Homeಕರ್ನಾಟಕ2 ಸಾವಿರ ಕೋಟಿ ರೂ ಖರ್ಚಾದರೂ ’ಸ್ಮಾರ್ಟ್‌’ ಆಗದ ತುಮಕೂರು.. ಏಕೆ?

2 ಸಾವಿರ ಕೋಟಿ ರೂ ಖರ್ಚಾದರೂ ’ಸ್ಮಾರ್ಟ್‌’ ಆಗದ ತುಮಕೂರು.. ಏಕೆ?

- Advertisement -
- Advertisement -

ತುಮಕೂರು ಸ್ಮಾರ್ಟ್ ಸಿಟಿ ಎಂಬೋ ‘ಸಮರ್ಥ ನಗರ’ ಅಕ್ಷರಶಃ ಗಬ್ಬೆದ್ದು ಹೋಗಿದೆ. ನಗರದ ಯಾವುದೇ ಭಾಗಕ್ಕೆ ಹೋದರೂ ಅಲ್ಲಿನ ರಸ್ತೆಗಳ ಮೇಲೆ ಕಣ್ಣಾಡಿಸಿದರೆ ಸಾಕು ಇದು ಹದಗೆಟ್ಟ ಪರಿಸ್ಥಿತಿಯನ್ನು ಹೇಳುತ್ತವೆ. ಇಂಥಾ ಕೆಟ್ಟ ಪರಿಸ್ಥಿತಿ ಹಿಂದೆಲ್ಲೂ ಕಂಡಿರಲಿಲ್ಲವೆಂದು  ನಾಗರಿಕರು ಪಕ್ಷಾತೀತವಾಗಿ ಛೀಮಾರಿ ಹಾಕುತ್ತಿದ್ದಾರೆ.

ನಗರದ ಮೂಲೆ ಮೂಲೆಗಳಲ್ಲೂ ಅಗೆದ ಗುಂಡಿಗಳು, ಮೇಲೆದ್ದ ಮಣ್ಣಿನ ಗುಡ್ಡೆ, ಮಳೆ ಬಂದು ಕೊರಕಲಾದ ರಸ್ತೆಯ ಎರಡೂ ಬದಿಗಳು ಇವೆಲ್ಲವನ್ನೂ ನೋಡಿ ನರಕಯಾತನೆ ಅನುಭವಿಸುತ್ತಿದ್ದಾರೆ ಜನ. ಜನರಲ್ಲಿ ವ್ಯಕ್ತವಾಗುತ್ತಿರುವ ರೋಷಕ್ಕೆ ಮಿತಿಯೇ ಇಲ್ಲ. ಕಂಡಕಂಡಲ್ಲಿ ಜನ ಪಾಲಿಕೆ ಅಧಿಕಾರಿಗಳನ್ನು ಉಗಿಯುತ್ತಿದ್ದಾರೆ. ಸಮರ್ಥ ನಗರ ಎಂದರೆ ಇದೇನಾ ಎಂದು ಪ್ರಶ್ನಿಸುತ್ತಿದ್ದಾರೆ.

ನಗರದ ಯಾವ ಕಡೆ ಯಾವಾಗ ಗುಂಡಿ ತೋಡುತ್ತಾರೆ. ಯಾವ ಕಾರಣಕ್ಕಾಗಿ ಅಗೆಯುತ್ತಾರೆ. ಯಾವ ಉದ್ದೇಶಕ್ಕಾಗಿ ಈ ಕೆಲಸಕ್ಕೆ ಕೈ ಹಾಕಿದ್ದಾರೆ. ತುಮಕೂರು ಮಹಾನಗರ ಪಾಲಿಕೆಯಿಂದ ಇದಕ್ಕೆ ಪರವಾನಿಗೆ ಪಡೆಯಲಾಗಿದೆಯೇ ಎಂದರೆ ಅದೂ ಕೂಡ ಇಲ್ಲವೆನ್ನುತ್ತಾರೆ ಕೆಲ ಪಾಲಿಕೆ ಸದಸ್ಯರು. ಸ್ಮಾರ್ಟ್ ಸಿಟಿ ನೆಪದಲ್ಲಿ ರಸ್ತೆಗಳನ್ನು ಅಗೆದುಬಗೆದು ಗುಂಡಿಮಾಡುತ್ತಿದ್ದಾರೆ. ಇವರನ್ನು ಕೇಳುವವರೇ ಇಲ್ಲವಾಗಿದೆ.

ಒಂದು ಕಡೆ 24*7 ಕುಡಿಯುವ ನೀರು ಒದಗಿಸಲು ಪೈಪ್ ಲೈನ್ ಅಳವಡಿಸುವ ಕಾಮಗಾರಿ, ಇದು ಮುಗಿಯಿತು ಅಂದರೆ ಜಿಯೋ ನೆಟ್‌ವರ್ಕ್‌ಗೆ ಕೇಬಲ್ ಹಾಕುವ ಕಾಮಗಾರಿ, ಇದು ಮುಗಿಯುತಪ್ಪ ಅನ್ನುವುದರೊಳಗೆ 24*7 ಗ್ಯಾಸ್ ಪೈಪ್ ಗಾಮಗಾರಿ, ಅಯ್ಯೋ ಎಲ್ಲವೂ ಪೂರ್ಣವಾಗಿದೆ ಇನ್ನೇನು ನೆಮ್ಮದಿಯಾಗಿರಬಹುದು ಅಂತೀರಾ. ಇಲ್ಲ ಮತ್ತೆ ಅಗೆತ. ಆ ಕಡೆ ಮತ್ತು ಈ ಕಡೆ ಮನೆಗಳಿಗೆ ಸಂಪರ್ಕ ಕಲ್ಪಿಸಲು ಅಗೆತ. ಹೀಗೆ ಮಾಡಿ ತುಮಕೂರೆಂಬೋ ತುಮಕೂರಿನ ರಸ್ತೆಗಳನ್ನೇ ಹಾಳುಗೆಡವಿದ್ದಾರೆ.

ಮಳೆ ಬಂದರೆ ಕೆಸರು, ಹೆಜ್ಜೆ ಇಡಲು ಆಗದಷ್ಟು ಕೆಸರು. ವಾಹನಗಳು ಸಂಚರಿಸಿದರೆ ಸಾಕು ರಸ್ತೆಯಲ್ಲಿ ನಡೆದುಹೋಗುವವರು ಜೀವ ಹಿಡಿದುಕೊಂಡೇ ಓಡಾಡಬೇಕು. ಕೆಸರು ಮೇಲೆ ರಪ್ ಅಂತ ಎಲ್ಲಿ ಸಿಡಿಯುತ್ತೋ ಅನ್ನುವ ಭಯ. ಭೂಮಿ ನೆನೆದು ಸಿಕ್ಕಿಕೊಳ್ಳುವ ಕಾರುಗಳು, ಲಾರಿಗಳು, ಇದಾದ ಮೇಲೆ ಭೂಮಿ ಒಣಗಿತು ಅನ್ನಿ. ದೂಳು, ವಾಹಗಳು ಬಂದರೆ ಸಾಕು ದೂಳು ಮೈಮೇಲೆ ಸುರಿಯುತ್ತದೆ. ಉಸಿರು ಕಟ್ಟಿದಂತಾಗುತ್ತದೆ. ಪರ್ಟಿಕ್ಯೂಲೇಟ್ ಮ್ಯಾಟರ್ ಅತಿ ಹೆಚ್ಚು ಇದ್ದು ಮಾಲಿನ್ಯ ನಗರವಾಗಿರುವ ತುಮಕೂರು ಅದ್ಹೇಗೆ ಸ್ಮಾರ್ಟ್ ಸಿಟಿ ಅನಿಸಿಕೊಳ್ಳುತ್ತೋ ಆ ಸ್ಮಾರ್ಟ್ ಸಿಟಿ ನಿರ್ಮಾತೃಗಳಿಗೇ ಗೊತ್ತು. ಆದರೆ ಜನರಂತು ಬಾಯಿಗೆ ಬಂದಂತೆ ಕ್ಯಾಕರಿಸುತ್ತಿದ್ದಾರೆ.

ರಸ್ತೆಯ ಎರಡು ಬದಿಯನ್ನು ಅಗೆದವರು ಅದರ ಮೇಲೆ ಟಾರ್ ಮುಖವನ್ನೂ ತೋರಿಸಿ ತೇಪೆ ಹಚ್ಚುವ ಕೆಲಸವನ್ನೂ ಮಾಡಿಲ್ಲ. ಹೀಗಾಗಿ ತುಮಕೂರು ಸ್ಮಾರ್ಟ್ ಸಿಟಿ ಜನರಿಂದ ಗೇಲಿಗೆ ಒಳಗಾಗಿದೆ. ಆದರೆ ನಿತ್ಯವೂ ಪೊಲೀಸರು, ಟ್ರಾಫಿಕ್ ಪೊಲೀಸರು ವಾಹನಗಳನ್ನು ಹಿಡಿದು, ಹೆಲ್ಮೆಟ್ ಧರಿಸಿಲ್ಲ. ಡಿ.ಎಲ್. ಹೊಂದಿಲ್ಲ, ಹೊಗೆ ಪರೀಕ್ಷೆ ನಡೆಸಿಲ್ಲ ಹೀಗೆ ಹಲವು ರೀತಿಯಲ್ಲಿ ಜನರಿಂದ ವಸೂಲಿ ಮಾಡುತ್ತಲೇ ಇದ್ದಾರೆ. ಏನ್ ರಸ್ತೆಗಳು ಹೀಗಿವೆಯಲ್ಲಾ ಎಂದರೆ ಅದರ ಬಗ್ಗೆ ನಮ್ಮನ್ನು ಕೇಳಬೇಡಿ ಅನ್ನುತ್ತಾರೆ. ರಸ್ತೆಗಳ ಉತ್ತಮವಾಗಿರಬೇಕು. ಆಗ ದಂಡ ವಿಧಿಸಿದರೂ ಕಟ್ಟಬಹುದು. ಆದರೆ ನಮ್ಮ ನಗರದ ಯಾವುದೇ ರಸ್ತೆಗಳು ಚನ್ನಾಗಿವೆ ಎಂದು ಹೇಳವುದಕ್ಕೇ ಆಗುವುದಿಲ್ಲ ಎನ್ನುತ್ತಾರೆ ಬೈಕ್ ಸವಾರರು.

ಸಮರ್ಥ ನಗರದ ಅಭಿವೃದ್ದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹತ್ತಿರತ್ತಿರ 2 ಸಾವಿರ ಕೋಟಿ ರೂಪಾಯಿ ನಗರ ಪಾಲಿಕೆಗೆ ಬಂದಿದೆ. ರಸ್ತೆ, ಚರಂಡಿ, ಬೀದಿ ದೀಪ, ಕುಡಿಯುವ ನೀರು, ಪಾರ್ಕ್ ಗಳ ಅಭಿವೃದ್ದಿ, ಬಸ್ ನಿಲ್ದಾಣಗಳ ನಿರ್ಮಾಣ ಹೀಗೆ ಹಲವು ಕಾಮಗಾರಿಗಳನ್ನು ಮಾಡುವ ಮೂಲಕ ಕೋಟಿ ಕೋಟಿ ಲೂಟಿ ಮಾಡುವಲ್ಲಿ ರಾಜಕಾರಣಿಗಳು ಮತ್ತು ಅಧಿಕಾರಿಗಳು ನಿರತರಾಗಿದ್ದಾರೆ. ಸ್ಮಾರ್ಟ್ ಸಿಟಿ ಅಂದರೆ ಜನ ಬೆಚ್ಚಿ ಬೀಳುತ್ತಿದ್ದಾರೆ. ಅಯ್ಯೋ ಈ ಕಾಮಗಾರಿಗಳು ಎಷ್ಟು ಬೇಗ ಮುಗಿಯುತ್ತೋ ಅಂತ ಕಾಯುತ್ತಿದ್ದಾರೆ. ಆದರೆ ಮಬ್ಬು ಭಕ್ತರು, ಸ್ಮಾರ್ಟಿ ಸಮರ್ಥಕರು ಅಭಿವೃದ್ಧಿ ಕೆಲಸ ನಡೆಯುತ್ತಿದೆ ಅಂದರೆ ಸಹಿಕೊಳ್ಳಬೇಕು ಎಂದು ಮಂಡುವಾದ ಮಾಡುತ್ತಿದ್ದಾರೆ. ಆದರೆ ಜನ ಮಾತ್ರ ಕಾಮಗಾರಿಗಳು ಮುಗಿಯುತ್ತೋ ಇಲ್ಲವೋ? ಎಂಬ ಗೊಂದಲದಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...