Homeಕರ್ನಾಟಕ2 ಸಾವಿರ ಕೋಟಿ ರೂ ಖರ್ಚಾದರೂ ’ಸ್ಮಾರ್ಟ್‌’ ಆಗದ ತುಮಕೂರು.. ಏಕೆ?

2 ಸಾವಿರ ಕೋಟಿ ರೂ ಖರ್ಚಾದರೂ ’ಸ್ಮಾರ್ಟ್‌’ ಆಗದ ತುಮಕೂರು.. ಏಕೆ?

- Advertisement -
- Advertisement -

ತುಮಕೂರು ಸ್ಮಾರ್ಟ್ ಸಿಟಿ ಎಂಬೋ ‘ಸಮರ್ಥ ನಗರ’ ಅಕ್ಷರಶಃ ಗಬ್ಬೆದ್ದು ಹೋಗಿದೆ. ನಗರದ ಯಾವುದೇ ಭಾಗಕ್ಕೆ ಹೋದರೂ ಅಲ್ಲಿನ ರಸ್ತೆಗಳ ಮೇಲೆ ಕಣ್ಣಾಡಿಸಿದರೆ ಸಾಕು ಇದು ಹದಗೆಟ್ಟ ಪರಿಸ್ಥಿತಿಯನ್ನು ಹೇಳುತ್ತವೆ. ಇಂಥಾ ಕೆಟ್ಟ ಪರಿಸ್ಥಿತಿ ಹಿಂದೆಲ್ಲೂ ಕಂಡಿರಲಿಲ್ಲವೆಂದು  ನಾಗರಿಕರು ಪಕ್ಷಾತೀತವಾಗಿ ಛೀಮಾರಿ ಹಾಕುತ್ತಿದ್ದಾರೆ.

ನಗರದ ಮೂಲೆ ಮೂಲೆಗಳಲ್ಲೂ ಅಗೆದ ಗುಂಡಿಗಳು, ಮೇಲೆದ್ದ ಮಣ್ಣಿನ ಗುಡ್ಡೆ, ಮಳೆ ಬಂದು ಕೊರಕಲಾದ ರಸ್ತೆಯ ಎರಡೂ ಬದಿಗಳು ಇವೆಲ್ಲವನ್ನೂ ನೋಡಿ ನರಕಯಾತನೆ ಅನುಭವಿಸುತ್ತಿದ್ದಾರೆ ಜನ. ಜನರಲ್ಲಿ ವ್ಯಕ್ತವಾಗುತ್ತಿರುವ ರೋಷಕ್ಕೆ ಮಿತಿಯೇ ಇಲ್ಲ. ಕಂಡಕಂಡಲ್ಲಿ ಜನ ಪಾಲಿಕೆ ಅಧಿಕಾರಿಗಳನ್ನು ಉಗಿಯುತ್ತಿದ್ದಾರೆ. ಸಮರ್ಥ ನಗರ ಎಂದರೆ ಇದೇನಾ ಎಂದು ಪ್ರಶ್ನಿಸುತ್ತಿದ್ದಾರೆ.

ನಗರದ ಯಾವ ಕಡೆ ಯಾವಾಗ ಗುಂಡಿ ತೋಡುತ್ತಾರೆ. ಯಾವ ಕಾರಣಕ್ಕಾಗಿ ಅಗೆಯುತ್ತಾರೆ. ಯಾವ ಉದ್ದೇಶಕ್ಕಾಗಿ ಈ ಕೆಲಸಕ್ಕೆ ಕೈ ಹಾಕಿದ್ದಾರೆ. ತುಮಕೂರು ಮಹಾನಗರ ಪಾಲಿಕೆಯಿಂದ ಇದಕ್ಕೆ ಪರವಾನಿಗೆ ಪಡೆಯಲಾಗಿದೆಯೇ ಎಂದರೆ ಅದೂ ಕೂಡ ಇಲ್ಲವೆನ್ನುತ್ತಾರೆ ಕೆಲ ಪಾಲಿಕೆ ಸದಸ್ಯರು. ಸ್ಮಾರ್ಟ್ ಸಿಟಿ ನೆಪದಲ್ಲಿ ರಸ್ತೆಗಳನ್ನು ಅಗೆದುಬಗೆದು ಗುಂಡಿಮಾಡುತ್ತಿದ್ದಾರೆ. ಇವರನ್ನು ಕೇಳುವವರೇ ಇಲ್ಲವಾಗಿದೆ.

ಒಂದು ಕಡೆ 24*7 ಕುಡಿಯುವ ನೀರು ಒದಗಿಸಲು ಪೈಪ್ ಲೈನ್ ಅಳವಡಿಸುವ ಕಾಮಗಾರಿ, ಇದು ಮುಗಿಯಿತು ಅಂದರೆ ಜಿಯೋ ನೆಟ್‌ವರ್ಕ್‌ಗೆ ಕೇಬಲ್ ಹಾಕುವ ಕಾಮಗಾರಿ, ಇದು ಮುಗಿಯುತಪ್ಪ ಅನ್ನುವುದರೊಳಗೆ 24*7 ಗ್ಯಾಸ್ ಪೈಪ್ ಗಾಮಗಾರಿ, ಅಯ್ಯೋ ಎಲ್ಲವೂ ಪೂರ್ಣವಾಗಿದೆ ಇನ್ನೇನು ನೆಮ್ಮದಿಯಾಗಿರಬಹುದು ಅಂತೀರಾ. ಇಲ್ಲ ಮತ್ತೆ ಅಗೆತ. ಆ ಕಡೆ ಮತ್ತು ಈ ಕಡೆ ಮನೆಗಳಿಗೆ ಸಂಪರ್ಕ ಕಲ್ಪಿಸಲು ಅಗೆತ. ಹೀಗೆ ಮಾಡಿ ತುಮಕೂರೆಂಬೋ ತುಮಕೂರಿನ ರಸ್ತೆಗಳನ್ನೇ ಹಾಳುಗೆಡವಿದ್ದಾರೆ.

ಮಳೆ ಬಂದರೆ ಕೆಸರು, ಹೆಜ್ಜೆ ಇಡಲು ಆಗದಷ್ಟು ಕೆಸರು. ವಾಹನಗಳು ಸಂಚರಿಸಿದರೆ ಸಾಕು ರಸ್ತೆಯಲ್ಲಿ ನಡೆದುಹೋಗುವವರು ಜೀವ ಹಿಡಿದುಕೊಂಡೇ ಓಡಾಡಬೇಕು. ಕೆಸರು ಮೇಲೆ ರಪ್ ಅಂತ ಎಲ್ಲಿ ಸಿಡಿಯುತ್ತೋ ಅನ್ನುವ ಭಯ. ಭೂಮಿ ನೆನೆದು ಸಿಕ್ಕಿಕೊಳ್ಳುವ ಕಾರುಗಳು, ಲಾರಿಗಳು, ಇದಾದ ಮೇಲೆ ಭೂಮಿ ಒಣಗಿತು ಅನ್ನಿ. ದೂಳು, ವಾಹಗಳು ಬಂದರೆ ಸಾಕು ದೂಳು ಮೈಮೇಲೆ ಸುರಿಯುತ್ತದೆ. ಉಸಿರು ಕಟ್ಟಿದಂತಾಗುತ್ತದೆ. ಪರ್ಟಿಕ್ಯೂಲೇಟ್ ಮ್ಯಾಟರ್ ಅತಿ ಹೆಚ್ಚು ಇದ್ದು ಮಾಲಿನ್ಯ ನಗರವಾಗಿರುವ ತುಮಕೂರು ಅದ್ಹೇಗೆ ಸ್ಮಾರ್ಟ್ ಸಿಟಿ ಅನಿಸಿಕೊಳ್ಳುತ್ತೋ ಆ ಸ್ಮಾರ್ಟ್ ಸಿಟಿ ನಿರ್ಮಾತೃಗಳಿಗೇ ಗೊತ್ತು. ಆದರೆ ಜನರಂತು ಬಾಯಿಗೆ ಬಂದಂತೆ ಕ್ಯಾಕರಿಸುತ್ತಿದ್ದಾರೆ.

ರಸ್ತೆಯ ಎರಡು ಬದಿಯನ್ನು ಅಗೆದವರು ಅದರ ಮೇಲೆ ಟಾರ್ ಮುಖವನ್ನೂ ತೋರಿಸಿ ತೇಪೆ ಹಚ್ಚುವ ಕೆಲಸವನ್ನೂ ಮಾಡಿಲ್ಲ. ಹೀಗಾಗಿ ತುಮಕೂರು ಸ್ಮಾರ್ಟ್ ಸಿಟಿ ಜನರಿಂದ ಗೇಲಿಗೆ ಒಳಗಾಗಿದೆ. ಆದರೆ ನಿತ್ಯವೂ ಪೊಲೀಸರು, ಟ್ರಾಫಿಕ್ ಪೊಲೀಸರು ವಾಹನಗಳನ್ನು ಹಿಡಿದು, ಹೆಲ್ಮೆಟ್ ಧರಿಸಿಲ್ಲ. ಡಿ.ಎಲ್. ಹೊಂದಿಲ್ಲ, ಹೊಗೆ ಪರೀಕ್ಷೆ ನಡೆಸಿಲ್ಲ ಹೀಗೆ ಹಲವು ರೀತಿಯಲ್ಲಿ ಜನರಿಂದ ವಸೂಲಿ ಮಾಡುತ್ತಲೇ ಇದ್ದಾರೆ. ಏನ್ ರಸ್ತೆಗಳು ಹೀಗಿವೆಯಲ್ಲಾ ಎಂದರೆ ಅದರ ಬಗ್ಗೆ ನಮ್ಮನ್ನು ಕೇಳಬೇಡಿ ಅನ್ನುತ್ತಾರೆ. ರಸ್ತೆಗಳ ಉತ್ತಮವಾಗಿರಬೇಕು. ಆಗ ದಂಡ ವಿಧಿಸಿದರೂ ಕಟ್ಟಬಹುದು. ಆದರೆ ನಮ್ಮ ನಗರದ ಯಾವುದೇ ರಸ್ತೆಗಳು ಚನ್ನಾಗಿವೆ ಎಂದು ಹೇಳವುದಕ್ಕೇ ಆಗುವುದಿಲ್ಲ ಎನ್ನುತ್ತಾರೆ ಬೈಕ್ ಸವಾರರು.

ಸಮರ್ಥ ನಗರದ ಅಭಿವೃದ್ದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹತ್ತಿರತ್ತಿರ 2 ಸಾವಿರ ಕೋಟಿ ರೂಪಾಯಿ ನಗರ ಪಾಲಿಕೆಗೆ ಬಂದಿದೆ. ರಸ್ತೆ, ಚರಂಡಿ, ಬೀದಿ ದೀಪ, ಕುಡಿಯುವ ನೀರು, ಪಾರ್ಕ್ ಗಳ ಅಭಿವೃದ್ದಿ, ಬಸ್ ನಿಲ್ದಾಣಗಳ ನಿರ್ಮಾಣ ಹೀಗೆ ಹಲವು ಕಾಮಗಾರಿಗಳನ್ನು ಮಾಡುವ ಮೂಲಕ ಕೋಟಿ ಕೋಟಿ ಲೂಟಿ ಮಾಡುವಲ್ಲಿ ರಾಜಕಾರಣಿಗಳು ಮತ್ತು ಅಧಿಕಾರಿಗಳು ನಿರತರಾಗಿದ್ದಾರೆ. ಸ್ಮಾರ್ಟ್ ಸಿಟಿ ಅಂದರೆ ಜನ ಬೆಚ್ಚಿ ಬೀಳುತ್ತಿದ್ದಾರೆ. ಅಯ್ಯೋ ಈ ಕಾಮಗಾರಿಗಳು ಎಷ್ಟು ಬೇಗ ಮುಗಿಯುತ್ತೋ ಅಂತ ಕಾಯುತ್ತಿದ್ದಾರೆ. ಆದರೆ ಮಬ್ಬು ಭಕ್ತರು, ಸ್ಮಾರ್ಟಿ ಸಮರ್ಥಕರು ಅಭಿವೃದ್ಧಿ ಕೆಲಸ ನಡೆಯುತ್ತಿದೆ ಅಂದರೆ ಸಹಿಕೊಳ್ಳಬೇಕು ಎಂದು ಮಂಡುವಾದ ಮಾಡುತ್ತಿದ್ದಾರೆ. ಆದರೆ ಜನ ಮಾತ್ರ ಕಾಮಗಾರಿಗಳು ಮುಗಿಯುತ್ತೋ ಇಲ್ಲವೋ? ಎಂಬ ಗೊಂದಲದಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...