Homeಮುಖಪುಟಬಾಯ್ಮುಚ್ಚು, ನಿನಗೆ ಒಳ್ಳೆಯದಾಗೊಲ್ಲ: ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಿದ ಪತ್ರಕರ್ತನಿಗೆ ಬಾಬಾ ರಾಮ್‌ದೇವ್ ಧಮಕಿ

ಬಾಯ್ಮುಚ್ಚು, ನಿನಗೆ ಒಳ್ಳೆಯದಾಗೊಲ್ಲ: ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಿದ ಪತ್ರಕರ್ತನಿಗೆ ಬಾಬಾ ರಾಮ್‌ದೇವ್ ಧಮಕಿ

ಜನರು ಹೆಚ್ಚು ಕಷ್ಟಪಟ್ಟು ಕೆಲಸ ಮಾಡಬೇಕು. ಇಂಧನ ಬೆಲೆ ಕಡಿಮೆ ಮಾಡಿದರೆ ತೆರಿಗೆ ಇಲ್ಲದೆ ಸರ್ಕಾರ ದೇಶವನ್ನು ನಡೆಸುವುದು ಹೇಗೆ? ಎಂದು ರಾಮ್‌ದೇವ್ ಹೇಳಿದ್ದಾರೆ.

- Advertisement -
- Advertisement -

ಪೆಟ್ರೋಲ್ ಬೆಲೆ ಏರುತ್ತಿರುವುದರ ಕುರಿತು ಪ್ರಶ್ನಿಸಿದ ಪತ್ರಕರ್ತನಿಗೆ ಬಾಯ್ಮುಚ್ಚು, ಹೀಗೆ ಪ್ರಶ್ನೆ ಕೇಳಿದರೆ ನಿನಗೆ ಒಳ್ಳೆಯದಾಗೊಲ್ಲ ಎಂದು ಬಾಬಾ ರಾಮ್‌ದೇವ್ ಧಮಕಿ ಹಾಕಿರುವ ಘಟನೆ ಹರಿಯಾಣದ ಕರ್ನಾಲ್‌ನಲ್ಲಿ ನಡೆದಿದೆ.

ಸರ್ಕಾರಗಳು ಜನರಿಗೆ 30 ರೂಗೆ ಒಂದು ಲೀಟರ್ ಪೆಟ್ರೋಲ್ ಮತ್ತು 300 ರೂಗೆ ಗ್ಯಾಸ್ ಸಿಲಿಂಡರ್ ವಿತರಿಸಬೇಕೆಂದು ಹಿಂದೊಮ್ಮೆ ನೀವು ಹೇಳಿದ್ದೀರಿ ಎಂದು ಪತ್ರಕರ್ತನೊಬ್ಬ ಬಾಬಾ ರಾಮ್‌ದೇವ್‌ರವರನ್ನು ಪ್ರಶ್ನಿಸಿದರು. ಆಗ ಪ್ರತಿಕ್ರಿಯಿಸಿದ ರಾಮ್‌ದೇವ್ “ಹೌದು ನಾನು ಹಾಗೆ ಹೇಳಿದ್ದೆ. ಈಗ ನೀನು ಏನು ಮಾಡ್ತೀಯ? ಈ ರೀತಿಯ ಪ್ರಶ್ನೆಗಳನ್ನು ಕೇಳಬೇಡ. ನಿನ್ನ ಪ್ರಶ್ನೆಗಳಿಗೆ ಉತ್ತರಿಸಿಲು ನಾನು ನಿನ್ನ ಗುತ್ತಿಗೆದಾರನಲ್ಲ” ಎಂದು ಉತ್ತರಿಸಿದ್ದಾರೆ.

ಈಗ ಪೆಟ್ರೋಲ್ ಬೆಲೆ ಗಗನಕ್ಕೆ ಏರಿಕೆ ಎಂದು ಪತ್ರಕರ್ತ ಪ್ರಶ್ನಿಸಿದಾಗ ಕೆಂಡಮಂಡಲವಾದ ರಾಮ್‌ದೇವ್ “ಬಾಯ್ಮುಚ್ಚು, ಇದೇ ರೀತಿ ಪ್ರಶ್ನಿಸಿದರೆ ನಿನಗೆ ಒಳ್ಳೆಯದಾಗುವುದಿಲ್ಲ. ಈ ರೀತಿ ಮಾತನಾಡಬೇಡ. ನೀನು ಒಳ್ಳೇಯ ಕುಟುಂಬದವನಾಗಿರಬೇಕು” ಎಂದು ಪರೋಕ್ಷವಾಗಿ ಧಮಕಿ ಹಾಕಿದ್ದಾರೆ.

ನಂತರ ಮಾತನಾಡಿದ ರಾಮ್‌ದೇವ್, “ಈ ಕಷ್ಟಕರ ಸಮಯದಲ್ಲಿ ಜನರು ಹೆಚ್ಚು ಕಷ್ಟಪಟ್ಟು ಕೆಲಸ ಮಾಡಬೇಕು. ಇಂಧನ ಬೆಲೆ ಕಡಿಮೆ ಮಾಡಿದರೆ ಸರ್ಕಾರಕ್ಕೆ ತೆರಿಗೆ ಸಂಗ್ರಹವಾಗುವುದಿಲ್ಲ. ಹಾಗಾದರೆ ದೇಶವನ್ನು ನಡೆಸುವುದು ಹೇಗೆ? ಜನರಿಗೆ ಸಂಬಳ ಕೊಡಬೇಕು, ರಸ್ತೆಗಳನ್ನು ನಿರ್ಮಿಸಬೇಕು ಅಲ್ಲವೆ. ಹೌದು, ಹಣದುಬ್ಬರ ಕಡಿಮೆಯಾಗಬೇಕೆಂದು ನಾನು ಒಪ್ಪುತ್ತೇನೆ. ಆದರೆ ಜನರು ಕಷ್ಟಪಟ್ಟು ಕೆಲಸ ಮಾಡಬೇಕು. ನಾನು ಕೂಡ ಬೆಳಿಗ್ಗೆ 4 ಗಂಟೆಗೆ ಎದ್ದು ರಾತ್ರಿ 10 ಗಂಟೆಯವರೆಗೂ ಕೆಲಸ ಮಾಡುತ್ತೇನೆ” ಎಂದು ಹೇಳಿದಾಗ ಅವರ ಸುತ್ತ ನೆರೆದಿದ್ದ ಬೆಂಬಲಿಗರು ಚಪ್ಪಾಳೆ ತಟ್ಟಿ ಬೆಂಬಲಿಸಿದ್ದಾರೆ.

ಈ ಹಿಂದೆ ಯುಪಿಎ ಸರ್ಕಾರವಿದ್ದಾಗ ಬಾಬಾ ರಾಮ್‌ದೇವ್ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಕುರಿತು ಸತತ ಟೀಕೆ ಮಾಡುತ್ತಿದ್ದರು. ಸರ್ಕಾರದ ಭ್ರಷ್ಟಾಚಾರದ ಕಾರಣದಿಂದ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದೆ. ಬ್ರಿಟೀಷ್ ಮನಸ್ಥಿತಿಯ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ. ಸರ್ಕಾರದ ಕೆಟ್ಟ ಆರ್ಥಿಕ ನೀತಿಯಿಂದಾಗಿ ಬಡತನ ಹೆಚ್ಚುತ್ತಿದೆ ಅದಕ್ಕೆ ನೇರವಾಗಿ ಸರ್ಕಾರವೇ ಕಾರಣವಾಗಿದೆ ಎಂದು ಕಟುವಾಗಿ ಟೀಕಿಸಿದ್ದರು.

ಕಪ್ಪು ಹಣ ವಾಪಸ್ ತಂದರೆ 30 ರೂಗೆ ಒಂದು ಲೀಟರ್ ಪೆಟ್ರೋಲ್ ನೀಡಬಹುದು ಎಂದು ರಾಮ್‌ದೇವ್ ಹೇಳಿದ್ದರು. ಯುಪಿಎ ಸರ್ಕಾರ ಇಂಧನಗಳ ಮೇಲೆ 50% ತೆರಿಗೆ ವಿಧಿಸುವ ಮೂಲಕ ಜನರ ಕೈಯಲ್ಲಿನ ಹಣವನ್ನು ಕಿತ್ತುಕೊಳ್ಳುತ್ತಿದೆ ಎಂದು ಟೀಕಿಸಿದ್ದರು. ಈಗ ಬಿಜೆಪಿ ಸರ್ಕಾರ ಬಂದ ನಂತರ ಅವರು ಪೆಟ್ರೋಲ್ ಡೀಸೆಲ್ ಬೆಲೆ ದುಪ್ಪಟ್ಟಾದರೂ ತುಟಿ ಬಿಚ್ಚುತ್ತಿಲ್ಲ. ಪ್ರಶ್ನಿಸಿದ ಪತ್ರಕರ್ತನಿಗೆ ಧಮಕಿ ಹಾಕಿದ್ದಲ್ಲದೆ, ಜನರು ಕಷ್ಟಪಟ್ಟು ದುಡಿಯಬೇಕೆಂದು ಉಪದೇಶ ನೀಡಿದ್ದಾರೆ.

ಕೇಂದ್ರ ಸರ್ಕಾರ ಕಳೆದ 10 ದಿನಗಳಿಂದ ಸತತವಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುತ್ತಲೇ ಇದೆ. ಬೆಂಗಳೂರಿನಲ್ಲಿ 9 ಬಾರಿ ಬೆಲೆ ಏರಿಕೆಯಾಗಿದ್ದು ಲೀಟರ್ ಪೆಟ್ರೋಲ್ ಬೆಲೆ 107.30 ರೂಗೆ ತಲುಪಿದೆ. ಡೀಸೆಲ್ ದರ 91.27 ರೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ನಿಂತಿಲ್ಲ: ಏಕೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...