Homeಮುಖಪುಟವಿಡಿಯೋ| ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1.75 ಕೋಟಿ ದೇಣಿಗೆ ಕೊಟ್ಟ ದಂಪತಿಗೊಂದು ಸೆಲ್ಯೂಟ್‌..

ವಿಡಿಯೋ| ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1.75 ಕೋಟಿ ದೇಣಿಗೆ ಕೊಟ್ಟ ದಂಪತಿಗೊಂದು ಸೆಲ್ಯೂಟ್‌..

ಮೂರು ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿದು ಜೂನ್‌ ತಿಂಗಳಿನಲ್ಲಿ ಮಕ್ಕಳು ಇದೇ ಶಾಲೆಯಲ್ಲಿ ಕಲಿಯಬೇಕೆನ್ನುವುದು ನಮ್ಮ ಆಶಯ ಎನ್ನುತ್ತಾರೆ ಶ್ರೀಹರ್ಷ-ಮಮತ ದಂಪತಿ.

- Advertisement -
- Advertisement -

ಸಮಾಜದಲ್ಲಿ ಒಳ್ಳೆಯವರು ಇನ್ನೂ ಇದ್ದಾರೆಂಬುದಕ್ಕೆ ಇವರೇ ಸಾಕ್ಷಿ. ತಾವು ದುಡಿದ ಹಣವನ್ನು ಒಳ್ಳೆಯ ಕೆಲಸ ಕಾರ್ಯಗಳಿಗೆ  ಬಳಸುವವರು ಅಪರೂಪ. ಎಲ್ಲವನ್ನು ಸದಾ ಲಾಭದ ದೃಷ್ಟಿಯಿಂದಲೇ ನೋಡುವಂತಹ ಈ ಕಾಲ ದಲ್ಲಿ ತನ್ನ ತಂದೆಯ ಹುಟ್ಟೂರಿನಲ್ಲಿ ಸರ್ಕಾರಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ದಂಪತಿಯೊಂದು 1 ಕೋಟಿ 75 ಲಕ್ಷ ಕೊಟ್ಟ ಅಪರೂಪದ ಘಟನೆ ತುಮಕೂರು ಜಿಲ್ಲೆಯ ಕೋರಾ ಗ್ರಾಮದಲ್ಲಿ ಜರುಗಿದೆ. ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಹೊತ್ತಿನಲ್ಲಿ ಸುಸಜ್ಜಿತ ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣ ಮಾಡಿಕೊಡಲು ಈ ದಂಪತಿ ಟೊಂಕ ಕಟ್ಟಿನಿಂತಿರುವುದು ಹಲವರಿಗೆ ಮಾದರಿಯಾಗಿದೆ.

ಅವರೇ ಬಳ್ಳಾರಿಯ ಶ್ರೀಹರ್ಷ ಮತ್ತು ಮಮತಗಳಾಗಿದ್ದಾರೆ., ತಮ್ಮ ಹಿಂದಿನ ಮೂರನೇ ತಲೆಮಾರು ಕೋರಾ ಗ್ರಾಮದಲ್ಲಿ ವಾಸವಿತ್ತು ಎಂಬ ಕಾರಣಕ್ಕೆ ಗ್ರಾಮವನ್ನು ಅರಸಿಕೊಂಡು ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಹಣ ನೀಡಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಶ್ರೀಹರ್ಷರವರ ಮಾತುಗಳನ್ನು ಕೇಳಿ

ಸರ್ಕಾರಿ ಶಾಲೆ 1 ಕೋಟಿ 75 ಲಕ್ಷ ದೇಣಿಗೆ ಕೊಟ್ಟ ದಂಪತಿ.

ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1 ಕೋಟಿ 75 ಲಕ್ಷ ಕೊಟ್ಟ ಶ್ರೀಹರ್ಷ ಮತ್ತು ಮಮತ ದಂಪತಿಗೊಂದು ಸೆಲ್ಯೂಟ್‌ ಇರಲಿ.. ಹರ್ಷರವರ ಮಾತುಗಳನ್ನು ಕೇಳಿ

Posted by Naanu Gauri on Thursday, March 12, 2020

ಶ್ರೀಹರ್ಷ ಮತ್ತು ಮಮತ ದಂಪತಿ ಬಳ್ಳಾರಿ ಜಿಲ್ಲೆಯ ಹಿರೇಕುಂಬಳಕುಂಟೆಯವರು. ಇವರ ವಂಶದ ಮೂರನೇ ತಲೆಮಾರು ತುಮಕೂರು ತಾಲೂಕಿನ ಕೋರಾದಲ್ಲಿ ವಾಸವಾಗಿತ್ತು. ಬಳ್ಳಾರಿಯಿಂದ ಬೆಂಗಳೂರಿಗೆ ಹೋಗಿಬರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುವಾಗಲೆಲ್ಲೆ ಕೋರಾ ನೋಡಿದರೆ ನಮ್ಮ ಹಿಂದಿನ ತಲೆಮಾರಿನ ನೆನಪಾಗುತ್ತಿತ್ತು. ರಸ್ತೆಯ ಬದಿಯಲ್ಲೇ ಇರುವ ಶಾಲೆಯನ್ನು ನೋಡುತ್ತಿದ್ದೆವು. ಹಾಗಾಗಿ ಈ ಗ್ರಾಮಕ್ಕೆ ಏನಾದರು ಕೊಡುಗೆ ನೀಡಬೇಕೆಂದು ಅಂದುಕೊಳ್ಳುತ್ತಿದ್ದೆವು. ಹಳೆಯ ತಲೆಮಾರಿನ ಸ್ಮರಣಾರ್ಥ ಗ್ರಾಮಕ್ಕೆ ಅಗತ್ಯವಿದ್ದ ಶಾಲೆ ಕಟ್ಟಿಸಿಕೊಡುವಂತಹ ತೀರ್ಮಾನ ಮಾಡಿದೆವು ಅನ್ನುತ್ತಾರೆ ಶ್ರೀಹರ್ಷ.

ಗ್ರಾಮ ಪಂಚಾಯಿತಿ, ಎಸ್‌ಡಿಎಂಸಿ ಅಧ್ಯಕ್ಷರನ್ನು ಮತ್ತು ಶಾಲೆಯ ಮುಖ್ಯಸ್ಥರನ್ನು ಭೇಟಿ ಮಾಡಿ ಚರ್ಚಿಸಿದೆವು. ನಮ್ಮ ಆಶಯಕ್ಕೆ ಅವರು ಪೂರಕವಾಗಿ ಸ್ಪಂದಿಸಿದರು. ಅದರ ಭಾಗವೇ ಇಂದು ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದೇವೆ. ಉತ್ತಮ ಶಾಲೆ ಕಟ್ಟಡ ನಿರ್ಮಿಸಿಕೊಟ್ಟರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಮೂರು ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿದು ಜೂನ್‌ ತಿಂಗಳಿನಲ್ಲಿ ಮಕ್ಕಳು ಇದೇ ಶಾಲೆಯಲ್ಲಿ ಕಲಿಯಬೇಕೆನ್ನುವುದು ನಮ್ಮ ಆಶಯ ಎನ್ನುತ್ತಾರೆ ಶ್ರೀಹರ್ಷ-ಮಮತ ದಂಪತಿ.

ಕೋರಾ ಗ್ರಾಮದ ಶಾಲೆ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಿದೆ. ರಸ್ತೆಯ ಪಕ್ಕದಲ್ಲೇ ಇರುವುದರಿಂದ ಅಪಘಾತ ಮತ್ತು ಪಾಠ ಪ್ರವಚನಕ್ಕೆ ತೊಂದರೆಯಾಗುತ್ತದೆ. ಇಲ್ಲಿ ಈಗಾಗಲೇ ಇಬ್ಬರು ಮಕ್ಕಳು ಅಪಘಾತದಿಂದ ಮೃತ ಪಟ್ಟಿದ್ದಾರೆ. ಇದರಿಂದ ಗ್ರಾಮಸ್ಥರು ಭೀತರಾಗಿದ್ದರು. ಈ ನಡುವೆ ಎನ್.ಎಚ್.4ನ್ನು ಅಷ್ಟಪಥ ರಸ್ತೆಯಾಗಿ ವಿಸ್ತರಿಸುವ ಯೋಜನೆಯಿದೆ. ಈ ಕಾರಣಕ್ಕಾಗಿ ಶಾಲೆಯನ್ನು ಬೇರೆಡೆ ಸ್ಥಳಾಂತರ ಮಾಡಬೇಕಿತ್ತು. ಅದಕ್ಕಾಗಿ ಕೋರಾ ಗ್ರಾಮ ಪಂಚಾಯಿತಿ ಗ್ರಾಮದ ಪೂರ್ವ ಭಾಗದಲ್ಲಿ 30 ಗುಂಟೆ ಜಮೀನು ನೀಡಿತು. ಕಟ್ಟಡ ನಿರ್ಮಾಣ ಮಾಡಿಕೊಡಲು ಶ್ರೀಹರ್ಷ-ಮಮತ ದಂಪತಿ ಮುಂದೆ ಬಂದಿದ್ದಾರೆ. ಇದರಿಂದ ಮಕ್ಕಳಿಗೆ ಉತ್ತಮ ಮೂಲ ಸೌಕರ್ಯ ದೊರೆಯಲಿದೆ ಎನ್ನುತ್ತಾರೆ ಶಾಲೆಯ ಮುಖ್ಯೋಪಾಧ್ಯಾಯರು.

ಶ್ರೀಹರ್ಷ-ಮಮತ ದಂಪತಿ ತಮ್ಮ ತಾಯಿ-ತಂದೆ ಸರ್ವಮಂಗಳ ಹಿ.ಮ.ನಾಗಯ್ಯ ಹೆಸರಿನಲ್ಲಿ ಸರ್ಕಾರಿ ಶಾಲಾ ಕಟ್ಟಡವನ್ನು ಕಟ್ಟಿಕೊಡಲಿದ್ದಾರೆ. ಅದೂ 1 ಕೋಟಿ 75 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಆಗಲಿದೆ. ಸರ್ಕಾರಿ ಶಾಲಾ ಕಟ್ಟಡ ಎಲ್ ಆಕಾರ ಇರಲಿಲದೆ. ಒಟ್ಟು 14 ಕೊಠಡಿಗಳಿರುವ ಕಟ್ಟಡ ನಿರ್ಮಾಣಗೊಳ್ಳಲಿದೆ. ಫೂರ್ವಾಭಿಮುಖವಾಗಿ ಎರಡು ಅಂತಸ್ತಿನಲ್ಲಿ 10 ಕೊಠಡಿ ಮತ್ತು ದಕ್ಷಿಣಾಭಿಮುಖವಾಗಿ 4 ಕೊಠಡಿ ನಿರ್ಮಾಣಕ್ಕೆ ನೀಲನಕ್ಷೆ ತಯಾರಿಸಲಾಗಿದೆ. ಉತ್ತಮ ಗುಣಮಟ್ಟದ ಕಟ್ಟಡ ನಿರ್ಮಾಣಕ್ಕೆ ಈ ದಂಪತಿ ಪಣತೊಟ್ಟಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ ಕೊಠಡಿ ವ್ಯವಸ್ಥೆ ನಿರ್ಮಿಸಿದರೆ ಖಾಸಗಿ ಶಾಲೆಯ ಮಕ್ಕಳಂತೆ ಕಲಿಯುವ ವಾತಾವರಣ ಕಲ್ಪಿಸಿದರೆ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ವೇದಿಕೆಯೊದಗಿಸಿದಂತಾಗುತ್ತದೆ ಎಂಬುದು ಶ್ರೀಹರ್ಷ-ಮಮತ ಅಭಿಮತ.

ಈಗಿರುವ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆ ಸುಸಜ್ಜಿತವಾಗಿದ್ದರೂ ಅದು ರಸ್ತೆ ವಿಸ್ತರಣೆಯಿಂದ ಸಂಪೂರ್ಣವಾಗಿ ಇಲ್ಲವಾಗಲಿದೆ. ಇದೇ ಶಾಲೆಯಲ್ಲಿ ಹಲೆಯ ವಿದ್ಯಾರ್ಥಿಗಳ ಸಂಘ ಮತ್ತು ಎಸ್.ಡಿ.ಎಂ.ಸಿ ನೇತೃತ್ವದಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ಆರಂಭಿಸಲಾಗಿದ್ದು 50 ಮಕ್ಕಳಿದ್ದಾರೆ. ಇಬ್ಬರು ಶಿಕ್ಷಕರಿದ್ದು ಅವರಿಗೆ ಈ ಎರಡು ಸಂಘಗಳಿಂದ ಸಂಬಳ ನೀಡಲಾಗುತ್ತಿದೆ. ಪ್ರಸಕ್ತ ವರ್ಷ 300 ಮಕ್ಕಳು ಶಾಲೆಗೆ ಪ್ರವೇಶ ಮಾಡುವಂತೆ ತಯಾರಿ ನಡೆಯುತ್ತಿದೆ ಎಂದು ಡಮರುಗ ಉಮೇಶ್ ಹೇಳಿದ್ದಾರೆ.

ಮೂವತ್ತು ಗುಂಟೆ ಜಮೀನಿನಲ್ಲಿ ಆಟದ ಮೈದಾನವೂ ಇರಲಿದೆ. ಈ ಕಾರ್ಯಕ್ಕೆ ಮುಖ್ಯಶಿಕ್ಷಕರು, ಗ್ರಾಮ ಪಂಚಾಯಿತಿ ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರು ಸಂತಸ ವ್ಯಕ್ತಪಡಿಸಿದ್ದಾರೆ. ಇಂತಹದ್ದೊಂದು ಕಾರ್ಯದಿಂದ ನಮ್ಮ ಶಾಲೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಳ್ಳಲಿದೆ ಎಂದು ಹೇಳಿದ್ದಾರೆ. ಆಧುನಿಕತೆಗೆ ತಕ್ಕ ಹಾಗೆ ಈ ಶಾಲೆ ನಿರ್ಮಾಣವಾಗಲಿದ್ದು, ಮಕ್ಕಳ ಕಲಿಕೆ ಅನುಕೂಲವಾಗಲಿದೆ. ಗ್ರಾಮದ ಹೊರಭಾಗದಲ್ಲಿ ಈ ಶಾಲೆ ನಿರ್ಮಾಣ ವಾಗುತ್ತಿದ್ದು, ಪ್ರಶಾಂತ ವಾತಾವರಣ ಇರಲಿದೆ ಎಂದು ಹರ್ಷ ವ್ಯಕ್ತಿಪಡಿಸಿದ್ದಾರೆ. ಇಂತಹದ್ದೊಂದು ಮಾದರಿ ಕಾರ್ಯಕ್ಕೆ ಮುಂದಾದ ಶ್ರೀಹರ್ಷ ಮತ್ತು ಮಮತಾ ದಂಪತಿಗಳಿಗೊಂದು ಸೆಲ್ಯೂಟ್‌ ಇರಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...