Homeಮುಖಪುಟವಿಡಿಯೋ| ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1.75 ಕೋಟಿ ದೇಣಿಗೆ ಕೊಟ್ಟ ದಂಪತಿಗೊಂದು ಸೆಲ್ಯೂಟ್‌..

ವಿಡಿಯೋ| ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1.75 ಕೋಟಿ ದೇಣಿಗೆ ಕೊಟ್ಟ ದಂಪತಿಗೊಂದು ಸೆಲ್ಯೂಟ್‌..

ಮೂರು ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿದು ಜೂನ್‌ ತಿಂಗಳಿನಲ್ಲಿ ಮಕ್ಕಳು ಇದೇ ಶಾಲೆಯಲ್ಲಿ ಕಲಿಯಬೇಕೆನ್ನುವುದು ನಮ್ಮ ಆಶಯ ಎನ್ನುತ್ತಾರೆ ಶ್ರೀಹರ್ಷ-ಮಮತ ದಂಪತಿ.

- Advertisement -
- Advertisement -

ಸಮಾಜದಲ್ಲಿ ಒಳ್ಳೆಯವರು ಇನ್ನೂ ಇದ್ದಾರೆಂಬುದಕ್ಕೆ ಇವರೇ ಸಾಕ್ಷಿ. ತಾವು ದುಡಿದ ಹಣವನ್ನು ಒಳ್ಳೆಯ ಕೆಲಸ ಕಾರ್ಯಗಳಿಗೆ  ಬಳಸುವವರು ಅಪರೂಪ. ಎಲ್ಲವನ್ನು ಸದಾ ಲಾಭದ ದೃಷ್ಟಿಯಿಂದಲೇ ನೋಡುವಂತಹ ಈ ಕಾಲ ದಲ್ಲಿ ತನ್ನ ತಂದೆಯ ಹುಟ್ಟೂರಿನಲ್ಲಿ ಸರ್ಕಾರಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ದಂಪತಿಯೊಂದು 1 ಕೋಟಿ 75 ಲಕ್ಷ ಕೊಟ್ಟ ಅಪರೂಪದ ಘಟನೆ ತುಮಕೂರು ಜಿಲ್ಲೆಯ ಕೋರಾ ಗ್ರಾಮದಲ್ಲಿ ಜರುಗಿದೆ. ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಹೊತ್ತಿನಲ್ಲಿ ಸುಸಜ್ಜಿತ ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣ ಮಾಡಿಕೊಡಲು ಈ ದಂಪತಿ ಟೊಂಕ ಕಟ್ಟಿನಿಂತಿರುವುದು ಹಲವರಿಗೆ ಮಾದರಿಯಾಗಿದೆ.

ಅವರೇ ಬಳ್ಳಾರಿಯ ಶ್ರೀಹರ್ಷ ಮತ್ತು ಮಮತಗಳಾಗಿದ್ದಾರೆ., ತಮ್ಮ ಹಿಂದಿನ ಮೂರನೇ ತಲೆಮಾರು ಕೋರಾ ಗ್ರಾಮದಲ್ಲಿ ವಾಸವಿತ್ತು ಎಂಬ ಕಾರಣಕ್ಕೆ ಗ್ರಾಮವನ್ನು ಅರಸಿಕೊಂಡು ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಹಣ ನೀಡಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಶ್ರೀಹರ್ಷರವರ ಮಾತುಗಳನ್ನು ಕೇಳಿ

ಸರ್ಕಾರಿ ಶಾಲೆ 1 ಕೋಟಿ 75 ಲಕ್ಷ ದೇಣಿಗೆ ಕೊಟ್ಟ ದಂಪತಿ.

ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1 ಕೋಟಿ 75 ಲಕ್ಷ ಕೊಟ್ಟ ಶ್ರೀಹರ್ಷ ಮತ್ತು ಮಮತ ದಂಪತಿಗೊಂದು ಸೆಲ್ಯೂಟ್‌ ಇರಲಿ.. ಹರ್ಷರವರ ಮಾತುಗಳನ್ನು ಕೇಳಿ

Posted by Naanu Gauri on Thursday, March 12, 2020

ಶ್ರೀಹರ್ಷ ಮತ್ತು ಮಮತ ದಂಪತಿ ಬಳ್ಳಾರಿ ಜಿಲ್ಲೆಯ ಹಿರೇಕುಂಬಳಕುಂಟೆಯವರು. ಇವರ ವಂಶದ ಮೂರನೇ ತಲೆಮಾರು ತುಮಕೂರು ತಾಲೂಕಿನ ಕೋರಾದಲ್ಲಿ ವಾಸವಾಗಿತ್ತು. ಬಳ್ಳಾರಿಯಿಂದ ಬೆಂಗಳೂರಿಗೆ ಹೋಗಿಬರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುವಾಗಲೆಲ್ಲೆ ಕೋರಾ ನೋಡಿದರೆ ನಮ್ಮ ಹಿಂದಿನ ತಲೆಮಾರಿನ ನೆನಪಾಗುತ್ತಿತ್ತು. ರಸ್ತೆಯ ಬದಿಯಲ್ಲೇ ಇರುವ ಶಾಲೆಯನ್ನು ನೋಡುತ್ತಿದ್ದೆವು. ಹಾಗಾಗಿ ಈ ಗ್ರಾಮಕ್ಕೆ ಏನಾದರು ಕೊಡುಗೆ ನೀಡಬೇಕೆಂದು ಅಂದುಕೊಳ್ಳುತ್ತಿದ್ದೆವು. ಹಳೆಯ ತಲೆಮಾರಿನ ಸ್ಮರಣಾರ್ಥ ಗ್ರಾಮಕ್ಕೆ ಅಗತ್ಯವಿದ್ದ ಶಾಲೆ ಕಟ್ಟಿಸಿಕೊಡುವಂತಹ ತೀರ್ಮಾನ ಮಾಡಿದೆವು ಅನ್ನುತ್ತಾರೆ ಶ್ರೀಹರ್ಷ.

ಗ್ರಾಮ ಪಂಚಾಯಿತಿ, ಎಸ್‌ಡಿಎಂಸಿ ಅಧ್ಯಕ್ಷರನ್ನು ಮತ್ತು ಶಾಲೆಯ ಮುಖ್ಯಸ್ಥರನ್ನು ಭೇಟಿ ಮಾಡಿ ಚರ್ಚಿಸಿದೆವು. ನಮ್ಮ ಆಶಯಕ್ಕೆ ಅವರು ಪೂರಕವಾಗಿ ಸ್ಪಂದಿಸಿದರು. ಅದರ ಭಾಗವೇ ಇಂದು ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದೇವೆ. ಉತ್ತಮ ಶಾಲೆ ಕಟ್ಟಡ ನಿರ್ಮಿಸಿಕೊಟ್ಟರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಮೂರು ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿದು ಜೂನ್‌ ತಿಂಗಳಿನಲ್ಲಿ ಮಕ್ಕಳು ಇದೇ ಶಾಲೆಯಲ್ಲಿ ಕಲಿಯಬೇಕೆನ್ನುವುದು ನಮ್ಮ ಆಶಯ ಎನ್ನುತ್ತಾರೆ ಶ್ರೀಹರ್ಷ-ಮಮತ ದಂಪತಿ.

ಕೋರಾ ಗ್ರಾಮದ ಶಾಲೆ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಿದೆ. ರಸ್ತೆಯ ಪಕ್ಕದಲ್ಲೇ ಇರುವುದರಿಂದ ಅಪಘಾತ ಮತ್ತು ಪಾಠ ಪ್ರವಚನಕ್ಕೆ ತೊಂದರೆಯಾಗುತ್ತದೆ. ಇಲ್ಲಿ ಈಗಾಗಲೇ ಇಬ್ಬರು ಮಕ್ಕಳು ಅಪಘಾತದಿಂದ ಮೃತ ಪಟ್ಟಿದ್ದಾರೆ. ಇದರಿಂದ ಗ್ರಾಮಸ್ಥರು ಭೀತರಾಗಿದ್ದರು. ಈ ನಡುವೆ ಎನ್.ಎಚ್.4ನ್ನು ಅಷ್ಟಪಥ ರಸ್ತೆಯಾಗಿ ವಿಸ್ತರಿಸುವ ಯೋಜನೆಯಿದೆ. ಈ ಕಾರಣಕ್ಕಾಗಿ ಶಾಲೆಯನ್ನು ಬೇರೆಡೆ ಸ್ಥಳಾಂತರ ಮಾಡಬೇಕಿತ್ತು. ಅದಕ್ಕಾಗಿ ಕೋರಾ ಗ್ರಾಮ ಪಂಚಾಯಿತಿ ಗ್ರಾಮದ ಪೂರ್ವ ಭಾಗದಲ್ಲಿ 30 ಗುಂಟೆ ಜಮೀನು ನೀಡಿತು. ಕಟ್ಟಡ ನಿರ್ಮಾಣ ಮಾಡಿಕೊಡಲು ಶ್ರೀಹರ್ಷ-ಮಮತ ದಂಪತಿ ಮುಂದೆ ಬಂದಿದ್ದಾರೆ. ಇದರಿಂದ ಮಕ್ಕಳಿಗೆ ಉತ್ತಮ ಮೂಲ ಸೌಕರ್ಯ ದೊರೆಯಲಿದೆ ಎನ್ನುತ್ತಾರೆ ಶಾಲೆಯ ಮುಖ್ಯೋಪಾಧ್ಯಾಯರು.

ಶ್ರೀಹರ್ಷ-ಮಮತ ದಂಪತಿ ತಮ್ಮ ತಾಯಿ-ತಂದೆ ಸರ್ವಮಂಗಳ ಹಿ.ಮ.ನಾಗಯ್ಯ ಹೆಸರಿನಲ್ಲಿ ಸರ್ಕಾರಿ ಶಾಲಾ ಕಟ್ಟಡವನ್ನು ಕಟ್ಟಿಕೊಡಲಿದ್ದಾರೆ. ಅದೂ 1 ಕೋಟಿ 75 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಆಗಲಿದೆ. ಸರ್ಕಾರಿ ಶಾಲಾ ಕಟ್ಟಡ ಎಲ್ ಆಕಾರ ಇರಲಿಲದೆ. ಒಟ್ಟು 14 ಕೊಠಡಿಗಳಿರುವ ಕಟ್ಟಡ ನಿರ್ಮಾಣಗೊಳ್ಳಲಿದೆ. ಫೂರ್ವಾಭಿಮುಖವಾಗಿ ಎರಡು ಅಂತಸ್ತಿನಲ್ಲಿ 10 ಕೊಠಡಿ ಮತ್ತು ದಕ್ಷಿಣಾಭಿಮುಖವಾಗಿ 4 ಕೊಠಡಿ ನಿರ್ಮಾಣಕ್ಕೆ ನೀಲನಕ್ಷೆ ತಯಾರಿಸಲಾಗಿದೆ. ಉತ್ತಮ ಗುಣಮಟ್ಟದ ಕಟ್ಟಡ ನಿರ್ಮಾಣಕ್ಕೆ ಈ ದಂಪತಿ ಪಣತೊಟ್ಟಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ ಕೊಠಡಿ ವ್ಯವಸ್ಥೆ ನಿರ್ಮಿಸಿದರೆ ಖಾಸಗಿ ಶಾಲೆಯ ಮಕ್ಕಳಂತೆ ಕಲಿಯುವ ವಾತಾವರಣ ಕಲ್ಪಿಸಿದರೆ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ವೇದಿಕೆಯೊದಗಿಸಿದಂತಾಗುತ್ತದೆ ಎಂಬುದು ಶ್ರೀಹರ್ಷ-ಮಮತ ಅಭಿಮತ.

ಈಗಿರುವ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆ ಸುಸಜ್ಜಿತವಾಗಿದ್ದರೂ ಅದು ರಸ್ತೆ ವಿಸ್ತರಣೆಯಿಂದ ಸಂಪೂರ್ಣವಾಗಿ ಇಲ್ಲವಾಗಲಿದೆ. ಇದೇ ಶಾಲೆಯಲ್ಲಿ ಹಲೆಯ ವಿದ್ಯಾರ್ಥಿಗಳ ಸಂಘ ಮತ್ತು ಎಸ್.ಡಿ.ಎಂ.ಸಿ ನೇತೃತ್ವದಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ಆರಂಭಿಸಲಾಗಿದ್ದು 50 ಮಕ್ಕಳಿದ್ದಾರೆ. ಇಬ್ಬರು ಶಿಕ್ಷಕರಿದ್ದು ಅವರಿಗೆ ಈ ಎರಡು ಸಂಘಗಳಿಂದ ಸಂಬಳ ನೀಡಲಾಗುತ್ತಿದೆ. ಪ್ರಸಕ್ತ ವರ್ಷ 300 ಮಕ್ಕಳು ಶಾಲೆಗೆ ಪ್ರವೇಶ ಮಾಡುವಂತೆ ತಯಾರಿ ನಡೆಯುತ್ತಿದೆ ಎಂದು ಡಮರುಗ ಉಮೇಶ್ ಹೇಳಿದ್ದಾರೆ.

ಮೂವತ್ತು ಗುಂಟೆ ಜಮೀನಿನಲ್ಲಿ ಆಟದ ಮೈದಾನವೂ ಇರಲಿದೆ. ಈ ಕಾರ್ಯಕ್ಕೆ ಮುಖ್ಯಶಿಕ್ಷಕರು, ಗ್ರಾಮ ಪಂಚಾಯಿತಿ ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರು ಸಂತಸ ವ್ಯಕ್ತಪಡಿಸಿದ್ದಾರೆ. ಇಂತಹದ್ದೊಂದು ಕಾರ್ಯದಿಂದ ನಮ್ಮ ಶಾಲೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಳ್ಳಲಿದೆ ಎಂದು ಹೇಳಿದ್ದಾರೆ. ಆಧುನಿಕತೆಗೆ ತಕ್ಕ ಹಾಗೆ ಈ ಶಾಲೆ ನಿರ್ಮಾಣವಾಗಲಿದ್ದು, ಮಕ್ಕಳ ಕಲಿಕೆ ಅನುಕೂಲವಾಗಲಿದೆ. ಗ್ರಾಮದ ಹೊರಭಾಗದಲ್ಲಿ ಈ ಶಾಲೆ ನಿರ್ಮಾಣ ವಾಗುತ್ತಿದ್ದು, ಪ್ರಶಾಂತ ವಾತಾವರಣ ಇರಲಿದೆ ಎಂದು ಹರ್ಷ ವ್ಯಕ್ತಿಪಡಿಸಿದ್ದಾರೆ. ಇಂತಹದ್ದೊಂದು ಮಾದರಿ ಕಾರ್ಯಕ್ಕೆ ಮುಂದಾದ ಶ್ರೀಹರ್ಷ ಮತ್ತು ಮಮತಾ ದಂಪತಿಗಳಿಗೊಂದು ಸೆಲ್ಯೂಟ್‌ ಇರಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...