Homeಮುಖಪುಟಬಾಯ್ಮುಚ್ಚು, ನಿನಗೆ ಒಳ್ಳೆಯದಾಗೊಲ್ಲ: ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಿದ ಪತ್ರಕರ್ತನಿಗೆ ಬಾಬಾ ರಾಮ್‌ದೇವ್ ಧಮಕಿ

ಬಾಯ್ಮುಚ್ಚು, ನಿನಗೆ ಒಳ್ಳೆಯದಾಗೊಲ್ಲ: ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಿದ ಪತ್ರಕರ್ತನಿಗೆ ಬಾಬಾ ರಾಮ್‌ದೇವ್ ಧಮಕಿ

ಜನರು ಹೆಚ್ಚು ಕಷ್ಟಪಟ್ಟು ಕೆಲಸ ಮಾಡಬೇಕು. ಇಂಧನ ಬೆಲೆ ಕಡಿಮೆ ಮಾಡಿದರೆ ತೆರಿಗೆ ಇಲ್ಲದೆ ಸರ್ಕಾರ ದೇಶವನ್ನು ನಡೆಸುವುದು ಹೇಗೆ? ಎಂದು ರಾಮ್‌ದೇವ್ ಹೇಳಿದ್ದಾರೆ.

- Advertisement -
- Advertisement -

ಪೆಟ್ರೋಲ್ ಬೆಲೆ ಏರುತ್ತಿರುವುದರ ಕುರಿತು ಪ್ರಶ್ನಿಸಿದ ಪತ್ರಕರ್ತನಿಗೆ ಬಾಯ್ಮುಚ್ಚು, ಹೀಗೆ ಪ್ರಶ್ನೆ ಕೇಳಿದರೆ ನಿನಗೆ ಒಳ್ಳೆಯದಾಗೊಲ್ಲ ಎಂದು ಬಾಬಾ ರಾಮ್‌ದೇವ್ ಧಮಕಿ ಹಾಕಿರುವ ಘಟನೆ ಹರಿಯಾಣದ ಕರ್ನಾಲ್‌ನಲ್ಲಿ ನಡೆದಿದೆ.

ಸರ್ಕಾರಗಳು ಜನರಿಗೆ 30 ರೂಗೆ ಒಂದು ಲೀಟರ್ ಪೆಟ್ರೋಲ್ ಮತ್ತು 300 ರೂಗೆ ಗ್ಯಾಸ್ ಸಿಲಿಂಡರ್ ವಿತರಿಸಬೇಕೆಂದು ಹಿಂದೊಮ್ಮೆ ನೀವು ಹೇಳಿದ್ದೀರಿ ಎಂದು ಪತ್ರಕರ್ತನೊಬ್ಬ ಬಾಬಾ ರಾಮ್‌ದೇವ್‌ರವರನ್ನು ಪ್ರಶ್ನಿಸಿದರು. ಆಗ ಪ್ರತಿಕ್ರಿಯಿಸಿದ ರಾಮ್‌ದೇವ್ “ಹೌದು ನಾನು ಹಾಗೆ ಹೇಳಿದ್ದೆ. ಈಗ ನೀನು ಏನು ಮಾಡ್ತೀಯ? ಈ ರೀತಿಯ ಪ್ರಶ್ನೆಗಳನ್ನು ಕೇಳಬೇಡ. ನಿನ್ನ ಪ್ರಶ್ನೆಗಳಿಗೆ ಉತ್ತರಿಸಿಲು ನಾನು ನಿನ್ನ ಗುತ್ತಿಗೆದಾರನಲ್ಲ” ಎಂದು ಉತ್ತರಿಸಿದ್ದಾರೆ.

ಈಗ ಪೆಟ್ರೋಲ್ ಬೆಲೆ ಗಗನಕ್ಕೆ ಏರಿಕೆ ಎಂದು ಪತ್ರಕರ್ತ ಪ್ರಶ್ನಿಸಿದಾಗ ಕೆಂಡಮಂಡಲವಾದ ರಾಮ್‌ದೇವ್ “ಬಾಯ್ಮುಚ್ಚು, ಇದೇ ರೀತಿ ಪ್ರಶ್ನಿಸಿದರೆ ನಿನಗೆ ಒಳ್ಳೆಯದಾಗುವುದಿಲ್ಲ. ಈ ರೀತಿ ಮಾತನಾಡಬೇಡ. ನೀನು ಒಳ್ಳೇಯ ಕುಟುಂಬದವನಾಗಿರಬೇಕು” ಎಂದು ಪರೋಕ್ಷವಾಗಿ ಧಮಕಿ ಹಾಕಿದ್ದಾರೆ.

ನಂತರ ಮಾತನಾಡಿದ ರಾಮ್‌ದೇವ್, “ಈ ಕಷ್ಟಕರ ಸಮಯದಲ್ಲಿ ಜನರು ಹೆಚ್ಚು ಕಷ್ಟಪಟ್ಟು ಕೆಲಸ ಮಾಡಬೇಕು. ಇಂಧನ ಬೆಲೆ ಕಡಿಮೆ ಮಾಡಿದರೆ ಸರ್ಕಾರಕ್ಕೆ ತೆರಿಗೆ ಸಂಗ್ರಹವಾಗುವುದಿಲ್ಲ. ಹಾಗಾದರೆ ದೇಶವನ್ನು ನಡೆಸುವುದು ಹೇಗೆ? ಜನರಿಗೆ ಸಂಬಳ ಕೊಡಬೇಕು, ರಸ್ತೆಗಳನ್ನು ನಿರ್ಮಿಸಬೇಕು ಅಲ್ಲವೆ. ಹೌದು, ಹಣದುಬ್ಬರ ಕಡಿಮೆಯಾಗಬೇಕೆಂದು ನಾನು ಒಪ್ಪುತ್ತೇನೆ. ಆದರೆ ಜನರು ಕಷ್ಟಪಟ್ಟು ಕೆಲಸ ಮಾಡಬೇಕು. ನಾನು ಕೂಡ ಬೆಳಿಗ್ಗೆ 4 ಗಂಟೆಗೆ ಎದ್ದು ರಾತ್ರಿ 10 ಗಂಟೆಯವರೆಗೂ ಕೆಲಸ ಮಾಡುತ್ತೇನೆ” ಎಂದು ಹೇಳಿದಾಗ ಅವರ ಸುತ್ತ ನೆರೆದಿದ್ದ ಬೆಂಬಲಿಗರು ಚಪ್ಪಾಳೆ ತಟ್ಟಿ ಬೆಂಬಲಿಸಿದ್ದಾರೆ.

ಈ ಹಿಂದೆ ಯುಪಿಎ ಸರ್ಕಾರವಿದ್ದಾಗ ಬಾಬಾ ರಾಮ್‌ದೇವ್ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಕುರಿತು ಸತತ ಟೀಕೆ ಮಾಡುತ್ತಿದ್ದರು. ಸರ್ಕಾರದ ಭ್ರಷ್ಟಾಚಾರದ ಕಾರಣದಿಂದ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದೆ. ಬ್ರಿಟೀಷ್ ಮನಸ್ಥಿತಿಯ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ. ಸರ್ಕಾರದ ಕೆಟ್ಟ ಆರ್ಥಿಕ ನೀತಿಯಿಂದಾಗಿ ಬಡತನ ಹೆಚ್ಚುತ್ತಿದೆ ಅದಕ್ಕೆ ನೇರವಾಗಿ ಸರ್ಕಾರವೇ ಕಾರಣವಾಗಿದೆ ಎಂದು ಕಟುವಾಗಿ ಟೀಕಿಸಿದ್ದರು.

ಕಪ್ಪು ಹಣ ವಾಪಸ್ ತಂದರೆ 30 ರೂಗೆ ಒಂದು ಲೀಟರ್ ಪೆಟ್ರೋಲ್ ನೀಡಬಹುದು ಎಂದು ರಾಮ್‌ದೇವ್ ಹೇಳಿದ್ದರು. ಯುಪಿಎ ಸರ್ಕಾರ ಇಂಧನಗಳ ಮೇಲೆ 50% ತೆರಿಗೆ ವಿಧಿಸುವ ಮೂಲಕ ಜನರ ಕೈಯಲ್ಲಿನ ಹಣವನ್ನು ಕಿತ್ತುಕೊಳ್ಳುತ್ತಿದೆ ಎಂದು ಟೀಕಿಸಿದ್ದರು. ಈಗ ಬಿಜೆಪಿ ಸರ್ಕಾರ ಬಂದ ನಂತರ ಅವರು ಪೆಟ್ರೋಲ್ ಡೀಸೆಲ್ ಬೆಲೆ ದುಪ್ಪಟ್ಟಾದರೂ ತುಟಿ ಬಿಚ್ಚುತ್ತಿಲ್ಲ. ಪ್ರಶ್ನಿಸಿದ ಪತ್ರಕರ್ತನಿಗೆ ಧಮಕಿ ಹಾಕಿದ್ದಲ್ಲದೆ, ಜನರು ಕಷ್ಟಪಟ್ಟು ದುಡಿಯಬೇಕೆಂದು ಉಪದೇಶ ನೀಡಿದ್ದಾರೆ.

ಕೇಂದ್ರ ಸರ್ಕಾರ ಕಳೆದ 10 ದಿನಗಳಿಂದ ಸತತವಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುತ್ತಲೇ ಇದೆ. ಬೆಂಗಳೂರಿನಲ್ಲಿ 9 ಬಾರಿ ಬೆಲೆ ಏರಿಕೆಯಾಗಿದ್ದು ಲೀಟರ್ ಪೆಟ್ರೋಲ್ ಬೆಲೆ 107.30 ರೂಗೆ ತಲುಪಿದೆ. ಡೀಸೆಲ್ ದರ 91.27 ರೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ನಿಂತಿಲ್ಲ: ಏಕೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...