Homeಮುಖಪುಟವಿಡಿಯೋ| ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1.75 ಕೋಟಿ ದೇಣಿಗೆ ಕೊಟ್ಟ ದಂಪತಿಗೊಂದು ಸೆಲ್ಯೂಟ್‌..

ವಿಡಿಯೋ| ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1.75 ಕೋಟಿ ದೇಣಿಗೆ ಕೊಟ್ಟ ದಂಪತಿಗೊಂದು ಸೆಲ್ಯೂಟ್‌..

ಮೂರು ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿದು ಜೂನ್‌ ತಿಂಗಳಿನಲ್ಲಿ ಮಕ್ಕಳು ಇದೇ ಶಾಲೆಯಲ್ಲಿ ಕಲಿಯಬೇಕೆನ್ನುವುದು ನಮ್ಮ ಆಶಯ ಎನ್ನುತ್ತಾರೆ ಶ್ರೀಹರ್ಷ-ಮಮತ ದಂಪತಿ.

- Advertisement -
- Advertisement -

ಸಮಾಜದಲ್ಲಿ ಒಳ್ಳೆಯವರು ಇನ್ನೂ ಇದ್ದಾರೆಂಬುದಕ್ಕೆ ಇವರೇ ಸಾಕ್ಷಿ. ತಾವು ದುಡಿದ ಹಣವನ್ನು ಒಳ್ಳೆಯ ಕೆಲಸ ಕಾರ್ಯಗಳಿಗೆ  ಬಳಸುವವರು ಅಪರೂಪ. ಎಲ್ಲವನ್ನು ಸದಾ ಲಾಭದ ದೃಷ್ಟಿಯಿಂದಲೇ ನೋಡುವಂತಹ ಈ ಕಾಲ ದಲ್ಲಿ ತನ್ನ ತಂದೆಯ ಹುಟ್ಟೂರಿನಲ್ಲಿ ಸರ್ಕಾರಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ದಂಪತಿಯೊಂದು 1 ಕೋಟಿ 75 ಲಕ್ಷ ಕೊಟ್ಟ ಅಪರೂಪದ ಘಟನೆ ತುಮಕೂರು ಜಿಲ್ಲೆಯ ಕೋರಾ ಗ್ರಾಮದಲ್ಲಿ ಜರುಗಿದೆ. ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಹೊತ್ತಿನಲ್ಲಿ ಸುಸಜ್ಜಿತ ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣ ಮಾಡಿಕೊಡಲು ಈ ದಂಪತಿ ಟೊಂಕ ಕಟ್ಟಿನಿಂತಿರುವುದು ಹಲವರಿಗೆ ಮಾದರಿಯಾಗಿದೆ.

ಅವರೇ ಬಳ್ಳಾರಿಯ ಶ್ರೀಹರ್ಷ ಮತ್ತು ಮಮತಗಳಾಗಿದ್ದಾರೆ., ತಮ್ಮ ಹಿಂದಿನ ಮೂರನೇ ತಲೆಮಾರು ಕೋರಾ ಗ್ರಾಮದಲ್ಲಿ ವಾಸವಿತ್ತು ಎಂಬ ಕಾರಣಕ್ಕೆ ಗ್ರಾಮವನ್ನು ಅರಸಿಕೊಂಡು ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಹಣ ನೀಡಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಶ್ರೀಹರ್ಷರವರ ಮಾತುಗಳನ್ನು ಕೇಳಿ

ಸರ್ಕಾರಿ ಶಾಲೆ 1 ಕೋಟಿ 75 ಲಕ್ಷ ದೇಣಿಗೆ ಕೊಟ್ಟ ದಂಪತಿ.

ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1 ಕೋಟಿ 75 ಲಕ್ಷ ಕೊಟ್ಟ ಶ್ರೀಹರ್ಷ ಮತ್ತು ಮಮತ ದಂಪತಿಗೊಂದು ಸೆಲ್ಯೂಟ್‌ ಇರಲಿ.. ಹರ್ಷರವರ ಮಾತುಗಳನ್ನು ಕೇಳಿ

Posted by Naanu Gauri on Thursday, March 12, 2020

ಶ್ರೀಹರ್ಷ ಮತ್ತು ಮಮತ ದಂಪತಿ ಬಳ್ಳಾರಿ ಜಿಲ್ಲೆಯ ಹಿರೇಕುಂಬಳಕುಂಟೆಯವರು. ಇವರ ವಂಶದ ಮೂರನೇ ತಲೆಮಾರು ತುಮಕೂರು ತಾಲೂಕಿನ ಕೋರಾದಲ್ಲಿ ವಾಸವಾಗಿತ್ತು. ಬಳ್ಳಾರಿಯಿಂದ ಬೆಂಗಳೂರಿಗೆ ಹೋಗಿಬರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುವಾಗಲೆಲ್ಲೆ ಕೋರಾ ನೋಡಿದರೆ ನಮ್ಮ ಹಿಂದಿನ ತಲೆಮಾರಿನ ನೆನಪಾಗುತ್ತಿತ್ತು. ರಸ್ತೆಯ ಬದಿಯಲ್ಲೇ ಇರುವ ಶಾಲೆಯನ್ನು ನೋಡುತ್ತಿದ್ದೆವು. ಹಾಗಾಗಿ ಈ ಗ್ರಾಮಕ್ಕೆ ಏನಾದರು ಕೊಡುಗೆ ನೀಡಬೇಕೆಂದು ಅಂದುಕೊಳ್ಳುತ್ತಿದ್ದೆವು. ಹಳೆಯ ತಲೆಮಾರಿನ ಸ್ಮರಣಾರ್ಥ ಗ್ರಾಮಕ್ಕೆ ಅಗತ್ಯವಿದ್ದ ಶಾಲೆ ಕಟ್ಟಿಸಿಕೊಡುವಂತಹ ತೀರ್ಮಾನ ಮಾಡಿದೆವು ಅನ್ನುತ್ತಾರೆ ಶ್ರೀಹರ್ಷ.

ಗ್ರಾಮ ಪಂಚಾಯಿತಿ, ಎಸ್‌ಡಿಎಂಸಿ ಅಧ್ಯಕ್ಷರನ್ನು ಮತ್ತು ಶಾಲೆಯ ಮುಖ್ಯಸ್ಥರನ್ನು ಭೇಟಿ ಮಾಡಿ ಚರ್ಚಿಸಿದೆವು. ನಮ್ಮ ಆಶಯಕ್ಕೆ ಅವರು ಪೂರಕವಾಗಿ ಸ್ಪಂದಿಸಿದರು. ಅದರ ಭಾಗವೇ ಇಂದು ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದೇವೆ. ಉತ್ತಮ ಶಾಲೆ ಕಟ್ಟಡ ನಿರ್ಮಿಸಿಕೊಟ್ಟರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಮೂರು ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿದು ಜೂನ್‌ ತಿಂಗಳಿನಲ್ಲಿ ಮಕ್ಕಳು ಇದೇ ಶಾಲೆಯಲ್ಲಿ ಕಲಿಯಬೇಕೆನ್ನುವುದು ನಮ್ಮ ಆಶಯ ಎನ್ನುತ್ತಾರೆ ಶ್ರೀಹರ್ಷ-ಮಮತ ದಂಪತಿ.

ಕೋರಾ ಗ್ರಾಮದ ಶಾಲೆ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಿದೆ. ರಸ್ತೆಯ ಪಕ್ಕದಲ್ಲೇ ಇರುವುದರಿಂದ ಅಪಘಾತ ಮತ್ತು ಪಾಠ ಪ್ರವಚನಕ್ಕೆ ತೊಂದರೆಯಾಗುತ್ತದೆ. ಇಲ್ಲಿ ಈಗಾಗಲೇ ಇಬ್ಬರು ಮಕ್ಕಳು ಅಪಘಾತದಿಂದ ಮೃತ ಪಟ್ಟಿದ್ದಾರೆ. ಇದರಿಂದ ಗ್ರಾಮಸ್ಥರು ಭೀತರಾಗಿದ್ದರು. ಈ ನಡುವೆ ಎನ್.ಎಚ್.4ನ್ನು ಅಷ್ಟಪಥ ರಸ್ತೆಯಾಗಿ ವಿಸ್ತರಿಸುವ ಯೋಜನೆಯಿದೆ. ಈ ಕಾರಣಕ್ಕಾಗಿ ಶಾಲೆಯನ್ನು ಬೇರೆಡೆ ಸ್ಥಳಾಂತರ ಮಾಡಬೇಕಿತ್ತು. ಅದಕ್ಕಾಗಿ ಕೋರಾ ಗ್ರಾಮ ಪಂಚಾಯಿತಿ ಗ್ರಾಮದ ಪೂರ್ವ ಭಾಗದಲ್ಲಿ 30 ಗುಂಟೆ ಜಮೀನು ನೀಡಿತು. ಕಟ್ಟಡ ನಿರ್ಮಾಣ ಮಾಡಿಕೊಡಲು ಶ್ರೀಹರ್ಷ-ಮಮತ ದಂಪತಿ ಮುಂದೆ ಬಂದಿದ್ದಾರೆ. ಇದರಿಂದ ಮಕ್ಕಳಿಗೆ ಉತ್ತಮ ಮೂಲ ಸೌಕರ್ಯ ದೊರೆಯಲಿದೆ ಎನ್ನುತ್ತಾರೆ ಶಾಲೆಯ ಮುಖ್ಯೋಪಾಧ್ಯಾಯರು.

ಶ್ರೀಹರ್ಷ-ಮಮತ ದಂಪತಿ ತಮ್ಮ ತಾಯಿ-ತಂದೆ ಸರ್ವಮಂಗಳ ಹಿ.ಮ.ನಾಗಯ್ಯ ಹೆಸರಿನಲ್ಲಿ ಸರ್ಕಾರಿ ಶಾಲಾ ಕಟ್ಟಡವನ್ನು ಕಟ್ಟಿಕೊಡಲಿದ್ದಾರೆ. ಅದೂ 1 ಕೋಟಿ 75 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಆಗಲಿದೆ. ಸರ್ಕಾರಿ ಶಾಲಾ ಕಟ್ಟಡ ಎಲ್ ಆಕಾರ ಇರಲಿಲದೆ. ಒಟ್ಟು 14 ಕೊಠಡಿಗಳಿರುವ ಕಟ್ಟಡ ನಿರ್ಮಾಣಗೊಳ್ಳಲಿದೆ. ಫೂರ್ವಾಭಿಮುಖವಾಗಿ ಎರಡು ಅಂತಸ್ತಿನಲ್ಲಿ 10 ಕೊಠಡಿ ಮತ್ತು ದಕ್ಷಿಣಾಭಿಮುಖವಾಗಿ 4 ಕೊಠಡಿ ನಿರ್ಮಾಣಕ್ಕೆ ನೀಲನಕ್ಷೆ ತಯಾರಿಸಲಾಗಿದೆ. ಉತ್ತಮ ಗುಣಮಟ್ಟದ ಕಟ್ಟಡ ನಿರ್ಮಾಣಕ್ಕೆ ಈ ದಂಪತಿ ಪಣತೊಟ್ಟಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ ಕೊಠಡಿ ವ್ಯವಸ್ಥೆ ನಿರ್ಮಿಸಿದರೆ ಖಾಸಗಿ ಶಾಲೆಯ ಮಕ್ಕಳಂತೆ ಕಲಿಯುವ ವಾತಾವರಣ ಕಲ್ಪಿಸಿದರೆ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ವೇದಿಕೆಯೊದಗಿಸಿದಂತಾಗುತ್ತದೆ ಎಂಬುದು ಶ್ರೀಹರ್ಷ-ಮಮತ ಅಭಿಮತ.

ಈಗಿರುವ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆ ಸುಸಜ್ಜಿತವಾಗಿದ್ದರೂ ಅದು ರಸ್ತೆ ವಿಸ್ತರಣೆಯಿಂದ ಸಂಪೂರ್ಣವಾಗಿ ಇಲ್ಲವಾಗಲಿದೆ. ಇದೇ ಶಾಲೆಯಲ್ಲಿ ಹಲೆಯ ವಿದ್ಯಾರ್ಥಿಗಳ ಸಂಘ ಮತ್ತು ಎಸ್.ಡಿ.ಎಂ.ಸಿ ನೇತೃತ್ವದಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ಆರಂಭಿಸಲಾಗಿದ್ದು 50 ಮಕ್ಕಳಿದ್ದಾರೆ. ಇಬ್ಬರು ಶಿಕ್ಷಕರಿದ್ದು ಅವರಿಗೆ ಈ ಎರಡು ಸಂಘಗಳಿಂದ ಸಂಬಳ ನೀಡಲಾಗುತ್ತಿದೆ. ಪ್ರಸಕ್ತ ವರ್ಷ 300 ಮಕ್ಕಳು ಶಾಲೆಗೆ ಪ್ರವೇಶ ಮಾಡುವಂತೆ ತಯಾರಿ ನಡೆಯುತ್ತಿದೆ ಎಂದು ಡಮರುಗ ಉಮೇಶ್ ಹೇಳಿದ್ದಾರೆ.

ಮೂವತ್ತು ಗುಂಟೆ ಜಮೀನಿನಲ್ಲಿ ಆಟದ ಮೈದಾನವೂ ಇರಲಿದೆ. ಈ ಕಾರ್ಯಕ್ಕೆ ಮುಖ್ಯಶಿಕ್ಷಕರು, ಗ್ರಾಮ ಪಂಚಾಯಿತಿ ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರು ಸಂತಸ ವ್ಯಕ್ತಪಡಿಸಿದ್ದಾರೆ. ಇಂತಹದ್ದೊಂದು ಕಾರ್ಯದಿಂದ ನಮ್ಮ ಶಾಲೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಳ್ಳಲಿದೆ ಎಂದು ಹೇಳಿದ್ದಾರೆ. ಆಧುನಿಕತೆಗೆ ತಕ್ಕ ಹಾಗೆ ಈ ಶಾಲೆ ನಿರ್ಮಾಣವಾಗಲಿದ್ದು, ಮಕ್ಕಳ ಕಲಿಕೆ ಅನುಕೂಲವಾಗಲಿದೆ. ಗ್ರಾಮದ ಹೊರಭಾಗದಲ್ಲಿ ಈ ಶಾಲೆ ನಿರ್ಮಾಣ ವಾಗುತ್ತಿದ್ದು, ಪ್ರಶಾಂತ ವಾತಾವರಣ ಇರಲಿದೆ ಎಂದು ಹರ್ಷ ವ್ಯಕ್ತಿಪಡಿಸಿದ್ದಾರೆ. ಇಂತಹದ್ದೊಂದು ಮಾದರಿ ಕಾರ್ಯಕ್ಕೆ ಮುಂದಾದ ಶ್ರೀಹರ್ಷ ಮತ್ತು ಮಮತಾ ದಂಪತಿಗಳಿಗೊಂದು ಸೆಲ್ಯೂಟ್‌ ಇರಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...