Homeಮುಖಪುಟಮೂತ್ರ ವಿಸರ್ಜನೆ ವಿಡಿಯೋ ನಕಲಿ ಎಂದು ಬಲವಂತವಾಗಿ ಅಫಿಡವಿಟ್‌ಗೆ ಸಹಿ ಹಾಕಿಸಿಕೊಂಡಿದ್ದ ಬಿಜೆಪಿ ಮುಖಂಡ

ಮೂತ್ರ ವಿಸರ್ಜನೆ ವಿಡಿಯೋ ನಕಲಿ ಎಂದು ಬಲವಂತವಾಗಿ ಅಫಿಡವಿಟ್‌ಗೆ ಸಹಿ ಹಾಕಿಸಿಕೊಂಡಿದ್ದ ಬಿಜೆಪಿ ಮುಖಂಡ

- Advertisement -
- Advertisement -

ಮಧ್ಯಪ್ರದೇಶದಲ್ಲಿ ಬುಡಕಟ್ಟು ಸಮುದಾಯದ ಯುವಕನ ಮೇಲೆ ಮಧ್ಯಪ್ರದೇಶದ ಬಿಜೆಪಿ ಮುಖಂಡ ಮೂತ್ರ ವಿಸರ್ಜನೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನಕಲಿಯಾಗಿದೆ ಎಂದು ಹೇಳುವ ಪತ್ರಕ್ಕೆ ಬಲವಂತವಾಗಿ ಯುವಕನ ತಂದೆಯಿಂದ ಸಹಿ ಮಾಡಿಸಿಕೊಂಡಿದ್ದಾನೆ. ಈ ಪತ್ರ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.

ವೀಡಿಯೋದಲ್ಲಿ ಸೆರೆಹಿಡಿಯಲಾದ ಘಟನೆ 2020ರಲ್ಲಿ ನಡೆದಿದೆ ಎಂಬುದನ್ನು ಬಲಿಪಶು ದೃಢಪಡಿಸಿದ್ದಾರೆ ಎಂದು ಸಿಧಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಡಿಎಲ್ ಎಸ್ಪಿ) ಅಂಜುಲತಾ ಪಟ್ಲೆ ತಿಳಿಸಿದ್ದಾರೆ.

ಬಿಜೆಪಿ ಮುಖಂಡ ಪ್ರವೇಶ್ ಶುಕ್ಲಾ ಅವರು ಜುಲೈ 3ರಂದು ಆ ಬುಡಕಟ್ಟು ಸಮುದಾಯದ ಯುವಕನ ಮನೆಗೆ ತೆರಳಿ ಯುವಕನ ತಂದೆಗೆ ಒತ್ತಡ ಹೇರಿ, ”ವೀಡಿಯೊ ನಕಲಿಯಾಗಿದೆ ಎಂದು ಬರೆದಿರುವ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದಾರೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಪಾಟ್ಲೆ ಹೇಳಿದ್ದಾರೆ.

”ಈ ಘಟನೆ ನಡೆದದ್ದು 2020ರಲ್ಲಿ ಆದರೆ ನನಗೆ ದಿನಾಂಕ ಅಥವಾ ತಿಂಗಳು ತನಗೆ ನೆನಪಿಲ್ಲ” ಎಂದು ಬಲಿಪಶು ಪೊಲೀಸರಿಗೆ ತಿಳಿಸಿದ್ದಾರೆ.

”ಪ್ರವೇಶ್ ಜೊತೆಗಿದ್ದ ವ್ಯಕ್ತಿಯೊಬ್ಬರು ಮೊದಲು ಆತನ ಮೇಲೆ ಮೂತ್ರ ಮಾಡಲು ಪ್ರಯತ್ನಿಸಿದರು ಆದರೆ ಪ್ರವೇಶ್ ಅವರನ್ನು ತಡೆದು, ತಾವೇ ಮೂತ್ರ ವಿಸರ್ಜನೆ ಮಾಡಿದ್ದಾರೆ” ಎಂದು ಅವರು ಹೇಳಿದರು.

ಘಟನೆ ನಡೆದಾಗ ಪ್ರವೇಶ್ ಶುಕ್ಲಾ ಅವರೊಂದಿಗೆ ಇತರ ಮೂವರು ಇದ್ದರು ಎಂದು ತಿಳಿದುಬಂದಿದೆ. ಆ ಮೂವರನ್ನೂ ನಾವು ವಿಚಾರಣೆ ಮಾಡುತ್ತೇವೆ” ಎಂದು ಪಟ್ಲೆ ಹೇಳಿದರು.

ಇದನ್ನೂ ಓದಿ: ಆದಿವಾಸಿ ಯುವಕನ ಮೇಲೆ ಮೂತ್ರ ಪ್ರಕರಣ ಬಿಜೆಪಿಯ ದ್ವೇಷದ ಅಸಹ್ಯಕರ ಮುಖವಾಗಿದೆ: ರಾಹುಲ್ ಗಾಂಧಿ

ಮಂಗಳವಾರ ತಡರಾತ್ರಿ ಪ್ರವೇಶ್ ಶುಕ್ಲಾ ಅವರನ್ನು ಕಟ್ಟುನಿಟ್ಟಾದ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸುವಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪೊಲೀಸರಿಗೆ ತಿಳಿಸಿದ ನಂತರ ಅವರನ್ನು ಬಂಧಿಸಲಾಯಿತು.

ಬಿಜೆಪಿ ಆಡಳಿತದಲ್ಲಿ ಆದಿವಾಸಿಗಳು ಮತ್ತು ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಿವೆ ಎಂದು ಹೇಳುವ ಮೂಲಕ ಆಡಳಿತಾರೂಢ ಬಿಜೆಪಿಯನ್ನು ಕೆಣಕಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಘಟನೆಯನ್ನು ಉಲ್ಲೇಖಿಸಿದ್ದಾರೆ.

”ಬಿಜೆಪಿ ಆಡಳಿತದಲ್ಲಿ ಆದಿವಾಸಿ ಸಹೋದರ ಸಹೋದರಿಯರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಮಧ್ಯಪ್ರದೇಶದ ಬಿಜೆಪಿ ನಾಯಕನ ಅಮಾನವೀಯ ಅಪರಾಧದಿಂದ ಇಡೀ ಮಾನವೀಯತೆ ತಲೆತಗ್ಗಿಸುವಂತೆ ಮಾಡಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇದು ಆದಿವಾಸಿಗಳು ಮತ್ತು ದಲಿತರ ಮೇಲಿನ ಬಿಜೆಪಿಯ ದ್ವೇಷದ ಅಸಹ್ಯಕರ ಮುಖ ಮತ್ತು ನೈಜ ಸ್ವರೂಪ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...