Homeಮುಖಪುಟಶೂದ್ರರಿಗೆ ಜ್ಞಾನವಿಲ್ಲ, ಹಾಗಾಗಿಯೇ ತಾವು ಶೂದ್ರರು ಎಂದು ಒಪ್ಪಿಕೊಳ್ಳುವುದಿಲ್ಲ: ಪ್ರಗ್ಯಾ ಠಾಕೂರ್

ಶೂದ್ರರಿಗೆ ಜ್ಞಾನವಿಲ್ಲ, ಹಾಗಾಗಿಯೇ ತಾವು ಶೂದ್ರರು ಎಂದು ಒಪ್ಪಿಕೊಳ್ಳುವುದಿಲ್ಲ: ಪ್ರಗ್ಯಾ ಠಾಕೂರ್

"ಒಬ್ಬ ಬ್ರಾಹ್ಮಣನನ್ನು ಬ್ರಾಹ್ಮಣ ಎಂದು ಕರೆದರೆ ತಪ್ಪೆಂದು ಪರಿಗಣಿಸುವುದಿಲ್ಲ. ಆದರೆ ಶೂದ್ರರನ್ನು ಶೂದ್ರರನ್ನು ಶೂದ್ರರು ಎಂದು ಕರೆದರೆ, ಅವರು ಅದನ್ನು ಒಪ್ಪುವುದಿಲ್ಲ, ಯಾಕೆಂದರೆ ಅವರಿಗೆ ಜ್ಞಾನವಿಲ್ಲ..."

- Advertisement -
- Advertisement -

ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಶನಿವಾರ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಮಧ್ಯಪ್ರದೇಶದ ಸೆಹೋರ್‌ನಲ್ಲಿ ನಡೆದ ಸಭೆಯನ್ನುದ್ದೇಶಿಸಿ, “ಶೂದ್ರರನ್ನು ಶೂದ್ರರು ಎಂದು ಕರೆದರೆ ಅವರು ಒಪ್ಪುವುದಿಲ್ಲ, ಯಾಕೆಂದರೆ ಅವರಿಗೆ ಜ್ಞಾನವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

ಭಾರತದಲ್ಲಿನ ವರ್ಣ ವ್ಯವಸ್ಥೆಯ ಬಗ್ಗೆ ಮಾತನಾಡುತ್ತಾ, “ಸಾಮಾಜಿಕ ರಚನೆಗಾಗಿ ನಮ್ಮ ಸಮಾಜವನ್ನು ನಾಲ್ಕು ಭಾಗಗಳಾಗಿ ವಿಂಗಡಿಸಲಾಗಿದೆ. ಕ್ಷತ್ರಿಯರನ್ನು ಕ್ಷತ್ರಿಯರು ಎಂದು ಕರೆದರೆ, ಅವರು ಅದನ್ನು ತಪ್ಪೆಂದು ಪರಿಗಣಿಸುವುದಿಲ್ಲ. ಒಬ್ಬ ಬ್ರಾಹ್ಮಣನನ್ನು ಬ್ರಾಹ್ಮಣ ಎಂದು ಕರೆದರೆ ತಪ್ಪೆಂದು ಪರಿಗಣಿಸುವುದಿಲ್ಲ. ವೈಶ್ಯನನ್ನು ವೈಶ್ಯ ಎಂದರೆ, ಅವನೂ ಅದನ್ನು ಅನ್ಯತಾ ಭಾವಿಸುವುದಿಲ್ಲ. ಆದರೆ ಶೂದ್ರರನ್ನು ಶೂದ್ರರನ್ನು ಶೂದ್ರರು ಎಂದು ಕರೆದರೆ, ಅವರು ಅದನ್ನು ಒಪ್ಪುವುದಿಲ್ಲ, ಯಾಕೆಂದರೆ ಅವರಿಗೆ ಜ್ಞಾನವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹನುಮಾನ್ ಚಾಲೀಸಾ ಪಠಿಸಿ, ಕೊರೊನಾ ಓಡಿಸಿ : ಸಂಸದೆ ಪ್ರಗ್ಯಾ ಠಾಕೂರ್ ಸಲಹೆ

ಈ ಕುರಿತು ಎಎನ್ಐ ಪ್ರಗ್ಯಾ ಸಿಂಗ್ ಮಾತನಾಡಿರುವ ವೀಡಿಯೋವನ್ನು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಗೋಡ್ಸೆ ಬಗ್ಗೆ ಹೇಳಿಕೆ: ಸಂಸತ್ತಿನ ರಕ್ಷಣಾ ಸಮಿತಿಯಿಂದ ಪ್ರಗ್ಯಾ ಠಾಕೂರ್‌ ಹೊರಕ್ಕೆ…

ಪ್ರಗ್ಯಾ ಸಿಂಗ್ ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ನವೆಂಬರ್‌ನಲ್ಲಿ ಮಹಾತ್ಮ ಗಾಂಧಿಯ ಹಂತಕ ನಾಥೂರಾಂ ಗೂಡ್ಸೆಯನ್ನು ದೇಶ ಭಕ್ತ ಎಂದು ಕರೆದು ವ್ಯಾಪಕ ಟೀಕೆಗೆ ಗುರಿಯಾಗಿದ್ದರು.

2008 ರಲ್ಲಿ ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕೊಲ್ಲಲ್ಪಟ್ಟ ದಿವಂಗತ ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕಾರ್ಕರೆ ಅವರನ್ನು ತಾನು ಶಪಿಸಿದ್ದರಿಂದಲೇ ಸಾವನ್ನಪ್ಪಿದ್ದಾರೆ ಎಂದು ಪ್ರಗ್ಯಾ ಸಿಂಗ್ ತಮ್ಮ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಹೇಳಿ ವಿವಾದಕ್ಕೆ ಗುರಿಯಾಗಿದ್ದರು.


ಇದನ್ನೂ ಓದಿ: “ಶೌಚಾಲಯಗಳನ್ನು ಸ್ವಚ್ಚಗೊಳಿಸಲು ನಾನು ಸಂಸದೆಯಾಗಿ ಆಯ್ಕೆಯಾಗಿಲ್ಲ” : ಪ್ರಗ್ಯಾ ಠಾಕೂರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...