Homeಕರ್ನಾಟಕ2 ಸಾವಿರ ಕೋಟಿ ರೂ ಖರ್ಚಾದರೂ ’ಸ್ಮಾರ್ಟ್‌’ ಆಗದ ತುಮಕೂರು.. ಏಕೆ?

2 ಸಾವಿರ ಕೋಟಿ ರೂ ಖರ್ಚಾದರೂ ’ಸ್ಮಾರ್ಟ್‌’ ಆಗದ ತುಮಕೂರು.. ಏಕೆ?

- Advertisement -
- Advertisement -

ತುಮಕೂರು ಸ್ಮಾರ್ಟ್ ಸಿಟಿ ಎಂಬೋ ‘ಸಮರ್ಥ ನಗರ’ ಅಕ್ಷರಶಃ ಗಬ್ಬೆದ್ದು ಹೋಗಿದೆ. ನಗರದ ಯಾವುದೇ ಭಾಗಕ್ಕೆ ಹೋದರೂ ಅಲ್ಲಿನ ರಸ್ತೆಗಳ ಮೇಲೆ ಕಣ್ಣಾಡಿಸಿದರೆ ಸಾಕು ಇದು ಹದಗೆಟ್ಟ ಪರಿಸ್ಥಿತಿಯನ್ನು ಹೇಳುತ್ತವೆ. ಇಂಥಾ ಕೆಟ್ಟ ಪರಿಸ್ಥಿತಿ ಹಿಂದೆಲ್ಲೂ ಕಂಡಿರಲಿಲ್ಲವೆಂದು  ನಾಗರಿಕರು ಪಕ್ಷಾತೀತವಾಗಿ ಛೀಮಾರಿ ಹಾಕುತ್ತಿದ್ದಾರೆ.

ನಗರದ ಮೂಲೆ ಮೂಲೆಗಳಲ್ಲೂ ಅಗೆದ ಗುಂಡಿಗಳು, ಮೇಲೆದ್ದ ಮಣ್ಣಿನ ಗುಡ್ಡೆ, ಮಳೆ ಬಂದು ಕೊರಕಲಾದ ರಸ್ತೆಯ ಎರಡೂ ಬದಿಗಳು ಇವೆಲ್ಲವನ್ನೂ ನೋಡಿ ನರಕಯಾತನೆ ಅನುಭವಿಸುತ್ತಿದ್ದಾರೆ ಜನ. ಜನರಲ್ಲಿ ವ್ಯಕ್ತವಾಗುತ್ತಿರುವ ರೋಷಕ್ಕೆ ಮಿತಿಯೇ ಇಲ್ಲ. ಕಂಡಕಂಡಲ್ಲಿ ಜನ ಪಾಲಿಕೆ ಅಧಿಕಾರಿಗಳನ್ನು ಉಗಿಯುತ್ತಿದ್ದಾರೆ. ಸಮರ್ಥ ನಗರ ಎಂದರೆ ಇದೇನಾ ಎಂದು ಪ್ರಶ್ನಿಸುತ್ತಿದ್ದಾರೆ.

ನಗರದ ಯಾವ ಕಡೆ ಯಾವಾಗ ಗುಂಡಿ ತೋಡುತ್ತಾರೆ. ಯಾವ ಕಾರಣಕ್ಕಾಗಿ ಅಗೆಯುತ್ತಾರೆ. ಯಾವ ಉದ್ದೇಶಕ್ಕಾಗಿ ಈ ಕೆಲಸಕ್ಕೆ ಕೈ ಹಾಕಿದ್ದಾರೆ. ತುಮಕೂರು ಮಹಾನಗರ ಪಾಲಿಕೆಯಿಂದ ಇದಕ್ಕೆ ಪರವಾನಿಗೆ ಪಡೆಯಲಾಗಿದೆಯೇ ಎಂದರೆ ಅದೂ ಕೂಡ ಇಲ್ಲವೆನ್ನುತ್ತಾರೆ ಕೆಲ ಪಾಲಿಕೆ ಸದಸ್ಯರು. ಸ್ಮಾರ್ಟ್ ಸಿಟಿ ನೆಪದಲ್ಲಿ ರಸ್ತೆಗಳನ್ನು ಅಗೆದುಬಗೆದು ಗುಂಡಿಮಾಡುತ್ತಿದ್ದಾರೆ. ಇವರನ್ನು ಕೇಳುವವರೇ ಇಲ್ಲವಾಗಿದೆ.

ಒಂದು ಕಡೆ 24*7 ಕುಡಿಯುವ ನೀರು ಒದಗಿಸಲು ಪೈಪ್ ಲೈನ್ ಅಳವಡಿಸುವ ಕಾಮಗಾರಿ, ಇದು ಮುಗಿಯಿತು ಅಂದರೆ ಜಿಯೋ ನೆಟ್‌ವರ್ಕ್‌ಗೆ ಕೇಬಲ್ ಹಾಕುವ ಕಾಮಗಾರಿ, ಇದು ಮುಗಿಯುತಪ್ಪ ಅನ್ನುವುದರೊಳಗೆ 24*7 ಗ್ಯಾಸ್ ಪೈಪ್ ಗಾಮಗಾರಿ, ಅಯ್ಯೋ ಎಲ್ಲವೂ ಪೂರ್ಣವಾಗಿದೆ ಇನ್ನೇನು ನೆಮ್ಮದಿಯಾಗಿರಬಹುದು ಅಂತೀರಾ. ಇಲ್ಲ ಮತ್ತೆ ಅಗೆತ. ಆ ಕಡೆ ಮತ್ತು ಈ ಕಡೆ ಮನೆಗಳಿಗೆ ಸಂಪರ್ಕ ಕಲ್ಪಿಸಲು ಅಗೆತ. ಹೀಗೆ ಮಾಡಿ ತುಮಕೂರೆಂಬೋ ತುಮಕೂರಿನ ರಸ್ತೆಗಳನ್ನೇ ಹಾಳುಗೆಡವಿದ್ದಾರೆ.

ಮಳೆ ಬಂದರೆ ಕೆಸರು, ಹೆಜ್ಜೆ ಇಡಲು ಆಗದಷ್ಟು ಕೆಸರು. ವಾಹನಗಳು ಸಂಚರಿಸಿದರೆ ಸಾಕು ರಸ್ತೆಯಲ್ಲಿ ನಡೆದುಹೋಗುವವರು ಜೀವ ಹಿಡಿದುಕೊಂಡೇ ಓಡಾಡಬೇಕು. ಕೆಸರು ಮೇಲೆ ರಪ್ ಅಂತ ಎಲ್ಲಿ ಸಿಡಿಯುತ್ತೋ ಅನ್ನುವ ಭಯ. ಭೂಮಿ ನೆನೆದು ಸಿಕ್ಕಿಕೊಳ್ಳುವ ಕಾರುಗಳು, ಲಾರಿಗಳು, ಇದಾದ ಮೇಲೆ ಭೂಮಿ ಒಣಗಿತು ಅನ್ನಿ. ದೂಳು, ವಾಹಗಳು ಬಂದರೆ ಸಾಕು ದೂಳು ಮೈಮೇಲೆ ಸುರಿಯುತ್ತದೆ. ಉಸಿರು ಕಟ್ಟಿದಂತಾಗುತ್ತದೆ. ಪರ್ಟಿಕ್ಯೂಲೇಟ್ ಮ್ಯಾಟರ್ ಅತಿ ಹೆಚ್ಚು ಇದ್ದು ಮಾಲಿನ್ಯ ನಗರವಾಗಿರುವ ತುಮಕೂರು ಅದ್ಹೇಗೆ ಸ್ಮಾರ್ಟ್ ಸಿಟಿ ಅನಿಸಿಕೊಳ್ಳುತ್ತೋ ಆ ಸ್ಮಾರ್ಟ್ ಸಿಟಿ ನಿರ್ಮಾತೃಗಳಿಗೇ ಗೊತ್ತು. ಆದರೆ ಜನರಂತು ಬಾಯಿಗೆ ಬಂದಂತೆ ಕ್ಯಾಕರಿಸುತ್ತಿದ್ದಾರೆ.

ರಸ್ತೆಯ ಎರಡು ಬದಿಯನ್ನು ಅಗೆದವರು ಅದರ ಮೇಲೆ ಟಾರ್ ಮುಖವನ್ನೂ ತೋರಿಸಿ ತೇಪೆ ಹಚ್ಚುವ ಕೆಲಸವನ್ನೂ ಮಾಡಿಲ್ಲ. ಹೀಗಾಗಿ ತುಮಕೂರು ಸ್ಮಾರ್ಟ್ ಸಿಟಿ ಜನರಿಂದ ಗೇಲಿಗೆ ಒಳಗಾಗಿದೆ. ಆದರೆ ನಿತ್ಯವೂ ಪೊಲೀಸರು, ಟ್ರಾಫಿಕ್ ಪೊಲೀಸರು ವಾಹನಗಳನ್ನು ಹಿಡಿದು, ಹೆಲ್ಮೆಟ್ ಧರಿಸಿಲ್ಲ. ಡಿ.ಎಲ್. ಹೊಂದಿಲ್ಲ, ಹೊಗೆ ಪರೀಕ್ಷೆ ನಡೆಸಿಲ್ಲ ಹೀಗೆ ಹಲವು ರೀತಿಯಲ್ಲಿ ಜನರಿಂದ ವಸೂಲಿ ಮಾಡುತ್ತಲೇ ಇದ್ದಾರೆ. ಏನ್ ರಸ್ತೆಗಳು ಹೀಗಿವೆಯಲ್ಲಾ ಎಂದರೆ ಅದರ ಬಗ್ಗೆ ನಮ್ಮನ್ನು ಕೇಳಬೇಡಿ ಅನ್ನುತ್ತಾರೆ. ರಸ್ತೆಗಳ ಉತ್ತಮವಾಗಿರಬೇಕು. ಆಗ ದಂಡ ವಿಧಿಸಿದರೂ ಕಟ್ಟಬಹುದು. ಆದರೆ ನಮ್ಮ ನಗರದ ಯಾವುದೇ ರಸ್ತೆಗಳು ಚನ್ನಾಗಿವೆ ಎಂದು ಹೇಳವುದಕ್ಕೇ ಆಗುವುದಿಲ್ಲ ಎನ್ನುತ್ತಾರೆ ಬೈಕ್ ಸವಾರರು.

ಸಮರ್ಥ ನಗರದ ಅಭಿವೃದ್ದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹತ್ತಿರತ್ತಿರ 2 ಸಾವಿರ ಕೋಟಿ ರೂಪಾಯಿ ನಗರ ಪಾಲಿಕೆಗೆ ಬಂದಿದೆ. ರಸ್ತೆ, ಚರಂಡಿ, ಬೀದಿ ದೀಪ, ಕುಡಿಯುವ ನೀರು, ಪಾರ್ಕ್ ಗಳ ಅಭಿವೃದ್ದಿ, ಬಸ್ ನಿಲ್ದಾಣಗಳ ನಿರ್ಮಾಣ ಹೀಗೆ ಹಲವು ಕಾಮಗಾರಿಗಳನ್ನು ಮಾಡುವ ಮೂಲಕ ಕೋಟಿ ಕೋಟಿ ಲೂಟಿ ಮಾಡುವಲ್ಲಿ ರಾಜಕಾರಣಿಗಳು ಮತ್ತು ಅಧಿಕಾರಿಗಳು ನಿರತರಾಗಿದ್ದಾರೆ. ಸ್ಮಾರ್ಟ್ ಸಿಟಿ ಅಂದರೆ ಜನ ಬೆಚ್ಚಿ ಬೀಳುತ್ತಿದ್ದಾರೆ. ಅಯ್ಯೋ ಈ ಕಾಮಗಾರಿಗಳು ಎಷ್ಟು ಬೇಗ ಮುಗಿಯುತ್ತೋ ಅಂತ ಕಾಯುತ್ತಿದ್ದಾರೆ. ಆದರೆ ಮಬ್ಬು ಭಕ್ತರು, ಸ್ಮಾರ್ಟಿ ಸಮರ್ಥಕರು ಅಭಿವೃದ್ಧಿ ಕೆಲಸ ನಡೆಯುತ್ತಿದೆ ಅಂದರೆ ಸಹಿಕೊಳ್ಳಬೇಕು ಎಂದು ಮಂಡುವಾದ ಮಾಡುತ್ತಿದ್ದಾರೆ. ಆದರೆ ಜನ ಮಾತ್ರ ಕಾಮಗಾರಿಗಳು ಮುಗಿಯುತ್ತೋ ಇಲ್ಲವೋ? ಎಂಬ ಗೊಂದಲದಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...