Homeಮುಖಪುಟ'ಅಮ್ಮ' ಚುನಾವಣೆಯಲ್ಲಿ ಶ್ವೇತಾ ಮೆನನ್‌, ಕುಕ್ಕು ಪರಮೇಶ್ವರನ್‌ಗೆ ಗೆಲುವು: ಉನ್ನತ ಹುದ್ದೆಗಳಿಗೆ ಮೊದಲ ಬಾರಿಗೆ ಮಹಿಳೆಯರು...

‘ಅಮ್ಮ’ ಚುನಾವಣೆಯಲ್ಲಿ ಶ್ವೇತಾ ಮೆನನ್‌, ಕುಕ್ಕು ಪರಮೇಶ್ವರನ್‌ಗೆ ಗೆಲುವು: ಉನ್ನತ ಹುದ್ದೆಗಳಿಗೆ ಮೊದಲ ಬಾರಿಗೆ ಮಹಿಳೆಯರು ಆಯ್ಕೆ

- Advertisement -
- Advertisement -

ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಎ.ಎಂ.ಎಂ.ಎ- ಅಮ್ಮ) ಅಧ್ಯಕ್ಷೆಯಾಗಿ ನಟಿ ಶ್ವೇತಾ ಮೆನನ್ ಆಯ್ಕೆಯಾಗಿದ್ದು, ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಒಟ್ಟು 159 ಮತಗಳನ್ನು ಪಡೆದು ಶ್ವೇತಾ ಮೆನನ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಪ್ರತಿಸ್ಪರ್ಧಿ ನಟ ದೇವನ್ ಅವರಿಗೆ ಸೋಲಾಗಿದೆ. ದೇವನ್ 132 ಮತಗಳನ್ನು ಪಡೆದಿದ್ದಾರೆ. ನಟಿ ಹಾಗೂ ಡಬ್ಬಿಂಗ್ ಕಲಾವಿದೆ ಕುಕ್ಕು ಪರಮೇಶ್ವರನ್ ಅವರು ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಎ.ಎಂ.ಎಂ.ಎನ ಉನ್ನತ ಹುದ್ದೆಗಳಿಗೆ ಮಹಿಳೆಯರು ಆಯ್ಕೆಯಾಗಿದ್ದಾರೆ.

 

View this post on Instagram

 

A post shared by AMMA (@amma.association)

“ನಾವು ಮಹಿಳೆಯರು ಚುನಾವಣೆಯಲ್ಲಿ ಗೆದ್ದಿದ್ದೇವೆ. ನನಗೆ ತುಂಬಾ ಸಂತೋಷವಾಗಿದೆ” ಎಂದು ಶ್ವೇತಾ ಮಾಧ್ಯಮಗಳಿಗೆ ತಿಳಿಸಿದ್ದು, ಎಲ್ಲಾ ಸದಸ್ಯರು ಒಟ್ಟಾಗಿ ಸಂಘವಾಗಿ ಮುಂದುವರಿಯುತ್ತೇವೆ.
ಈ ಹಿಂದೆ ಎ.ಎಂ.ಎಂ.ಎ ತೊರೆದ ಮಹಿಳಾ ನಟರನ್ನು ಮರಳಿ ಕರೆತರಲು ಕರೆ ನೀಡುತ್ತೇವೆ. ಅವರಿಗೆ ಸ್ವಾಗತ, ನಾವೆಲ್ಲರೂ ಒಂದೇ ಕುಟುಂಬ. ಅವರಿಗೆ ಒಳ್ಳೆಯದಾಗುವುದಾದರೆ ನಾನು ಅವರನ್ನು ವೈಯಕ್ತಿಕವಾಗಿ ಭೇಟಿಯಾಗಲು ಸಿದ್ಧಳಿದ್ದೇನೆ” ಎಂದಿದ್ದಾರೆ.

ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರ ಮೇಲೆ ನಡೆದ ಮತ್ತು ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಜಸ್ಟೀಸ್ ಹೇಮಾ ಸಮಿತಿ ನೀಡಿದ್ದ ವರದಿಯನ್ನು 2024 ರ ಆಗಸ್ಟ್ 19 ರಂದು ಸರ್ಕಾರ ಸಾರ್ವಜನಿಕಗೊಳಿಸಿತ್ತು. ಆ ಬಳಿಕ ಅನೇಕ ನಟರ ಮೇಲೆ ಲೈಂಗಿಕ ಕಿರುಕುಳ ಆರೋಪಗಳು ಕೇಳಿ ಬಂದಿತ್ತು, ಪ್ರಕರಣಗಳು ದಾಖಲಾಗಿತ್ತು. ಈ ನಡುವೆ ನಟ ಮೋಹನ್‌ಲಾಲ್‌ ನೇತೃತ್ವದ ಎ.ಎಂ.ಎಂ.ಎ ಆಡಳಿತ ಸಮಿತಿಯಿಂದ ಸಿನಿಮಾ ದಿಗ್ಗಜರು ಕೆಳಗಿಳಿದಿದ್ದರು. ಹಾಗಾಗಿ, ಸಮಿತಿಗೆ ಚುನಾವಣೆ ಅಗತ್ಯವಾಗಿತ್ತು.

ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಮಹಿಳೆಯರ ಕೆಲಸದ ಪರಿಸ್ಥಿತಿಗಳನ್ನು ಅಧ್ಯಯನ ಮಾಡಲು ಹೇಮಾ ಸಮಿತಿಯನ್ನು 2019ರಲ್ಲಿ ಸರ್ಕಾರ ರಚಿಸಿತ್ತು. ಈ ಸಮಿತಿಯ ವರದಿಯು ಲೈಂಗಿಕ ಕಿರುಕುಳ ಮತ್ತು ಇತರ ಹಿಂಸಾಚಾರ ಸೇರಿದಂತೆ ಪುರುಷ ಸಹೋದ್ಯೋಗಿಗಳಿಂದ ಮಹಿಳೆಯರು ಎದುರಿಸುತ್ತಿರುವ ಭಯಾನಕ ದೌರ್ಜನ್ಯಗಳನ್ನು ಬಹಿರಂಗಪಡಿಸಿತ್ತು.

ವರದಿ ಬಿಡುಗಡೆಯಾದ ನಂತರ, ಕಲಾವಿದರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಸೇರಿದಂತೆ ಹಲವಾರು ನಟರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಆರೋಪಗಳು ಕೇಳಿ ಬಂದಿತ್ತು. ಪತ್ರಿಕಾ ಹೇಳಿಕೆಯಲ್ಲಿ, ಎ.ಎಂ.ಎಂ.ಎ. ಆಡಳಿತ ಸಮಿತಿಯು ನೈತಿಕ ಹೊಣೆಗಾರಿಕೆಯನ್ನು ಉಲ್ಲೇಖಿಸಿ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿತ್ತು.

2025ರ ಆಗಸ್ಟ್ 15ರಂದು ನಡೆದ ಚುನಾವಣೆಯಲ್ಲಿ, ಕುಕ್ಕು ಪರಮೇಶ್ವರನ್ 172 ಮತಗಳನ್ನು ಪಡೆದಿದ್ದು, ಅವರ ವಿರುದ್ಧ ಸ್ಪರ್ಧಿಸಿದ್ದ ರವೀಂದ್ರನ್ 115 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಸಂಘಕ್ಕೆ ಜಯನ್ ಆರ್ ಮತ್ತು ಲಕ್ಷ್ಮಿ ಪ್ರಿಯಾ ಅವರು ಉಪಾಧ್ಯಕ್ಷರಾಗಿ, ಹನ್ಸಿಬಾ ಹಸನ್ ಜಂಟಿ ಕಾರ್ಯದರ್ಶಿಯಾಗಿ ಮತ್ತು ಉನ್ನಿ ಶಿವಪಾಲ್ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿಯಲ್ಲಿ ಮಹಿಳೆಯರಿಗೆ ಮೀಸಲಾದ ಹುದ್ದೆಗಳಿಗೆ ಸರಯು ಮೋಹನ್, ಅಂಜಲಿ ನಾಯರ್, ಆಶಾ ಅರವಿಂದ್ ಮತ್ತು ನೀನಾ ಕುರುಪ್ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿಯ ಸಾಮಾನ್ಯ ಸದಸ್ಯ ಹುದ್ದೆಗಳಿಗೆ, ಸಂತೋಷ್ ಕೀಜತ್ತೂರ್, ವಿನು ಮೋಹನ್, ಕೈಲಾಶ್, ಟಿನಿ ಟಾಮ್, ಜಾಯ್ ಮ್ಯಾಥ್ಯೂ, ರೋನಿ ಡೇವಿಡ್ ರಾಜ್, ಮತ್ತು ಸಿಜೋಯ್ ವರ್ಗೀಸ್ ಆಯ್ಕೆಗೊಂಡಿದ್ದಾರೆ.

ಧರ್ಮಸ್ಥಳ ಶವಶೋಧ| ಮಧ್ಯಂತರ ವರದಿ ಇಲ್ಲ; ನ್ಯಾಯಾಲಯಕ್ಕೆ ಪೂರ್ಣ ವರದಿ: ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...