Homeಮುಖಪುಟಮೂತ್ರ ವಿಸರ್ಜನೆ ವಿಡಿಯೋ ನಕಲಿ ಎಂದು ಬಲವಂತವಾಗಿ ಅಫಿಡವಿಟ್‌ಗೆ ಸಹಿ ಹಾಕಿಸಿಕೊಂಡಿದ್ದ ಬಿಜೆಪಿ ಮುಖಂಡ

ಮೂತ್ರ ವಿಸರ್ಜನೆ ವಿಡಿಯೋ ನಕಲಿ ಎಂದು ಬಲವಂತವಾಗಿ ಅಫಿಡವಿಟ್‌ಗೆ ಸಹಿ ಹಾಕಿಸಿಕೊಂಡಿದ್ದ ಬಿಜೆಪಿ ಮುಖಂಡ

- Advertisement -
- Advertisement -

ಮಧ್ಯಪ್ರದೇಶದಲ್ಲಿ ಬುಡಕಟ್ಟು ಸಮುದಾಯದ ಯುವಕನ ಮೇಲೆ ಮಧ್ಯಪ್ರದೇಶದ ಬಿಜೆಪಿ ಮುಖಂಡ ಮೂತ್ರ ವಿಸರ್ಜನೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನಕಲಿಯಾಗಿದೆ ಎಂದು ಹೇಳುವ ಪತ್ರಕ್ಕೆ ಬಲವಂತವಾಗಿ ಯುವಕನ ತಂದೆಯಿಂದ ಸಹಿ ಮಾಡಿಸಿಕೊಂಡಿದ್ದಾನೆ. ಈ ಪತ್ರ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.

ವೀಡಿಯೋದಲ್ಲಿ ಸೆರೆಹಿಡಿಯಲಾದ ಘಟನೆ 2020ರಲ್ಲಿ ನಡೆದಿದೆ ಎಂಬುದನ್ನು ಬಲಿಪಶು ದೃಢಪಡಿಸಿದ್ದಾರೆ ಎಂದು ಸಿಧಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಡಿಎಲ್ ಎಸ್ಪಿ) ಅಂಜುಲತಾ ಪಟ್ಲೆ ತಿಳಿಸಿದ್ದಾರೆ.

ಬಿಜೆಪಿ ಮುಖಂಡ ಪ್ರವೇಶ್ ಶುಕ್ಲಾ ಅವರು ಜುಲೈ 3ರಂದು ಆ ಬುಡಕಟ್ಟು ಸಮುದಾಯದ ಯುವಕನ ಮನೆಗೆ ತೆರಳಿ ಯುವಕನ ತಂದೆಗೆ ಒತ್ತಡ ಹೇರಿ, ”ವೀಡಿಯೊ ನಕಲಿಯಾಗಿದೆ ಎಂದು ಬರೆದಿರುವ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದಾರೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಪಾಟ್ಲೆ ಹೇಳಿದ್ದಾರೆ.

”ಈ ಘಟನೆ ನಡೆದದ್ದು 2020ರಲ್ಲಿ ಆದರೆ ನನಗೆ ದಿನಾಂಕ ಅಥವಾ ತಿಂಗಳು ತನಗೆ ನೆನಪಿಲ್ಲ” ಎಂದು ಬಲಿಪಶು ಪೊಲೀಸರಿಗೆ ತಿಳಿಸಿದ್ದಾರೆ.

”ಪ್ರವೇಶ್ ಜೊತೆಗಿದ್ದ ವ್ಯಕ್ತಿಯೊಬ್ಬರು ಮೊದಲು ಆತನ ಮೇಲೆ ಮೂತ್ರ ಮಾಡಲು ಪ್ರಯತ್ನಿಸಿದರು ಆದರೆ ಪ್ರವೇಶ್ ಅವರನ್ನು ತಡೆದು, ತಾವೇ ಮೂತ್ರ ವಿಸರ್ಜನೆ ಮಾಡಿದ್ದಾರೆ” ಎಂದು ಅವರು ಹೇಳಿದರು.

ಘಟನೆ ನಡೆದಾಗ ಪ್ರವೇಶ್ ಶುಕ್ಲಾ ಅವರೊಂದಿಗೆ ಇತರ ಮೂವರು ಇದ್ದರು ಎಂದು ತಿಳಿದುಬಂದಿದೆ. ಆ ಮೂವರನ್ನೂ ನಾವು ವಿಚಾರಣೆ ಮಾಡುತ್ತೇವೆ” ಎಂದು ಪಟ್ಲೆ ಹೇಳಿದರು.

ಇದನ್ನೂ ಓದಿ: ಆದಿವಾಸಿ ಯುವಕನ ಮೇಲೆ ಮೂತ್ರ ಪ್ರಕರಣ ಬಿಜೆಪಿಯ ದ್ವೇಷದ ಅಸಹ್ಯಕರ ಮುಖವಾಗಿದೆ: ರಾಹುಲ್ ಗಾಂಧಿ

ಮಂಗಳವಾರ ತಡರಾತ್ರಿ ಪ್ರವೇಶ್ ಶುಕ್ಲಾ ಅವರನ್ನು ಕಟ್ಟುನಿಟ್ಟಾದ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸುವಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪೊಲೀಸರಿಗೆ ತಿಳಿಸಿದ ನಂತರ ಅವರನ್ನು ಬಂಧಿಸಲಾಯಿತು.

ಬಿಜೆಪಿ ಆಡಳಿತದಲ್ಲಿ ಆದಿವಾಸಿಗಳು ಮತ್ತು ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಿವೆ ಎಂದು ಹೇಳುವ ಮೂಲಕ ಆಡಳಿತಾರೂಢ ಬಿಜೆಪಿಯನ್ನು ಕೆಣಕಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಘಟನೆಯನ್ನು ಉಲ್ಲೇಖಿಸಿದ್ದಾರೆ.

”ಬಿಜೆಪಿ ಆಡಳಿತದಲ್ಲಿ ಆದಿವಾಸಿ ಸಹೋದರ ಸಹೋದರಿಯರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಮಧ್ಯಪ್ರದೇಶದ ಬಿಜೆಪಿ ನಾಯಕನ ಅಮಾನವೀಯ ಅಪರಾಧದಿಂದ ಇಡೀ ಮಾನವೀಯತೆ ತಲೆತಗ್ಗಿಸುವಂತೆ ಮಾಡಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇದು ಆದಿವಾಸಿಗಳು ಮತ್ತು ದಲಿತರ ಮೇಲಿನ ಬಿಜೆಪಿಯ ದ್ವೇಷದ ಅಸಹ್ಯಕರ ಮುಖ ಮತ್ತು ನೈಜ ಸ್ವರೂಪ ಎಂದು ಅವರು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...