Homeಮುಖಪುಟಬಾಯ್ಮುಚ್ಚು, ನಿನಗೆ ಒಳ್ಳೆಯದಾಗೊಲ್ಲ: ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಿದ ಪತ್ರಕರ್ತನಿಗೆ ಬಾಬಾ ರಾಮ್‌ದೇವ್ ಧಮಕಿ

ಬಾಯ್ಮುಚ್ಚು, ನಿನಗೆ ಒಳ್ಳೆಯದಾಗೊಲ್ಲ: ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಿದ ಪತ್ರಕರ್ತನಿಗೆ ಬಾಬಾ ರಾಮ್‌ದೇವ್ ಧಮಕಿ

ಜನರು ಹೆಚ್ಚು ಕಷ್ಟಪಟ್ಟು ಕೆಲಸ ಮಾಡಬೇಕು. ಇಂಧನ ಬೆಲೆ ಕಡಿಮೆ ಮಾಡಿದರೆ ತೆರಿಗೆ ಇಲ್ಲದೆ ಸರ್ಕಾರ ದೇಶವನ್ನು ನಡೆಸುವುದು ಹೇಗೆ? ಎಂದು ರಾಮ್‌ದೇವ್ ಹೇಳಿದ್ದಾರೆ.

- Advertisement -
- Advertisement -

ಪೆಟ್ರೋಲ್ ಬೆಲೆ ಏರುತ್ತಿರುವುದರ ಕುರಿತು ಪ್ರಶ್ನಿಸಿದ ಪತ್ರಕರ್ತನಿಗೆ ಬಾಯ್ಮುಚ್ಚು, ಹೀಗೆ ಪ್ರಶ್ನೆ ಕೇಳಿದರೆ ನಿನಗೆ ಒಳ್ಳೆಯದಾಗೊಲ್ಲ ಎಂದು ಬಾಬಾ ರಾಮ್‌ದೇವ್ ಧಮಕಿ ಹಾಕಿರುವ ಘಟನೆ ಹರಿಯಾಣದ ಕರ್ನಾಲ್‌ನಲ್ಲಿ ನಡೆದಿದೆ.

ಸರ್ಕಾರಗಳು ಜನರಿಗೆ 30 ರೂಗೆ ಒಂದು ಲೀಟರ್ ಪೆಟ್ರೋಲ್ ಮತ್ತು 300 ರೂಗೆ ಗ್ಯಾಸ್ ಸಿಲಿಂಡರ್ ವಿತರಿಸಬೇಕೆಂದು ಹಿಂದೊಮ್ಮೆ ನೀವು ಹೇಳಿದ್ದೀರಿ ಎಂದು ಪತ್ರಕರ್ತನೊಬ್ಬ ಬಾಬಾ ರಾಮ್‌ದೇವ್‌ರವರನ್ನು ಪ್ರಶ್ನಿಸಿದರು. ಆಗ ಪ್ರತಿಕ್ರಿಯಿಸಿದ ರಾಮ್‌ದೇವ್ “ಹೌದು ನಾನು ಹಾಗೆ ಹೇಳಿದ್ದೆ. ಈಗ ನೀನು ಏನು ಮಾಡ್ತೀಯ? ಈ ರೀತಿಯ ಪ್ರಶ್ನೆಗಳನ್ನು ಕೇಳಬೇಡ. ನಿನ್ನ ಪ್ರಶ್ನೆಗಳಿಗೆ ಉತ್ತರಿಸಿಲು ನಾನು ನಿನ್ನ ಗುತ್ತಿಗೆದಾರನಲ್ಲ” ಎಂದು ಉತ್ತರಿಸಿದ್ದಾರೆ.

ಈಗ ಪೆಟ್ರೋಲ್ ಬೆಲೆ ಗಗನಕ್ಕೆ ಏರಿಕೆ ಎಂದು ಪತ್ರಕರ್ತ ಪ್ರಶ್ನಿಸಿದಾಗ ಕೆಂಡಮಂಡಲವಾದ ರಾಮ್‌ದೇವ್ “ಬಾಯ್ಮುಚ್ಚು, ಇದೇ ರೀತಿ ಪ್ರಶ್ನಿಸಿದರೆ ನಿನಗೆ ಒಳ್ಳೆಯದಾಗುವುದಿಲ್ಲ. ಈ ರೀತಿ ಮಾತನಾಡಬೇಡ. ನೀನು ಒಳ್ಳೇಯ ಕುಟುಂಬದವನಾಗಿರಬೇಕು” ಎಂದು ಪರೋಕ್ಷವಾಗಿ ಧಮಕಿ ಹಾಕಿದ್ದಾರೆ.

ನಂತರ ಮಾತನಾಡಿದ ರಾಮ್‌ದೇವ್, “ಈ ಕಷ್ಟಕರ ಸಮಯದಲ್ಲಿ ಜನರು ಹೆಚ್ಚು ಕಷ್ಟಪಟ್ಟು ಕೆಲಸ ಮಾಡಬೇಕು. ಇಂಧನ ಬೆಲೆ ಕಡಿಮೆ ಮಾಡಿದರೆ ಸರ್ಕಾರಕ್ಕೆ ತೆರಿಗೆ ಸಂಗ್ರಹವಾಗುವುದಿಲ್ಲ. ಹಾಗಾದರೆ ದೇಶವನ್ನು ನಡೆಸುವುದು ಹೇಗೆ? ಜನರಿಗೆ ಸಂಬಳ ಕೊಡಬೇಕು, ರಸ್ತೆಗಳನ್ನು ನಿರ್ಮಿಸಬೇಕು ಅಲ್ಲವೆ. ಹೌದು, ಹಣದುಬ್ಬರ ಕಡಿಮೆಯಾಗಬೇಕೆಂದು ನಾನು ಒಪ್ಪುತ್ತೇನೆ. ಆದರೆ ಜನರು ಕಷ್ಟಪಟ್ಟು ಕೆಲಸ ಮಾಡಬೇಕು. ನಾನು ಕೂಡ ಬೆಳಿಗ್ಗೆ 4 ಗಂಟೆಗೆ ಎದ್ದು ರಾತ್ರಿ 10 ಗಂಟೆಯವರೆಗೂ ಕೆಲಸ ಮಾಡುತ್ತೇನೆ” ಎಂದು ಹೇಳಿದಾಗ ಅವರ ಸುತ್ತ ನೆರೆದಿದ್ದ ಬೆಂಬಲಿಗರು ಚಪ್ಪಾಳೆ ತಟ್ಟಿ ಬೆಂಬಲಿಸಿದ್ದಾರೆ.

ಈ ಹಿಂದೆ ಯುಪಿಎ ಸರ್ಕಾರವಿದ್ದಾಗ ಬಾಬಾ ರಾಮ್‌ದೇವ್ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಕುರಿತು ಸತತ ಟೀಕೆ ಮಾಡುತ್ತಿದ್ದರು. ಸರ್ಕಾರದ ಭ್ರಷ್ಟಾಚಾರದ ಕಾರಣದಿಂದ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದೆ. ಬ್ರಿಟೀಷ್ ಮನಸ್ಥಿತಿಯ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ. ಸರ್ಕಾರದ ಕೆಟ್ಟ ಆರ್ಥಿಕ ನೀತಿಯಿಂದಾಗಿ ಬಡತನ ಹೆಚ್ಚುತ್ತಿದೆ ಅದಕ್ಕೆ ನೇರವಾಗಿ ಸರ್ಕಾರವೇ ಕಾರಣವಾಗಿದೆ ಎಂದು ಕಟುವಾಗಿ ಟೀಕಿಸಿದ್ದರು.

ಕಪ್ಪು ಹಣ ವಾಪಸ್ ತಂದರೆ 30 ರೂಗೆ ಒಂದು ಲೀಟರ್ ಪೆಟ್ರೋಲ್ ನೀಡಬಹುದು ಎಂದು ರಾಮ್‌ದೇವ್ ಹೇಳಿದ್ದರು. ಯುಪಿಎ ಸರ್ಕಾರ ಇಂಧನಗಳ ಮೇಲೆ 50% ತೆರಿಗೆ ವಿಧಿಸುವ ಮೂಲಕ ಜನರ ಕೈಯಲ್ಲಿನ ಹಣವನ್ನು ಕಿತ್ತುಕೊಳ್ಳುತ್ತಿದೆ ಎಂದು ಟೀಕಿಸಿದ್ದರು. ಈಗ ಬಿಜೆಪಿ ಸರ್ಕಾರ ಬಂದ ನಂತರ ಅವರು ಪೆಟ್ರೋಲ್ ಡೀಸೆಲ್ ಬೆಲೆ ದುಪ್ಪಟ್ಟಾದರೂ ತುಟಿ ಬಿಚ್ಚುತ್ತಿಲ್ಲ. ಪ್ರಶ್ನಿಸಿದ ಪತ್ರಕರ್ತನಿಗೆ ಧಮಕಿ ಹಾಕಿದ್ದಲ್ಲದೆ, ಜನರು ಕಷ್ಟಪಟ್ಟು ದುಡಿಯಬೇಕೆಂದು ಉಪದೇಶ ನೀಡಿದ್ದಾರೆ.

ಕೇಂದ್ರ ಸರ್ಕಾರ ಕಳೆದ 10 ದಿನಗಳಿಂದ ಸತತವಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುತ್ತಲೇ ಇದೆ. ಬೆಂಗಳೂರಿನಲ್ಲಿ 9 ಬಾರಿ ಬೆಲೆ ಏರಿಕೆಯಾಗಿದ್ದು ಲೀಟರ್ ಪೆಟ್ರೋಲ್ ಬೆಲೆ 107.30 ರೂಗೆ ತಲುಪಿದೆ. ಡೀಸೆಲ್ ದರ 91.27 ರೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ನಿಂತಿಲ್ಲ: ಏಕೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...