Homeಮುಖಪುಟಬಾಯ್ಮುಚ್ಚು, ನಿನಗೆ ಒಳ್ಳೆಯದಾಗೊಲ್ಲ: ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಿದ ಪತ್ರಕರ್ತನಿಗೆ ಬಾಬಾ ರಾಮ್‌ದೇವ್ ಧಮಕಿ

ಬಾಯ್ಮುಚ್ಚು, ನಿನಗೆ ಒಳ್ಳೆಯದಾಗೊಲ್ಲ: ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಿದ ಪತ್ರಕರ್ತನಿಗೆ ಬಾಬಾ ರಾಮ್‌ದೇವ್ ಧಮಕಿ

ಜನರು ಹೆಚ್ಚು ಕಷ್ಟಪಟ್ಟು ಕೆಲಸ ಮಾಡಬೇಕು. ಇಂಧನ ಬೆಲೆ ಕಡಿಮೆ ಮಾಡಿದರೆ ತೆರಿಗೆ ಇಲ್ಲದೆ ಸರ್ಕಾರ ದೇಶವನ್ನು ನಡೆಸುವುದು ಹೇಗೆ? ಎಂದು ರಾಮ್‌ದೇವ್ ಹೇಳಿದ್ದಾರೆ.

- Advertisement -
- Advertisement -

ಪೆಟ್ರೋಲ್ ಬೆಲೆ ಏರುತ್ತಿರುವುದರ ಕುರಿತು ಪ್ರಶ್ನಿಸಿದ ಪತ್ರಕರ್ತನಿಗೆ ಬಾಯ್ಮುಚ್ಚು, ಹೀಗೆ ಪ್ರಶ್ನೆ ಕೇಳಿದರೆ ನಿನಗೆ ಒಳ್ಳೆಯದಾಗೊಲ್ಲ ಎಂದು ಬಾಬಾ ರಾಮ್‌ದೇವ್ ಧಮಕಿ ಹಾಕಿರುವ ಘಟನೆ ಹರಿಯಾಣದ ಕರ್ನಾಲ್‌ನಲ್ಲಿ ನಡೆದಿದೆ.

ಸರ್ಕಾರಗಳು ಜನರಿಗೆ 30 ರೂಗೆ ಒಂದು ಲೀಟರ್ ಪೆಟ್ರೋಲ್ ಮತ್ತು 300 ರೂಗೆ ಗ್ಯಾಸ್ ಸಿಲಿಂಡರ್ ವಿತರಿಸಬೇಕೆಂದು ಹಿಂದೊಮ್ಮೆ ನೀವು ಹೇಳಿದ್ದೀರಿ ಎಂದು ಪತ್ರಕರ್ತನೊಬ್ಬ ಬಾಬಾ ರಾಮ್‌ದೇವ್‌ರವರನ್ನು ಪ್ರಶ್ನಿಸಿದರು. ಆಗ ಪ್ರತಿಕ್ರಿಯಿಸಿದ ರಾಮ್‌ದೇವ್ “ಹೌದು ನಾನು ಹಾಗೆ ಹೇಳಿದ್ದೆ. ಈಗ ನೀನು ಏನು ಮಾಡ್ತೀಯ? ಈ ರೀತಿಯ ಪ್ರಶ್ನೆಗಳನ್ನು ಕೇಳಬೇಡ. ನಿನ್ನ ಪ್ರಶ್ನೆಗಳಿಗೆ ಉತ್ತರಿಸಿಲು ನಾನು ನಿನ್ನ ಗುತ್ತಿಗೆದಾರನಲ್ಲ” ಎಂದು ಉತ್ತರಿಸಿದ್ದಾರೆ.

ಈಗ ಪೆಟ್ರೋಲ್ ಬೆಲೆ ಗಗನಕ್ಕೆ ಏರಿಕೆ ಎಂದು ಪತ್ರಕರ್ತ ಪ್ರಶ್ನಿಸಿದಾಗ ಕೆಂಡಮಂಡಲವಾದ ರಾಮ್‌ದೇವ್ “ಬಾಯ್ಮುಚ್ಚು, ಇದೇ ರೀತಿ ಪ್ರಶ್ನಿಸಿದರೆ ನಿನಗೆ ಒಳ್ಳೆಯದಾಗುವುದಿಲ್ಲ. ಈ ರೀತಿ ಮಾತನಾಡಬೇಡ. ನೀನು ಒಳ್ಳೇಯ ಕುಟುಂಬದವನಾಗಿರಬೇಕು” ಎಂದು ಪರೋಕ್ಷವಾಗಿ ಧಮಕಿ ಹಾಕಿದ್ದಾರೆ.

ನಂತರ ಮಾತನಾಡಿದ ರಾಮ್‌ದೇವ್, “ಈ ಕಷ್ಟಕರ ಸಮಯದಲ್ಲಿ ಜನರು ಹೆಚ್ಚು ಕಷ್ಟಪಟ್ಟು ಕೆಲಸ ಮಾಡಬೇಕು. ಇಂಧನ ಬೆಲೆ ಕಡಿಮೆ ಮಾಡಿದರೆ ಸರ್ಕಾರಕ್ಕೆ ತೆರಿಗೆ ಸಂಗ್ರಹವಾಗುವುದಿಲ್ಲ. ಹಾಗಾದರೆ ದೇಶವನ್ನು ನಡೆಸುವುದು ಹೇಗೆ? ಜನರಿಗೆ ಸಂಬಳ ಕೊಡಬೇಕು, ರಸ್ತೆಗಳನ್ನು ನಿರ್ಮಿಸಬೇಕು ಅಲ್ಲವೆ. ಹೌದು, ಹಣದುಬ್ಬರ ಕಡಿಮೆಯಾಗಬೇಕೆಂದು ನಾನು ಒಪ್ಪುತ್ತೇನೆ. ಆದರೆ ಜನರು ಕಷ್ಟಪಟ್ಟು ಕೆಲಸ ಮಾಡಬೇಕು. ನಾನು ಕೂಡ ಬೆಳಿಗ್ಗೆ 4 ಗಂಟೆಗೆ ಎದ್ದು ರಾತ್ರಿ 10 ಗಂಟೆಯವರೆಗೂ ಕೆಲಸ ಮಾಡುತ್ತೇನೆ” ಎಂದು ಹೇಳಿದಾಗ ಅವರ ಸುತ್ತ ನೆರೆದಿದ್ದ ಬೆಂಬಲಿಗರು ಚಪ್ಪಾಳೆ ತಟ್ಟಿ ಬೆಂಬಲಿಸಿದ್ದಾರೆ.

ಈ ಹಿಂದೆ ಯುಪಿಎ ಸರ್ಕಾರವಿದ್ದಾಗ ಬಾಬಾ ರಾಮ್‌ದೇವ್ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಕುರಿತು ಸತತ ಟೀಕೆ ಮಾಡುತ್ತಿದ್ದರು. ಸರ್ಕಾರದ ಭ್ರಷ್ಟಾಚಾರದ ಕಾರಣದಿಂದ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದೆ. ಬ್ರಿಟೀಷ್ ಮನಸ್ಥಿತಿಯ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ. ಸರ್ಕಾರದ ಕೆಟ್ಟ ಆರ್ಥಿಕ ನೀತಿಯಿಂದಾಗಿ ಬಡತನ ಹೆಚ್ಚುತ್ತಿದೆ ಅದಕ್ಕೆ ನೇರವಾಗಿ ಸರ್ಕಾರವೇ ಕಾರಣವಾಗಿದೆ ಎಂದು ಕಟುವಾಗಿ ಟೀಕಿಸಿದ್ದರು.

ಕಪ್ಪು ಹಣ ವಾಪಸ್ ತಂದರೆ 30 ರೂಗೆ ಒಂದು ಲೀಟರ್ ಪೆಟ್ರೋಲ್ ನೀಡಬಹುದು ಎಂದು ರಾಮ್‌ದೇವ್ ಹೇಳಿದ್ದರು. ಯುಪಿಎ ಸರ್ಕಾರ ಇಂಧನಗಳ ಮೇಲೆ 50% ತೆರಿಗೆ ವಿಧಿಸುವ ಮೂಲಕ ಜನರ ಕೈಯಲ್ಲಿನ ಹಣವನ್ನು ಕಿತ್ತುಕೊಳ್ಳುತ್ತಿದೆ ಎಂದು ಟೀಕಿಸಿದ್ದರು. ಈಗ ಬಿಜೆಪಿ ಸರ್ಕಾರ ಬಂದ ನಂತರ ಅವರು ಪೆಟ್ರೋಲ್ ಡೀಸೆಲ್ ಬೆಲೆ ದುಪ್ಪಟ್ಟಾದರೂ ತುಟಿ ಬಿಚ್ಚುತ್ತಿಲ್ಲ. ಪ್ರಶ್ನಿಸಿದ ಪತ್ರಕರ್ತನಿಗೆ ಧಮಕಿ ಹಾಕಿದ್ದಲ್ಲದೆ, ಜನರು ಕಷ್ಟಪಟ್ಟು ದುಡಿಯಬೇಕೆಂದು ಉಪದೇಶ ನೀಡಿದ್ದಾರೆ.

ಕೇಂದ್ರ ಸರ್ಕಾರ ಕಳೆದ 10 ದಿನಗಳಿಂದ ಸತತವಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುತ್ತಲೇ ಇದೆ. ಬೆಂಗಳೂರಿನಲ್ಲಿ 9 ಬಾರಿ ಬೆಲೆ ಏರಿಕೆಯಾಗಿದ್ದು ಲೀಟರ್ ಪೆಟ್ರೋಲ್ ಬೆಲೆ 107.30 ರೂಗೆ ತಲುಪಿದೆ. ಡೀಸೆಲ್ ದರ 91.27 ರೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ನಿಂತಿಲ್ಲ: ಏಕೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...