Homeಕರ್ನಾಟಕ2 ಸಾವಿರ ಕೋಟಿ ರೂ ಖರ್ಚಾದರೂ ’ಸ್ಮಾರ್ಟ್‌’ ಆಗದ ತುಮಕೂರು.. ಏಕೆ?

2 ಸಾವಿರ ಕೋಟಿ ರೂ ಖರ್ಚಾದರೂ ’ಸ್ಮಾರ್ಟ್‌’ ಆಗದ ತುಮಕೂರು.. ಏಕೆ?

- Advertisement -
- Advertisement -

ತುಮಕೂರು ಸ್ಮಾರ್ಟ್ ಸಿಟಿ ಎಂಬೋ ‘ಸಮರ್ಥ ನಗರ’ ಅಕ್ಷರಶಃ ಗಬ್ಬೆದ್ದು ಹೋಗಿದೆ. ನಗರದ ಯಾವುದೇ ಭಾಗಕ್ಕೆ ಹೋದರೂ ಅಲ್ಲಿನ ರಸ್ತೆಗಳ ಮೇಲೆ ಕಣ್ಣಾಡಿಸಿದರೆ ಸಾಕು ಇದು ಹದಗೆಟ್ಟ ಪರಿಸ್ಥಿತಿಯನ್ನು ಹೇಳುತ್ತವೆ. ಇಂಥಾ ಕೆಟ್ಟ ಪರಿಸ್ಥಿತಿ ಹಿಂದೆಲ್ಲೂ ಕಂಡಿರಲಿಲ್ಲವೆಂದು  ನಾಗರಿಕರು ಪಕ್ಷಾತೀತವಾಗಿ ಛೀಮಾರಿ ಹಾಕುತ್ತಿದ್ದಾರೆ.

ನಗರದ ಮೂಲೆ ಮೂಲೆಗಳಲ್ಲೂ ಅಗೆದ ಗುಂಡಿಗಳು, ಮೇಲೆದ್ದ ಮಣ್ಣಿನ ಗುಡ್ಡೆ, ಮಳೆ ಬಂದು ಕೊರಕಲಾದ ರಸ್ತೆಯ ಎರಡೂ ಬದಿಗಳು ಇವೆಲ್ಲವನ್ನೂ ನೋಡಿ ನರಕಯಾತನೆ ಅನುಭವಿಸುತ್ತಿದ್ದಾರೆ ಜನ. ಜನರಲ್ಲಿ ವ್ಯಕ್ತವಾಗುತ್ತಿರುವ ರೋಷಕ್ಕೆ ಮಿತಿಯೇ ಇಲ್ಲ. ಕಂಡಕಂಡಲ್ಲಿ ಜನ ಪಾಲಿಕೆ ಅಧಿಕಾರಿಗಳನ್ನು ಉಗಿಯುತ್ತಿದ್ದಾರೆ. ಸಮರ್ಥ ನಗರ ಎಂದರೆ ಇದೇನಾ ಎಂದು ಪ್ರಶ್ನಿಸುತ್ತಿದ್ದಾರೆ.

ನಗರದ ಯಾವ ಕಡೆ ಯಾವಾಗ ಗುಂಡಿ ತೋಡುತ್ತಾರೆ. ಯಾವ ಕಾರಣಕ್ಕಾಗಿ ಅಗೆಯುತ್ತಾರೆ. ಯಾವ ಉದ್ದೇಶಕ್ಕಾಗಿ ಈ ಕೆಲಸಕ್ಕೆ ಕೈ ಹಾಕಿದ್ದಾರೆ. ತುಮಕೂರು ಮಹಾನಗರ ಪಾಲಿಕೆಯಿಂದ ಇದಕ್ಕೆ ಪರವಾನಿಗೆ ಪಡೆಯಲಾಗಿದೆಯೇ ಎಂದರೆ ಅದೂ ಕೂಡ ಇಲ್ಲವೆನ್ನುತ್ತಾರೆ ಕೆಲ ಪಾಲಿಕೆ ಸದಸ್ಯರು. ಸ್ಮಾರ್ಟ್ ಸಿಟಿ ನೆಪದಲ್ಲಿ ರಸ್ತೆಗಳನ್ನು ಅಗೆದುಬಗೆದು ಗುಂಡಿಮಾಡುತ್ತಿದ್ದಾರೆ. ಇವರನ್ನು ಕೇಳುವವರೇ ಇಲ್ಲವಾಗಿದೆ.

ಒಂದು ಕಡೆ 24*7 ಕುಡಿಯುವ ನೀರು ಒದಗಿಸಲು ಪೈಪ್ ಲೈನ್ ಅಳವಡಿಸುವ ಕಾಮಗಾರಿ, ಇದು ಮುಗಿಯಿತು ಅಂದರೆ ಜಿಯೋ ನೆಟ್‌ವರ್ಕ್‌ಗೆ ಕೇಬಲ್ ಹಾಕುವ ಕಾಮಗಾರಿ, ಇದು ಮುಗಿಯುತಪ್ಪ ಅನ್ನುವುದರೊಳಗೆ 24*7 ಗ್ಯಾಸ್ ಪೈಪ್ ಗಾಮಗಾರಿ, ಅಯ್ಯೋ ಎಲ್ಲವೂ ಪೂರ್ಣವಾಗಿದೆ ಇನ್ನೇನು ನೆಮ್ಮದಿಯಾಗಿರಬಹುದು ಅಂತೀರಾ. ಇಲ್ಲ ಮತ್ತೆ ಅಗೆತ. ಆ ಕಡೆ ಮತ್ತು ಈ ಕಡೆ ಮನೆಗಳಿಗೆ ಸಂಪರ್ಕ ಕಲ್ಪಿಸಲು ಅಗೆತ. ಹೀಗೆ ಮಾಡಿ ತುಮಕೂರೆಂಬೋ ತುಮಕೂರಿನ ರಸ್ತೆಗಳನ್ನೇ ಹಾಳುಗೆಡವಿದ್ದಾರೆ.

ಮಳೆ ಬಂದರೆ ಕೆಸರು, ಹೆಜ್ಜೆ ಇಡಲು ಆಗದಷ್ಟು ಕೆಸರು. ವಾಹನಗಳು ಸಂಚರಿಸಿದರೆ ಸಾಕು ರಸ್ತೆಯಲ್ಲಿ ನಡೆದುಹೋಗುವವರು ಜೀವ ಹಿಡಿದುಕೊಂಡೇ ಓಡಾಡಬೇಕು. ಕೆಸರು ಮೇಲೆ ರಪ್ ಅಂತ ಎಲ್ಲಿ ಸಿಡಿಯುತ್ತೋ ಅನ್ನುವ ಭಯ. ಭೂಮಿ ನೆನೆದು ಸಿಕ್ಕಿಕೊಳ್ಳುವ ಕಾರುಗಳು, ಲಾರಿಗಳು, ಇದಾದ ಮೇಲೆ ಭೂಮಿ ಒಣಗಿತು ಅನ್ನಿ. ದೂಳು, ವಾಹಗಳು ಬಂದರೆ ಸಾಕು ದೂಳು ಮೈಮೇಲೆ ಸುರಿಯುತ್ತದೆ. ಉಸಿರು ಕಟ್ಟಿದಂತಾಗುತ್ತದೆ. ಪರ್ಟಿಕ್ಯೂಲೇಟ್ ಮ್ಯಾಟರ್ ಅತಿ ಹೆಚ್ಚು ಇದ್ದು ಮಾಲಿನ್ಯ ನಗರವಾಗಿರುವ ತುಮಕೂರು ಅದ್ಹೇಗೆ ಸ್ಮಾರ್ಟ್ ಸಿಟಿ ಅನಿಸಿಕೊಳ್ಳುತ್ತೋ ಆ ಸ್ಮಾರ್ಟ್ ಸಿಟಿ ನಿರ್ಮಾತೃಗಳಿಗೇ ಗೊತ್ತು. ಆದರೆ ಜನರಂತು ಬಾಯಿಗೆ ಬಂದಂತೆ ಕ್ಯಾಕರಿಸುತ್ತಿದ್ದಾರೆ.

ರಸ್ತೆಯ ಎರಡು ಬದಿಯನ್ನು ಅಗೆದವರು ಅದರ ಮೇಲೆ ಟಾರ್ ಮುಖವನ್ನೂ ತೋರಿಸಿ ತೇಪೆ ಹಚ್ಚುವ ಕೆಲಸವನ್ನೂ ಮಾಡಿಲ್ಲ. ಹೀಗಾಗಿ ತುಮಕೂರು ಸ್ಮಾರ್ಟ್ ಸಿಟಿ ಜನರಿಂದ ಗೇಲಿಗೆ ಒಳಗಾಗಿದೆ. ಆದರೆ ನಿತ್ಯವೂ ಪೊಲೀಸರು, ಟ್ರಾಫಿಕ್ ಪೊಲೀಸರು ವಾಹನಗಳನ್ನು ಹಿಡಿದು, ಹೆಲ್ಮೆಟ್ ಧರಿಸಿಲ್ಲ. ಡಿ.ಎಲ್. ಹೊಂದಿಲ್ಲ, ಹೊಗೆ ಪರೀಕ್ಷೆ ನಡೆಸಿಲ್ಲ ಹೀಗೆ ಹಲವು ರೀತಿಯಲ್ಲಿ ಜನರಿಂದ ವಸೂಲಿ ಮಾಡುತ್ತಲೇ ಇದ್ದಾರೆ. ಏನ್ ರಸ್ತೆಗಳು ಹೀಗಿವೆಯಲ್ಲಾ ಎಂದರೆ ಅದರ ಬಗ್ಗೆ ನಮ್ಮನ್ನು ಕೇಳಬೇಡಿ ಅನ್ನುತ್ತಾರೆ. ರಸ್ತೆಗಳ ಉತ್ತಮವಾಗಿರಬೇಕು. ಆಗ ದಂಡ ವಿಧಿಸಿದರೂ ಕಟ್ಟಬಹುದು. ಆದರೆ ನಮ್ಮ ನಗರದ ಯಾವುದೇ ರಸ್ತೆಗಳು ಚನ್ನಾಗಿವೆ ಎಂದು ಹೇಳವುದಕ್ಕೇ ಆಗುವುದಿಲ್ಲ ಎನ್ನುತ್ತಾರೆ ಬೈಕ್ ಸವಾರರು.

ಸಮರ್ಥ ನಗರದ ಅಭಿವೃದ್ದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹತ್ತಿರತ್ತಿರ 2 ಸಾವಿರ ಕೋಟಿ ರೂಪಾಯಿ ನಗರ ಪಾಲಿಕೆಗೆ ಬಂದಿದೆ. ರಸ್ತೆ, ಚರಂಡಿ, ಬೀದಿ ದೀಪ, ಕುಡಿಯುವ ನೀರು, ಪಾರ್ಕ್ ಗಳ ಅಭಿವೃದ್ದಿ, ಬಸ್ ನಿಲ್ದಾಣಗಳ ನಿರ್ಮಾಣ ಹೀಗೆ ಹಲವು ಕಾಮಗಾರಿಗಳನ್ನು ಮಾಡುವ ಮೂಲಕ ಕೋಟಿ ಕೋಟಿ ಲೂಟಿ ಮಾಡುವಲ್ಲಿ ರಾಜಕಾರಣಿಗಳು ಮತ್ತು ಅಧಿಕಾರಿಗಳು ನಿರತರಾಗಿದ್ದಾರೆ. ಸ್ಮಾರ್ಟ್ ಸಿಟಿ ಅಂದರೆ ಜನ ಬೆಚ್ಚಿ ಬೀಳುತ್ತಿದ್ದಾರೆ. ಅಯ್ಯೋ ಈ ಕಾಮಗಾರಿಗಳು ಎಷ್ಟು ಬೇಗ ಮುಗಿಯುತ್ತೋ ಅಂತ ಕಾಯುತ್ತಿದ್ದಾರೆ. ಆದರೆ ಮಬ್ಬು ಭಕ್ತರು, ಸ್ಮಾರ್ಟಿ ಸಮರ್ಥಕರು ಅಭಿವೃದ್ಧಿ ಕೆಲಸ ನಡೆಯುತ್ತಿದೆ ಅಂದರೆ ಸಹಿಕೊಳ್ಳಬೇಕು ಎಂದು ಮಂಡುವಾದ ಮಾಡುತ್ತಿದ್ದಾರೆ. ಆದರೆ ಜನ ಮಾತ್ರ ಕಾಮಗಾರಿಗಳು ಮುಗಿಯುತ್ತೋ ಇಲ್ಲವೋ? ಎಂಬ ಗೊಂದಲದಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...