Homeಮುಖಪುಟವಿಡಿಯೋ| ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1.75 ಕೋಟಿ ದೇಣಿಗೆ ಕೊಟ್ಟ ದಂಪತಿಗೊಂದು ಸೆಲ್ಯೂಟ್‌..

ವಿಡಿಯೋ| ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1.75 ಕೋಟಿ ದೇಣಿಗೆ ಕೊಟ್ಟ ದಂಪತಿಗೊಂದು ಸೆಲ್ಯೂಟ್‌..

ಮೂರು ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿದು ಜೂನ್‌ ತಿಂಗಳಿನಲ್ಲಿ ಮಕ್ಕಳು ಇದೇ ಶಾಲೆಯಲ್ಲಿ ಕಲಿಯಬೇಕೆನ್ನುವುದು ನಮ್ಮ ಆಶಯ ಎನ್ನುತ್ತಾರೆ ಶ್ರೀಹರ್ಷ-ಮಮತ ದಂಪತಿ.

- Advertisement -
- Advertisement -

ಸಮಾಜದಲ್ಲಿ ಒಳ್ಳೆಯವರು ಇನ್ನೂ ಇದ್ದಾರೆಂಬುದಕ್ಕೆ ಇವರೇ ಸಾಕ್ಷಿ. ತಾವು ದುಡಿದ ಹಣವನ್ನು ಒಳ್ಳೆಯ ಕೆಲಸ ಕಾರ್ಯಗಳಿಗೆ  ಬಳಸುವವರು ಅಪರೂಪ. ಎಲ್ಲವನ್ನು ಸದಾ ಲಾಭದ ದೃಷ್ಟಿಯಿಂದಲೇ ನೋಡುವಂತಹ ಈ ಕಾಲ ದಲ್ಲಿ ತನ್ನ ತಂದೆಯ ಹುಟ್ಟೂರಿನಲ್ಲಿ ಸರ್ಕಾರಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ದಂಪತಿಯೊಂದು 1 ಕೋಟಿ 75 ಲಕ್ಷ ಕೊಟ್ಟ ಅಪರೂಪದ ಘಟನೆ ತುಮಕೂರು ಜಿಲ್ಲೆಯ ಕೋರಾ ಗ್ರಾಮದಲ್ಲಿ ಜರುಗಿದೆ. ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಹೊತ್ತಿನಲ್ಲಿ ಸುಸಜ್ಜಿತ ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣ ಮಾಡಿಕೊಡಲು ಈ ದಂಪತಿ ಟೊಂಕ ಕಟ್ಟಿನಿಂತಿರುವುದು ಹಲವರಿಗೆ ಮಾದರಿಯಾಗಿದೆ.

ಅವರೇ ಬಳ್ಳಾರಿಯ ಶ್ರೀಹರ್ಷ ಮತ್ತು ಮಮತಗಳಾಗಿದ್ದಾರೆ., ತಮ್ಮ ಹಿಂದಿನ ಮೂರನೇ ತಲೆಮಾರು ಕೋರಾ ಗ್ರಾಮದಲ್ಲಿ ವಾಸವಿತ್ತು ಎಂಬ ಕಾರಣಕ್ಕೆ ಗ್ರಾಮವನ್ನು ಅರಸಿಕೊಂಡು ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಹಣ ನೀಡಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಶ್ರೀಹರ್ಷರವರ ಮಾತುಗಳನ್ನು ಕೇಳಿ

ಸರ್ಕಾರಿ ಶಾಲೆ 1 ಕೋಟಿ 75 ಲಕ್ಷ ದೇಣಿಗೆ ಕೊಟ್ಟ ದಂಪತಿ.

ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1 ಕೋಟಿ 75 ಲಕ್ಷ ಕೊಟ್ಟ ಶ್ರೀಹರ್ಷ ಮತ್ತು ಮಮತ ದಂಪತಿಗೊಂದು ಸೆಲ್ಯೂಟ್‌ ಇರಲಿ.. ಹರ್ಷರವರ ಮಾತುಗಳನ್ನು ಕೇಳಿ

Posted by Naanu Gauri on Thursday, March 12, 2020

ಶ್ರೀಹರ್ಷ ಮತ್ತು ಮಮತ ದಂಪತಿ ಬಳ್ಳಾರಿ ಜಿಲ್ಲೆಯ ಹಿರೇಕುಂಬಳಕುಂಟೆಯವರು. ಇವರ ವಂಶದ ಮೂರನೇ ತಲೆಮಾರು ತುಮಕೂರು ತಾಲೂಕಿನ ಕೋರಾದಲ್ಲಿ ವಾಸವಾಗಿತ್ತು. ಬಳ್ಳಾರಿಯಿಂದ ಬೆಂಗಳೂರಿಗೆ ಹೋಗಿಬರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುವಾಗಲೆಲ್ಲೆ ಕೋರಾ ನೋಡಿದರೆ ನಮ್ಮ ಹಿಂದಿನ ತಲೆಮಾರಿನ ನೆನಪಾಗುತ್ತಿತ್ತು. ರಸ್ತೆಯ ಬದಿಯಲ್ಲೇ ಇರುವ ಶಾಲೆಯನ್ನು ನೋಡುತ್ತಿದ್ದೆವು. ಹಾಗಾಗಿ ಈ ಗ್ರಾಮಕ್ಕೆ ಏನಾದರು ಕೊಡುಗೆ ನೀಡಬೇಕೆಂದು ಅಂದುಕೊಳ್ಳುತ್ತಿದ್ದೆವು. ಹಳೆಯ ತಲೆಮಾರಿನ ಸ್ಮರಣಾರ್ಥ ಗ್ರಾಮಕ್ಕೆ ಅಗತ್ಯವಿದ್ದ ಶಾಲೆ ಕಟ್ಟಿಸಿಕೊಡುವಂತಹ ತೀರ್ಮಾನ ಮಾಡಿದೆವು ಅನ್ನುತ್ತಾರೆ ಶ್ರೀಹರ್ಷ.

ಗ್ರಾಮ ಪಂಚಾಯಿತಿ, ಎಸ್‌ಡಿಎಂಸಿ ಅಧ್ಯಕ್ಷರನ್ನು ಮತ್ತು ಶಾಲೆಯ ಮುಖ್ಯಸ್ಥರನ್ನು ಭೇಟಿ ಮಾಡಿ ಚರ್ಚಿಸಿದೆವು. ನಮ್ಮ ಆಶಯಕ್ಕೆ ಅವರು ಪೂರಕವಾಗಿ ಸ್ಪಂದಿಸಿದರು. ಅದರ ಭಾಗವೇ ಇಂದು ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದೇವೆ. ಉತ್ತಮ ಶಾಲೆ ಕಟ್ಟಡ ನಿರ್ಮಿಸಿಕೊಟ್ಟರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಮೂರು ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿದು ಜೂನ್‌ ತಿಂಗಳಿನಲ್ಲಿ ಮಕ್ಕಳು ಇದೇ ಶಾಲೆಯಲ್ಲಿ ಕಲಿಯಬೇಕೆನ್ನುವುದು ನಮ್ಮ ಆಶಯ ಎನ್ನುತ್ತಾರೆ ಶ್ರೀಹರ್ಷ-ಮಮತ ದಂಪತಿ.

ಕೋರಾ ಗ್ರಾಮದ ಶಾಲೆ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಿದೆ. ರಸ್ತೆಯ ಪಕ್ಕದಲ್ಲೇ ಇರುವುದರಿಂದ ಅಪಘಾತ ಮತ್ತು ಪಾಠ ಪ್ರವಚನಕ್ಕೆ ತೊಂದರೆಯಾಗುತ್ತದೆ. ಇಲ್ಲಿ ಈಗಾಗಲೇ ಇಬ್ಬರು ಮಕ್ಕಳು ಅಪಘಾತದಿಂದ ಮೃತ ಪಟ್ಟಿದ್ದಾರೆ. ಇದರಿಂದ ಗ್ರಾಮಸ್ಥರು ಭೀತರಾಗಿದ್ದರು. ಈ ನಡುವೆ ಎನ್.ಎಚ್.4ನ್ನು ಅಷ್ಟಪಥ ರಸ್ತೆಯಾಗಿ ವಿಸ್ತರಿಸುವ ಯೋಜನೆಯಿದೆ. ಈ ಕಾರಣಕ್ಕಾಗಿ ಶಾಲೆಯನ್ನು ಬೇರೆಡೆ ಸ್ಥಳಾಂತರ ಮಾಡಬೇಕಿತ್ತು. ಅದಕ್ಕಾಗಿ ಕೋರಾ ಗ್ರಾಮ ಪಂಚಾಯಿತಿ ಗ್ರಾಮದ ಪೂರ್ವ ಭಾಗದಲ್ಲಿ 30 ಗುಂಟೆ ಜಮೀನು ನೀಡಿತು. ಕಟ್ಟಡ ನಿರ್ಮಾಣ ಮಾಡಿಕೊಡಲು ಶ್ರೀಹರ್ಷ-ಮಮತ ದಂಪತಿ ಮುಂದೆ ಬಂದಿದ್ದಾರೆ. ಇದರಿಂದ ಮಕ್ಕಳಿಗೆ ಉತ್ತಮ ಮೂಲ ಸೌಕರ್ಯ ದೊರೆಯಲಿದೆ ಎನ್ನುತ್ತಾರೆ ಶಾಲೆಯ ಮುಖ್ಯೋಪಾಧ್ಯಾಯರು.

ಶ್ರೀಹರ್ಷ-ಮಮತ ದಂಪತಿ ತಮ್ಮ ತಾಯಿ-ತಂದೆ ಸರ್ವಮಂಗಳ ಹಿ.ಮ.ನಾಗಯ್ಯ ಹೆಸರಿನಲ್ಲಿ ಸರ್ಕಾರಿ ಶಾಲಾ ಕಟ್ಟಡವನ್ನು ಕಟ್ಟಿಕೊಡಲಿದ್ದಾರೆ. ಅದೂ 1 ಕೋಟಿ 75 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಆಗಲಿದೆ. ಸರ್ಕಾರಿ ಶಾಲಾ ಕಟ್ಟಡ ಎಲ್ ಆಕಾರ ಇರಲಿಲದೆ. ಒಟ್ಟು 14 ಕೊಠಡಿಗಳಿರುವ ಕಟ್ಟಡ ನಿರ್ಮಾಣಗೊಳ್ಳಲಿದೆ. ಫೂರ್ವಾಭಿಮುಖವಾಗಿ ಎರಡು ಅಂತಸ್ತಿನಲ್ಲಿ 10 ಕೊಠಡಿ ಮತ್ತು ದಕ್ಷಿಣಾಭಿಮುಖವಾಗಿ 4 ಕೊಠಡಿ ನಿರ್ಮಾಣಕ್ಕೆ ನೀಲನಕ್ಷೆ ತಯಾರಿಸಲಾಗಿದೆ. ಉತ್ತಮ ಗುಣಮಟ್ಟದ ಕಟ್ಟಡ ನಿರ್ಮಾಣಕ್ಕೆ ಈ ದಂಪತಿ ಪಣತೊಟ್ಟಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ ಕೊಠಡಿ ವ್ಯವಸ್ಥೆ ನಿರ್ಮಿಸಿದರೆ ಖಾಸಗಿ ಶಾಲೆಯ ಮಕ್ಕಳಂತೆ ಕಲಿಯುವ ವಾತಾವರಣ ಕಲ್ಪಿಸಿದರೆ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ವೇದಿಕೆಯೊದಗಿಸಿದಂತಾಗುತ್ತದೆ ಎಂಬುದು ಶ್ರೀಹರ್ಷ-ಮಮತ ಅಭಿಮತ.

ಈಗಿರುವ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆ ಸುಸಜ್ಜಿತವಾಗಿದ್ದರೂ ಅದು ರಸ್ತೆ ವಿಸ್ತರಣೆಯಿಂದ ಸಂಪೂರ್ಣವಾಗಿ ಇಲ್ಲವಾಗಲಿದೆ. ಇದೇ ಶಾಲೆಯಲ್ಲಿ ಹಲೆಯ ವಿದ್ಯಾರ್ಥಿಗಳ ಸಂಘ ಮತ್ತು ಎಸ್.ಡಿ.ಎಂ.ಸಿ ನೇತೃತ್ವದಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ಆರಂಭಿಸಲಾಗಿದ್ದು 50 ಮಕ್ಕಳಿದ್ದಾರೆ. ಇಬ್ಬರು ಶಿಕ್ಷಕರಿದ್ದು ಅವರಿಗೆ ಈ ಎರಡು ಸಂಘಗಳಿಂದ ಸಂಬಳ ನೀಡಲಾಗುತ್ತಿದೆ. ಪ್ರಸಕ್ತ ವರ್ಷ 300 ಮಕ್ಕಳು ಶಾಲೆಗೆ ಪ್ರವೇಶ ಮಾಡುವಂತೆ ತಯಾರಿ ನಡೆಯುತ್ತಿದೆ ಎಂದು ಡಮರುಗ ಉಮೇಶ್ ಹೇಳಿದ್ದಾರೆ.

ಮೂವತ್ತು ಗುಂಟೆ ಜಮೀನಿನಲ್ಲಿ ಆಟದ ಮೈದಾನವೂ ಇರಲಿದೆ. ಈ ಕಾರ್ಯಕ್ಕೆ ಮುಖ್ಯಶಿಕ್ಷಕರು, ಗ್ರಾಮ ಪಂಚಾಯಿತಿ ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರು ಸಂತಸ ವ್ಯಕ್ತಪಡಿಸಿದ್ದಾರೆ. ಇಂತಹದ್ದೊಂದು ಕಾರ್ಯದಿಂದ ನಮ್ಮ ಶಾಲೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಳ್ಳಲಿದೆ ಎಂದು ಹೇಳಿದ್ದಾರೆ. ಆಧುನಿಕತೆಗೆ ತಕ್ಕ ಹಾಗೆ ಈ ಶಾಲೆ ನಿರ್ಮಾಣವಾಗಲಿದ್ದು, ಮಕ್ಕಳ ಕಲಿಕೆ ಅನುಕೂಲವಾಗಲಿದೆ. ಗ್ರಾಮದ ಹೊರಭಾಗದಲ್ಲಿ ಈ ಶಾಲೆ ನಿರ್ಮಾಣ ವಾಗುತ್ತಿದ್ದು, ಪ್ರಶಾಂತ ವಾತಾವರಣ ಇರಲಿದೆ ಎಂದು ಹರ್ಷ ವ್ಯಕ್ತಿಪಡಿಸಿದ್ದಾರೆ. ಇಂತಹದ್ದೊಂದು ಮಾದರಿ ಕಾರ್ಯಕ್ಕೆ ಮುಂದಾದ ಶ್ರೀಹರ್ಷ ಮತ್ತು ಮಮತಾ ದಂಪತಿಗಳಿಗೊಂದು ಸೆಲ್ಯೂಟ್‌ ಇರಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...