ್ಲಿ 30 ಗುಂಟೆ ಜಮೀನು ನೀಡಿತು. ಕಟ್ಟಡ ನಿರ್ಮಾಣ ಮಾಡಿಕೊಡಲು ಶ್ರೀಹರ್ಷ-ಮಮತ ದಂಪತಿ ಮುಂದೆ ಬಂದಿದ್ದಾರೆ. ಇದರಿಂದ ಮಕ್ಕಳಿಗೆ ಉತ್ತಮ ಮೂಲ ಸೌಕರ್ಯ ದೊರೆಯಲಿದೆ ಎನ್ನುತ್ತಾರೆ ಶಾಲೆಯ ಮುಖ್ಯೋಪಾಧ್ಯಾಯರು.

ಶ್ರೀಹರ್ಷ-ಮಮತ ದಂಪತಿ ತಮ್ಮ ತಾಯಿ-ತಂದೆ ಸರ್ವಮಂಗಳ ಹಿ.ಮ.ನಾಗಯ್ಯ ಹೆಸರಿನಲ್ಲಿ ಸರ್ಕಾರಿ ಶಾಲಾ ಕಟ್ಟಡವನ್ನು ಕಟ್ಟಿಕೊಡಲಿದ್ದಾರೆ. ಅದೂ 1 ಕೋಟಿ 75 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಆಗಲಿದೆ. ಸರ್ಕಾರಿ ಶಾಲಾ ಕಟ್ಟಡ ಎಲ್ ಆಕಾರ ಇರಲಿಲದೆ. ಒಟ್ಟು 14 ಕೊಠಡಿಗಳಿರುವ ಕಟ್ಟಡ ನಿರ್ಮಾಣಗೊಳ್ಳಲಿದೆ. ಫೂರ್ವಾಭಿಮುಖವಾಗಿ ಎರಡು ಅಂತಸ್ತಿನಲ್ಲಿ 10 ಕೊಠಡಿ ಮತ್ತು ದಕ್ಷಿಣಾಭಿಮುಖವಾಗಿ 4 ಕೊಠಡಿ ನಿರ್ಮಾಣಕ್ಕೆ ನೀಲನಕ್ಷೆ ತಯಾರಿಸಲಾಗಿದೆ. ಉತ್ತಮ ಗುಣಮಟ್ಟದ ಕಟ್ಟಡ ನಿರ್ಮಾಣಕ್ಕೆ ಈ ದಂಪತಿ ಪಣತೊಟ್ಟಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ ಕೊಠಡಿ ವ್ಯವಸ್ಥೆ ನಿರ್ಮಿಸಿದರೆ ಖಾಸಗಿ ಶಾಲೆಯ ಮಕ್ಕಳಂತೆ ಕಲಿಯುವ ವಾತಾವರಣ ಕಲ್ಪಿಸಿದರೆ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ವೇದಿಕೆಯೊದಗಿಸಿದಂತಾಗುತ್ತದೆ ಎಂಬುದು ಶ್ರೀಹರ್ಷ-ಮಮತ ಅಭಿಮತ.

ಈಗಿರುವ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆ ಸುಸಜ್ಜಿತವಾಗಿದ್ದರೂ ಅದು ರಸ್ತೆ ವಿಸ್ತರಣೆಯಿಂದ ಸಂಪೂರ್ಣವಾಗಿ ಇಲ್ಲವಾಗಲಿದೆ. ಇದೇ ಶಾಲೆಯಲ್ಲಿ ಹಲೆಯ ವಿದ್ಯಾರ್ಥಿಗಳ ಸಂಘ ಮತ್ತು ಎಸ್.ಡಿ.ಎಂ.ಸಿ ನೇತೃತ್ವದಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ಆರಂಭಿಸಲಾಗಿದ್ದು 50 ಮಕ್ಕಳಿದ್ದಾರೆ. ಇಬ್ಬರು ಶಿಕ್ಷಕರಿದ್ದು ಅವರಿಗೆ ಈ ಎರಡು ಸಂಘಗಳಿಂದ ಸಂಬಳ ನೀಡಲಾಗುತ್ತಿದೆ. ಪ್ರಸಕ್ತ ವರ್ಷ 300 ಮಕ್ಕಳು ಶಾಲೆಗೆ ಪ್ರವೇಶ ಮಾಡುವಂತೆ ತಯಾರಿ ನಡೆಯುತ್ತಿದೆ ಎಂದು ಡಮರುಗ ಉಮೇಶ್ ಹೇಳಿದ್ದಾರೆ.

ಮೂವತ್ತು ಗುಂಟೆ ಜಮೀನಿನಲ್ಲಿ ಆಟದ ಮೈದಾನವೂ ಇರಲಿದೆ. ಈ ಕಾರ್ಯಕ್ಕೆ ಮುಖ್ಯಶಿಕ್ಷಕರು, ಗ್ರಾಮ ಪಂಚಾಯಿತಿ ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರು ಸಂತಸ ವ್ಯಕ್ತಪಡಿಸಿದ್ದಾರೆ. ಇಂತಹದ್ದೊಂದು ಕಾರ್ಯದಿಂದ ನಮ್ಮ ಶಾಲೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಳ್ಳಲಿದೆ ಎಂದು ಹೇಳಿದ್ದಾರೆ. ಆಧುನಿಕತೆಗೆ ತಕ್ಕ ಹಾಗೆ ಈ ಶಾಲೆ ನಿರ್ಮಾಣವಾಗಲಿದ್ದು, ಮಕ್ಕಳ ಕಲಿಕೆ ಅನುಕೂಲವಾಗಲಿದೆ. ಗ್ರಾಮದ ಹೊರಭಾಗದಲ್ಲಿ ಈ ಶಾಲೆ ನಿರ್ಮಾಣ ವಾಗುತ್ತಿದ್ದು, ಪ್ರಶಾಂತ ವಾತಾವರಣ ಇರಲಿದೆ ಎಂದು ಹರ್ಷ ವ್ಯಕ್ತಿಪಡಿಸಿದ್ದಾರೆ. ಇಂತಹದ್ದೊಂದು ಮಾದರಿ ಕಾರ್ಯಕ್ಕೆ ಮುಂದಾದ ಶ್ರೀಹರ್ಷ ಮತ್ತು ಮಮತಾ ದಂಪತಿಗಳಿಗೊಂದು ಸೆಲ್ಯೂಟ್‌ ಇರಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...