Homeಕರ್ನಾಟಕ2 ಸಾವಿರ ಕೋಟಿ ರೂ ಖರ್ಚಾದರೂ ’ಸ್ಮಾರ್ಟ್‌’ ಆಗದ ತುಮಕೂರು.. ಏಕೆ?

2 ಸಾವಿರ ಕೋಟಿ ರೂ ಖರ್ಚಾದರೂ ’ಸ್ಮಾರ್ಟ್‌’ ಆಗದ ತುಮಕೂರು.. ಏಕೆ?

- Advertisement -
- Advertisement -

ತುಮಕೂರು ಸ್ಮಾರ್ಟ್ ಸಿಟಿ ಎಂಬೋ ‘ಸಮರ್ಥ ನಗರ’ ಅಕ್ಷರಶಃ ಗಬ್ಬೆದ್ದು ಹೋಗಿದೆ. ನಗರದ ಯಾವುದೇ ಭಾಗಕ್ಕೆ ಹೋದರೂ ಅಲ್ಲಿನ ರಸ್ತೆಗಳ ಮೇಲೆ ಕಣ್ಣಾಡಿಸಿದರೆ ಸಾಕು ಇದು ಹದಗೆಟ್ಟ ಪರಿಸ್ಥಿತಿಯನ್ನು ಹೇಳುತ್ತವೆ. ಇಂಥಾ ಕೆಟ್ಟ ಪರಿಸ್ಥಿತಿ ಹಿಂದೆಲ್ಲೂ ಕಂಡಿರಲಿಲ್ಲವೆಂದು  ನಾಗರಿಕರು ಪಕ್ಷಾತೀತವಾಗಿ ಛೀಮಾರಿ ಹಾಕುತ್ತಿದ್ದಾರೆ.

ನಗರದ ಮೂಲೆ ಮೂಲೆಗಳಲ್ಲೂ ಅಗೆದ ಗುಂಡಿಗಳು, ಮೇಲೆದ್ದ ಮಣ್ಣಿನ ಗುಡ್ಡೆ, ಮಳೆ ಬಂದು ಕೊರಕಲಾದ ರಸ್ತೆಯ ಎರಡೂ ಬದಿಗಳು ಇವೆಲ್ಲವನ್ನೂ ನೋಡಿ ನರಕಯಾತನೆ ಅನುಭವಿಸುತ್ತಿದ್ದಾರೆ ಜನ. ಜನರಲ್ಲಿ ವ್ಯಕ್ತವಾಗುತ್ತಿರುವ ರೋಷಕ್ಕೆ ಮಿತಿಯೇ ಇಲ್ಲ. ಕಂಡಕಂಡಲ್ಲಿ ಜನ ಪಾಲಿಕೆ ಅಧಿಕಾರಿಗಳನ್ನು ಉಗಿಯುತ್ತಿದ್ದಾರೆ. ಸಮರ್ಥ ನಗರ ಎಂದರೆ ಇದೇನಾ ಎಂದು ಪ್ರಶ್ನಿಸುತ್ತಿದ್ದಾರೆ.

ನಗರದ ಯಾವ ಕಡೆ ಯಾವಾಗ ಗುಂಡಿ ತೋಡುತ್ತಾರೆ. ಯಾವ ಕಾರಣಕ್ಕಾಗಿ ಅಗೆಯುತ್ತಾರೆ. ಯಾವ ಉದ್ದೇಶಕ್ಕಾಗಿ ಈ ಕೆಲಸಕ್ಕೆ ಕೈ ಹಾಕಿದ್ದಾರೆ. ತುಮಕೂರು ಮಹಾನಗರ ಪಾಲಿಕೆಯಿಂದ ಇದಕ್ಕೆ ಪರವಾನಿಗೆ ಪಡೆಯಲಾಗಿದೆಯೇ ಎಂದರೆ ಅದೂ ಕೂಡ ಇಲ್ಲವೆನ್ನುತ್ತಾರೆ ಕೆಲ ಪಾಲಿಕೆ ಸದಸ್ಯರು. ಸ್ಮಾರ್ಟ್ ಸಿಟಿ ನೆಪದಲ್ಲಿ ರಸ್ತೆಗಳನ್ನು ಅಗೆದುಬಗೆದು ಗುಂಡಿಮಾಡುತ್ತಿದ್ದಾರೆ. ಇವರನ್ನು ಕೇಳುವವರೇ ಇಲ್ಲವಾಗಿದೆ.

ಒಂದು ಕಡೆ 24*7 ಕುಡಿಯುವ ನೀರು ಒದಗಿಸಲು ಪೈಪ್ ಲೈನ್ ಅಳವಡಿಸುವ ಕಾಮಗಾರಿ, ಇದು ಮುಗಿಯಿತು ಅಂದರೆ ಜಿಯೋ ನೆಟ್‌ವರ್ಕ್‌ಗೆ ಕೇಬಲ್ ಹಾಕುವ ಕಾಮಗಾರಿ, ಇದು ಮುಗಿಯುತಪ್ಪ ಅನ್ನುವುದರೊಳಗೆ 24*7 ಗ್ಯಾಸ್ ಪೈಪ್ ಗಾಮಗಾರಿ, ಅಯ್ಯೋ ಎಲ್ಲವೂ ಪೂರ್ಣವಾಗಿದೆ ಇನ್ನೇನು ನೆಮ್ಮದಿಯಾಗಿರಬಹುದು ಅಂತೀರಾ. ಇಲ್ಲ ಮತ್ತೆ ಅಗೆತ. ಆ ಕಡೆ ಮತ್ತು ಈ ಕಡೆ ಮನೆಗಳಿಗೆ ಸಂಪರ್ಕ ಕಲ್ಪಿಸಲು ಅಗೆತ. ಹೀಗೆ ಮಾಡಿ ತುಮಕೂರೆಂಬೋ ತುಮಕೂರಿನ ರಸ್ತೆಗಳನ್ನೇ ಹಾಳುಗೆಡವಿದ್ದಾರೆ.

ಮಳೆ ಬಂದರೆ ಕೆಸರು, ಹೆಜ್ಜೆ ಇಡಲು ಆಗದಷ್ಟು ಕೆಸರು. ವಾಹನಗಳು ಸಂಚರಿಸಿದರೆ ಸಾಕು ರಸ್ತೆಯಲ್ಲಿ ನಡೆದುಹೋಗುವವರು ಜೀವ ಹಿಡಿದುಕೊಂಡೇ ಓಡಾಡಬೇಕು. ಕೆಸರು ಮೇಲೆ ರಪ್ ಅಂತ ಎಲ್ಲಿ ಸಿಡಿಯುತ್ತೋ ಅನ್ನುವ ಭಯ. ಭೂಮಿ ನೆನೆದು ಸಿಕ್ಕಿಕೊಳ್ಳುವ ಕಾರುಗಳು, ಲಾರಿಗಳು, ಇದಾದ ಮೇಲೆ ಭೂಮಿ ಒಣಗಿತು ಅನ್ನಿ. ದೂಳು, ವಾಹಗಳು ಬಂದರೆ ಸಾಕು ದೂಳು ಮೈಮೇಲೆ ಸುರಿಯುತ್ತದೆ. ಉಸಿರು ಕಟ್ಟಿದಂತಾಗುತ್ತದೆ. ಪರ್ಟಿಕ್ಯೂಲೇಟ್ ಮ್ಯಾಟರ್ ಅತಿ ಹೆಚ್ಚು ಇದ್ದು ಮಾಲಿನ್ಯ ನಗರವಾಗಿರುವ ತುಮಕೂರು ಅದ್ಹೇಗೆ ಸ್ಮಾರ್ಟ್ ಸಿಟಿ ಅನಿಸಿಕೊಳ್ಳುತ್ತೋ ಆ ಸ್ಮಾರ್ಟ್ ಸಿಟಿ ನಿರ್ಮಾತೃಗಳಿಗೇ ಗೊತ್ತು. ಆದರೆ ಜನರಂತು ಬಾಯಿಗೆ ಬಂದಂತೆ ಕ್ಯಾಕರಿಸುತ್ತಿದ್ದಾರೆ.

ರಸ್ತೆಯ ಎರಡು ಬದಿಯನ್ನು ಅಗೆದವರು ಅದರ ಮೇಲೆ ಟಾರ್ ಮುಖವನ್ನೂ ತೋರಿಸಿ ತೇಪೆ ಹಚ್ಚುವ ಕೆಲಸವನ್ನೂ ಮಾಡಿಲ್ಲ. ಹೀಗಾಗಿ ತುಮಕೂರು ಸ್ಮಾರ್ಟ್ ಸಿಟಿ ಜನರಿಂದ ಗೇಲಿಗೆ ಒಳಗಾಗಿದೆ. ಆದರೆ ನಿತ್ಯವೂ ಪೊಲೀಸರು, ಟ್ರಾಫಿಕ್ ಪೊಲೀಸರು ವಾಹನಗಳನ್ನು ಹಿಡಿದು, ಹೆಲ್ಮೆಟ್ ಧರಿಸಿಲ್ಲ. ಡಿ.ಎಲ್. ಹೊಂದಿಲ್ಲ, ಹೊಗೆ ಪರೀಕ್ಷೆ ನಡೆಸಿಲ್ಲ ಹೀಗೆ ಹಲವು ರೀತಿಯಲ್ಲಿ ಜನರಿಂದ ವಸೂಲಿ ಮಾಡುತ್ತಲೇ ಇದ್ದಾರೆ. ಏನ್ ರಸ್ತೆಗಳು ಹೀಗಿವೆಯಲ್ಲಾ ಎಂದರೆ ಅದರ ಬಗ್ಗೆ ನಮ್ಮನ್ನು ಕೇಳಬೇಡಿ ಅನ್ನುತ್ತಾರೆ. ರಸ್ತೆಗಳ ಉತ್ತಮವಾಗಿರಬೇಕು. ಆಗ ದಂಡ ವಿಧಿಸಿದರೂ ಕಟ್ಟಬಹುದು. ಆದರೆ ನಮ್ಮ ನಗರದ ಯಾವುದೇ ರಸ್ತೆಗಳು ಚನ್ನಾಗಿವೆ ಎಂದು ಹೇಳವುದಕ್ಕೇ ಆಗುವುದಿಲ್ಲ ಎನ್ನುತ್ತಾರೆ ಬೈಕ್ ಸವಾರರು.

ಸಮರ್ಥ ನಗರದ ಅಭಿವೃದ್ದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹತ್ತಿರತ್ತಿರ 2 ಸಾವಿರ ಕೋಟಿ ರೂಪಾಯಿ ನಗರ ಪಾಲಿಕೆಗೆ ಬಂದಿದೆ. ರಸ್ತೆ, ಚರಂಡಿ, ಬೀದಿ ದೀಪ, ಕುಡಿಯುವ ನೀರು, ಪಾರ್ಕ್ ಗಳ ಅಭಿವೃದ್ದಿ, ಬಸ್ ನಿಲ್ದಾಣಗಳ ನಿರ್ಮಾಣ ಹೀಗೆ ಹಲವು ಕಾಮಗಾರಿಗಳನ್ನು ಮಾಡುವ ಮೂಲಕ ಕೋಟಿ ಕೋಟಿ ಲೂಟಿ ಮಾಡುವಲ್ಲಿ ರಾಜಕಾರಣಿಗಳು ಮತ್ತು ಅಧಿಕಾರಿಗಳು ನಿರತರಾಗಿದ್ದಾರೆ. ಸ್ಮಾರ್ಟ್ ಸಿಟಿ ಅಂದರೆ ಜನ ಬೆಚ್ಚಿ ಬೀಳುತ್ತಿದ್ದಾರೆ. ಅಯ್ಯೋ ಈ ಕಾಮಗಾರಿಗಳು ಎಷ್ಟು ಬೇಗ ಮುಗಿಯುತ್ತೋ ಅಂತ ಕಾಯುತ್ತಿದ್ದಾರೆ. ಆದರೆ ಮಬ್ಬು ಭಕ್ತರು, ಸ್ಮಾರ್ಟಿ ಸಮರ್ಥಕರು ಅಭಿವೃದ್ಧಿ ಕೆಲಸ ನಡೆಯುತ್ತಿದೆ ಅಂದರೆ ಸಹಿಕೊಳ್ಳಬೇಕು ಎಂದು ಮಂಡುವಾದ ಮಾಡುತ್ತಿದ್ದಾರೆ. ಆದರೆ ಜನ ಮಾತ್ರ ಕಾಮಗಾರಿಗಳು ಮುಗಿಯುತ್ತೋ ಇಲ್ಲವೋ? ಎಂಬ ಗೊಂದಲದಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...