Homeಮುಖಪುಟವಿಡಿಯೋ| ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1.75 ಕೋಟಿ ದೇಣಿಗೆ ಕೊಟ್ಟ ದಂಪತಿಗೊಂದು ಸೆಲ್ಯೂಟ್‌..

ವಿಡಿಯೋ| ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1.75 ಕೋಟಿ ದೇಣಿಗೆ ಕೊಟ್ಟ ದಂಪತಿಗೊಂದು ಸೆಲ್ಯೂಟ್‌..

ಮೂರು ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿದು ಜೂನ್‌ ತಿಂಗಳಿನಲ್ಲಿ ಮಕ್ಕಳು ಇದೇ ಶಾಲೆಯಲ್ಲಿ ಕಲಿಯಬೇಕೆನ್ನುವುದು ನಮ್ಮ ಆಶಯ ಎನ್ನುತ್ತಾರೆ ಶ್ರೀಹರ್ಷ-ಮಮತ ದಂಪತಿ.

- Advertisement -
- Advertisement -

ಸಮಾಜದಲ್ಲಿ ಒಳ್ಳೆಯವರು ಇನ್ನೂ ಇದ್ದಾರೆಂಬುದಕ್ಕೆ ಇವರೇ ಸಾಕ್ಷಿ. ತಾವು ದುಡಿದ ಹಣವನ್ನು ಒಳ್ಳೆಯ ಕೆಲಸ ಕಾರ್ಯಗಳಿಗೆ  ಬಳಸುವವರು ಅಪರೂಪ. ಎಲ್ಲವನ್ನು ಸದಾ ಲಾಭದ ದೃಷ್ಟಿಯಿಂದಲೇ ನೋಡುವಂತಹ ಈ ಕಾಲ ದಲ್ಲಿ ತನ್ನ ತಂದೆಯ ಹುಟ್ಟೂರಿನಲ್ಲಿ ಸರ್ಕಾರಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ದಂಪತಿಯೊಂದು 1 ಕೋಟಿ 75 ಲಕ್ಷ ಕೊಟ್ಟ ಅಪರೂಪದ ಘಟನೆ ತುಮಕೂರು ಜಿಲ್ಲೆಯ ಕೋರಾ ಗ್ರಾಮದಲ್ಲಿ ಜರುಗಿದೆ. ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಹೊತ್ತಿನಲ್ಲಿ ಸುಸಜ್ಜಿತ ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣ ಮಾಡಿಕೊಡಲು ಈ ದಂಪತಿ ಟೊಂಕ ಕಟ್ಟಿನಿಂತಿರುವುದು ಹಲವರಿಗೆ ಮಾದರಿಯಾಗಿದೆ.

ಅವರೇ ಬಳ್ಳಾರಿಯ ಶ್ರೀಹರ್ಷ ಮತ್ತು ಮಮತಗಳಾಗಿದ್ದಾರೆ., ತಮ್ಮ ಹಿಂದಿನ ಮೂರನೇ ತಲೆಮಾರು ಕೋರಾ ಗ್ರಾಮದಲ್ಲಿ ವಾಸವಿತ್ತು ಎಂಬ ಕಾರಣಕ್ಕೆ ಗ್ರಾಮವನ್ನು ಅರಸಿಕೊಂಡು ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಹಣ ನೀಡಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಶ್ರೀಹರ್ಷರವರ ಮಾತುಗಳನ್ನು ಕೇಳಿ

ಸರ್ಕಾರಿ ಶಾಲೆ 1 ಕೋಟಿ 75 ಲಕ್ಷ ದೇಣಿಗೆ ಕೊಟ್ಟ ದಂಪತಿ.

ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1 ಕೋಟಿ 75 ಲಕ್ಷ ಕೊಟ್ಟ ಶ್ರೀಹರ್ಷ ಮತ್ತು ಮಮತ ದಂಪತಿಗೊಂದು ಸೆಲ್ಯೂಟ್‌ ಇರಲಿ.. ಹರ್ಷರವರ ಮಾತುಗಳನ್ನು ಕೇಳಿ

Posted by Naanu Gauri on Thursday, March 12, 2020

ಶ್ರೀಹರ್ಷ ಮತ್ತು ಮಮತ ದಂಪತಿ ಬಳ್ಳಾರಿ ಜಿಲ್ಲೆಯ ಹಿರೇಕುಂಬಳಕುಂಟೆಯವರು. ಇವರ ವಂಶದ ಮೂರನೇ ತಲೆಮಾರು ತುಮಕೂರು ತಾಲೂಕಿನ ಕೋರಾದಲ್ಲಿ ವಾಸವಾಗಿತ್ತು. ಬಳ್ಳಾರಿಯಿಂದ ಬೆಂಗಳೂರಿಗೆ ಹೋಗಿಬರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುವಾಗಲೆಲ್ಲೆ ಕೋರಾ ನೋಡಿದರೆ ನಮ್ಮ ಹಿಂದಿನ ತಲೆಮಾರಿನ ನೆನಪಾಗುತ್ತಿತ್ತು. ರಸ್ತೆಯ ಬದಿಯಲ್ಲೇ ಇರುವ ಶಾಲೆಯನ್ನು ನೋಡುತ್ತಿದ್ದೆವು. ಹಾಗಾಗಿ ಈ ಗ್ರಾಮಕ್ಕೆ ಏನಾದರು ಕೊಡುಗೆ ನೀಡಬೇಕೆಂದು ಅಂದುಕೊಳ್ಳುತ್ತಿದ್ದೆವು. ಹಳೆಯ ತಲೆಮಾರಿನ ಸ್ಮರಣಾರ್ಥ ಗ್ರಾಮಕ್ಕೆ ಅಗತ್ಯವಿದ್ದ ಶಾಲೆ ಕಟ್ಟಿಸಿಕೊಡುವಂತಹ ತೀರ್ಮಾನ ಮಾಡಿದೆವು ಅನ್ನುತ್ತಾರೆ ಶ್ರೀಹರ್ಷ.

ಗ್ರಾಮ ಪಂಚಾಯಿತಿ, ಎಸ್‌ಡಿಎಂಸಿ ಅಧ್ಯಕ್ಷರನ್ನು ಮತ್ತು ಶಾಲೆಯ ಮುಖ್ಯಸ್ಥರನ್ನು ಭೇಟಿ ಮಾಡಿ ಚರ್ಚಿಸಿದೆವು. ನಮ್ಮ ಆಶಯಕ್ಕೆ ಅವರು ಪೂರಕವಾಗಿ ಸ್ಪಂದಿಸಿದರು. ಅದರ ಭಾಗವೇ ಇಂದು ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದೇವೆ. ಉತ್ತಮ ಶಾಲೆ ಕಟ್ಟಡ ನಿರ್ಮಿಸಿಕೊಟ್ಟರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಮೂರು ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿದು ಜೂನ್‌ ತಿಂಗಳಿನಲ್ಲಿ ಮಕ್ಕಳು ಇದೇ ಶಾಲೆಯಲ್ಲಿ ಕಲಿಯಬೇಕೆನ್ನುವುದು ನಮ್ಮ ಆಶಯ ಎನ್ನುತ್ತಾರೆ ಶ್ರೀಹರ್ಷ-ಮಮತ ದಂಪತಿ.

ಕೋರಾ ಗ್ರಾಮದ ಶಾಲೆ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಿದೆ. ರಸ್ತೆಯ ಪಕ್ಕದಲ್ಲೇ ಇರುವುದರಿಂದ ಅಪಘಾತ ಮತ್ತು ಪಾಠ ಪ್ರವಚನಕ್ಕೆ ತೊಂದರೆಯಾಗುತ್ತದೆ. ಇಲ್ಲಿ ಈಗಾಗಲೇ ಇಬ್ಬರು ಮಕ್ಕಳು ಅಪಘಾತದಿಂದ ಮೃತ ಪಟ್ಟಿದ್ದಾರೆ. ಇದರಿಂದ ಗ್ರಾಮಸ್ಥರು ಭೀತರಾಗಿದ್ದರು. ಈ ನಡುವೆ ಎನ್.ಎಚ್.4ನ್ನು ಅಷ್ಟಪಥ ರಸ್ತೆಯಾಗಿ ವಿಸ್ತರಿಸುವ ಯೋಜನೆಯಿದೆ. ಈ ಕಾರಣಕ್ಕಾಗಿ ಶಾಲೆಯನ್ನು ಬೇರೆಡೆ ಸ್ಥಳಾಂತರ ಮಾಡಬೇಕಿತ್ತು. ಅದಕ್ಕಾಗಿ ಕೋರಾ ಗ್ರಾಮ ಪಂಚಾಯಿತಿ ಗ್ರಾಮದ ಪೂರ್ವ ಭಾಗದಲ್ಲಿ 30 ಗುಂಟೆ ಜಮೀನು ನೀಡಿತು. ಕಟ್ಟಡ ನಿರ್ಮಾಣ ಮಾಡಿಕೊಡಲು ಶ್ರೀಹರ್ಷ-ಮಮತ ದಂಪತಿ ಮುಂದೆ ಬಂದಿದ್ದಾರೆ. ಇದರಿಂದ ಮಕ್ಕಳಿಗೆ ಉತ್ತಮ ಮೂಲ ಸೌಕರ್ಯ ದೊರೆಯಲಿದೆ ಎನ್ನುತ್ತಾರೆ ಶಾಲೆಯ ಮುಖ್ಯೋಪಾಧ್ಯಾಯರು.

ಶ್ರೀಹರ್ಷ-ಮಮತ ದಂಪತಿ ತಮ್ಮ ತಾಯಿ-ತಂದೆ ಸರ್ವಮಂಗಳ ಹಿ.ಮ.ನಾಗಯ್ಯ ಹೆಸರಿನಲ್ಲಿ ಸರ್ಕಾರಿ ಶಾಲಾ ಕಟ್ಟಡವನ್ನು ಕಟ್ಟಿಕೊಡಲಿದ್ದಾರೆ. ಅದೂ 1 ಕೋಟಿ 75 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಆಗಲಿದೆ. ಸರ್ಕಾರಿ ಶಾಲಾ ಕಟ್ಟಡ ಎಲ್ ಆಕಾರ ಇರಲಿಲದೆ. ಒಟ್ಟು 14 ಕೊಠಡಿಗಳಿರುವ ಕಟ್ಟಡ ನಿರ್ಮಾಣಗೊಳ್ಳಲಿದೆ. ಫೂರ್ವಾಭಿಮುಖವಾಗಿ ಎರಡು ಅಂತಸ್ತಿನಲ್ಲಿ 10 ಕೊಠಡಿ ಮತ್ತು ದಕ್ಷಿಣಾಭಿಮುಖವಾಗಿ 4 ಕೊಠಡಿ ನಿರ್ಮಾಣಕ್ಕೆ ನೀಲನಕ್ಷೆ ತಯಾರಿಸಲಾಗಿದೆ. ಉತ್ತಮ ಗುಣಮಟ್ಟದ ಕಟ್ಟಡ ನಿರ್ಮಾಣಕ್ಕೆ ಈ ದಂಪತಿ ಪಣತೊಟ್ಟಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ ಕೊಠಡಿ ವ್ಯವಸ್ಥೆ ನಿರ್ಮಿಸಿದರೆ ಖಾಸಗಿ ಶಾಲೆಯ ಮಕ್ಕಳಂತೆ ಕಲಿಯುವ ವಾತಾವರಣ ಕಲ್ಪಿಸಿದರೆ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ವೇದಿಕೆಯೊದಗಿಸಿದಂತಾಗುತ್ತದೆ ಎಂಬುದು ಶ್ರೀಹರ್ಷ-ಮಮತ ಅಭಿಮತ.

ಈಗಿರುವ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆ ಸುಸಜ್ಜಿತವಾಗಿದ್ದರೂ ಅದು ರಸ್ತೆ ವಿಸ್ತರಣೆಯಿಂದ ಸಂಪೂರ್ಣವಾಗಿ ಇಲ್ಲವಾಗಲಿದೆ. ಇದೇ ಶಾಲೆಯಲ್ಲಿ ಹಲೆಯ ವಿದ್ಯಾರ್ಥಿಗಳ ಸಂಘ ಮತ್ತು ಎಸ್.ಡಿ.ಎಂ.ಸಿ ನೇತೃತ್ವದಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ಆರಂಭಿಸಲಾಗಿದ್ದು 50 ಮಕ್ಕಳಿದ್ದಾರೆ. ಇಬ್ಬರು ಶಿಕ್ಷಕರಿದ್ದು ಅವರಿಗೆ ಈ ಎರಡು ಸಂಘಗಳಿಂದ ಸಂಬಳ ನೀಡಲಾಗುತ್ತಿದೆ. ಪ್ರಸಕ್ತ ವರ್ಷ 300 ಮಕ್ಕಳು ಶಾಲೆಗೆ ಪ್ರವೇಶ ಮಾಡುವಂತೆ ತಯಾರಿ ನಡೆಯುತ್ತಿದೆ ಎಂದು ಡಮರುಗ ಉಮೇಶ್ ಹೇಳಿದ್ದಾರೆ.

ಮೂವತ್ತು ಗುಂಟೆ ಜಮೀನಿನಲ್ಲಿ ಆಟದ ಮೈದಾನವೂ ಇರಲಿದೆ. ಈ ಕಾರ್ಯಕ್ಕೆ ಮುಖ್ಯಶಿಕ್ಷಕರು, ಗ್ರಾಮ ಪಂಚಾಯಿತಿ ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರು ಸಂತಸ ವ್ಯಕ್ತಪಡಿಸಿದ್ದಾರೆ. ಇಂತಹದ್ದೊಂದು ಕಾರ್ಯದಿಂದ ನಮ್ಮ ಶಾಲೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಳ್ಳಲಿದೆ ಎಂದು ಹೇಳಿದ್ದಾರೆ. ಆಧುನಿಕತೆಗೆ ತಕ್ಕ ಹಾಗೆ ಈ ಶಾಲೆ ನಿರ್ಮಾಣವಾಗಲಿದ್ದು, ಮಕ್ಕಳ ಕಲಿಕೆ ಅನುಕೂಲವಾಗಲಿದೆ. ಗ್ರಾಮದ ಹೊರಭಾಗದಲ್ಲಿ ಈ ಶಾಲೆ ನಿರ್ಮಾಣ ವಾಗುತ್ತಿದ್ದು, ಪ್ರಶಾಂತ ವಾತಾವರಣ ಇರಲಿದೆ ಎಂದು ಹರ್ಷ ವ್ಯಕ್ತಿಪಡಿಸಿದ್ದಾರೆ. ಇಂತಹದ್ದೊಂದು ಮಾದರಿ ಕಾರ್ಯಕ್ಕೆ ಮುಂದಾದ ಶ್ರೀಹರ್ಷ ಮತ್ತು ಮಮತಾ ದಂಪತಿಗಳಿಗೊಂದು ಸೆಲ್ಯೂಟ್‌ ಇರಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...